Homeಮುಖಪುಟಅದಾನಿ, ಮಣಿಪುರ ಕುರಿತು ಚರ್ಚೆಗೆ ಆಗ್ರಹ | ಸದನದ ಕಲಾಪ ಮುಂದೂಡಿಕೆ

ಅದಾನಿ, ಮಣಿಪುರ ಕುರಿತು ಚರ್ಚೆಗೆ ಆಗ್ರಹ | ಸದನದ ಕಲಾಪ ಮುಂದೂಡಿಕೆ

- Advertisement -
- Advertisement -

ಅಮೆರಿಕದ ಅಧಿಕಾರಿಗಳು ಅದಾನಿ ಗ್ರೂಪ್ ವಿರುದ್ಧ ಮಾಡಿರುವ ಲಂಚದ ಆರೋಪದ ಮೇಲೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಸದನದಲ್ಲಿ ಪ್ರತಿಭಟನೆ ನಡೆಸಿದ್ದು, ಹಾಗಾಗಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ವರ್ಷದ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರದ ಕಲಾಪವನ್ನು ಮುಂದೂಡಲಾಗಿದೆ. “ಈ ನೋಟಿಸ್‌ಗಳು ಪೀಠವು ನೀಡಿದ ನಿರ್ದೇಶನಗಳಿಗೆ ಅನುಗುಣವಾಗಿಲ್ಲ” ಎಂದು ಧಂಖರ್ ನೋಟಿಸ್‌ಗಳನ್ನು ತಿರಸ್ಕರಿಸಿದ್ದಾರೆ. ಅದಾನಿ – ಮಣಿಪುರ

ಅದಾನಿ ಗ್ರೂಪ್‌ನ ಆಪಾದಿತ ಭ್ರಷ್ಟಾಚಾರ, ಲಂಚ ಮತ್ತು ಹಣಕಾಸು ಅಕ್ರಮಗಳ ಕುರಿತು ಚರ್ಚೆ ನಡೆಸುವಂತೆ ವಿರೋಧ ಪಕ್ಷದ ಸಂಸದರಿಂದ 13 ನೋಟಿಸ್‌ಗಳು ಬಂದಿವೆ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಹೇಳಿದ್ದಾರೆ. ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಇತ್ತೀಚೆಗೆ ನಿಧನರಾದ ಐವರು ಸಂಸದರ ಸಂತಾಪ ಸೂಚನೆಗಳನ್ನು ಓದಿದರು ಮತ್ತು ಸದನವು ಒಂದು ನಿಮಿಷ ಮೌನ ಆಚರಿಸಿತು. ಅದಾನಿ – ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರ ಮತ್ತು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಕುರಿತು ಚರ್ಚೆಗಳು ಮತ್ತು ಈ ವರ್ಷದ ಆರಂಭದಲ್ಲಿ ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ನೆರವು ಕೋರಿ ವಿರೋಧ ಪಕ್ಷದ ಸಂಸದರು ನೋಟಿಸ್‌ಗಳನ್ನು ಸಲ್ಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅದಾನಿ ವಿವಾದದ ಬಗ್ಗೆ ಚರ್ಚೆಯೊಂದಿಗೆ ಸಂಸತ್ತಿನ ಅಧಿವೇಶನವನ್ನು ಪ್ರಾರಂಭಿಸಬೇಕು. ಈ ವಿವಾದವೂ ಭಾರತದ ಜಾಗತಿಕ ಚಿತ್ರಣಕ್ಕೆ ಧಕ್ಕೆ ತಂದಿದೆ ಎಂದು ಹೇಳಿದ್ದಾರೆ. ಕೋಟಿಗಟ್ಟಲೆ ಚಿಲ್ಲರೆ ಹೂಡಿಕೆದಾರರ ಕಷ್ಟಪಟ್ಟು ಗಳಿಸಿದ ಹೂಡಿಕೆಗಳು ಅಪಾಯದಲ್ಲಿದೆ ಎಂದು ಇಂಡಿಯಾ ಒಕ್ಕೂಟದ ಪಕ್ಷಗಳು ಇಂದು ಬೇಡಿಕೆ ಇಟ್ಟಿವೆ ಎಂದು ಖರ್ಗೆ ಹೇಳಿದ್ದಾರೆ.

“ಈ ದೇಶವನ್ನು ನಡೆಸಲು ನಮಗೆ ಏಕಸ್ವಾಮ್ಯ ಮತ್ತು ಕಾರ್ಟೆಲ್‌ಗಳ ಅಗತ್ಯವಿಲ್ಲ. ನಮಗೆ ಖಾಸಗಿ ವಲಯದಲ್ಲಿ ಆರೋಗ್ಯಕರ ಮಾರುಕಟ್ಟೆ ಚಾಲಿತ ಸ್ಪರ್ಧೆಯ ಅಗತ್ಯವಿದೆ. ಹೀಗಿದ್ದಾಗ ಸಮಾನ ಅವಕಾಶಗಳು, ಉದ್ಯೋಗ ಮತ್ತು ಸಂಪತ್ತಿನ ಸಮಾನ ವಿತರಣೆಯನ್ನು ಸುಗಮಗೊಳಿಸುತ್ತದೆ. ಭಾರತದ ಅಂತರ್ಗತ ಉದ್ಯಮಶೀಲತಾ ಮನೋಭಾವವನ್ನು ಪೂರೈಸುತ್ತದೆ” ಎಂದು ಅವರು ಖರ್ಗೆ ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರತಿಪಕ್ಷಗಳು ಅಮೆರಿಕದಲ್ಲಿ ಗೌತಮ್ ಅದಾನಿ ಅವರ ದೋಷಾರೋಪಣೆಯ ಕುರಿತು ಚರ್ಚೆಯನ್ನು ಕೋರಿದ್ದು, ಸದನವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಬಿಜೆಪಿ ಸಂಸದೆ ಸಂಧ್ಯಾ ರೇ ಅವರ ಅಧ್ಯಕ್ಷತೆಯಲ್ಲಿ ಕಲಾಪ ಪುನರಾರಂಭಗೊಂಡಾಗ ಪ್ರತಿಪಕ್ಷಗಳು ಮತ್ತೆ ಗದ್ದಲ ಎಬ್ಬಿಸಿದ್ದರಿಂದ ಸದನವನ್ನು ಬುಧವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು.

ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿನ ಸೋಲಿಗೆ ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷನದಲ್ಲಿ ಆರೋಪಿಸಿದ್ದಾರೆ. ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ತಮ್ಮ ಗುರಿಯನ್ನು ಸಾಧಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಮೋದಿ ಹೇಳಿದ್ದಾರೆ. “ಹೊಸ ಆಲೋಚನೆಗಳು ಮತ್ತು ಉತ್ಸಾಹ ಹೊಂದಿರುವ ಸಂಸತ್ತಿನ ಹೊಸ ಮತ್ತು ಯುವ ಸದಸ್ಯರು ಮಾತನಾಡಲು ಸಾಧ್ಯವಾಗುವುದಿಲ್ಲ ಎಂಬುದು ಅತ್ಯಂತ ನೋವಿನ ಸಂಗತಿಯಾಗಿದೆ.” ಎಂದು ಅವರು ಹೇಳಿದ್ದಾರೆ.

ನವೆಂಬರ್ 20 ರಂದು, ಅಮೆರಿಕದ ಅಧಿಕಾರಿಗಳು ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಬಹು-ಬಿಲಿಯನ್ ಡಾಲರ್ ಲಂಚ ಮತ್ತು ವಂಚನೆ ಯೋಜನೆಯಲ್ಲಿ ದೋಷಾರೋಪಣೆಯನ್ನು ಘೋಷಿಸಿದ್ದಾರೆ. ಅದಾನಿ ಗ್ರೂಪ್‌ನ ಸಂಸ್ಥಾಪಕ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿಗೆ ಕೂಡಾ ನ್ಯಾಯಾಧೀಶರು ಬಂಧನ ವಾರಂಟ್‌ಗಳನ್ನು ಹೊರಡಿಸಿದ್ದಾರೆ.

ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಸೇರಿದಂತೆ ಇತರ ಏಳು ಜನರು ಸುಮಾರು 20 ವರ್ಷಗಳಲ್ಲಿ 2 ಬಿಲಿಯನ್ ಡಾಲರ್‌ ಅಥವಾ 16,880 ಕೋಟಿ ರೂಗಳು ಲಾಭವಿರುವ ವ್ಯಾಪಾರಿ ಒಪ್ಪಂದವನ್ನು ಒಪ್ಪಿಕೊಳ್ಳಲು 2020 ಮತ್ತು 2024 ರ ನಡುವೆ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಅಥವಾ ಸುಮಾರು 2,236 ಕೋಟಿ ರೂಪಾಯಿಗಳನ್ನು ಲಂಚವಾಗಿ ನೀಡುವ ಬಗ್ಗೆ ಒಪ್ಪಿಕೊಂಡಿದ್ದರು ಎಂದು ಅಮೆರಿಕಾದ ಅಟಾರ್ನಿ ಕಚೇರಿಯಿಂದ ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಈ ದೋಷಾರೋಪಣೆಯು ಭಾರತದಲ್ಲಿ ರಾಜಕೀಯವಾಗಿ ಕೋಲಾಹಲ ಉಂಟಾಗಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೌತಮ್ ಅದಾನಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....