Homeಮುಖಪುಟಅದಾನಿ-ಮಮತಾ ಬ್ಯಾನರ್ಜಿ ಭೇಟಿ: ಅದಾನಿ ಕುರಿತ ತಮ್ಮ ಟ್ವೀಟ್‌ಗಳಿಗೆ ಬದ್ದ ಎಂದ ಮಹುವಾ ಮೊಯಿತ್ರಾ

ಅದಾನಿ-ಮಮತಾ ಬ್ಯಾನರ್ಜಿ ಭೇಟಿ: ಅದಾನಿ ಕುರಿತ ತಮ್ಮ ಟ್ವೀಟ್‌ಗಳಿಗೆ ಬದ್ದ ಎಂದ ಮಹುವಾ ಮೊಯಿತ್ರಾ

- Advertisement -
- Advertisement -

ಪಶ್ಚಿಮ ಬಂಗಾಳದ ಆಡಳಿತರೂಢ ಪಕ್ಷ ಟಿಎಂಸಿಯ ಮುಖ್ಯಸ್ಥೆ ಮತ್ತು ಸಿಎಂ ಮಮತಾ ಬ್ಯಾನರ್ಜಿಯರು ಡಿಸೆಂಬರ್ 02ರ ಗುರುವಾರ ಸಂಜೆ ಉದ್ಯಮಿ ಗೌತಮ್ ಅದಾನಿಯವರನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಮತ್ತು 2022ರ ಏಪ್ರಿಲ್‌ನಲ್ಲಿ ನಡೆಯುವ ಬೆಂಗಾಲ್ ಗ್ಲೋಬಲ್ ಬ್ಯುಸಿನೆಸ್ ಸಮ್ಮಿಟ್‌ಗೆ ಆಹ್ವಾನಿಸಿದ್ದಾರೆ. ಇನ್ನೊಂದೆಡೆ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಚಾರವಾಗಿ ಅದಾನಿಯ ವಿರುದ್ಧ ಕಿಡಿಕಾರುತ್ತಿದ್ದ ಅದೇ ಪಕ್ಷದ ಸಂಸದೆ ಮಹುವಾ ಮೊಯಿತ್ರಾರವರು ಈಗ ತಮ್ಮ ಹಳೆಯ ಟ್ವೀಟ್‌ಗಳನ್ನು ಅಳಿಸಿದ್ದಾರೆ ಮತ್ತು ಅಳಿಸಲಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಉತ್ತರಿಸಿರುವ ಮಹುವಾ ತಮ್ಮ ಟ್ವೀಟ್‌ಗಳಿಗೆ ಈಗಲೂ ಬದ್ಧ ಎಂದಿದ್ದಾರೆ.

ಮಹುವಾ ಮೊಯಿತ್ರಾರವರು ಈ ಹಿಂದೆ ಅದಾನಿಯವ ವಿರುದ್ಧ ಮಾಡಿದ್ದ ಹಲವರು ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಟ್ವೀಟ್ ಮಾಡಿರುವ ಸಿಪಿಐ(ಎಂ) ನಾಯಕ ಎಂಡಿ ಸಲೀಂರವರು ಈ ಟ್ವೀಟ್‌ಗಳಲ್ಲಿ ಯಾವಾಗ ಬೇಕಾದರೂ ಡಿಲೀಟ್ ಮಾಡಬಹುದು ಎಂದು ಆರೋಪಿಸಿದ್ದಾರೆ. ಇನ್ನು ಕೆಲವು ನೆಟ್ಟಿಗರು ಒಂದು ಹೆಜ್ಜೆ ಮುಂದೆ ಹೋಗಿ ಮಹುವಾರವರು ಅದಾನಿಯವರನ್ನು ಟೀಕಿಸಿದ್ದ ತಮ್ಮ ಹಳೆಯ ಟ್ವೀಟ್‌ಗಳನ್ನು ಅಳಿಸಿಹಾಕಿದ್ದಾರೆ ಎಂದು ದೂರಿದ್ದಾರೆ. ಇದಕ್ಕೆ ಟ್ವೀಟ್ ಮೂಲಕವೆ ಸ್ಪಷ್ಟೀಕರಣ ನೀಡಿರುವ ಸಂಸದೆ, ಎಲ್ಲಾ ಟ್ವೀಟ್‌ಗಳು ಈಗಲೂ ಇವೆ ಮತ್ತು ಆ ವಿಚಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಸಂಸ್ಥೆಗಳನ್ನು ಅದಾನಿ ಕಬಳಿಸುತ್ತಿದ್ದಾರೆ. ಇಡೀ ಕೇಂದ್ರ ಸರ್ಕಾರವೇ ಅವರ ಜೇಬಿನಲ್ಲಿದೆ. ಬ್ಯಾಂಕುಗಳಿಗೆ ಅವರು ವಂಚನೆ ಮಾಡಿದ್ದರೂ ಸಮರ್ಪಕ ತನಿಖೆ ನಡೆಯುತ್ತಿಲ್ಲ ಎಂದು ಮಹುವಾ ಮೊಯಿತ್ರಾ ಸರಣಿ ಟ್ವೀಟ್‌ಗಳಲ್ಲಿ ಅದಾನಿ ವಿರುದ್ಧ ತಿರುಗಿಬಿದ್ದಿದ್ದರು. ಈಗ ಸ್ವತಃ ಸಿಎಂ ಅದಾನಿಯವರನ್ನು ಹೂಡಿಕೆಗೆ ಬಂಗಾಳಕ್ಕೆ ಬನ್ನಿ ಎಂದು ಆಹ್ವಾನಿಸುತ್ತಿರುವುದರಿಂದ ಈ ವಿವಾದ ಭುಗಿಲೆದ್ದಿದೆ.

ಮಮತಾ ಬ್ಯಾನರ್ಜಿಯವರು ಬ್ಯುಸಿನೆಸ್ ಸಮ್ಮಿಟ್‌ಗೆ ಮುಖೇಶ್ ಅಂಬಾನಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಸಹ ಆಹ್ವಾನಿಸಿದ್ದಾರೆ. ಅದಾನಿ ಈ ಕುರಿತು ಟ್ವೀಟ್ ಮಾಡಿ “ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಿದ್ದು ಸಂತೋಷವಾಗಿದೆ” ಎಂದಿದ್ದಾರೆ. ಜೊತೆಗೆ ಭೇಟಿಯ ಫೋಟೊ ಸಹ ಹಂಚಿಕೊಂಡಿದ್ದಾರೆ.

ಗೌತಮ್ ಅದಾನಿಯವರಿಗೆ ಯಾವುದೇ ಅಡೆ ತಡೆಯಿಲ್ಲದ ವ್ಯವಹಾರ ಸ್ನೇಹಿ ವಾತಾವರಣ ನಿರ್ಮಾಣ ಮಾಡಿಕೊಡಲಾಗುವುದು ಎಂದು ಬಂಗಾಳ ಸಿಎಂ ಭರವಸೆ ನೀಡಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಕೃಷಿ ಸೇರಿದಂತೆ ನೂರಾರು ಕ್ಷೇತ್ರಗಳಲ್ಲಿ ಹರಡಿಕೊಂಡಿರುವ ಅದಾನಿ ಮತ್ತು ಅಂಬಾನಿಗಳು ಬಂಗಾಳದ ಕಡೆಗೆ ತಮ್ಮ ದೃಷ್ಟಿ ನೆಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ದೇಶದ ರೈತರು ಈ ಇಬ್ಬರೂ ಉದ್ಯಮಿಗಳನ್ನು ಬಾಯ್ಕಾಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಟಾಟಾ ಕಂಪನಿಯ ತಮ್ಮ ಕಾರ್ಖಾನೆಗಾಗಿ ಭೂಮಿ ವಶಪಡಿಸಿಕೊಳ್ಳಲು ಮುಂದಾದಾದ ಸಿಂಗೂರು ಮತ್ತು ನಂದಿಗ್ರಾಮಗಳಲ್ಲಿ ಭಾರೀ ಹೋರಾಟ ಭುಗಿಲೆದ್ದಿತು. ಆ ಹೋರಾಟಕ್ಕೆ ನಾಯಕತ್ವ ನೀಡಿದ್ದ ಟಿಎಂಸಿಯ ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ ದೊಡ್ಡ ನಾಯಕರಾಗಿ ಬೆಳೆದಿದ್ದರು. ಈ ಮೂರನೇ ಬಾರಿ ಅಧಿಕಾರಕ್ಕೆ ಬಂದಿರುವ ಅವರು ಮತ್ತದೆ ಅಂಬಾನಿ ಅದಾನಿಗಳಿಗೆ ಆಹ್ವಾನ ನೀಡುತ್ತಿದ್ದಾರೆ. ಮುಂದೆ ಏನಾಗಲಿದೆ ಎಂಬುದನ್ನು ಕಾಲವೇ ನಿರ್ಧರಿಸಲಿದೆ.

ಇದನ್ನೂ ಓದಿ: ‘ಮೋದಿ ಬೀದಿಬದಿ ಪೋಕರಿ ರೀತಿ ಮಾತನಾಡುತ್ತಾರೆ’- ಮೊಹುವಾ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...