Homeಮುಖಪುಟಅದಾನಿ-ಮಮತಾ ಬ್ಯಾನರ್ಜಿ ಭೇಟಿ: ಅದಾನಿ ಕುರಿತ ತಮ್ಮ ಟ್ವೀಟ್‌ಗಳಿಗೆ ಬದ್ದ ಎಂದ ಮಹುವಾ ಮೊಯಿತ್ರಾ

ಅದಾನಿ-ಮಮತಾ ಬ್ಯಾನರ್ಜಿ ಭೇಟಿ: ಅದಾನಿ ಕುರಿತ ತಮ್ಮ ಟ್ವೀಟ್‌ಗಳಿಗೆ ಬದ್ದ ಎಂದ ಮಹುವಾ ಮೊಯಿತ್ರಾ

- Advertisement -
- Advertisement -

ಪಶ್ಚಿಮ ಬಂಗಾಳದ ಆಡಳಿತರೂಢ ಪಕ್ಷ ಟಿಎಂಸಿಯ ಮುಖ್ಯಸ್ಥೆ ಮತ್ತು ಸಿಎಂ ಮಮತಾ ಬ್ಯಾನರ್ಜಿಯರು ಡಿಸೆಂಬರ್ 02ರ ಗುರುವಾರ ಸಂಜೆ ಉದ್ಯಮಿ ಗೌತಮ್ ಅದಾನಿಯವರನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಮತ್ತು 2022ರ ಏಪ್ರಿಲ್‌ನಲ್ಲಿ ನಡೆಯುವ ಬೆಂಗಾಲ್ ಗ್ಲೋಬಲ್ ಬ್ಯುಸಿನೆಸ್ ಸಮ್ಮಿಟ್‌ಗೆ ಆಹ್ವಾನಿಸಿದ್ದಾರೆ. ಇನ್ನೊಂದೆಡೆ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಚಾರವಾಗಿ ಅದಾನಿಯ ವಿರುದ್ಧ ಕಿಡಿಕಾರುತ್ತಿದ್ದ ಅದೇ ಪಕ್ಷದ ಸಂಸದೆ ಮಹುವಾ ಮೊಯಿತ್ರಾರವರು ಈಗ ತಮ್ಮ ಹಳೆಯ ಟ್ವೀಟ್‌ಗಳನ್ನು ಅಳಿಸಿದ್ದಾರೆ ಮತ್ತು ಅಳಿಸಲಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಉತ್ತರಿಸಿರುವ ಮಹುವಾ ತಮ್ಮ ಟ್ವೀಟ್‌ಗಳಿಗೆ ಈಗಲೂ ಬದ್ಧ ಎಂದಿದ್ದಾರೆ.

ಮಹುವಾ ಮೊಯಿತ್ರಾರವರು ಈ ಹಿಂದೆ ಅದಾನಿಯವ ವಿರುದ್ಧ ಮಾಡಿದ್ದ ಹಲವರು ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಟ್ವೀಟ್ ಮಾಡಿರುವ ಸಿಪಿಐ(ಎಂ) ನಾಯಕ ಎಂಡಿ ಸಲೀಂರವರು ಈ ಟ್ವೀಟ್‌ಗಳಲ್ಲಿ ಯಾವಾಗ ಬೇಕಾದರೂ ಡಿಲೀಟ್ ಮಾಡಬಹುದು ಎಂದು ಆರೋಪಿಸಿದ್ದಾರೆ. ಇನ್ನು ಕೆಲವು ನೆಟ್ಟಿಗರು ಒಂದು ಹೆಜ್ಜೆ ಮುಂದೆ ಹೋಗಿ ಮಹುವಾರವರು ಅದಾನಿಯವರನ್ನು ಟೀಕಿಸಿದ್ದ ತಮ್ಮ ಹಳೆಯ ಟ್ವೀಟ್‌ಗಳನ್ನು ಅಳಿಸಿಹಾಕಿದ್ದಾರೆ ಎಂದು ದೂರಿದ್ದಾರೆ. ಇದಕ್ಕೆ ಟ್ವೀಟ್ ಮೂಲಕವೆ ಸ್ಪಷ್ಟೀಕರಣ ನೀಡಿರುವ ಸಂಸದೆ, ಎಲ್ಲಾ ಟ್ವೀಟ್‌ಗಳು ಈಗಲೂ ಇವೆ ಮತ್ತು ಆ ವಿಚಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಸಂಸ್ಥೆಗಳನ್ನು ಅದಾನಿ ಕಬಳಿಸುತ್ತಿದ್ದಾರೆ. ಇಡೀ ಕೇಂದ್ರ ಸರ್ಕಾರವೇ ಅವರ ಜೇಬಿನಲ್ಲಿದೆ. ಬ್ಯಾಂಕುಗಳಿಗೆ ಅವರು ವಂಚನೆ ಮಾಡಿದ್ದರೂ ಸಮರ್ಪಕ ತನಿಖೆ ನಡೆಯುತ್ತಿಲ್ಲ ಎಂದು ಮಹುವಾ ಮೊಯಿತ್ರಾ ಸರಣಿ ಟ್ವೀಟ್‌ಗಳಲ್ಲಿ ಅದಾನಿ ವಿರುದ್ಧ ತಿರುಗಿಬಿದ್ದಿದ್ದರು. ಈಗ ಸ್ವತಃ ಸಿಎಂ ಅದಾನಿಯವರನ್ನು ಹೂಡಿಕೆಗೆ ಬಂಗಾಳಕ್ಕೆ ಬನ್ನಿ ಎಂದು ಆಹ್ವಾನಿಸುತ್ತಿರುವುದರಿಂದ ಈ ವಿವಾದ ಭುಗಿಲೆದ್ದಿದೆ.

ಮಮತಾ ಬ್ಯಾನರ್ಜಿಯವರು ಬ್ಯುಸಿನೆಸ್ ಸಮ್ಮಿಟ್‌ಗೆ ಮುಖೇಶ್ ಅಂಬಾನಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಸಹ ಆಹ್ವಾನಿಸಿದ್ದಾರೆ. ಅದಾನಿ ಈ ಕುರಿತು ಟ್ವೀಟ್ ಮಾಡಿ “ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಿದ್ದು ಸಂತೋಷವಾಗಿದೆ” ಎಂದಿದ್ದಾರೆ. ಜೊತೆಗೆ ಭೇಟಿಯ ಫೋಟೊ ಸಹ ಹಂಚಿಕೊಂಡಿದ್ದಾರೆ.

ಗೌತಮ್ ಅದಾನಿಯವರಿಗೆ ಯಾವುದೇ ಅಡೆ ತಡೆಯಿಲ್ಲದ ವ್ಯವಹಾರ ಸ್ನೇಹಿ ವಾತಾವರಣ ನಿರ್ಮಾಣ ಮಾಡಿಕೊಡಲಾಗುವುದು ಎಂದು ಬಂಗಾಳ ಸಿಎಂ ಭರವಸೆ ನೀಡಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಕೃಷಿ ಸೇರಿದಂತೆ ನೂರಾರು ಕ್ಷೇತ್ರಗಳಲ್ಲಿ ಹರಡಿಕೊಂಡಿರುವ ಅದಾನಿ ಮತ್ತು ಅಂಬಾನಿಗಳು ಬಂಗಾಳದ ಕಡೆಗೆ ತಮ್ಮ ದೃಷ್ಟಿ ನೆಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ದೇಶದ ರೈತರು ಈ ಇಬ್ಬರೂ ಉದ್ಯಮಿಗಳನ್ನು ಬಾಯ್ಕಾಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಟಾಟಾ ಕಂಪನಿಯ ತಮ್ಮ ಕಾರ್ಖಾನೆಗಾಗಿ ಭೂಮಿ ವಶಪಡಿಸಿಕೊಳ್ಳಲು ಮುಂದಾದಾದ ಸಿಂಗೂರು ಮತ್ತು ನಂದಿಗ್ರಾಮಗಳಲ್ಲಿ ಭಾರೀ ಹೋರಾಟ ಭುಗಿಲೆದ್ದಿತು. ಆ ಹೋರಾಟಕ್ಕೆ ನಾಯಕತ್ವ ನೀಡಿದ್ದ ಟಿಎಂಸಿಯ ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ ದೊಡ್ಡ ನಾಯಕರಾಗಿ ಬೆಳೆದಿದ್ದರು. ಈ ಮೂರನೇ ಬಾರಿ ಅಧಿಕಾರಕ್ಕೆ ಬಂದಿರುವ ಅವರು ಮತ್ತದೆ ಅಂಬಾನಿ ಅದಾನಿಗಳಿಗೆ ಆಹ್ವಾನ ನೀಡುತ್ತಿದ್ದಾರೆ. ಮುಂದೆ ಏನಾಗಲಿದೆ ಎಂಬುದನ್ನು ಕಾಲವೇ ನಿರ್ಧರಿಸಲಿದೆ.

ಇದನ್ನೂ ಓದಿ: ‘ಮೋದಿ ಬೀದಿಬದಿ ಪೋಕರಿ ರೀತಿ ಮಾತನಾಡುತ್ತಾರೆ’- ಮೊಹುವಾ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...