Homeಮುಖಪುಟಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸುಪ್ರೀಂ ತೀರ್ಪಿನ ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಕೆ

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸುಪ್ರೀಂ ತೀರ್ಪಿನ ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಕೆ

- Advertisement -
- Advertisement -

ಅದಾನಿ ಗ್ರೂಪ್‌ ವಿರುದ್ದದ ಷೇರು ಬೆಲೆ ದುರ್ಬಳಕೆ ಆರೋಪಗಳ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಥವಾ ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ವರ್ಗಾಯಿಸಲು ನಿರಾಕರಿಸಿದ ಜನವರಿ 3ರ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ಆದೇಶಿಸಲು ನಿರಾಕರಿಸಿದ್ದ ಸುಪ್ರೀಂ ಕೋರ್ಟ್, ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅದಾನಿ ಗ್ರೂಪ್‌ ವಿರುದ್ಧದ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುತ್ತಿದೆ ಎಂದು ತನ್ನ ತೀರ್ಪಿನಲ್ಲಿ ಹೇಳಿತ್ತು.

ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ದೋಷಗಳಿವೆ. ಅಲ್ಲದೆ, ಅರ್ಜಿದಾರರ ಪರ ವಕೀಲರು ಕಂಡುಕೊಂಡ ಕೆಲ ಹೊಸ ವಿಷಯಗಳ ಪ್ರಕಾರ, ತೀರ್ಪಿನ ಪರಿಶೀಲನೆಗೆ ಸಾಕಷ್ಟು ಕಾರಣಗಳಿವೆ ಎಂದು ಮರು ಪರಿಶೀಲನಾ ಅರ್ಜಿಯಲ್ಲಿ ಹೇಳಲಾಗಿದೆ. ಪ್ರಕರಣ ಸಂಬಂಧ ಈ ಹಿಂದೆ ಅರ್ಜಿ ಸಲ್ಲಿಸಿದವರಲ್ಲಿ ಒಬ್ಬರಾದ ಅನಾಮಿಕಾ ಜೈಸ್ವಾಲ್ ಅವರು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ವಕೀಲೆ ನೇಹಾ ರಾಠಿ ಅವರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ಸೆಬಿ ತನ್ನ ವರದಿಯಲ್ಲಿ ಅದಾನಿ ಗ್ರೂಪ್‌ ಮೇಲೆ ಆರೋಪ ಕೇಳಿ ಬಂದ ನಂತರ ತಾನು ಕೈಗೊಂಡ 24 ತನಿಖೆಗಳ ಸ್ಥಿತಿಗತಿಯ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಅವು ಪೂರ್ಣಗೊಂಡಿದೆಯೂ, ಇಲ್ಲವೋ. ಆದರೆ, ಸೆಬಿ ಯಾವುದೇ ತನಿಖೆ ಅಥವಾ ಕ್ರಮದ ವಿವರಗಳನ್ನು ಬಹಿರಂಗಪಡಿಸಿಲ್ಲ ಎಂದು ಹೇಳಲಾಗಿದೆ.

“ಸೆಬಿ ತನ್ನ ತನಿಖೆಯ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆಗೊಳಿಸದ ಹೊರತು, ಯಾವುದೇ ನಿಯಂತ್ರಕ ವೈಫಲ್ಯವಿಲ್ಲ ಎಂದು ತೀರ್ಮಾನಿಸಲು ಸಾಧ್ಯವಿಲ್ಲ” ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ತನ್ನ ತೀರ್ಪಿನಲ್ಲಿ, ಅದಾನಿ ಗ್ರೂಪ್ ವಿರುದ್ಧ ಆರೋಪಗಳನ್ನು ಹೊರಿಸಲಾದ 24 ವಿಷಯಗಳ ಪೈಕಿ 22 ರಲ್ಲಿ ಸೆಬಿ ತನ್ನ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೆಬಿ ವಿರುದ್ದ ಯಾವುದೇ ಸ್ಪಷ್ಟವಾದ ನಿಯಂತ್ರಕ ವೈಫಲ್ಯ ಆರೋಪಗಳಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಅರ್ಜಿಯು, ಸೆಬಿಯ ನಿಯಂತ್ರಕ ವೈಫಲ್ಯಗಳು ಸುಲಭವಾಗಿ ಗೋಚರಿಸುವ ಅನೇಕ ನಿದರ್ಶನಗಳಿವೆ. ಅಂತಹ ವೈಫಲ್ಯಗಳು ಅಂತಿಮವಾಗಿ ಆಪಾದಿತ ನಿಯಂತ್ರಕ ಉಲ್ಲಂಘನೆಗಳು ಮತ್ತು ಶಾಸನಬದ್ಧ ಉಲ್ಲಂಘನೆಗಳಿಗೆ ಕಾರಣವಾಗಿವೆ ಎಂದು ಹೇಳಿದೆ.

ಇನ್ನೂ ಅನೇಕ ಅಂಶಗಳನ್ನು ಉಲ್ಲೇಖಿಸಿ ತೀರ್ಪಿನ ಮರು ಪರಿಶೀಲನೆಗೆ ಅನಾಮಿಕಾ ಜೈಸ್ವಾಲ್ ಮನವಿ ಮಾಡಿದ್ದಾರೆ.

ಹಿಂಡೆನ್‌ಬರ್ಗ್‌ ವರದಿ : 

ಅದಾನಿ ಸಮೂಹದ ಕಂಪನಿಗಳು ಸಾಲ ಪಡೆಯುವುದಕ್ಕಾಗಿ ಕೃತಕವಾಗಿ ತಮ್ಮ ಷೇರುಗಳ ಬೆಲೆ ಏರಿಸಿಕೊಂಡಿದೆ. ತಮ್ಮ ಷೇರುಗಳ ಬೆಲೆಯನ್ನು ಅಕ್ರಮವಾಗಿ ಏರಿಸಿ, ಅವುಗಳ ಮೌಲ್ಯ ಹೆಚ್ಚಿಸಿಕೊಂಡು ನಂತರ ಅವುಗಳನ್ನು ಅಡವಿಟ್ಟು ಸಾಲ ಪಡೆದಿವೆ. ಸಾಗರದಾಚೆಗಿನ ವ್ಯವಹಾರಗಳಲ್ಲಿ ತೆರಿಗೆ ವಂಚಿಸುವುದಕ್ಕಾಗಿ ದಶಕಗಳ ಕಾಲ ಲೆಕ್ಕಪತ್ರಗಳಲ್ಲಿ ವಂಚನೆ ನಡೆಸಿವೆ. ಆ ಮೂಲಕ ಅತಿ ಹೆಚ್ಚು ಸಾಲದ ಸುಳಿಗೆ ಸಿಲುಕಿದ್ದು, ಒಟ್ಟಾರೆ ಅದರ ಆರ್ಥಿಕ ತಳಪಾಯವೇ ಅಪಾಯದಲ್ಲಿದೆ ಎಂದು ಹಿಂಡೆನ್‌ಬರ್ಗ್ ವರದಿ ಆರೋಪಿಸಿತ್ತು.

“ನಾವು ಎರಡು ವರ್ಷದ ಸಂಶೋಧನೆಯ ವರದಿಯನ್ನು ಇಂದು ಬಹಿರಂಗಪಡಿಸುತ್ತಿದ್ದೇವೆ. 17.8 ಟ್ರಿಲಿಯನ್ (218 ಬಿಲಿಯನ್ ಅಮೆರಿಕನ್ ಡಾಲರ್) ಮೌಲ್ಯದ ವಹಿವಾಟು ನಡೆಸುವ ಭಾರತೀಯ ಅದಾನಿ ಸಮೂಹವು ದಶಕಗಳ ಕಾಲ ಸ್ಟಾಕ್ ತಿರುಚುವಿಕೆ ಮತ್ತು ಲೆಕ್ಕಪತ್ರ ವಂಚನೆ ಯೋಜನೆಯಲ್ಲಿ ತೊಡಗಿದೆ ಎಂಬುದಕ್ಕೆ ಪುರಾವೆಗಳನ್ನು ಪ್ರಸ್ತುತಪಡಿಸುತ್ತಿದ್ದೇವೆ” ಎಂದು ಸರಣಿ ಟ್ವೀಟ್‌ಗಳನ್ನು ಹಿಂಡೆನ್‌ಬರ್ಗ್‌ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಡಿತ್ತು.

ಈ ವಿಷಯ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿ ಅದಾನಿ ‍ಷೇರುಗಳು ದಿಢೀರನೆ ಕುಸಿದಿತ್ತು. ಅದಾನಿ ಸಮೂಹದ ಜೊತೆ ಬಹಳ ಆಪ್ತತೆಯಿಂದ ಇರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕಸಿವಿಸಿ ಉಂಟು ಮಾಡಿತ್ತು. ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣ ಎಸ್‌ಐಟಿ ಅಥವಾ ಸಿಬಿಐ ತನಿಖೆಗೆ ಕೋರಿದ್ದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಸೆಬಿಗೆ ತನಿಖೆಯ ಜವಬ್ದಾರಿ ವಹಿಸಿದೆ.

ಇದನ್ನೂ ಓದಿ : ಯುಸಿಸಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ: ವಿವಾದಾತ್ಮಕ ಕಾಯ್ದೆ ಜಾರಿಗೆ ಉತ್ತರಾಖಂಡದ ಹಾದಿ ಸುಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...