Homeಅಂತರಾಷ್ಟ್ರೀಯಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

- Advertisement -
- Advertisement -

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದೆ.

ಈ ಸಹಭಾಗಿತ್ವದ ಮೂಲಕ ಭಾರತದಲ್ಲಿ ಅತ್ಯಾಧುನಿಕ ಹೆಲಿಕಾಪ್ಟರ್‌ಗಳ ವಿನ್ಯಾಸ, ತಯಾರಿಕೆ ಮತ್ತು ನಿರ್ವಹಣೆಗೆ ಸಂಬಂಧಿಸಿದ ಮೂಲಸೌಕರ್ಯಗಳನ್ನು ವಿಸ್ತರಿಸುವ ಗುರಿಯನ್ನು ಹೊಂದಲಾಗಿದೆ. ಇದು ರಕ್ಷಣಾ ಕ್ಷೇತ್ರದಲ್ಲಿ ಭಾರತದ ಸ್ವಯಂ ಅವಲಂಬನೆಯನ್ನು (ಆತ್ಮನಿರ್ಭರತೆ) ಉತ್ತೇಜಿಸುವುದಲ್ಲದೆ, ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮತ್ತು ತಾಂತ್ರಿಕ ನಾವೀನ್ಯತೆಯನ್ನು ಹೆಚ್ಚಿಸಲು ಸಹಾಯ ಮಾಡಲಿದೆ ಎಂದು ಎರಡೂ ಕಂಪನಿಗಳು ದೆಹಲಿಯಲ್ಲಿ ಘೋಷಣೆ ಮಾಡಿವೆ.

ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ಅಗತ್ಯತೆಗಳನ್ನು ಕೇಂದ್ರೀಕರಿಸಿ ಮಾಡಿಕೊಂಡಿರುವ ಈ ಒಪ್ಪಂದವು, ಲಿಯೊನಾರ್ಡೊ ಸಂಸ್ಥೆಯ ಅತ್ಯಾಧುನಿಕ AW169M ಮತ್ತು AW109 TrekkerM (ಹಿಂದೆ ಅಗಸ್ಟಾ ವೆಸ್ಟ್‌ಲ್ಯಾಂಡ್ ಎಂದು ಕರೆಯಲ್ಪಡುತ್ತಿದ್ದವು) ಹೆಲಿಕಾಪ್ಟರ್‌ಗಳ ತಯಾರಿಕೆಗೆ ಬೆಂಬಲ ನೀಡಲಿದೆ. ಹಂತಹಂತವಾಗಿ ಈ ಹೆಲಿಕಾಪ್ಟರ್‌ಗಳ ಬಿಡಿಭಾಗಗಳನ್ನು ಭಾರತದಲ್ಲಿಯೇ ತಯಾರಿಸುವ ಗುರಿಯನ್ನು ಈ ಮೈತ್ರಿ ಹೊಂದಲಾಗಿದೆ. ಇದರೊಂದಿಗೆ, ಹೆಲಿಕಾಪ್ಟರ್‌ಗಳ ಸಮಗ್ರ ನಿರ್ವಹಣೆ ಮತ್ತು ರಿಪೇರಿ ಸೇವೆಗಳು ಹಾಗೂ ಪೈಲಟ್‌ಗಳಿಗೆ ತರಬೇತಿ ನೀಡುವ ಮೂಲಸೌಕರ್ಯಗಳನ್ನು ಭಾರತದಲ್ಲಿಯೇ ಅಭಿವೃದ್ಧಿಪಡಿಸಲಾಗುವುದು. ಈ ಮೂಲಕ ಭಾರತೀಯ ರಕ್ಷಣಾ ಪಡೆಗಳಿಗೆ ಅಗತ್ಯವಿರುವ ತಾಂತ್ರಿಕ ಬೆಂಬಲ ಮತ್ತು ಸಿದ್ಧತೆಯನ್ನು ಸ್ಥಳೀಯವಾಗಿಯೇ ಒದಗಿಸುವುದು ಈ ಸಹಭಾಗಿತ್ವದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗ್ತಿದೆ.

ಈ ಬೆಳವಣಿಗೆಯು ಸುಮಾರು ಐದು ವರ್ಷಗಳ ಹಿಂದೆ ಭಾರತ ಸರ್ಕಾರದಿಂದ ಕ್ಲೀನ್ ಚಿಟ್ ಪಡೆದ ನಂತರ, ಈಗ ಲಿಯೊನಾರ್ಡೊ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಟಲಿಯ ಅಗಸ್ಟಾ ವೆಸ್ಟ್‌ಲ್ಯಾಂಡ್ ಸಂಸ್ಥೆಯು ಭಾರತೀಯ ರಕ್ಷಣಾ ವಲಯಕ್ಕೆ ಮರಳಿ ಪ್ರವೇಶ ಪಡೆಯುತ್ತಿರುವುದನ್ನು ಸೂಚಿಸುತ್ತದೆ. ಈ ಹಿಂದಿನ ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದ ವಿವಾದಾತ್ಮಕ ಇತಿಹಾಸದ ಹಿನ್ನೆಲೆಯಲ್ಲಿ ಈ ಪುನರಾಗಮನವು ಬಹಳ ಮಹತ್ವದ್ದಾಗಿದೆ.

2010 ರಲ್ಲಿ ಭಾರತದ ಉನ್ನತ ಸಾಂವಿಧಾನಿಕ ಅಧಿಕಾರಿಗಳ (ರಾಷ್ಟ್ರಪತಿ, ಪ್ರಧಾನಿ ಇತ್ಯಾದಿ) ಪ್ರಯಾಣಕ್ಕಾಗಿ 12 AW101 ಹೆಲಿಕಾಪ್ಟರ್‌ಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈ ಒಪ್ಪಂದದ ಅಂದಾಜು ಮೊತ್ತ ಸುಮಾರು 3,600 ಕೋಟಿ ರೂಪಾಯಿ ಆಗಿತ್ತು. ಈ ಒಪ್ಪಂದದಲ್ಲಿ ಮಧ್ಯವರ್ತಿಗಳಿಗೆ ಮತ್ತು ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, 2014ರಲ್ಲಿ ಭಾರತ ಸರ್ಕಾರವು ಈ ಒಪ್ಪಂದವನ್ನು ರದ್ದುಗೊಳಿಸಿ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಿತ್ತು. ದೀರ್ಘಕಾಲದ ತನಿಖೆಯ ನಂತರ, ನವೆಂಬರ್ 2021 ರಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಭಾರತದ ರಕ್ಷಣಾ ಸಚಿವಾಲಯ ಮತ್ತು ಇಟಲಿಯ ನ್ಯಾಯಾಲಯವು ಕಂಪನಿಗೆ ಕ್ಲೀನ್ ಚಿಟ್ ನೀಡಿದ್ದವು.

ಈಗ ಈ ಕಂಪನಿಯು ಲಿಯೊನಾರ್ಡೊ ಹೆಸರಿನಲ್ಲಿ ಮರುಬ್ರಾಂಡ್ ಆಗಿದ್ದು, ಅದಾನಿ ಡಿಫೆನ್ಸ್ ಜೊತೆಗೂಡಿ ಭಾರತದಲ್ಲಿ ಹೊಸ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸಲು ಸಜ್ಜಾಗಿದೆ.

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ 2013ರಲ್ಲಿ ಬೆಳಕಿಗೆ ಬಂದಿತ್ತು. ಅಗಸ್ಟಾ ವೆಸ್ಟ್‌ಲ್ಯಾಂಡ್‌ನ ಅಂದಿನ ಮಾತೃಸಂಸ್ಥೆಯಾದ ಫಿನ್‌ಮೆಕಾನಿಕಾ ಕಂಪನಿಯ ಹಿರಿಯ ಅಧಿಕಾರಿಗಳನ್ನು ಇಟಾಲಿಯನ್ ತನಿಖಾಧಿಕಾರಿಗಳು ಬಂಧಿಸಿದಾಗ ಈ ಹಗರಣ ಜಗತ್ತಿಗೆ ತಿಳಿಯಿತು. ಈ ಕಂಪನಿಯು ತನ್ನ ಹೆಲಿಕಾಪ್ಟರ್‌ಗಳಿಗೆ ಅನುಕೂಲವಾಗುವಂತೆ ತಾಂತ್ರಿಕ ಮಾನದಂಡಗಳನ್ನು ಬದಲಿಸಲು ಮತ್ತು ಒಪ್ಪಂದವನ್ನು ತನ್ನದಾಗಿಸಿಕೊಳ್ಳಲು ಮಧ್ಯವರ್ತಿಗಳಿಗೆ ಹಾಗೂ ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿತ್ತು.

ಭಾರತದಲ್ಲಿ ಈ ಬಗ್ಗೆ ತನಿಖೆ ನಡೆಸಿದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ, ಹಲವು ಪ್ರಭಾವಿ ವ್ಯಕ್ತಿಗಳು ಈ ಹಗರಣದಲ್ಲಿ ಭಾಗಿಯಾಗಿರುವುದನ್ನು ಪತ್ತೆಹಚ್ಚಿದವು. ಇದರಲ್ಲಿ ಅತ್ಯಂತ ಗಮನಾರ್ಹವಾದ ಅಂಶವೆಂದರೆ, ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥರೊಬ್ಬರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅವರನ್ನು ತನಿಖೆಗೆ ಒಳಪಡಿಸಲಾಗಿತ್ತು.

ಭಾರತ ಸರ್ಕಾರ ಕಪ್ಪು ಪಟ್ಟಿಗೆ ಸೇರಿಸಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್ ಕಂಪನಿಯು 2016ರಲ್ಲಿ ತನ್ನ ಮಾತೃಸಂಸ್ಥೆಯಾದ ‘ಫಿನ್‌ಮೆಕಾನಿಕಾ’ ಜೊತೆಗೆ ವಿಲೀನವಾಯಿತು. ಈ ವಿಲೀನದ ನಂತರ ಫಿನ್‌ಮೆಕಾನಿಕಾ ಸಂಸ್ಥೆಯ ಹೆಸರನ್ನು ‘ಲಿಯೋನಾರ್ಡೊ’ (Leonardo) ಎಂದು ಬದಲಾಯಿಸಲಾಯಿತು.

ಪ್ರಸ್ತುತ ಅಗಸ್ಟಾ ವೆಸ್ಟ್‌ಲ್ಯಾಂಡ್ ಸ್ವತಂತ್ರ ಕಂಪನಿಯಾಗಿ ಅಸ್ತಿತ್ವದಲ್ಲಿಲ್ಲ; ಇದು ಈಗ ಲಿಯೋನಾರ್ಡೊ ಸಂಸ್ಥೆಯ ಹೆಲಿಕಾಪ್ಟರ್ ವಿಭಾಗವಾಗಿ ಕಾರ್ಯನಿರ್ವಹಿಸುತ್ತಿದೆ.

ಲಿಯೋನಾರ್ಡೊ ಕಂಪನಿಯು 2020ರಲ್ಲಿ ತನ್ನ ಐಷಾರಾಮಿ (ವಿಐಪಿ) ಹೆಲಿಕಾಪ್ಟರ್‌ಗಳಿಗಾಗಿ ‘ಅಗಸ್ಟಾ’ (Agusta) ಎಂಬ ಹೆಸರನ್ನು ಬ್ರ್ಯಾಂಡ್ ಆಗಿ ಮರುಬಳಕೆ ಮಾಡಲು ಪ್ರಾರಂಭಿಸಿದೆ.

ಅದಾನಿ ಗ್ರೂಪ್ ಜೊತೆಗಿನ ಹೊಸ ಒಪ್ಪಂದದಲ್ಲಿ ಲಿಯೋನಾರ್ಡೊ ಕಂಪನಿಯು ಈ ಹಿಂದೆ ಅಗಸ್ಟಾ ವೆಸ್ಟ್‌ಲ್ಯಾಂಡ್ ತಯಾರಿಸುತ್ತಿದ್ದ AW169M ಮತ್ತು AW109 TrekkerM ನಂತಹ ಮಾದರಿಗಳನ್ನು ಭಾರತದಲ್ಲಿ ತಯಾರಿಸಲು ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...