Homeಮುಖಪುಟವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಿಂದ ಹೊರಬಿದ್ದ ಅದಾನಿ; ದಿನದಿಂದ ದಿನಕ್ಕೆ ಮತ್ತಷ್ಟು ನಷ್ಟ

ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಿಂದ ಹೊರಬಿದ್ದ ಅದಾನಿ; ದಿನದಿಂದ ದಿನಕ್ಕೆ ಮತ್ತಷ್ಟು ನಷ್ಟ

- Advertisement -
- Advertisement -

ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಿಂದ ಗೌತಮ್ ಅದಾನಿ ಹೊರಬಿದ್ದಿದ್ದಾರೆ. ಇದೇ ರೀತಿ ಅವರ ಸಂಸ್ಥೆಯಲ್ಲಿನ ಷೇರುಗಳು ಕುಸಿಯುತ್ತಲೇ ಹೋದರೆ ಶೀಘ್ರದಲ್ಲೇ ಏಷ್ಯಾದ ಶ್ರೀಮಂತ ವ್ಯಕ್ತಿ ಎನ್ನುವ ಸ್ಥಾನವೂ ಕಳೆದುಕೊಳ್ಳಬಹುದು.

ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನಲ್ಲಿ ಭಾರತೀಯ ಉದ್ಯಮಿ ಗೌತಮ್ ಅದಾನಿ ನಾಲ್ಕನೇ ಸ್ಥಾನದಿಂದ 11 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಕೇವಲ ಮೂರು ದಿನಗಳಲ್ಲಿ $34 ಶತಕೋಟಿಯ ವೈಯಕ್ತಿಕ ಸಂಪತ್ತು ಕಲೆದುಕೊಂಡಿದ್ದಾರೆ.

ಪ್ರಸ್ತುತ $84.4 ಶತಕೋಟಿ ಸಂಪತ್ತಿನೊಂದಿಗೆ, ಅದಾನಿಯು ತಮ್ಮ ಪ್ರತಿಸ್ಪರ್ಧಿಯಾಗಿಂತ ಒಂದು ಸ್ಥಾನ ಮುಂದೆ ಇದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ನಿವ್ವಳ ಮೌಲ್ಯ $82.2 ಬಿಲಿಯನ್ ಆಗಿದೆ.

ಇದನ್ನೂ ಓದಿ: ಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ ಸಂಶೋಧನಾ ಸಂಸ್ಥೆ

ಅದಾನಿ ಗ್ರೂಪ್ ಕಂಪನಿಗಳ ಷೇರುಗಳು ಮೂರು ದಿನಗಳ ಮಾರಾಟದಲ್ಲಿ ಕುಸಿತ ಕಂಡಿದೆ. $68 ಶತಕೋಟಿಗಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಕಳೆದುಕೊಂಡಿದೆ. ಅದಾನಿ ಈಗ ಬಿಲಿಯನೇರ್‌ಗಳ ಸೂಚ್ಯಂಕದಲ್ಲಿ, ಮೆಕ್ಸಿಕೋದ ಕಾರ್ಲೋಸ್ ಸ್ಲಿಮ್, ಗೂಗಲ್ ಸಹ-ಸಂಸ್ಥಾಪಕ ಸೆರ್ಗೆ ಬ್ರಿನ್ ಮತ್ತು ಮಾಜಿ ಮೈಕ್ರೋಸಾಫ್ಟ್ ಸಿಇಒ ಸ್ಟೀವ್ ಬಾಲ್ಮರ್ ಅವರಿಗಿಂತ ಕೆಳಗೆ ಕುಸಿದಿದ್ದಾರೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯ ಪ್ರಕಟಣೆಯು “ಬ್ರೇಜನ್ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆ” ಎಂದು ಆರೋಪಿಸಿದೆ.

ಹಿಂಡೆನ್‌ಬರ್ಗ್ ವರದಿಯಲ್ಲೇನಿದೆ?

ಅದಾನಿ ಸಮೂಹದ ಕಂಪನಿಗಳು ಸಾಲ ಪಡೆಯುವುದಕ್ಕಾಗಿ ಕೃತಕವಾಗಿ ತಮ್ಮ ಷೇರುಗಳ ಬೆಲೆ ಏರಿಸಿಕೊಂಡಿದೆ. ತಮ್ಮ ಷೇರುಗಳ ಬೆಲೆಯನ್ನು ಅಕ್ರಮವಾಗಿ ಏರಿಸಿ, ಅವುಗಳ ಮೌಲ್ಯ ಹೆಚ್ಚಿಸಿಕೊಂಡು ನಂತರ ಅವುಗಳನ್ನು ಅಡವಿಟ್ಟು ಸಾಲ ಪಡೆದಿವೆ. ಸಾಗರದಾಚೆಗಿನ ವ್ಯವಹಾರಗಳಲ್ಲಿ ತೆರಿಗೆ ವಂಚಿಸುವುದಕ್ಕಾಗಿ ದಶಕಗಳ ಕಾಲ ಲೆಕ್ಕಪತ್ರಗಳಲ್ಲಿ ವಂಚನೆ ನಡೆಸಿವೆ. ಆ ಮೂಲಕ ಅತಿ ಹೆಚ್ಚು ಸಾಲದ ಸುಳಿಗೆ ಸಿಲುಕಿದ್ದು, ಒಟ್ಟಾರೆ ಅದರ ಆರ್ಥಿಕ ತಳಪಾಯವೇ ಅಪಾಯದಲ್ಲಿದೆ ಎಂದು ಹಿಂಡೆನ್‌ಬರ್ಗ್ ವರದಿ ಆರೋಪಿಸಿದೆ.

“ನಾವು ಎರಡು ವರ್ಷದ ಸಂಶೋಧನೆಯ ವರದಿಯನ್ನು ಇಂದು ಬಹಿರಂಗಪಡಿಸುತ್ತಿದ್ದೇವೆ. 17.8 ಟ್ರಿಲಿಯನ್ (218 ಬಿಲಿಯನ್ ಅಮೆರಿಕನ್ ಡಾಲರ್) ಮೌಲ್ಯದ ವಹಿವಾಟು ನಡೆಸುವ ಭಾರತೀಯ ಅದಾನಿ ಸಮೂಹವು ದಶಕಗಳ ಕಾಲ ಸ್ಟಾಕ್ ತಿರುಚುವಿಕೆ ಮತ್ತು ಲೆಕ್ಕಪತ್ರ ವಂಚನೆ ಯೋಜನೆಯಲ್ಲಿ ತೊಡಗಿದೆ ಎಂಬುದಕ್ಕೆ ಪುರಾವೆಗಳನ್ನು ಪ್ರಸ್ತುತಪಡಿಸುತ್ತಿದ್ದೇವೆ” ಎಂದು ಸರಣಿ ಟ್ವೀಟ್‌ಗಳನ್ನು ಹಿಂಡೆನ್‌ಬರ್ಗ್‌ ಅಧಿಕೃತ ಟ್ವಿಟರ್‌ನಲ್ಲಿ ಮಾಡಲಾಗಿದೆ.

ಅದಾನಿ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಗೌತಮ್ ಅದಾನಿ ಸುಮಾರು 120 ಶತಕೋಟಿ ಡಾಲರ್ ನಿವ್ವಳ ಮೌಲ್ಯವನ್ನು ಸಂಗ್ರಹಿಸಿದ್ದಾರೆ. ಕಳೆದ 3 ವರ್ಷಗಳಲ್ಲಿಯೇ 100 ಶತಕೋಟಿ ಡಾಲರ್‌ಗಿಂತಲೂ ಹೆಚ್ಚಿನ ಮೌಲ್ಯವನ್ನು ತಮ್ಮ 7 ಕಂಪನಿಗಳ ಸ್ಟಾಕ್ ಬೆಲೆ ಏರಿಸುವ ಮೂಲಕ ಗಳಿಸಿದ್ದಾರೆ. ಆ 7 ಲಿಸ್ಟೆಡ್‌ ಕಂಪನಿಗಳು ಈ ಅವಧಿಯಲ್ಲಿ ಸರಾಸರಿ ಶೇ. 819 ಏರಿಕೆ ಕಂಡಿವೆ ಎಂದು ವರದಿ ತಿಳಿಸಿದೆ.

ಅದಾನಿ ಸಮೂಹದ ನಿರ್ಧಾರ ತೆಗೆದುಕೊಳ್ಳುವ ಪ್ರಮುಖ 22 ಜನರಲ್ಲಿ 8 ಜನರು ಅದಾನಿ ಕುಟುಂಬದವರೆ ಆಗಿದ್ದಾರೆ. ಸಾಗರದಾಚೆಗಿನ ತೆರಿಗೆ ಸ್ವರ್ಗ ಎಂದು ಕರೆಸಿಕೊಳ್ಳುವ ಮಾರಿಷಸ್, ಯುಎಇ, ಕೆರಿಬಿಯನ್ ದ್ವೀಪಗಳು ಸೇರಿದಂತೆ ದೇಶಗಳಲ್ಲಿ ಹಲವಾರು ಶೆಲ್ ಕಂಪನಿಗಳನ್ನು ತೆರೆಯುವಲ್ಲಿ ಅದಾನಿ ಕುಟುಂಬ ನಿರತವಾಗಿದೆ. ಆ ಮೂಲಕ ಮನಿ ಲಾಂಡರಿಂಗ್, ತೆರಿಗೆದಾರರ ಹಣ ಕಬಳಿಕೆ ಮತ್ತು ಅಂದಾಜು 17 ಬಿಲಿಯನ್ ಅಮೆರಿಕನ್ ಡಾಲರ್ ಭ್ರಷ್ಟಾಚಾರ ನಡೆಸಿದ್ದಾರೆ. ಈ ಪ್ರಯತ್ನದಲ್ಲಿ ಕಾನೂನುಬಾಹಿರ ವಜ್ರದ ರಫ್ತು / ಆಮದು ಪ್ರಕರಣದಲ್ಲಿ ಅದಾನಿ ಸಹೋದರ ರಾಜೇಶ್ ಅದಾನಿ ಆರೋಪಿಯಾಗಿದ್ದು, ಅವರನ್ನು 2004-05ರಲ್ಲಿ ಎರಡು ಬಾರಿ ಬಂಧಿಸಲಾಗಿತ್ತು. ಆದರೆ ನಂತರ ಅವರನ್ನು ಅದಾನಿ ಸಮೂಹದ ವ್ಯವಸ್ಥಾಪಕ ನಿರ್ದೇಶಕರಾಗಿ ಬಡ್ತಿ ನೀಡಲಾಯಿತು. ಅದೇ ರೀತಿ ಅದಾನಿ ಅವರ ಸೋದರ ಮಾವ ಸಮೀರ್ ವೋರಾ ಮತ್ತು ಅದಾನಿಯವರ ಹಿರಿಯ ಸಹೋದರ ವಿನೋದ್ ಅದಾನಿ ಸಹ ಆಯಕಟ್ಟಿನ ಜಾಗದಲ್ಲಿ ಕುಳಿತಿದ್ದು ಅಕ್ರಮ ವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ. ನಮ್ಮ ಸಂಶೋಧನೆಯು ಅದಾನಿ ಗ್ರೂಪ್‌ನ ಮಾಜಿ ಹಿರಿಯ ಅಧಿಕಾರಿಗಳು ಸೇರಿದಂತೆ ಹತ್ತಾರು ವ್ಯಕ್ತಿಗಳ ಸಂದರ್ಶನ, ಸಾವಿರಾರು ದಾಖಲೆಗಳ ಪರಿಶೀಲನೆ ಮತ್ತು ಹಲವು ದೇಶಗಳ ಭೇಟಿಯನ್ನು ಆಧರಿಸಿದೆ ಎಂದು ಹಿಂಡೆನ್‌ಬರ್ಗ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...