Homeಅಂತರಾಷ್ಟ್ರೀಯಅದಾನಿ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸಿದ ಶ್ರೀಲಂಕಾ - ವರದಿ

ಅದಾನಿ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸಿದ ಶ್ರೀಲಂಕಾ – ವರದಿ

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಲಂಚ ಮತ್ತು ವಂಚನೆ ಆರೋಪಗಳ ಮೇಲೆ ಅಮೆರಿಕ ನಡೆಸಿದ ತನಿಖೆಯ ಹಿನ್ನಲೆ, ಶ್ರೀಲಂಕಾ ಸರ್ಕಾರ ಅದಾನಿ ಗ್ರೂಪ್ ಜೊತೆಗಿನ ವಿದ್ಯುತ್ ಖರೀದಿ ಒಪ್ಪಂದವನ್ನು ರದ್ದುಗೊಳಿಸಿದೆ ಎಂದು AFP ಶುಕ್ರವಾರ ವರದಿ ಮಾಡಿದೆ.

ಭಾರತದಲ್ಲಿ ಸೌರ ಯೋಜನೆಗಳಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಮೇಲೆ ಗೌತಮ್ ಅದಾನಿ ವಿರುದ್ಧ ನವೆಂಬರ್‌ನಲ್ಲಿ ಅಮೆರಿಕದ ನ್ಯಾಯಾಲಯವೊಂದು ದೋಷಾರೋಪಣೆ ಮಾಡಿತ್ತು. ಇದತ ನಂತರ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರ ಆಡಳಿತವು ಶ್ರೀಲಂಕಾದಲ್ಲಿ ಅದಾನಿ ಗ್ರೂಪ್ ಯೋಜನೆಗಳ ಬಗ್ಗೆ ವಿಚಾರಣೆಯನ್ನು ಪ್ರಾರಂಭಿಸಿತ್ತು.

ಮೇ 2024 ರಲ್ಲಿ ಶ್ರೀಲಂಕಾದ ಅಧ್ಯಕ್ಷರಾಗಿದ್ದ ರನಿಲ್ ವಿಕ್ರಮಸಿಂಘೆ ಅವರು ದೇಶದ ವಾಯುವ್ಯದಲ್ಲಿ ಯೋಜಿಸಲಾದ ಅದಾನಿ ಪವನ ವಿದ್ಯುತ್ ಸೌಲಭ್ಯದಿಂದ ಪ್ರತಿ ಕಿಲೋವ್ಯಾಟ್-ಗಂಟೆಗೆ $0.0826 ಕ್ಕೆ ವಿದ್ಯುತ್ ಖರೀದಿಸುವ ಒಪ್ಪಂದವನ್ನು ಅನುಮೋದಿಸಿದ್ದರು. ಆದಾಗ್ಯೂ, ಈ ತಿಂಗಳ ಆರಂಭದಲ್ಲಿ ಹಾಲಿ ಅಧ್ಯಕ್ಷ ದಿಸಾನಾಯಕೆ ಅವರ ಸಂಪುಟ ಒಪ್ಪಂದವನ್ನು ರದ್ದುಗೊಳಿಸಿದೆ ಎಂದು ಇಂಧನ ಸಚಿವಾಲಯದ ಅಧಿಕಾರಿಯೊಬ್ಬರು AFP ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸರ್ಕಾರ ವಿದ್ಯುತ್ ಖರೀದಿ ಒಪ್ಪಂದವನ್ನು ರದ್ದುಗೊಳಿಸಿದೆ, ಆದರೆ ಯೋಜನೆಯನ್ನು ರದ್ದುಗೊಳಿಸಲಾಗಿಲ್ಲ. ಸಂಪೂರ್ಣ ಯೋಜನೆಯನ್ನು ಪರಿಶೀಲಿಸಲು ಸಮಿತಿಯನ್ನು ನೇಮಿಸಲಾಗಿದೆ.” ಎಂದು ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ AFP ವರದಿ ಮಾಡಿದೆ.

ಮನ್ನಾರ್ ಮತ್ತು ಪೂನೆರಿನ್ ಪ್ರದೇಶಗಳಿಗೆ ಯೋಜಿಸಲಾಗಿರುವ 484 ಮೆಗಾವ್ಯಾಟ್ ಪವನ ವಿದ್ಯುತ್ ಸ್ಥಾವರದ ನಿರ್ಮಾಣವನ್ನು ಮರುಮೌಲ್ಯಮಾಪನ ಮಾಡಲು ಶ್ರೀಲಂಕಾದ ಸಚಿವ ಸಂಪುಟ ನಿರ್ಧರಿಸಿದೆ ಎಂದು ಸರ್ಕಾರಿ ದಾಖಲೆಗಳನ್ನು ಉಲ್ಲೇಖಿಸಿದೆ ಎಎಫ್‌ಪಿ ವರದಿ ಮಾಡಿದೆ. ಪರಿಸರ ಕಾಳಜಿಯ ಮೇರೆಗೆ ಈ ಯೋಜನೆಯನ್ನು ದೇಶದ ಸುಪ್ರೀಂ ಕೋರ್ಟ್‌ನಲ್ಲಿಯೂ ಪ್ರಶ್ನಿಸಲಾಗುತ್ತಿದೆ.

ಅದಾಗ್ಯೂ, ಶ್ರೀಲಂಕಾ ಸರ್ಕಾರವು ಯೋಜನೆ ರದ್ಧು ಮಾಡಿದೆ ಎಂಬ ವರದಿಗೆ ಶುಕ್ರವಾರ ಪ್ರತಿಕ್ರಿಯಿಸಿರುವ ಅದಾನಿ ಗ್ರೂಪ್, “ಮನ್ನಾರ್ ಮತ್ತು ಪೂನೆರಿನ್‌ನಲ್ಲಿನ ಪವನ ವಿದ್ಯುತ್ ಯೋಜನೆಗಳನ್ನು ರದ್ದುಗೊಳಿಸಲಾಗಿದೆ ಎಂಬ ವರದಿಗಳು ಸುಳ್ಳು ಮತ್ತು ದಾರಿತಪ್ಪಿಸುವವು” ಎಂದು ಹೇಳಿದೆ.

“ಯೋಜನೆಯನ್ನು ರದ್ದುಗೊಳಿಸಲಾಗಿಲ್ಲ ಎಂದು ನಾವು ಸ್ಪಷ್ಟವಾಗಿ ಹೇಳುತ್ತೇವೆ. ವಿಶೇಷವಾಗಿ ಹೊಸ ಸರ್ಕಾರದೊಂದಿಗೆ, ನಿಯಮಗಳು ಅವರ ಪ್ರಸ್ತುತ ಆದ್ಯತೆಗಳು ಮತ್ತು ಇಂಧನ ನೀತಿಗಳೊಂದಿಗೆ ಹೊಂದಿಕೆಯಾಗುತ್ತವೆ ಎಂದು ಖಚಿತಪಡಿಸಿಕೊಳ್ಳಲು [ಜನವರಿ 2, 2025] ರಂದು ಶ್ರೀಲಂಕಾದ ಸಚಿವ ಸಂಪುಟವು ಮೇ 2024 ರಲ್ಲಿ ಅನುಮೋದಿಸಲಾದ ಸುಂಕವನ್ನು ಮರುಮೌಲ್ಯಮಾಪನ ಮಾಡುವ ನಿರ್ಧಾರವು ಪ್ರಮಾಣಿತ ಪರಿಶೀಲನಾ ಪ್ರಕ್ರಿಯೆಯ ಭಾಗವಾಗಿ ಇದನ್ನು ನಡೆಸಲಾಗುತ್ತಿದೆ.” ಎಂದು ಅದಾನಿ ಗ್ರೂಪ್ ವಕ್ತಾರರು ಹೇಳಿದ್ದಾರೆ.

ಸಣ್ಣ ನವೀಕರಿಸಬಹುದಾದ ಇಂಧನ ಪೂರೈಕೆದಾರರು ಅದಾನಿ ಗ್ರೂಪ್ ಪ್ರಸ್ತಾಪಿಸಿದ ಬೆಲೆಯ ಸುಮಾರು ಮೂರನೇ ಎರಡರಷ್ಟು ಬೆಲೆಗೆ ವಿದ್ಯುತ್ ನೀಡುತ್ತಾರೆ ಎಂದು ಹೋರಾಟಗಾರರು ವಾದಿಸಿದ್ದಾರೆ.

ಶ್ರೀಲಂಕಾದ ಕೊಲಂಬೊ ಬಂದರಿನಲ್ಲಿ ಕೊಲಂಬೊ ವೆಸ್ಟ್ ಇಂಟರ್ನ್ಯಾಷನಲ್ ಟರ್ಮಿನಲ್ ಎಂಬ $700 ಮಿಲಿಯನ್ ಮೌಲ್ಯದ ಆಳ-ನೀರಿನ ಕಂಟೇನರ್ ಟರ್ಮಿನಲ್ ಅನ್ನು ನಿರ್ಮಿಸುವಲ್ಲಿಯೂ ಅದಾನಿ ಗ್ರೂಪ್‌ ಸಮೂಹವು ಭಾಗಿಯಾಗಿದೆ.

2020 ಮತ್ತು 2024 ರ ನಡುವೆ ಅದಾನಿ ಗ್ರೀನ್ ಎನರ್ಜಿಗಾಗಿ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಅಥವಾ ಸುಮಾರು 2,236 ಕೋಟಿ ರೂ.ಗಳನ್ನು ಲಂಚವಾಗಿ ನೀಡಲು ಒಪ್ಪಿಕೊಂಡಿದ್ದಕ್ಕಾಗಿ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಇತರ ಆರು ಜನರ ವಿರುದ್ಧ ನ್ಯೂಯಾರ್ಕ್‌ನ ಪೂರ್ವ ಜಿಲ್ಲೆಯ ಯುನೈಟೆಡ್ ಸ್ಟೇಟ್ಸ್ ಅಟಾರ್ನಿ ಕಚೇರಿ ಕಳೆದ ತಿಂಗಳು ದೋಷಾರೋಪಣೆ ಮಾಡಿತ್ತು.

ಈ ಒಪ್ಪಂದಗಳ ಕಾರಣಕ್ಕೆ 20 ವರ್ಷಗಳಲ್ಲಿ $2 ಬಿಲಿಯನ್ ಅಥವಾ ಸುಮಾರು 16,880 ಕೋಟಿ ರೂ.ಗಳಷ್ಟು ಲಾಭವನ್ನು ಗಳಿಸುವ ನಿರೀಕ್ಷೆಯಿತ್ತು. ಈ ಆರೋಪಗಳಿಗೆ ಸಂಬಂಧಿಸಿದಂತೆ ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಕಮಿಷನ್ ಗೌತಮ್ ಅದಾನಿ ಮತ್ತು ಸಾಗರ್ ಅದಾನಿಗೆ ಸಮನ್ಸ್ ಜಾರಿ ಮಾಡಿದೆ. ಅದಾಗ್ಯೂ, ಅದಾನಿ ಗ್ರೂಪ್ ಆರೋಪಗಳನ್ನು ನಿರಾಕರಿಸಿದ್ದು, ಅವುಗಳನ್ನು “ಆಧಾರರಹಿತ” ಎಂದು ಕರೆದಿದೆ.

ಈ ಆರೋಪಗಳು ಬೆಳಕಿಗೆ ಬಂದ ನಂತರ, ಕೀನ್ಯಾ ಕೂಡ ದೇಶದ ಪ್ರಾಥಮಿಕ ವಿಮಾನ ನಿಲ್ದಾಣದ ನಿಯಂತ್ರಣವನ್ನು ಅದಾನಿ ಗ್ರೂಪ್‌ಗೆ ನೀಡಬಹುದಾಗಿದ್ದ ಖರೀದಿ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆದೇಶಿಸಿದೆ.

ಇದನ್ನೂಓದಿ:  ಗುಜರಾತ್| ಮದುವೆ ಮೆರವಣಿಗೆಗೆ ಮುನ್ನ ಪೊಲೀಸ್ ರಕ್ಷಣೆ ಕೋರಿದ ದಲಿತ ವಕೀಲ

ಗುಜರಾತ್| ಮದುವೆ ಮೆರವಣಿಗೆಗೆ ಮುನ್ನ ಪೊಲೀಸ್ ರಕ್ಷಣೆ ಕೋರಿದ ದಲಿತ ವಕೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...