Homeಮುಖಪುಟಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸುಪ್ರೀಂ ತೀರ್ಪಿನ ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಕೆ

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸುಪ್ರೀಂ ತೀರ್ಪಿನ ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಕೆ

- Advertisement -
- Advertisement -

ಅದಾನಿ ಗ್ರೂಪ್‌ ವಿರುದ್ದದ ಷೇರು ಬೆಲೆ ದುರ್ಬಳಕೆ ಆರೋಪಗಳ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಥವಾ ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ವರ್ಗಾಯಿಸಲು ನಿರಾಕರಿಸಿದ ಜನವರಿ 3ರ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ಆದೇಶಿಸಲು ನಿರಾಕರಿಸಿದ್ದ ಸುಪ್ರೀಂ ಕೋರ್ಟ್, ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅದಾನಿ ಗ್ರೂಪ್‌ ವಿರುದ್ಧದ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುತ್ತಿದೆ ಎಂದು ತನ್ನ ತೀರ್ಪಿನಲ್ಲಿ ಹೇಳಿತ್ತು.

ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ದೋಷಗಳಿವೆ. ಅಲ್ಲದೆ, ಅರ್ಜಿದಾರರ ಪರ ವಕೀಲರು ಕಂಡುಕೊಂಡ ಕೆಲ ಹೊಸ ವಿಷಯಗಳ ಪ್ರಕಾರ, ತೀರ್ಪಿನ ಪರಿಶೀಲನೆಗೆ ಸಾಕಷ್ಟು ಕಾರಣಗಳಿವೆ ಎಂದು ಮರು ಪರಿಶೀಲನಾ ಅರ್ಜಿಯಲ್ಲಿ ಹೇಳಲಾಗಿದೆ. ಪ್ರಕರಣ ಸಂಬಂಧ ಈ ಹಿಂದೆ ಅರ್ಜಿ ಸಲ್ಲಿಸಿದವರಲ್ಲಿ ಒಬ್ಬರಾದ ಅನಾಮಿಕಾ ಜೈಸ್ವಾಲ್ ಅವರು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ವಕೀಲೆ ನೇಹಾ ರಾಠಿ ಅವರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ಸೆಬಿ ತನ್ನ ವರದಿಯಲ್ಲಿ ಅದಾನಿ ಗ್ರೂಪ್‌ ಮೇಲೆ ಆರೋಪ ಕೇಳಿ ಬಂದ ನಂತರ ತಾನು ಕೈಗೊಂಡ 24 ತನಿಖೆಗಳ ಸ್ಥಿತಿಗತಿಯ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಅವು ಪೂರ್ಣಗೊಂಡಿದೆಯೂ, ಇಲ್ಲವೋ. ಆದರೆ, ಸೆಬಿ ಯಾವುದೇ ತನಿಖೆ ಅಥವಾ ಕ್ರಮದ ವಿವರಗಳನ್ನು ಬಹಿರಂಗಪಡಿಸಿಲ್ಲ ಎಂದು ಹೇಳಲಾಗಿದೆ.

“ಸೆಬಿ ತನ್ನ ತನಿಖೆಯ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆಗೊಳಿಸದ ಹೊರತು, ಯಾವುದೇ ನಿಯಂತ್ರಕ ವೈಫಲ್ಯವಿಲ್ಲ ಎಂದು ತೀರ್ಮಾನಿಸಲು ಸಾಧ್ಯವಿಲ್ಲ” ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ತನ್ನ ತೀರ್ಪಿನಲ್ಲಿ, ಅದಾನಿ ಗ್ರೂಪ್ ವಿರುದ್ಧ ಆರೋಪಗಳನ್ನು ಹೊರಿಸಲಾದ 24 ವಿಷಯಗಳ ಪೈಕಿ 22 ರಲ್ಲಿ ಸೆಬಿ ತನ್ನ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೆಬಿ ವಿರುದ್ದ ಯಾವುದೇ ಸ್ಪಷ್ಟವಾದ ನಿಯಂತ್ರಕ ವೈಫಲ್ಯ ಆರೋಪಗಳಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಅರ್ಜಿಯು, ಸೆಬಿಯ ನಿಯಂತ್ರಕ ವೈಫಲ್ಯಗಳು ಸುಲಭವಾಗಿ ಗೋಚರಿಸುವ ಅನೇಕ ನಿದರ್ಶನಗಳಿವೆ. ಅಂತಹ ವೈಫಲ್ಯಗಳು ಅಂತಿಮವಾಗಿ ಆಪಾದಿತ ನಿಯಂತ್ರಕ ಉಲ್ಲಂಘನೆಗಳು ಮತ್ತು ಶಾಸನಬದ್ಧ ಉಲ್ಲಂಘನೆಗಳಿಗೆ ಕಾರಣವಾಗಿವೆ ಎಂದು ಹೇಳಿದೆ.

ಇನ್ನೂ ಅನೇಕ ಅಂಶಗಳನ್ನು ಉಲ್ಲೇಖಿಸಿ ತೀರ್ಪಿನ ಮರು ಪರಿಶೀಲನೆಗೆ ಅನಾಮಿಕಾ ಜೈಸ್ವಾಲ್ ಮನವಿ ಮಾಡಿದ್ದಾರೆ.

ಹಿಂಡೆನ್‌ಬರ್ಗ್‌ ವರದಿ : 

ಅದಾನಿ ಸಮೂಹದ ಕಂಪನಿಗಳು ಸಾಲ ಪಡೆಯುವುದಕ್ಕಾಗಿ ಕೃತಕವಾಗಿ ತಮ್ಮ ಷೇರುಗಳ ಬೆಲೆ ಏರಿಸಿಕೊಂಡಿದೆ. ತಮ್ಮ ಷೇರುಗಳ ಬೆಲೆಯನ್ನು ಅಕ್ರಮವಾಗಿ ಏರಿಸಿ, ಅವುಗಳ ಮೌಲ್ಯ ಹೆಚ್ಚಿಸಿಕೊಂಡು ನಂತರ ಅವುಗಳನ್ನು ಅಡವಿಟ್ಟು ಸಾಲ ಪಡೆದಿವೆ. ಸಾಗರದಾಚೆಗಿನ ವ್ಯವಹಾರಗಳಲ್ಲಿ ತೆರಿಗೆ ವಂಚಿಸುವುದಕ್ಕಾಗಿ ದಶಕಗಳ ಕಾಲ ಲೆಕ್ಕಪತ್ರಗಳಲ್ಲಿ ವಂಚನೆ ನಡೆಸಿವೆ. ಆ ಮೂಲಕ ಅತಿ ಹೆಚ್ಚು ಸಾಲದ ಸುಳಿಗೆ ಸಿಲುಕಿದ್ದು, ಒಟ್ಟಾರೆ ಅದರ ಆರ್ಥಿಕ ತಳಪಾಯವೇ ಅಪಾಯದಲ್ಲಿದೆ ಎಂದು ಹಿಂಡೆನ್‌ಬರ್ಗ್ ವರದಿ ಆರೋಪಿಸಿತ್ತು.

“ನಾವು ಎರಡು ವರ್ಷದ ಸಂಶೋಧನೆಯ ವರದಿಯನ್ನು ಇಂದು ಬಹಿರಂಗಪಡಿಸುತ್ತಿದ್ದೇವೆ. 17.8 ಟ್ರಿಲಿಯನ್ (218 ಬಿಲಿಯನ್ ಅಮೆರಿಕನ್ ಡಾಲರ್) ಮೌಲ್ಯದ ವಹಿವಾಟು ನಡೆಸುವ ಭಾರತೀಯ ಅದಾನಿ ಸಮೂಹವು ದಶಕಗಳ ಕಾಲ ಸ್ಟಾಕ್ ತಿರುಚುವಿಕೆ ಮತ್ತು ಲೆಕ್ಕಪತ್ರ ವಂಚನೆ ಯೋಜನೆಯಲ್ಲಿ ತೊಡಗಿದೆ ಎಂಬುದಕ್ಕೆ ಪುರಾವೆಗಳನ್ನು ಪ್ರಸ್ತುತಪಡಿಸುತ್ತಿದ್ದೇವೆ” ಎಂದು ಸರಣಿ ಟ್ವೀಟ್‌ಗಳನ್ನು ಹಿಂಡೆನ್‌ಬರ್ಗ್‌ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಡಿತ್ತು.

ಈ ವಿಷಯ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿ ಅದಾನಿ ‍ಷೇರುಗಳು ದಿಢೀರನೆ ಕುಸಿದಿತ್ತು. ಅದಾನಿ ಸಮೂಹದ ಜೊತೆ ಬಹಳ ಆಪ್ತತೆಯಿಂದ ಇರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕಸಿವಿಸಿ ಉಂಟು ಮಾಡಿತ್ತು. ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣ ಎಸ್‌ಐಟಿ ಅಥವಾ ಸಿಬಿಐ ತನಿಖೆಗೆ ಕೋರಿದ್ದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಸೆಬಿಗೆ ತನಿಖೆಯ ಜವಬ್ದಾರಿ ವಹಿಸಿದೆ.

ಇದನ್ನೂ ಓದಿ : ಯುಸಿಸಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ: ವಿವಾದಾತ್ಮಕ ಕಾಯ್ದೆ ಜಾರಿಗೆ ಉತ್ತರಾಖಂಡದ ಹಾದಿ ಸುಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...