Homeಮುಖಪುಟಅದಾನಿ, ಮಣಿಪುರ ಕುರಿತು ಚರ್ಚೆಗೆ ಆಗ್ರಹ | ಸದನದ ಕಲಾಪ ಮುಂದೂಡಿಕೆ

ಅದಾನಿ, ಮಣಿಪುರ ಕುರಿತು ಚರ್ಚೆಗೆ ಆಗ್ರಹ | ಸದನದ ಕಲಾಪ ಮುಂದೂಡಿಕೆ

- Advertisement -
- Advertisement -

ಅಮೆರಿಕದ ಅಧಿಕಾರಿಗಳು ಅದಾನಿ ಗ್ರೂಪ್ ವಿರುದ್ಧ ಮಾಡಿರುವ ಲಂಚದ ಆರೋಪದ ಮೇಲೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಸದನದಲ್ಲಿ ಪ್ರತಿಭಟನೆ ನಡೆಸಿದ್ದು, ಹಾಗಾಗಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ವರ್ಷದ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರದ ಕಲಾಪವನ್ನು ಮುಂದೂಡಲಾಗಿದೆ. “ಈ ನೋಟಿಸ್‌ಗಳು ಪೀಠವು ನೀಡಿದ ನಿರ್ದೇಶನಗಳಿಗೆ ಅನುಗುಣವಾಗಿಲ್ಲ” ಎಂದು ಧಂಖರ್ ನೋಟಿಸ್‌ಗಳನ್ನು ತಿರಸ್ಕರಿಸಿದ್ದಾರೆ. ಅದಾನಿ – ಮಣಿಪುರ

ಅದಾನಿ ಗ್ರೂಪ್‌ನ ಆಪಾದಿತ ಭ್ರಷ್ಟಾಚಾರ, ಲಂಚ ಮತ್ತು ಹಣಕಾಸು ಅಕ್ರಮಗಳ ಕುರಿತು ಚರ್ಚೆ ನಡೆಸುವಂತೆ ವಿರೋಧ ಪಕ್ಷದ ಸಂಸದರಿಂದ 13 ನೋಟಿಸ್‌ಗಳು ಬಂದಿವೆ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಹೇಳಿದ್ದಾರೆ. ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಇತ್ತೀಚೆಗೆ ನಿಧನರಾದ ಐವರು ಸಂಸದರ ಸಂತಾಪ ಸೂಚನೆಗಳನ್ನು ಓದಿದರು ಮತ್ತು ಸದನವು ಒಂದು ನಿಮಿಷ ಮೌನ ಆಚರಿಸಿತು. ಅದಾನಿ – ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರ ಮತ್ತು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಕುರಿತು ಚರ್ಚೆಗಳು ಮತ್ತು ಈ ವರ್ಷದ ಆರಂಭದಲ್ಲಿ ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ನೆರವು ಕೋರಿ ವಿರೋಧ ಪಕ್ಷದ ಸಂಸದರು ನೋಟಿಸ್‌ಗಳನ್ನು ಸಲ್ಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅದಾನಿ ವಿವಾದದ ಬಗ್ಗೆ ಚರ್ಚೆಯೊಂದಿಗೆ ಸಂಸತ್ತಿನ ಅಧಿವೇಶನವನ್ನು ಪ್ರಾರಂಭಿಸಬೇಕು. ಈ ವಿವಾದವೂ ಭಾರತದ ಜಾಗತಿಕ ಚಿತ್ರಣಕ್ಕೆ ಧಕ್ಕೆ ತಂದಿದೆ ಎಂದು ಹೇಳಿದ್ದಾರೆ. ಕೋಟಿಗಟ್ಟಲೆ ಚಿಲ್ಲರೆ ಹೂಡಿಕೆದಾರರ ಕಷ್ಟಪಟ್ಟು ಗಳಿಸಿದ ಹೂಡಿಕೆಗಳು ಅಪಾಯದಲ್ಲಿದೆ ಎಂದು ಇಂಡಿಯಾ ಒಕ್ಕೂಟದ ಪಕ್ಷಗಳು ಇಂದು ಬೇಡಿಕೆ ಇಟ್ಟಿವೆ ಎಂದು ಖರ್ಗೆ ಹೇಳಿದ್ದಾರೆ.

“ಈ ದೇಶವನ್ನು ನಡೆಸಲು ನಮಗೆ ಏಕಸ್ವಾಮ್ಯ ಮತ್ತು ಕಾರ್ಟೆಲ್‌ಗಳ ಅಗತ್ಯವಿಲ್ಲ. ನಮಗೆ ಖಾಸಗಿ ವಲಯದಲ್ಲಿ ಆರೋಗ್ಯಕರ ಮಾರುಕಟ್ಟೆ ಚಾಲಿತ ಸ್ಪರ್ಧೆಯ ಅಗತ್ಯವಿದೆ. ಹೀಗಿದ್ದಾಗ ಸಮಾನ ಅವಕಾಶಗಳು, ಉದ್ಯೋಗ ಮತ್ತು ಸಂಪತ್ತಿನ ಸಮಾನ ವಿತರಣೆಯನ್ನು ಸುಗಮಗೊಳಿಸುತ್ತದೆ. ಭಾರತದ ಅಂತರ್ಗತ ಉದ್ಯಮಶೀಲತಾ ಮನೋಭಾವವನ್ನು ಪೂರೈಸುತ್ತದೆ” ಎಂದು ಅವರು ಖರ್ಗೆ ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರತಿಪಕ್ಷಗಳು ಅಮೆರಿಕದಲ್ಲಿ ಗೌತಮ್ ಅದಾನಿ ಅವರ ದೋಷಾರೋಪಣೆಯ ಕುರಿತು ಚರ್ಚೆಯನ್ನು ಕೋರಿದ್ದು, ಸದನವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಬಿಜೆಪಿ ಸಂಸದೆ ಸಂಧ್ಯಾ ರೇ ಅವರ ಅಧ್ಯಕ್ಷತೆಯಲ್ಲಿ ಕಲಾಪ ಪುನರಾರಂಭಗೊಂಡಾಗ ಪ್ರತಿಪಕ್ಷಗಳು ಮತ್ತೆ ಗದ್ದಲ ಎಬ್ಬಿಸಿದ್ದರಿಂದ ಸದನವನ್ನು ಬುಧವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು.

ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿನ ಸೋಲಿಗೆ ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷನದಲ್ಲಿ ಆರೋಪಿಸಿದ್ದಾರೆ. ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ತಮ್ಮ ಗುರಿಯನ್ನು ಸಾಧಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಮೋದಿ ಹೇಳಿದ್ದಾರೆ. “ಹೊಸ ಆಲೋಚನೆಗಳು ಮತ್ತು ಉತ್ಸಾಹ ಹೊಂದಿರುವ ಸಂಸತ್ತಿನ ಹೊಸ ಮತ್ತು ಯುವ ಸದಸ್ಯರು ಮಾತನಾಡಲು ಸಾಧ್ಯವಾಗುವುದಿಲ್ಲ ಎಂಬುದು ಅತ್ಯಂತ ನೋವಿನ ಸಂಗತಿಯಾಗಿದೆ.” ಎಂದು ಅವರು ಹೇಳಿದ್ದಾರೆ.

ನವೆಂಬರ್ 20 ರಂದು, ಅಮೆರಿಕದ ಅಧಿಕಾರಿಗಳು ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಬಹು-ಬಿಲಿಯನ್ ಡಾಲರ್ ಲಂಚ ಮತ್ತು ವಂಚನೆ ಯೋಜನೆಯಲ್ಲಿ ದೋಷಾರೋಪಣೆಯನ್ನು ಘೋಷಿಸಿದ್ದಾರೆ. ಅದಾನಿ ಗ್ರೂಪ್‌ನ ಸಂಸ್ಥಾಪಕ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿಗೆ ಕೂಡಾ ನ್ಯಾಯಾಧೀಶರು ಬಂಧನ ವಾರಂಟ್‌ಗಳನ್ನು ಹೊರಡಿಸಿದ್ದಾರೆ.

ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಸೇರಿದಂತೆ ಇತರ ಏಳು ಜನರು ಸುಮಾರು 20 ವರ್ಷಗಳಲ್ಲಿ 2 ಬಿಲಿಯನ್ ಡಾಲರ್‌ ಅಥವಾ 16,880 ಕೋಟಿ ರೂಗಳು ಲಾಭವಿರುವ ವ್ಯಾಪಾರಿ ಒಪ್ಪಂದವನ್ನು ಒಪ್ಪಿಕೊಳ್ಳಲು 2020 ಮತ್ತು 2024 ರ ನಡುವೆ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಅಥವಾ ಸುಮಾರು 2,236 ಕೋಟಿ ರೂಪಾಯಿಗಳನ್ನು ಲಂಚವಾಗಿ ನೀಡುವ ಬಗ್ಗೆ ಒಪ್ಪಿಕೊಂಡಿದ್ದರು ಎಂದು ಅಮೆರಿಕಾದ ಅಟಾರ್ನಿ ಕಚೇರಿಯಿಂದ ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಈ ದೋಷಾರೋಪಣೆಯು ಭಾರತದಲ್ಲಿ ರಾಜಕೀಯವಾಗಿ ಕೋಲಾಹಲ ಉಂಟಾಗಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೌತಮ್ ಅದಾನಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...