Homeಮುಖಪುಟವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಿಂದ ಹೊರಬಿದ್ದ ಅದಾನಿ; ದಿನದಿಂದ ದಿನಕ್ಕೆ ಮತ್ತಷ್ಟು ನಷ್ಟ

ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಿಂದ ಹೊರಬಿದ್ದ ಅದಾನಿ; ದಿನದಿಂದ ದಿನಕ್ಕೆ ಮತ್ತಷ್ಟು ನಷ್ಟ

- Advertisement -
- Advertisement -

ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಿಂದ ಗೌತಮ್ ಅದಾನಿ ಹೊರಬಿದ್ದಿದ್ದಾರೆ. ಇದೇ ರೀತಿ ಅವರ ಸಂಸ್ಥೆಯಲ್ಲಿನ ಷೇರುಗಳು ಕುಸಿಯುತ್ತಲೇ ಹೋದರೆ ಶೀಘ್ರದಲ್ಲೇ ಏಷ್ಯಾದ ಶ್ರೀಮಂತ ವ್ಯಕ್ತಿ ಎನ್ನುವ ಸ್ಥಾನವೂ ಕಳೆದುಕೊಳ್ಳಬಹುದು.

ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನಲ್ಲಿ ಭಾರತೀಯ ಉದ್ಯಮಿ ಗೌತಮ್ ಅದಾನಿ ನಾಲ್ಕನೇ ಸ್ಥಾನದಿಂದ 11 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಕೇವಲ ಮೂರು ದಿನಗಳಲ್ಲಿ $34 ಶತಕೋಟಿಯ ವೈಯಕ್ತಿಕ ಸಂಪತ್ತು ಕಲೆದುಕೊಂಡಿದ್ದಾರೆ.

ಪ್ರಸ್ತುತ $84.4 ಶತಕೋಟಿ ಸಂಪತ್ತಿನೊಂದಿಗೆ, ಅದಾನಿಯು ತಮ್ಮ ಪ್ರತಿಸ್ಪರ್ಧಿಯಾಗಿಂತ ಒಂದು ಸ್ಥಾನ ಮುಂದೆ ಇದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ನಿವ್ವಳ ಮೌಲ್ಯ $82.2 ಬಿಲಿಯನ್ ಆಗಿದೆ.

ಇದನ್ನೂ ಓದಿ: ಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ ಸಂಶೋಧನಾ ಸಂಸ್ಥೆ

ಅದಾನಿ ಗ್ರೂಪ್ ಕಂಪನಿಗಳ ಷೇರುಗಳು ಮೂರು ದಿನಗಳ ಮಾರಾಟದಲ್ಲಿ ಕುಸಿತ ಕಂಡಿದೆ. $68 ಶತಕೋಟಿಗಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಕಳೆದುಕೊಂಡಿದೆ. ಅದಾನಿ ಈಗ ಬಿಲಿಯನೇರ್‌ಗಳ ಸೂಚ್ಯಂಕದಲ್ಲಿ, ಮೆಕ್ಸಿಕೋದ ಕಾರ್ಲೋಸ್ ಸ್ಲಿಮ್, ಗೂಗಲ್ ಸಹ-ಸಂಸ್ಥಾಪಕ ಸೆರ್ಗೆ ಬ್ರಿನ್ ಮತ್ತು ಮಾಜಿ ಮೈಕ್ರೋಸಾಫ್ಟ್ ಸಿಇಒ ಸ್ಟೀವ್ ಬಾಲ್ಮರ್ ಅವರಿಗಿಂತ ಕೆಳಗೆ ಕುಸಿದಿದ್ದಾರೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯ ಪ್ರಕಟಣೆಯು “ಬ್ರೇಜನ್ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆ” ಎಂದು ಆರೋಪಿಸಿದೆ.

ಹಿಂಡೆನ್‌ಬರ್ಗ್ ವರದಿಯಲ್ಲೇನಿದೆ?

ಅದಾನಿ ಸಮೂಹದ ಕಂಪನಿಗಳು ಸಾಲ ಪಡೆಯುವುದಕ್ಕಾಗಿ ಕೃತಕವಾಗಿ ತಮ್ಮ ಷೇರುಗಳ ಬೆಲೆ ಏರಿಸಿಕೊಂಡಿದೆ. ತಮ್ಮ ಷೇರುಗಳ ಬೆಲೆಯನ್ನು ಅಕ್ರಮವಾಗಿ ಏರಿಸಿ, ಅವುಗಳ ಮೌಲ್ಯ ಹೆಚ್ಚಿಸಿಕೊಂಡು ನಂತರ ಅವುಗಳನ್ನು ಅಡವಿಟ್ಟು ಸಾಲ ಪಡೆದಿವೆ. ಸಾಗರದಾಚೆಗಿನ ವ್ಯವಹಾರಗಳಲ್ಲಿ ತೆರಿಗೆ ವಂಚಿಸುವುದಕ್ಕಾಗಿ ದಶಕಗಳ ಕಾಲ ಲೆಕ್ಕಪತ್ರಗಳಲ್ಲಿ ವಂಚನೆ ನಡೆಸಿವೆ. ಆ ಮೂಲಕ ಅತಿ ಹೆಚ್ಚು ಸಾಲದ ಸುಳಿಗೆ ಸಿಲುಕಿದ್ದು, ಒಟ್ಟಾರೆ ಅದರ ಆರ್ಥಿಕ ತಳಪಾಯವೇ ಅಪಾಯದಲ್ಲಿದೆ ಎಂದು ಹಿಂಡೆನ್‌ಬರ್ಗ್ ವರದಿ ಆರೋಪಿಸಿದೆ.

“ನಾವು ಎರಡು ವರ್ಷದ ಸಂಶೋಧನೆಯ ವರದಿಯನ್ನು ಇಂದು ಬಹಿರಂಗಪಡಿಸುತ್ತಿದ್ದೇವೆ. 17.8 ಟ್ರಿಲಿಯನ್ (218 ಬಿಲಿಯನ್ ಅಮೆರಿಕನ್ ಡಾಲರ್) ಮೌಲ್ಯದ ವಹಿವಾಟು ನಡೆಸುವ ಭಾರತೀಯ ಅದಾನಿ ಸಮೂಹವು ದಶಕಗಳ ಕಾಲ ಸ್ಟಾಕ್ ತಿರುಚುವಿಕೆ ಮತ್ತು ಲೆಕ್ಕಪತ್ರ ವಂಚನೆ ಯೋಜನೆಯಲ್ಲಿ ತೊಡಗಿದೆ ಎಂಬುದಕ್ಕೆ ಪುರಾವೆಗಳನ್ನು ಪ್ರಸ್ತುತಪಡಿಸುತ್ತಿದ್ದೇವೆ” ಎಂದು ಸರಣಿ ಟ್ವೀಟ್‌ಗಳನ್ನು ಹಿಂಡೆನ್‌ಬರ್ಗ್‌ ಅಧಿಕೃತ ಟ್ವಿಟರ್‌ನಲ್ಲಿ ಮಾಡಲಾಗಿದೆ.

ಅದಾನಿ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಗೌತಮ್ ಅದಾನಿ ಸುಮಾರು 120 ಶತಕೋಟಿ ಡಾಲರ್ ನಿವ್ವಳ ಮೌಲ್ಯವನ್ನು ಸಂಗ್ರಹಿಸಿದ್ದಾರೆ. ಕಳೆದ 3 ವರ್ಷಗಳಲ್ಲಿಯೇ 100 ಶತಕೋಟಿ ಡಾಲರ್‌ಗಿಂತಲೂ ಹೆಚ್ಚಿನ ಮೌಲ್ಯವನ್ನು ತಮ್ಮ 7 ಕಂಪನಿಗಳ ಸ್ಟಾಕ್ ಬೆಲೆ ಏರಿಸುವ ಮೂಲಕ ಗಳಿಸಿದ್ದಾರೆ. ಆ 7 ಲಿಸ್ಟೆಡ್‌ ಕಂಪನಿಗಳು ಈ ಅವಧಿಯಲ್ಲಿ ಸರಾಸರಿ ಶೇ. 819 ಏರಿಕೆ ಕಂಡಿವೆ ಎಂದು ವರದಿ ತಿಳಿಸಿದೆ.

ಅದಾನಿ ಸಮೂಹದ ನಿರ್ಧಾರ ತೆಗೆದುಕೊಳ್ಳುವ ಪ್ರಮುಖ 22 ಜನರಲ್ಲಿ 8 ಜನರು ಅದಾನಿ ಕುಟುಂಬದವರೆ ಆಗಿದ್ದಾರೆ. ಸಾಗರದಾಚೆಗಿನ ತೆರಿಗೆ ಸ್ವರ್ಗ ಎಂದು ಕರೆಸಿಕೊಳ್ಳುವ ಮಾರಿಷಸ್, ಯುಎಇ, ಕೆರಿಬಿಯನ್ ದ್ವೀಪಗಳು ಸೇರಿದಂತೆ ದೇಶಗಳಲ್ಲಿ ಹಲವಾರು ಶೆಲ್ ಕಂಪನಿಗಳನ್ನು ತೆರೆಯುವಲ್ಲಿ ಅದಾನಿ ಕುಟುಂಬ ನಿರತವಾಗಿದೆ. ಆ ಮೂಲಕ ಮನಿ ಲಾಂಡರಿಂಗ್, ತೆರಿಗೆದಾರರ ಹಣ ಕಬಳಿಕೆ ಮತ್ತು ಅಂದಾಜು 17 ಬಿಲಿಯನ್ ಅಮೆರಿಕನ್ ಡಾಲರ್ ಭ್ರಷ್ಟಾಚಾರ ನಡೆಸಿದ್ದಾರೆ. ಈ ಪ್ರಯತ್ನದಲ್ಲಿ ಕಾನೂನುಬಾಹಿರ ವಜ್ರದ ರಫ್ತು / ಆಮದು ಪ್ರಕರಣದಲ್ಲಿ ಅದಾನಿ ಸಹೋದರ ರಾಜೇಶ್ ಅದಾನಿ ಆರೋಪಿಯಾಗಿದ್ದು, ಅವರನ್ನು 2004-05ರಲ್ಲಿ ಎರಡು ಬಾರಿ ಬಂಧಿಸಲಾಗಿತ್ತು. ಆದರೆ ನಂತರ ಅವರನ್ನು ಅದಾನಿ ಸಮೂಹದ ವ್ಯವಸ್ಥಾಪಕ ನಿರ್ದೇಶಕರಾಗಿ ಬಡ್ತಿ ನೀಡಲಾಯಿತು. ಅದೇ ರೀತಿ ಅದಾನಿ ಅವರ ಸೋದರ ಮಾವ ಸಮೀರ್ ವೋರಾ ಮತ್ತು ಅದಾನಿಯವರ ಹಿರಿಯ ಸಹೋದರ ವಿನೋದ್ ಅದಾನಿ ಸಹ ಆಯಕಟ್ಟಿನ ಜಾಗದಲ್ಲಿ ಕುಳಿತಿದ್ದು ಅಕ್ರಮ ವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ. ನಮ್ಮ ಸಂಶೋಧನೆಯು ಅದಾನಿ ಗ್ರೂಪ್‌ನ ಮಾಜಿ ಹಿರಿಯ ಅಧಿಕಾರಿಗಳು ಸೇರಿದಂತೆ ಹತ್ತಾರು ವ್ಯಕ್ತಿಗಳ ಸಂದರ್ಶನ, ಸಾವಿರಾರು ದಾಖಲೆಗಳ ಪರಿಶೀಲನೆ ಮತ್ತು ಹಲವು ದೇಶಗಳ ಭೇಟಿಯನ್ನು ಆಧರಿಸಿದೆ ಎಂದು ಹಿಂಡೆನ್‌ಬರ್ಗ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....