Homeಮುಖಪುಟವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಿಂದ ಹೊರಬಿದ್ದ ಅದಾನಿ; ದಿನದಿಂದ ದಿನಕ್ಕೆ ಮತ್ತಷ್ಟು ನಷ್ಟ

ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಿಂದ ಹೊರಬಿದ್ದ ಅದಾನಿ; ದಿನದಿಂದ ದಿನಕ್ಕೆ ಮತ್ತಷ್ಟು ನಷ್ಟ

- Advertisement -
- Advertisement -

ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಿಂದ ಗೌತಮ್ ಅದಾನಿ ಹೊರಬಿದ್ದಿದ್ದಾರೆ. ಇದೇ ರೀತಿ ಅವರ ಸಂಸ್ಥೆಯಲ್ಲಿನ ಷೇರುಗಳು ಕುಸಿಯುತ್ತಲೇ ಹೋದರೆ ಶೀಘ್ರದಲ್ಲೇ ಏಷ್ಯಾದ ಶ್ರೀಮಂತ ವ್ಯಕ್ತಿ ಎನ್ನುವ ಸ್ಥಾನವೂ ಕಳೆದುಕೊಳ್ಳಬಹುದು.

ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನಲ್ಲಿ ಭಾರತೀಯ ಉದ್ಯಮಿ ಗೌತಮ್ ಅದಾನಿ ನಾಲ್ಕನೇ ಸ್ಥಾನದಿಂದ 11 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಕೇವಲ ಮೂರು ದಿನಗಳಲ್ಲಿ $34 ಶತಕೋಟಿಯ ವೈಯಕ್ತಿಕ ಸಂಪತ್ತು ಕಲೆದುಕೊಂಡಿದ್ದಾರೆ.

ಪ್ರಸ್ತುತ $84.4 ಶತಕೋಟಿ ಸಂಪತ್ತಿನೊಂದಿಗೆ, ಅದಾನಿಯು ತಮ್ಮ ಪ್ರತಿಸ್ಪರ್ಧಿಯಾಗಿಂತ ಒಂದು ಸ್ಥಾನ ಮುಂದೆ ಇದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ನಿವ್ವಳ ಮೌಲ್ಯ $82.2 ಬಿಲಿಯನ್ ಆಗಿದೆ.

ಇದನ್ನೂ ಓದಿ: ಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ ಸಂಶೋಧನಾ ಸಂಸ್ಥೆ

ಅದಾನಿ ಗ್ರೂಪ್ ಕಂಪನಿಗಳ ಷೇರುಗಳು ಮೂರು ದಿನಗಳ ಮಾರಾಟದಲ್ಲಿ ಕುಸಿತ ಕಂಡಿದೆ. $68 ಶತಕೋಟಿಗಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಕಳೆದುಕೊಂಡಿದೆ. ಅದಾನಿ ಈಗ ಬಿಲಿಯನೇರ್‌ಗಳ ಸೂಚ್ಯಂಕದಲ್ಲಿ, ಮೆಕ್ಸಿಕೋದ ಕಾರ್ಲೋಸ್ ಸ್ಲಿಮ್, ಗೂಗಲ್ ಸಹ-ಸಂಸ್ಥಾಪಕ ಸೆರ್ಗೆ ಬ್ರಿನ್ ಮತ್ತು ಮಾಜಿ ಮೈಕ್ರೋಸಾಫ್ಟ್ ಸಿಇಒ ಸ್ಟೀವ್ ಬಾಲ್ಮರ್ ಅವರಿಗಿಂತ ಕೆಳಗೆ ಕುಸಿದಿದ್ದಾರೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯ ಪ್ರಕಟಣೆಯು “ಬ್ರೇಜನ್ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆ” ಎಂದು ಆರೋಪಿಸಿದೆ.

ಹಿಂಡೆನ್‌ಬರ್ಗ್ ವರದಿಯಲ್ಲೇನಿದೆ?

ಅದಾನಿ ಸಮೂಹದ ಕಂಪನಿಗಳು ಸಾಲ ಪಡೆಯುವುದಕ್ಕಾಗಿ ಕೃತಕವಾಗಿ ತಮ್ಮ ಷೇರುಗಳ ಬೆಲೆ ಏರಿಸಿಕೊಂಡಿದೆ. ತಮ್ಮ ಷೇರುಗಳ ಬೆಲೆಯನ್ನು ಅಕ್ರಮವಾಗಿ ಏರಿಸಿ, ಅವುಗಳ ಮೌಲ್ಯ ಹೆಚ್ಚಿಸಿಕೊಂಡು ನಂತರ ಅವುಗಳನ್ನು ಅಡವಿಟ್ಟು ಸಾಲ ಪಡೆದಿವೆ. ಸಾಗರದಾಚೆಗಿನ ವ್ಯವಹಾರಗಳಲ್ಲಿ ತೆರಿಗೆ ವಂಚಿಸುವುದಕ್ಕಾಗಿ ದಶಕಗಳ ಕಾಲ ಲೆಕ್ಕಪತ್ರಗಳಲ್ಲಿ ವಂಚನೆ ನಡೆಸಿವೆ. ಆ ಮೂಲಕ ಅತಿ ಹೆಚ್ಚು ಸಾಲದ ಸುಳಿಗೆ ಸಿಲುಕಿದ್ದು, ಒಟ್ಟಾರೆ ಅದರ ಆರ್ಥಿಕ ತಳಪಾಯವೇ ಅಪಾಯದಲ್ಲಿದೆ ಎಂದು ಹಿಂಡೆನ್‌ಬರ್ಗ್ ವರದಿ ಆರೋಪಿಸಿದೆ.

“ನಾವು ಎರಡು ವರ್ಷದ ಸಂಶೋಧನೆಯ ವರದಿಯನ್ನು ಇಂದು ಬಹಿರಂಗಪಡಿಸುತ್ತಿದ್ದೇವೆ. 17.8 ಟ್ರಿಲಿಯನ್ (218 ಬಿಲಿಯನ್ ಅಮೆರಿಕನ್ ಡಾಲರ್) ಮೌಲ್ಯದ ವಹಿವಾಟು ನಡೆಸುವ ಭಾರತೀಯ ಅದಾನಿ ಸಮೂಹವು ದಶಕಗಳ ಕಾಲ ಸ್ಟಾಕ್ ತಿರುಚುವಿಕೆ ಮತ್ತು ಲೆಕ್ಕಪತ್ರ ವಂಚನೆ ಯೋಜನೆಯಲ್ಲಿ ತೊಡಗಿದೆ ಎಂಬುದಕ್ಕೆ ಪುರಾವೆಗಳನ್ನು ಪ್ರಸ್ತುತಪಡಿಸುತ್ತಿದ್ದೇವೆ” ಎಂದು ಸರಣಿ ಟ್ವೀಟ್‌ಗಳನ್ನು ಹಿಂಡೆನ್‌ಬರ್ಗ್‌ ಅಧಿಕೃತ ಟ್ವಿಟರ್‌ನಲ್ಲಿ ಮಾಡಲಾಗಿದೆ.

ಅದಾನಿ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಗೌತಮ್ ಅದಾನಿ ಸುಮಾರು 120 ಶತಕೋಟಿ ಡಾಲರ್ ನಿವ್ವಳ ಮೌಲ್ಯವನ್ನು ಸಂಗ್ರಹಿಸಿದ್ದಾರೆ. ಕಳೆದ 3 ವರ್ಷಗಳಲ್ಲಿಯೇ 100 ಶತಕೋಟಿ ಡಾಲರ್‌ಗಿಂತಲೂ ಹೆಚ್ಚಿನ ಮೌಲ್ಯವನ್ನು ತಮ್ಮ 7 ಕಂಪನಿಗಳ ಸ್ಟಾಕ್ ಬೆಲೆ ಏರಿಸುವ ಮೂಲಕ ಗಳಿಸಿದ್ದಾರೆ. ಆ 7 ಲಿಸ್ಟೆಡ್‌ ಕಂಪನಿಗಳು ಈ ಅವಧಿಯಲ್ಲಿ ಸರಾಸರಿ ಶೇ. 819 ಏರಿಕೆ ಕಂಡಿವೆ ಎಂದು ವರದಿ ತಿಳಿಸಿದೆ.

ಅದಾನಿ ಸಮೂಹದ ನಿರ್ಧಾರ ತೆಗೆದುಕೊಳ್ಳುವ ಪ್ರಮುಖ 22 ಜನರಲ್ಲಿ 8 ಜನರು ಅದಾನಿ ಕುಟುಂಬದವರೆ ಆಗಿದ್ದಾರೆ. ಸಾಗರದಾಚೆಗಿನ ತೆರಿಗೆ ಸ್ವರ್ಗ ಎಂದು ಕರೆಸಿಕೊಳ್ಳುವ ಮಾರಿಷಸ್, ಯುಎಇ, ಕೆರಿಬಿಯನ್ ದ್ವೀಪಗಳು ಸೇರಿದಂತೆ ದೇಶಗಳಲ್ಲಿ ಹಲವಾರು ಶೆಲ್ ಕಂಪನಿಗಳನ್ನು ತೆರೆಯುವಲ್ಲಿ ಅದಾನಿ ಕುಟುಂಬ ನಿರತವಾಗಿದೆ. ಆ ಮೂಲಕ ಮನಿ ಲಾಂಡರಿಂಗ್, ತೆರಿಗೆದಾರರ ಹಣ ಕಬಳಿಕೆ ಮತ್ತು ಅಂದಾಜು 17 ಬಿಲಿಯನ್ ಅಮೆರಿಕನ್ ಡಾಲರ್ ಭ್ರಷ್ಟಾಚಾರ ನಡೆಸಿದ್ದಾರೆ. ಈ ಪ್ರಯತ್ನದಲ್ಲಿ ಕಾನೂನುಬಾಹಿರ ವಜ್ರದ ರಫ್ತು / ಆಮದು ಪ್ರಕರಣದಲ್ಲಿ ಅದಾನಿ ಸಹೋದರ ರಾಜೇಶ್ ಅದಾನಿ ಆರೋಪಿಯಾಗಿದ್ದು, ಅವರನ್ನು 2004-05ರಲ್ಲಿ ಎರಡು ಬಾರಿ ಬಂಧಿಸಲಾಗಿತ್ತು. ಆದರೆ ನಂತರ ಅವರನ್ನು ಅದಾನಿ ಸಮೂಹದ ವ್ಯವಸ್ಥಾಪಕ ನಿರ್ದೇಶಕರಾಗಿ ಬಡ್ತಿ ನೀಡಲಾಯಿತು. ಅದೇ ರೀತಿ ಅದಾನಿ ಅವರ ಸೋದರ ಮಾವ ಸಮೀರ್ ವೋರಾ ಮತ್ತು ಅದಾನಿಯವರ ಹಿರಿಯ ಸಹೋದರ ವಿನೋದ್ ಅದಾನಿ ಸಹ ಆಯಕಟ್ಟಿನ ಜಾಗದಲ್ಲಿ ಕುಳಿತಿದ್ದು ಅಕ್ರಮ ವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ. ನಮ್ಮ ಸಂಶೋಧನೆಯು ಅದಾನಿ ಗ್ರೂಪ್‌ನ ಮಾಜಿ ಹಿರಿಯ ಅಧಿಕಾರಿಗಳು ಸೇರಿದಂತೆ ಹತ್ತಾರು ವ್ಯಕ್ತಿಗಳ ಸಂದರ್ಶನ, ಸಾವಿರಾರು ದಾಖಲೆಗಳ ಪರಿಶೀಲನೆ ಮತ್ತು ಹಲವು ದೇಶಗಳ ಭೇಟಿಯನ್ನು ಆಧರಿಸಿದೆ ಎಂದು ಹಿಂಡೆನ್‌ಬರ್ಗ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...