Homeಮುಖಪುಟಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸುಪ್ರೀಂ ತೀರ್ಪಿನ ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಕೆ

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸುಪ್ರೀಂ ತೀರ್ಪಿನ ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಕೆ

- Advertisement -
- Advertisement -

ಅದಾನಿ ಗ್ರೂಪ್‌ ವಿರುದ್ದದ ಷೇರು ಬೆಲೆ ದುರ್ಬಳಕೆ ಆರೋಪಗಳ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಥವಾ ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ವರ್ಗಾಯಿಸಲು ನಿರಾಕರಿಸಿದ ಜನವರಿ 3ರ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ಆದೇಶಿಸಲು ನಿರಾಕರಿಸಿದ್ದ ಸುಪ್ರೀಂ ಕೋರ್ಟ್, ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅದಾನಿ ಗ್ರೂಪ್‌ ವಿರುದ್ಧದ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುತ್ತಿದೆ ಎಂದು ತನ್ನ ತೀರ್ಪಿನಲ್ಲಿ ಹೇಳಿತ್ತು.

ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ದೋಷಗಳಿವೆ. ಅಲ್ಲದೆ, ಅರ್ಜಿದಾರರ ಪರ ವಕೀಲರು ಕಂಡುಕೊಂಡ ಕೆಲ ಹೊಸ ವಿಷಯಗಳ ಪ್ರಕಾರ, ತೀರ್ಪಿನ ಪರಿಶೀಲನೆಗೆ ಸಾಕಷ್ಟು ಕಾರಣಗಳಿವೆ ಎಂದು ಮರು ಪರಿಶೀಲನಾ ಅರ್ಜಿಯಲ್ಲಿ ಹೇಳಲಾಗಿದೆ. ಪ್ರಕರಣ ಸಂಬಂಧ ಈ ಹಿಂದೆ ಅರ್ಜಿ ಸಲ್ಲಿಸಿದವರಲ್ಲಿ ಒಬ್ಬರಾದ ಅನಾಮಿಕಾ ಜೈಸ್ವಾಲ್ ಅವರು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ವಕೀಲೆ ನೇಹಾ ರಾಠಿ ಅವರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ಸೆಬಿ ತನ್ನ ವರದಿಯಲ್ಲಿ ಅದಾನಿ ಗ್ರೂಪ್‌ ಮೇಲೆ ಆರೋಪ ಕೇಳಿ ಬಂದ ನಂತರ ತಾನು ಕೈಗೊಂಡ 24 ತನಿಖೆಗಳ ಸ್ಥಿತಿಗತಿಯ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಅವು ಪೂರ್ಣಗೊಂಡಿದೆಯೂ, ಇಲ್ಲವೋ. ಆದರೆ, ಸೆಬಿ ಯಾವುದೇ ತನಿಖೆ ಅಥವಾ ಕ್ರಮದ ವಿವರಗಳನ್ನು ಬಹಿರಂಗಪಡಿಸಿಲ್ಲ ಎಂದು ಹೇಳಲಾಗಿದೆ.

“ಸೆಬಿ ತನ್ನ ತನಿಖೆಯ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆಗೊಳಿಸದ ಹೊರತು, ಯಾವುದೇ ನಿಯಂತ್ರಕ ವೈಫಲ್ಯವಿಲ್ಲ ಎಂದು ತೀರ್ಮಾನಿಸಲು ಸಾಧ್ಯವಿಲ್ಲ” ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ತನ್ನ ತೀರ್ಪಿನಲ್ಲಿ, ಅದಾನಿ ಗ್ರೂಪ್ ವಿರುದ್ಧ ಆರೋಪಗಳನ್ನು ಹೊರಿಸಲಾದ 24 ವಿಷಯಗಳ ಪೈಕಿ 22 ರಲ್ಲಿ ಸೆಬಿ ತನ್ನ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೆಬಿ ವಿರುದ್ದ ಯಾವುದೇ ಸ್ಪಷ್ಟವಾದ ನಿಯಂತ್ರಕ ವೈಫಲ್ಯ ಆರೋಪಗಳಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಅರ್ಜಿಯು, ಸೆಬಿಯ ನಿಯಂತ್ರಕ ವೈಫಲ್ಯಗಳು ಸುಲಭವಾಗಿ ಗೋಚರಿಸುವ ಅನೇಕ ನಿದರ್ಶನಗಳಿವೆ. ಅಂತಹ ವೈಫಲ್ಯಗಳು ಅಂತಿಮವಾಗಿ ಆಪಾದಿತ ನಿಯಂತ್ರಕ ಉಲ್ಲಂಘನೆಗಳು ಮತ್ತು ಶಾಸನಬದ್ಧ ಉಲ್ಲಂಘನೆಗಳಿಗೆ ಕಾರಣವಾಗಿವೆ ಎಂದು ಹೇಳಿದೆ.

ಇನ್ನೂ ಅನೇಕ ಅಂಶಗಳನ್ನು ಉಲ್ಲೇಖಿಸಿ ತೀರ್ಪಿನ ಮರು ಪರಿಶೀಲನೆಗೆ ಅನಾಮಿಕಾ ಜೈಸ್ವಾಲ್ ಮನವಿ ಮಾಡಿದ್ದಾರೆ.

ಹಿಂಡೆನ್‌ಬರ್ಗ್‌ ವರದಿ : 

ಅದಾನಿ ಸಮೂಹದ ಕಂಪನಿಗಳು ಸಾಲ ಪಡೆಯುವುದಕ್ಕಾಗಿ ಕೃತಕವಾಗಿ ತಮ್ಮ ಷೇರುಗಳ ಬೆಲೆ ಏರಿಸಿಕೊಂಡಿದೆ. ತಮ್ಮ ಷೇರುಗಳ ಬೆಲೆಯನ್ನು ಅಕ್ರಮವಾಗಿ ಏರಿಸಿ, ಅವುಗಳ ಮೌಲ್ಯ ಹೆಚ್ಚಿಸಿಕೊಂಡು ನಂತರ ಅವುಗಳನ್ನು ಅಡವಿಟ್ಟು ಸಾಲ ಪಡೆದಿವೆ. ಸಾಗರದಾಚೆಗಿನ ವ್ಯವಹಾರಗಳಲ್ಲಿ ತೆರಿಗೆ ವಂಚಿಸುವುದಕ್ಕಾಗಿ ದಶಕಗಳ ಕಾಲ ಲೆಕ್ಕಪತ್ರಗಳಲ್ಲಿ ವಂಚನೆ ನಡೆಸಿವೆ. ಆ ಮೂಲಕ ಅತಿ ಹೆಚ್ಚು ಸಾಲದ ಸುಳಿಗೆ ಸಿಲುಕಿದ್ದು, ಒಟ್ಟಾರೆ ಅದರ ಆರ್ಥಿಕ ತಳಪಾಯವೇ ಅಪಾಯದಲ್ಲಿದೆ ಎಂದು ಹಿಂಡೆನ್‌ಬರ್ಗ್ ವರದಿ ಆರೋಪಿಸಿತ್ತು.

“ನಾವು ಎರಡು ವರ್ಷದ ಸಂಶೋಧನೆಯ ವರದಿಯನ್ನು ಇಂದು ಬಹಿರಂಗಪಡಿಸುತ್ತಿದ್ದೇವೆ. 17.8 ಟ್ರಿಲಿಯನ್ (218 ಬಿಲಿಯನ್ ಅಮೆರಿಕನ್ ಡಾಲರ್) ಮೌಲ್ಯದ ವಹಿವಾಟು ನಡೆಸುವ ಭಾರತೀಯ ಅದಾನಿ ಸಮೂಹವು ದಶಕಗಳ ಕಾಲ ಸ್ಟಾಕ್ ತಿರುಚುವಿಕೆ ಮತ್ತು ಲೆಕ್ಕಪತ್ರ ವಂಚನೆ ಯೋಜನೆಯಲ್ಲಿ ತೊಡಗಿದೆ ಎಂಬುದಕ್ಕೆ ಪುರಾವೆಗಳನ್ನು ಪ್ರಸ್ತುತಪಡಿಸುತ್ತಿದ್ದೇವೆ” ಎಂದು ಸರಣಿ ಟ್ವೀಟ್‌ಗಳನ್ನು ಹಿಂಡೆನ್‌ಬರ್ಗ್‌ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಡಿತ್ತು.

ಈ ವಿಷಯ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿ ಅದಾನಿ ‍ಷೇರುಗಳು ದಿಢೀರನೆ ಕುಸಿದಿತ್ತು. ಅದಾನಿ ಸಮೂಹದ ಜೊತೆ ಬಹಳ ಆಪ್ತತೆಯಿಂದ ಇರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕಸಿವಿಸಿ ಉಂಟು ಮಾಡಿತ್ತು. ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣ ಎಸ್‌ಐಟಿ ಅಥವಾ ಸಿಬಿಐ ತನಿಖೆಗೆ ಕೋರಿದ್ದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಸೆಬಿಗೆ ತನಿಖೆಯ ಜವಬ್ದಾರಿ ವಹಿಸಿದೆ.

ಇದನ್ನೂ ಓದಿ : ಯುಸಿಸಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ: ವಿವಾದಾತ್ಮಕ ಕಾಯ್ದೆ ಜಾರಿಗೆ ಉತ್ತರಾಖಂಡದ ಹಾದಿ ಸುಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...