Homeಮುಖಪುಟಅದಾನಿ, ಮಣಿಪುರ ಕುರಿತು ಚರ್ಚೆಗೆ ಆಗ್ರಹ | ಸದನದ ಕಲಾಪ ಮುಂದೂಡಿಕೆ

ಅದಾನಿ, ಮಣಿಪುರ ಕುರಿತು ಚರ್ಚೆಗೆ ಆಗ್ರಹ | ಸದನದ ಕಲಾಪ ಮುಂದೂಡಿಕೆ

- Advertisement -
- Advertisement -

ಅಮೆರಿಕದ ಅಧಿಕಾರಿಗಳು ಅದಾನಿ ಗ್ರೂಪ್ ವಿರುದ್ಧ ಮಾಡಿರುವ ಲಂಚದ ಆರೋಪದ ಮೇಲೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಸದನದಲ್ಲಿ ಪ್ರತಿಭಟನೆ ನಡೆಸಿದ್ದು, ಹಾಗಾಗಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ವರ್ಷದ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರದ ಕಲಾಪವನ್ನು ಮುಂದೂಡಲಾಗಿದೆ. “ಈ ನೋಟಿಸ್‌ಗಳು ಪೀಠವು ನೀಡಿದ ನಿರ್ದೇಶನಗಳಿಗೆ ಅನುಗುಣವಾಗಿಲ್ಲ” ಎಂದು ಧಂಖರ್ ನೋಟಿಸ್‌ಗಳನ್ನು ತಿರಸ್ಕರಿಸಿದ್ದಾರೆ. ಅದಾನಿ – ಮಣಿಪುರ

ಅದಾನಿ ಗ್ರೂಪ್‌ನ ಆಪಾದಿತ ಭ್ರಷ್ಟಾಚಾರ, ಲಂಚ ಮತ್ತು ಹಣಕಾಸು ಅಕ್ರಮಗಳ ಕುರಿತು ಚರ್ಚೆ ನಡೆಸುವಂತೆ ವಿರೋಧ ಪಕ್ಷದ ಸಂಸದರಿಂದ 13 ನೋಟಿಸ್‌ಗಳು ಬಂದಿವೆ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಹೇಳಿದ್ದಾರೆ. ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಇತ್ತೀಚೆಗೆ ನಿಧನರಾದ ಐವರು ಸಂಸದರ ಸಂತಾಪ ಸೂಚನೆಗಳನ್ನು ಓದಿದರು ಮತ್ತು ಸದನವು ಒಂದು ನಿಮಿಷ ಮೌನ ಆಚರಿಸಿತು. ಅದಾನಿ – ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರ ಮತ್ತು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಕುರಿತು ಚರ್ಚೆಗಳು ಮತ್ತು ಈ ವರ್ಷದ ಆರಂಭದಲ್ಲಿ ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ನೆರವು ಕೋರಿ ವಿರೋಧ ಪಕ್ಷದ ಸಂಸದರು ನೋಟಿಸ್‌ಗಳನ್ನು ಸಲ್ಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅದಾನಿ ವಿವಾದದ ಬಗ್ಗೆ ಚರ್ಚೆಯೊಂದಿಗೆ ಸಂಸತ್ತಿನ ಅಧಿವೇಶನವನ್ನು ಪ್ರಾರಂಭಿಸಬೇಕು. ಈ ವಿವಾದವೂ ಭಾರತದ ಜಾಗತಿಕ ಚಿತ್ರಣಕ್ಕೆ ಧಕ್ಕೆ ತಂದಿದೆ ಎಂದು ಹೇಳಿದ್ದಾರೆ. ಕೋಟಿಗಟ್ಟಲೆ ಚಿಲ್ಲರೆ ಹೂಡಿಕೆದಾರರ ಕಷ್ಟಪಟ್ಟು ಗಳಿಸಿದ ಹೂಡಿಕೆಗಳು ಅಪಾಯದಲ್ಲಿದೆ ಎಂದು ಇಂಡಿಯಾ ಒಕ್ಕೂಟದ ಪಕ್ಷಗಳು ಇಂದು ಬೇಡಿಕೆ ಇಟ್ಟಿವೆ ಎಂದು ಖರ್ಗೆ ಹೇಳಿದ್ದಾರೆ.

“ಈ ದೇಶವನ್ನು ನಡೆಸಲು ನಮಗೆ ಏಕಸ್ವಾಮ್ಯ ಮತ್ತು ಕಾರ್ಟೆಲ್‌ಗಳ ಅಗತ್ಯವಿಲ್ಲ. ನಮಗೆ ಖಾಸಗಿ ವಲಯದಲ್ಲಿ ಆರೋಗ್ಯಕರ ಮಾರುಕಟ್ಟೆ ಚಾಲಿತ ಸ್ಪರ್ಧೆಯ ಅಗತ್ಯವಿದೆ. ಹೀಗಿದ್ದಾಗ ಸಮಾನ ಅವಕಾಶಗಳು, ಉದ್ಯೋಗ ಮತ್ತು ಸಂಪತ್ತಿನ ಸಮಾನ ವಿತರಣೆಯನ್ನು ಸುಗಮಗೊಳಿಸುತ್ತದೆ. ಭಾರತದ ಅಂತರ್ಗತ ಉದ್ಯಮಶೀಲತಾ ಮನೋಭಾವವನ್ನು ಪೂರೈಸುತ್ತದೆ” ಎಂದು ಅವರು ಖರ್ಗೆ ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರತಿಪಕ್ಷಗಳು ಅಮೆರಿಕದಲ್ಲಿ ಗೌತಮ್ ಅದಾನಿ ಅವರ ದೋಷಾರೋಪಣೆಯ ಕುರಿತು ಚರ್ಚೆಯನ್ನು ಕೋರಿದ್ದು, ಸದನವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಬಿಜೆಪಿ ಸಂಸದೆ ಸಂಧ್ಯಾ ರೇ ಅವರ ಅಧ್ಯಕ್ಷತೆಯಲ್ಲಿ ಕಲಾಪ ಪುನರಾರಂಭಗೊಂಡಾಗ ಪ್ರತಿಪಕ್ಷಗಳು ಮತ್ತೆ ಗದ್ದಲ ಎಬ್ಬಿಸಿದ್ದರಿಂದ ಸದನವನ್ನು ಬುಧವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು.

ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿನ ಸೋಲಿಗೆ ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷನದಲ್ಲಿ ಆರೋಪಿಸಿದ್ದಾರೆ. ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ತಮ್ಮ ಗುರಿಯನ್ನು ಸಾಧಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಮೋದಿ ಹೇಳಿದ್ದಾರೆ. “ಹೊಸ ಆಲೋಚನೆಗಳು ಮತ್ತು ಉತ್ಸಾಹ ಹೊಂದಿರುವ ಸಂಸತ್ತಿನ ಹೊಸ ಮತ್ತು ಯುವ ಸದಸ್ಯರು ಮಾತನಾಡಲು ಸಾಧ್ಯವಾಗುವುದಿಲ್ಲ ಎಂಬುದು ಅತ್ಯಂತ ನೋವಿನ ಸಂಗತಿಯಾಗಿದೆ.” ಎಂದು ಅವರು ಹೇಳಿದ್ದಾರೆ.

ನವೆಂಬರ್ 20 ರಂದು, ಅಮೆರಿಕದ ಅಧಿಕಾರಿಗಳು ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಬಹು-ಬಿಲಿಯನ್ ಡಾಲರ್ ಲಂಚ ಮತ್ತು ವಂಚನೆ ಯೋಜನೆಯಲ್ಲಿ ದೋಷಾರೋಪಣೆಯನ್ನು ಘೋಷಿಸಿದ್ದಾರೆ. ಅದಾನಿ ಗ್ರೂಪ್‌ನ ಸಂಸ್ಥಾಪಕ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿಗೆ ಕೂಡಾ ನ್ಯಾಯಾಧೀಶರು ಬಂಧನ ವಾರಂಟ್‌ಗಳನ್ನು ಹೊರಡಿಸಿದ್ದಾರೆ.

ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಸೇರಿದಂತೆ ಇತರ ಏಳು ಜನರು ಸುಮಾರು 20 ವರ್ಷಗಳಲ್ಲಿ 2 ಬಿಲಿಯನ್ ಡಾಲರ್‌ ಅಥವಾ 16,880 ಕೋಟಿ ರೂಗಳು ಲಾಭವಿರುವ ವ್ಯಾಪಾರಿ ಒಪ್ಪಂದವನ್ನು ಒಪ್ಪಿಕೊಳ್ಳಲು 2020 ಮತ್ತು 2024 ರ ನಡುವೆ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಅಥವಾ ಸುಮಾರು 2,236 ಕೋಟಿ ರೂಪಾಯಿಗಳನ್ನು ಲಂಚವಾಗಿ ನೀಡುವ ಬಗ್ಗೆ ಒಪ್ಪಿಕೊಂಡಿದ್ದರು ಎಂದು ಅಮೆರಿಕಾದ ಅಟಾರ್ನಿ ಕಚೇರಿಯಿಂದ ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಈ ದೋಷಾರೋಪಣೆಯು ಭಾರತದಲ್ಲಿ ರಾಜಕೀಯವಾಗಿ ಕೋಲಾಹಲ ಉಂಟಾಗಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೌತಮ್ ಅದಾನಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...