Homeಮುಖಪುಟಅದಾನಿ, ಮಣಿಪುರ ಕುರಿತು ಚರ್ಚೆಗೆ ಆಗ್ರಹ | ಸದನದ ಕಲಾಪ ಮುಂದೂಡಿಕೆ

ಅದಾನಿ, ಮಣಿಪುರ ಕುರಿತು ಚರ್ಚೆಗೆ ಆಗ್ರಹ | ಸದನದ ಕಲಾಪ ಮುಂದೂಡಿಕೆ

- Advertisement -
- Advertisement -

ಅಮೆರಿಕದ ಅಧಿಕಾರಿಗಳು ಅದಾನಿ ಗ್ರೂಪ್ ವಿರುದ್ಧ ಮಾಡಿರುವ ಲಂಚದ ಆರೋಪದ ಮೇಲೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಸದನದಲ್ಲಿ ಪ್ರತಿಭಟನೆ ನಡೆಸಿದ್ದು, ಹಾಗಾಗಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ವರ್ಷದ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರದ ಕಲಾಪವನ್ನು ಮುಂದೂಡಲಾಗಿದೆ. “ಈ ನೋಟಿಸ್‌ಗಳು ಪೀಠವು ನೀಡಿದ ನಿರ್ದೇಶನಗಳಿಗೆ ಅನುಗುಣವಾಗಿಲ್ಲ” ಎಂದು ಧಂಖರ್ ನೋಟಿಸ್‌ಗಳನ್ನು ತಿರಸ್ಕರಿಸಿದ್ದಾರೆ. ಅದಾನಿ – ಮಣಿಪುರ

ಅದಾನಿ ಗ್ರೂಪ್‌ನ ಆಪಾದಿತ ಭ್ರಷ್ಟಾಚಾರ, ಲಂಚ ಮತ್ತು ಹಣಕಾಸು ಅಕ್ರಮಗಳ ಕುರಿತು ಚರ್ಚೆ ನಡೆಸುವಂತೆ ವಿರೋಧ ಪಕ್ಷದ ಸಂಸದರಿಂದ 13 ನೋಟಿಸ್‌ಗಳು ಬಂದಿವೆ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಹೇಳಿದ್ದಾರೆ. ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಇತ್ತೀಚೆಗೆ ನಿಧನರಾದ ಐವರು ಸಂಸದರ ಸಂತಾಪ ಸೂಚನೆಗಳನ್ನು ಓದಿದರು ಮತ್ತು ಸದನವು ಒಂದು ನಿಮಿಷ ಮೌನ ಆಚರಿಸಿತು. ಅದಾನಿ – ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರ ಮತ್ತು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಕುರಿತು ಚರ್ಚೆಗಳು ಮತ್ತು ಈ ವರ್ಷದ ಆರಂಭದಲ್ಲಿ ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ನೆರವು ಕೋರಿ ವಿರೋಧ ಪಕ್ಷದ ಸಂಸದರು ನೋಟಿಸ್‌ಗಳನ್ನು ಸಲ್ಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅದಾನಿ ವಿವಾದದ ಬಗ್ಗೆ ಚರ್ಚೆಯೊಂದಿಗೆ ಸಂಸತ್ತಿನ ಅಧಿವೇಶನವನ್ನು ಪ್ರಾರಂಭಿಸಬೇಕು. ಈ ವಿವಾದವೂ ಭಾರತದ ಜಾಗತಿಕ ಚಿತ್ರಣಕ್ಕೆ ಧಕ್ಕೆ ತಂದಿದೆ ಎಂದು ಹೇಳಿದ್ದಾರೆ. ಕೋಟಿಗಟ್ಟಲೆ ಚಿಲ್ಲರೆ ಹೂಡಿಕೆದಾರರ ಕಷ್ಟಪಟ್ಟು ಗಳಿಸಿದ ಹೂಡಿಕೆಗಳು ಅಪಾಯದಲ್ಲಿದೆ ಎಂದು ಇಂಡಿಯಾ ಒಕ್ಕೂಟದ ಪಕ್ಷಗಳು ಇಂದು ಬೇಡಿಕೆ ಇಟ್ಟಿವೆ ಎಂದು ಖರ್ಗೆ ಹೇಳಿದ್ದಾರೆ.

“ಈ ದೇಶವನ್ನು ನಡೆಸಲು ನಮಗೆ ಏಕಸ್ವಾಮ್ಯ ಮತ್ತು ಕಾರ್ಟೆಲ್‌ಗಳ ಅಗತ್ಯವಿಲ್ಲ. ನಮಗೆ ಖಾಸಗಿ ವಲಯದಲ್ಲಿ ಆರೋಗ್ಯಕರ ಮಾರುಕಟ್ಟೆ ಚಾಲಿತ ಸ್ಪರ್ಧೆಯ ಅಗತ್ಯವಿದೆ. ಹೀಗಿದ್ದಾಗ ಸಮಾನ ಅವಕಾಶಗಳು, ಉದ್ಯೋಗ ಮತ್ತು ಸಂಪತ್ತಿನ ಸಮಾನ ವಿತರಣೆಯನ್ನು ಸುಗಮಗೊಳಿಸುತ್ತದೆ. ಭಾರತದ ಅಂತರ್ಗತ ಉದ್ಯಮಶೀಲತಾ ಮನೋಭಾವವನ್ನು ಪೂರೈಸುತ್ತದೆ” ಎಂದು ಅವರು ಖರ್ಗೆ ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರತಿಪಕ್ಷಗಳು ಅಮೆರಿಕದಲ್ಲಿ ಗೌತಮ್ ಅದಾನಿ ಅವರ ದೋಷಾರೋಪಣೆಯ ಕುರಿತು ಚರ್ಚೆಯನ್ನು ಕೋರಿದ್ದು, ಸದನವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಬಿಜೆಪಿ ಸಂಸದೆ ಸಂಧ್ಯಾ ರೇ ಅವರ ಅಧ್ಯಕ್ಷತೆಯಲ್ಲಿ ಕಲಾಪ ಪುನರಾರಂಭಗೊಂಡಾಗ ಪ್ರತಿಪಕ್ಷಗಳು ಮತ್ತೆ ಗದ್ದಲ ಎಬ್ಬಿಸಿದ್ದರಿಂದ ಸದನವನ್ನು ಬುಧವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು.

ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿನ ಸೋಲಿಗೆ ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷನದಲ್ಲಿ ಆರೋಪಿಸಿದ್ದಾರೆ. ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ತಮ್ಮ ಗುರಿಯನ್ನು ಸಾಧಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಮೋದಿ ಹೇಳಿದ್ದಾರೆ. “ಹೊಸ ಆಲೋಚನೆಗಳು ಮತ್ತು ಉತ್ಸಾಹ ಹೊಂದಿರುವ ಸಂಸತ್ತಿನ ಹೊಸ ಮತ್ತು ಯುವ ಸದಸ್ಯರು ಮಾತನಾಡಲು ಸಾಧ್ಯವಾಗುವುದಿಲ್ಲ ಎಂಬುದು ಅತ್ಯಂತ ನೋವಿನ ಸಂಗತಿಯಾಗಿದೆ.” ಎಂದು ಅವರು ಹೇಳಿದ್ದಾರೆ.

ನವೆಂಬರ್ 20 ರಂದು, ಅಮೆರಿಕದ ಅಧಿಕಾರಿಗಳು ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಬಹು-ಬಿಲಿಯನ್ ಡಾಲರ್ ಲಂಚ ಮತ್ತು ವಂಚನೆ ಯೋಜನೆಯಲ್ಲಿ ದೋಷಾರೋಪಣೆಯನ್ನು ಘೋಷಿಸಿದ್ದಾರೆ. ಅದಾನಿ ಗ್ರೂಪ್‌ನ ಸಂಸ್ಥಾಪಕ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿಗೆ ಕೂಡಾ ನ್ಯಾಯಾಧೀಶರು ಬಂಧನ ವಾರಂಟ್‌ಗಳನ್ನು ಹೊರಡಿಸಿದ್ದಾರೆ.

ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಸೇರಿದಂತೆ ಇತರ ಏಳು ಜನರು ಸುಮಾರು 20 ವರ್ಷಗಳಲ್ಲಿ 2 ಬಿಲಿಯನ್ ಡಾಲರ್‌ ಅಥವಾ 16,880 ಕೋಟಿ ರೂಗಳು ಲಾಭವಿರುವ ವ್ಯಾಪಾರಿ ಒಪ್ಪಂದವನ್ನು ಒಪ್ಪಿಕೊಳ್ಳಲು 2020 ಮತ್ತು 2024 ರ ನಡುವೆ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಅಥವಾ ಸುಮಾರು 2,236 ಕೋಟಿ ರೂಪಾಯಿಗಳನ್ನು ಲಂಚವಾಗಿ ನೀಡುವ ಬಗ್ಗೆ ಒಪ್ಪಿಕೊಂಡಿದ್ದರು ಎಂದು ಅಮೆರಿಕಾದ ಅಟಾರ್ನಿ ಕಚೇರಿಯಿಂದ ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಈ ದೋಷಾರೋಪಣೆಯು ಭಾರತದಲ್ಲಿ ರಾಜಕೀಯವಾಗಿ ಕೋಲಾಹಲ ಉಂಟಾಗಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೌತಮ್ ಅದಾನಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...