Homeಮುಖಪುಟವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಿಂದ ಹೊರಬಿದ್ದ ಅದಾನಿ; ದಿನದಿಂದ ದಿನಕ್ಕೆ ಮತ್ತಷ್ಟು ನಷ್ಟ

ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಿಂದ ಹೊರಬಿದ್ದ ಅದಾನಿ; ದಿನದಿಂದ ದಿನಕ್ಕೆ ಮತ್ತಷ್ಟು ನಷ್ಟ

- Advertisement -
- Advertisement -

ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಿಂದ ಗೌತಮ್ ಅದಾನಿ ಹೊರಬಿದ್ದಿದ್ದಾರೆ. ಇದೇ ರೀತಿ ಅವರ ಸಂಸ್ಥೆಯಲ್ಲಿನ ಷೇರುಗಳು ಕುಸಿಯುತ್ತಲೇ ಹೋದರೆ ಶೀಘ್ರದಲ್ಲೇ ಏಷ್ಯಾದ ಶ್ರೀಮಂತ ವ್ಯಕ್ತಿ ಎನ್ನುವ ಸ್ಥಾನವೂ ಕಳೆದುಕೊಳ್ಳಬಹುದು.

ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನಲ್ಲಿ ಭಾರತೀಯ ಉದ್ಯಮಿ ಗೌತಮ್ ಅದಾನಿ ನಾಲ್ಕನೇ ಸ್ಥಾನದಿಂದ 11 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಕೇವಲ ಮೂರು ದಿನಗಳಲ್ಲಿ $34 ಶತಕೋಟಿಯ ವೈಯಕ್ತಿಕ ಸಂಪತ್ತು ಕಲೆದುಕೊಂಡಿದ್ದಾರೆ.

ಪ್ರಸ್ತುತ $84.4 ಶತಕೋಟಿ ಸಂಪತ್ತಿನೊಂದಿಗೆ, ಅದಾನಿಯು ತಮ್ಮ ಪ್ರತಿಸ್ಪರ್ಧಿಯಾಗಿಂತ ಒಂದು ಸ್ಥಾನ ಮುಂದೆ ಇದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ನಿವ್ವಳ ಮೌಲ್ಯ $82.2 ಬಿಲಿಯನ್ ಆಗಿದೆ.

ಇದನ್ನೂ ಓದಿ: ಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ ಸಂಶೋಧನಾ ಸಂಸ್ಥೆ

ಅದಾನಿ ಗ್ರೂಪ್ ಕಂಪನಿಗಳ ಷೇರುಗಳು ಮೂರು ದಿನಗಳ ಮಾರಾಟದಲ್ಲಿ ಕುಸಿತ ಕಂಡಿದೆ. $68 ಶತಕೋಟಿಗಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಕಳೆದುಕೊಂಡಿದೆ. ಅದಾನಿ ಈಗ ಬಿಲಿಯನೇರ್‌ಗಳ ಸೂಚ್ಯಂಕದಲ್ಲಿ, ಮೆಕ್ಸಿಕೋದ ಕಾರ್ಲೋಸ್ ಸ್ಲಿಮ್, ಗೂಗಲ್ ಸಹ-ಸಂಸ್ಥಾಪಕ ಸೆರ್ಗೆ ಬ್ರಿನ್ ಮತ್ತು ಮಾಜಿ ಮೈಕ್ರೋಸಾಫ್ಟ್ ಸಿಇಒ ಸ್ಟೀವ್ ಬಾಲ್ಮರ್ ಅವರಿಗಿಂತ ಕೆಳಗೆ ಕುಸಿದಿದ್ದಾರೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯ ಪ್ರಕಟಣೆಯು “ಬ್ರೇಜನ್ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆ” ಎಂದು ಆರೋಪಿಸಿದೆ.

ಹಿಂಡೆನ್‌ಬರ್ಗ್ ವರದಿಯಲ್ಲೇನಿದೆ?

ಅದಾನಿ ಸಮೂಹದ ಕಂಪನಿಗಳು ಸಾಲ ಪಡೆಯುವುದಕ್ಕಾಗಿ ಕೃತಕವಾಗಿ ತಮ್ಮ ಷೇರುಗಳ ಬೆಲೆ ಏರಿಸಿಕೊಂಡಿದೆ. ತಮ್ಮ ಷೇರುಗಳ ಬೆಲೆಯನ್ನು ಅಕ್ರಮವಾಗಿ ಏರಿಸಿ, ಅವುಗಳ ಮೌಲ್ಯ ಹೆಚ್ಚಿಸಿಕೊಂಡು ನಂತರ ಅವುಗಳನ್ನು ಅಡವಿಟ್ಟು ಸಾಲ ಪಡೆದಿವೆ. ಸಾಗರದಾಚೆಗಿನ ವ್ಯವಹಾರಗಳಲ್ಲಿ ತೆರಿಗೆ ವಂಚಿಸುವುದಕ್ಕಾಗಿ ದಶಕಗಳ ಕಾಲ ಲೆಕ್ಕಪತ್ರಗಳಲ್ಲಿ ವಂಚನೆ ನಡೆಸಿವೆ. ಆ ಮೂಲಕ ಅತಿ ಹೆಚ್ಚು ಸಾಲದ ಸುಳಿಗೆ ಸಿಲುಕಿದ್ದು, ಒಟ್ಟಾರೆ ಅದರ ಆರ್ಥಿಕ ತಳಪಾಯವೇ ಅಪಾಯದಲ್ಲಿದೆ ಎಂದು ಹಿಂಡೆನ್‌ಬರ್ಗ್ ವರದಿ ಆರೋಪಿಸಿದೆ.

“ನಾವು ಎರಡು ವರ್ಷದ ಸಂಶೋಧನೆಯ ವರದಿಯನ್ನು ಇಂದು ಬಹಿರಂಗಪಡಿಸುತ್ತಿದ್ದೇವೆ. 17.8 ಟ್ರಿಲಿಯನ್ (218 ಬಿಲಿಯನ್ ಅಮೆರಿಕನ್ ಡಾಲರ್) ಮೌಲ್ಯದ ವಹಿವಾಟು ನಡೆಸುವ ಭಾರತೀಯ ಅದಾನಿ ಸಮೂಹವು ದಶಕಗಳ ಕಾಲ ಸ್ಟಾಕ್ ತಿರುಚುವಿಕೆ ಮತ್ತು ಲೆಕ್ಕಪತ್ರ ವಂಚನೆ ಯೋಜನೆಯಲ್ಲಿ ತೊಡಗಿದೆ ಎಂಬುದಕ್ಕೆ ಪುರಾವೆಗಳನ್ನು ಪ್ರಸ್ತುತಪಡಿಸುತ್ತಿದ್ದೇವೆ” ಎಂದು ಸರಣಿ ಟ್ವೀಟ್‌ಗಳನ್ನು ಹಿಂಡೆನ್‌ಬರ್ಗ್‌ ಅಧಿಕೃತ ಟ್ವಿಟರ್‌ನಲ್ಲಿ ಮಾಡಲಾಗಿದೆ.

ಅದಾನಿ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಗೌತಮ್ ಅದಾನಿ ಸುಮಾರು 120 ಶತಕೋಟಿ ಡಾಲರ್ ನಿವ್ವಳ ಮೌಲ್ಯವನ್ನು ಸಂಗ್ರಹಿಸಿದ್ದಾರೆ. ಕಳೆದ 3 ವರ್ಷಗಳಲ್ಲಿಯೇ 100 ಶತಕೋಟಿ ಡಾಲರ್‌ಗಿಂತಲೂ ಹೆಚ್ಚಿನ ಮೌಲ್ಯವನ್ನು ತಮ್ಮ 7 ಕಂಪನಿಗಳ ಸ್ಟಾಕ್ ಬೆಲೆ ಏರಿಸುವ ಮೂಲಕ ಗಳಿಸಿದ್ದಾರೆ. ಆ 7 ಲಿಸ್ಟೆಡ್‌ ಕಂಪನಿಗಳು ಈ ಅವಧಿಯಲ್ಲಿ ಸರಾಸರಿ ಶೇ. 819 ಏರಿಕೆ ಕಂಡಿವೆ ಎಂದು ವರದಿ ತಿಳಿಸಿದೆ.

ಅದಾನಿ ಸಮೂಹದ ನಿರ್ಧಾರ ತೆಗೆದುಕೊಳ್ಳುವ ಪ್ರಮುಖ 22 ಜನರಲ್ಲಿ 8 ಜನರು ಅದಾನಿ ಕುಟುಂಬದವರೆ ಆಗಿದ್ದಾರೆ. ಸಾಗರದಾಚೆಗಿನ ತೆರಿಗೆ ಸ್ವರ್ಗ ಎಂದು ಕರೆಸಿಕೊಳ್ಳುವ ಮಾರಿಷಸ್, ಯುಎಇ, ಕೆರಿಬಿಯನ್ ದ್ವೀಪಗಳು ಸೇರಿದಂತೆ ದೇಶಗಳಲ್ಲಿ ಹಲವಾರು ಶೆಲ್ ಕಂಪನಿಗಳನ್ನು ತೆರೆಯುವಲ್ಲಿ ಅದಾನಿ ಕುಟುಂಬ ನಿರತವಾಗಿದೆ. ಆ ಮೂಲಕ ಮನಿ ಲಾಂಡರಿಂಗ್, ತೆರಿಗೆದಾರರ ಹಣ ಕಬಳಿಕೆ ಮತ್ತು ಅಂದಾಜು 17 ಬಿಲಿಯನ್ ಅಮೆರಿಕನ್ ಡಾಲರ್ ಭ್ರಷ್ಟಾಚಾರ ನಡೆಸಿದ್ದಾರೆ. ಈ ಪ್ರಯತ್ನದಲ್ಲಿ ಕಾನೂನುಬಾಹಿರ ವಜ್ರದ ರಫ್ತು / ಆಮದು ಪ್ರಕರಣದಲ್ಲಿ ಅದಾನಿ ಸಹೋದರ ರಾಜೇಶ್ ಅದಾನಿ ಆರೋಪಿಯಾಗಿದ್ದು, ಅವರನ್ನು 2004-05ರಲ್ಲಿ ಎರಡು ಬಾರಿ ಬಂಧಿಸಲಾಗಿತ್ತು. ಆದರೆ ನಂತರ ಅವರನ್ನು ಅದಾನಿ ಸಮೂಹದ ವ್ಯವಸ್ಥಾಪಕ ನಿರ್ದೇಶಕರಾಗಿ ಬಡ್ತಿ ನೀಡಲಾಯಿತು. ಅದೇ ರೀತಿ ಅದಾನಿ ಅವರ ಸೋದರ ಮಾವ ಸಮೀರ್ ವೋರಾ ಮತ್ತು ಅದಾನಿಯವರ ಹಿರಿಯ ಸಹೋದರ ವಿನೋದ್ ಅದಾನಿ ಸಹ ಆಯಕಟ್ಟಿನ ಜಾಗದಲ್ಲಿ ಕುಳಿತಿದ್ದು ಅಕ್ರಮ ವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ. ನಮ್ಮ ಸಂಶೋಧನೆಯು ಅದಾನಿ ಗ್ರೂಪ್‌ನ ಮಾಜಿ ಹಿರಿಯ ಅಧಿಕಾರಿಗಳು ಸೇರಿದಂತೆ ಹತ್ತಾರು ವ್ಯಕ್ತಿಗಳ ಸಂದರ್ಶನ, ಸಾವಿರಾರು ದಾಖಲೆಗಳ ಪರಿಶೀಲನೆ ಮತ್ತು ಹಲವು ದೇಶಗಳ ಭೇಟಿಯನ್ನು ಆಧರಿಸಿದೆ ಎಂದು ಹಿಂಡೆನ್‌ಬರ್ಗ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...