Homeಅಂತರಾಷ್ಟ್ರೀಯಅದಾನಿ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸಿದ ಶ್ರೀಲಂಕಾ - ವರದಿ

ಅದಾನಿ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸಿದ ಶ್ರೀಲಂಕಾ – ವರದಿ

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಲಂಚ ಮತ್ತು ವಂಚನೆ ಆರೋಪಗಳ ಮೇಲೆ ಅಮೆರಿಕ ನಡೆಸಿದ ತನಿಖೆಯ ಹಿನ್ನಲೆ, ಶ್ರೀಲಂಕಾ ಸರ್ಕಾರ ಅದಾನಿ ಗ್ರೂಪ್ ಜೊತೆಗಿನ ವಿದ್ಯುತ್ ಖರೀದಿ ಒಪ್ಪಂದವನ್ನು ರದ್ದುಗೊಳಿಸಿದೆ ಎಂದು AFP ಶುಕ್ರವಾರ ವರದಿ ಮಾಡಿದೆ.

ಭಾರತದಲ್ಲಿ ಸೌರ ಯೋಜನೆಗಳಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಮೇಲೆ ಗೌತಮ್ ಅದಾನಿ ವಿರುದ್ಧ ನವೆಂಬರ್‌ನಲ್ಲಿ ಅಮೆರಿಕದ ನ್ಯಾಯಾಲಯವೊಂದು ದೋಷಾರೋಪಣೆ ಮಾಡಿತ್ತು. ಇದತ ನಂತರ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರ ಆಡಳಿತವು ಶ್ರೀಲಂಕಾದಲ್ಲಿ ಅದಾನಿ ಗ್ರೂಪ್ ಯೋಜನೆಗಳ ಬಗ್ಗೆ ವಿಚಾರಣೆಯನ್ನು ಪ್ರಾರಂಭಿಸಿತ್ತು.

ಮೇ 2024 ರಲ್ಲಿ ಶ್ರೀಲಂಕಾದ ಅಧ್ಯಕ್ಷರಾಗಿದ್ದ ರನಿಲ್ ವಿಕ್ರಮಸಿಂಘೆ ಅವರು ದೇಶದ ವಾಯುವ್ಯದಲ್ಲಿ ಯೋಜಿಸಲಾದ ಅದಾನಿ ಪವನ ವಿದ್ಯುತ್ ಸೌಲಭ್ಯದಿಂದ ಪ್ರತಿ ಕಿಲೋವ್ಯಾಟ್-ಗಂಟೆಗೆ $0.0826 ಕ್ಕೆ ವಿದ್ಯುತ್ ಖರೀದಿಸುವ ಒಪ್ಪಂದವನ್ನು ಅನುಮೋದಿಸಿದ್ದರು. ಆದಾಗ್ಯೂ, ಈ ತಿಂಗಳ ಆರಂಭದಲ್ಲಿ ಹಾಲಿ ಅಧ್ಯಕ್ಷ ದಿಸಾನಾಯಕೆ ಅವರ ಸಂಪುಟ ಒಪ್ಪಂದವನ್ನು ರದ್ದುಗೊಳಿಸಿದೆ ಎಂದು ಇಂಧನ ಸಚಿವಾಲಯದ ಅಧಿಕಾರಿಯೊಬ್ಬರು AFP ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸರ್ಕಾರ ವಿದ್ಯುತ್ ಖರೀದಿ ಒಪ್ಪಂದವನ್ನು ರದ್ದುಗೊಳಿಸಿದೆ, ಆದರೆ ಯೋಜನೆಯನ್ನು ರದ್ದುಗೊಳಿಸಲಾಗಿಲ್ಲ. ಸಂಪೂರ್ಣ ಯೋಜನೆಯನ್ನು ಪರಿಶೀಲಿಸಲು ಸಮಿತಿಯನ್ನು ನೇಮಿಸಲಾಗಿದೆ.” ಎಂದು ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ AFP ವರದಿ ಮಾಡಿದೆ.

ಮನ್ನಾರ್ ಮತ್ತು ಪೂನೆರಿನ್ ಪ್ರದೇಶಗಳಿಗೆ ಯೋಜಿಸಲಾಗಿರುವ 484 ಮೆಗಾವ್ಯಾಟ್ ಪವನ ವಿದ್ಯುತ್ ಸ್ಥಾವರದ ನಿರ್ಮಾಣವನ್ನು ಮರುಮೌಲ್ಯಮಾಪನ ಮಾಡಲು ಶ್ರೀಲಂಕಾದ ಸಚಿವ ಸಂಪುಟ ನಿರ್ಧರಿಸಿದೆ ಎಂದು ಸರ್ಕಾರಿ ದಾಖಲೆಗಳನ್ನು ಉಲ್ಲೇಖಿಸಿದೆ ಎಎಫ್‌ಪಿ ವರದಿ ಮಾಡಿದೆ. ಪರಿಸರ ಕಾಳಜಿಯ ಮೇರೆಗೆ ಈ ಯೋಜನೆಯನ್ನು ದೇಶದ ಸುಪ್ರೀಂ ಕೋರ್ಟ್‌ನಲ್ಲಿಯೂ ಪ್ರಶ್ನಿಸಲಾಗುತ್ತಿದೆ.

ಅದಾಗ್ಯೂ, ಶ್ರೀಲಂಕಾ ಸರ್ಕಾರವು ಯೋಜನೆ ರದ್ಧು ಮಾಡಿದೆ ಎಂಬ ವರದಿಗೆ ಶುಕ್ರವಾರ ಪ್ರತಿಕ್ರಿಯಿಸಿರುವ ಅದಾನಿ ಗ್ರೂಪ್, “ಮನ್ನಾರ್ ಮತ್ತು ಪೂನೆರಿನ್‌ನಲ್ಲಿನ ಪವನ ವಿದ್ಯುತ್ ಯೋಜನೆಗಳನ್ನು ರದ್ದುಗೊಳಿಸಲಾಗಿದೆ ಎಂಬ ವರದಿಗಳು ಸುಳ್ಳು ಮತ್ತು ದಾರಿತಪ್ಪಿಸುವವು” ಎಂದು ಹೇಳಿದೆ.

“ಯೋಜನೆಯನ್ನು ರದ್ದುಗೊಳಿಸಲಾಗಿಲ್ಲ ಎಂದು ನಾವು ಸ್ಪಷ್ಟವಾಗಿ ಹೇಳುತ್ತೇವೆ. ವಿಶೇಷವಾಗಿ ಹೊಸ ಸರ್ಕಾರದೊಂದಿಗೆ, ನಿಯಮಗಳು ಅವರ ಪ್ರಸ್ತುತ ಆದ್ಯತೆಗಳು ಮತ್ತು ಇಂಧನ ನೀತಿಗಳೊಂದಿಗೆ ಹೊಂದಿಕೆಯಾಗುತ್ತವೆ ಎಂದು ಖಚಿತಪಡಿಸಿಕೊಳ್ಳಲು [ಜನವರಿ 2, 2025] ರಂದು ಶ್ರೀಲಂಕಾದ ಸಚಿವ ಸಂಪುಟವು ಮೇ 2024 ರಲ್ಲಿ ಅನುಮೋದಿಸಲಾದ ಸುಂಕವನ್ನು ಮರುಮೌಲ್ಯಮಾಪನ ಮಾಡುವ ನಿರ್ಧಾರವು ಪ್ರಮಾಣಿತ ಪರಿಶೀಲನಾ ಪ್ರಕ್ರಿಯೆಯ ಭಾಗವಾಗಿ ಇದನ್ನು ನಡೆಸಲಾಗುತ್ತಿದೆ.” ಎಂದು ಅದಾನಿ ಗ್ರೂಪ್ ವಕ್ತಾರರು ಹೇಳಿದ್ದಾರೆ.

ಸಣ್ಣ ನವೀಕರಿಸಬಹುದಾದ ಇಂಧನ ಪೂರೈಕೆದಾರರು ಅದಾನಿ ಗ್ರೂಪ್ ಪ್ರಸ್ತಾಪಿಸಿದ ಬೆಲೆಯ ಸುಮಾರು ಮೂರನೇ ಎರಡರಷ್ಟು ಬೆಲೆಗೆ ವಿದ್ಯುತ್ ನೀಡುತ್ತಾರೆ ಎಂದು ಹೋರಾಟಗಾರರು ವಾದಿಸಿದ್ದಾರೆ.

ಶ್ರೀಲಂಕಾದ ಕೊಲಂಬೊ ಬಂದರಿನಲ್ಲಿ ಕೊಲಂಬೊ ವೆಸ್ಟ್ ಇಂಟರ್ನ್ಯಾಷನಲ್ ಟರ್ಮಿನಲ್ ಎಂಬ $700 ಮಿಲಿಯನ್ ಮೌಲ್ಯದ ಆಳ-ನೀರಿನ ಕಂಟೇನರ್ ಟರ್ಮಿನಲ್ ಅನ್ನು ನಿರ್ಮಿಸುವಲ್ಲಿಯೂ ಅದಾನಿ ಗ್ರೂಪ್‌ ಸಮೂಹವು ಭಾಗಿಯಾಗಿದೆ.

2020 ಮತ್ತು 2024 ರ ನಡುವೆ ಅದಾನಿ ಗ್ರೀನ್ ಎನರ್ಜಿಗಾಗಿ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಅಥವಾ ಸುಮಾರು 2,236 ಕೋಟಿ ರೂ.ಗಳನ್ನು ಲಂಚವಾಗಿ ನೀಡಲು ಒಪ್ಪಿಕೊಂಡಿದ್ದಕ್ಕಾಗಿ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಇತರ ಆರು ಜನರ ವಿರುದ್ಧ ನ್ಯೂಯಾರ್ಕ್‌ನ ಪೂರ್ವ ಜಿಲ್ಲೆಯ ಯುನೈಟೆಡ್ ಸ್ಟೇಟ್ಸ್ ಅಟಾರ್ನಿ ಕಚೇರಿ ಕಳೆದ ತಿಂಗಳು ದೋಷಾರೋಪಣೆ ಮಾಡಿತ್ತು.

ಈ ಒಪ್ಪಂದಗಳ ಕಾರಣಕ್ಕೆ 20 ವರ್ಷಗಳಲ್ಲಿ $2 ಬಿಲಿಯನ್ ಅಥವಾ ಸುಮಾರು 16,880 ಕೋಟಿ ರೂ.ಗಳಷ್ಟು ಲಾಭವನ್ನು ಗಳಿಸುವ ನಿರೀಕ್ಷೆಯಿತ್ತು. ಈ ಆರೋಪಗಳಿಗೆ ಸಂಬಂಧಿಸಿದಂತೆ ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಕಮಿಷನ್ ಗೌತಮ್ ಅದಾನಿ ಮತ್ತು ಸಾಗರ್ ಅದಾನಿಗೆ ಸಮನ್ಸ್ ಜಾರಿ ಮಾಡಿದೆ. ಅದಾಗ್ಯೂ, ಅದಾನಿ ಗ್ರೂಪ್ ಆರೋಪಗಳನ್ನು ನಿರಾಕರಿಸಿದ್ದು, ಅವುಗಳನ್ನು “ಆಧಾರರಹಿತ” ಎಂದು ಕರೆದಿದೆ.

ಈ ಆರೋಪಗಳು ಬೆಳಕಿಗೆ ಬಂದ ನಂತರ, ಕೀನ್ಯಾ ಕೂಡ ದೇಶದ ಪ್ರಾಥಮಿಕ ವಿಮಾನ ನಿಲ್ದಾಣದ ನಿಯಂತ್ರಣವನ್ನು ಅದಾನಿ ಗ್ರೂಪ್‌ಗೆ ನೀಡಬಹುದಾಗಿದ್ದ ಖರೀದಿ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆದೇಶಿಸಿದೆ.

ಇದನ್ನೂಓದಿ:  ಗುಜರಾತ್| ಮದುವೆ ಮೆರವಣಿಗೆಗೆ ಮುನ್ನ ಪೊಲೀಸ್ ರಕ್ಷಣೆ ಕೋರಿದ ದಲಿತ ವಕೀಲ

ಗುಜರಾತ್| ಮದುವೆ ಮೆರವಣಿಗೆಗೆ ಮುನ್ನ ಪೊಲೀಸ್ ರಕ್ಷಣೆ ಕೋರಿದ ದಲಿತ ವಕೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...