Homeಮುಖಪುಟಅದಾನಿ ಹಗರಣ: ತಜ್ಞರ ಸಮಿತಿ ರಚಿಸಿದ ಸುಪ್ರೀಂ, ವರದಿ ಸಲ್ಲಿಸಲು SEBIಗೆ 2 ತಿಂಗಳ ಗಡುವು

ಅದಾನಿ ಹಗರಣ: ತಜ್ಞರ ಸಮಿತಿ ರಚಿಸಿದ ಸುಪ್ರೀಂ, ವರದಿ ಸಲ್ಲಿಸಲು SEBIಗೆ 2 ತಿಂಗಳ ಗಡುವು

- Advertisement -
- Advertisement -

ಜನವರಿ 24ರಂದು ಹೊರಬಂದ ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯ ಹಿನ್ನೆಲೆ ಹೂಡಿಕೆದಾರರ ಸಂರಕ್ಷಣಾ ಕಾರ್ಯವಿಧಾನಗಳನ್ನು ಪರಿಶೀಲಿಸಲು ಗುರುವಾರ ಸುಪ್ರೀಂ ಕೋರ್ಟ್, ತಜ್ಞರ ಸಮಿತಿಯನ್ನು ರಚಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಈ ಸಮಿತಿಯ ನೇತೃತ್ವವನ್ನು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಎಎಂ ಸಪ್ರೆ ವಹಿಸಲಿದ್ದಾರೆ. ಇತರ ಸದಸ್ಯರಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಒಪಿ ಭಟ್, ನಿವೃತ್ತ ನ್ಯಾಯಮೂರ್ತಿ ಜೆಪಿ ದೇವದತ್, ಇನ್ಫೋಸಿಸ್ ಅಧ್ಯಕ್ಷ ನಂದನ್ ನಿಲೇಕಣಿ, ಮಾಜಿ ಐಸಿಐಸಿಐ ಬ್ಯಾಂಕ್ ಮುಖ್ಯಸ್ಥ ಕೆವಿ ಕಾಮತ್ ಮತ್ತು ವಕೀಲರು ಮತ್ತು ಸೆಕ್ಯುರಿಟೀಸ್ ಮತ್ತು ನಿಯಂತ್ರಣ ತಜ್ಞ ಸೋಮಶೇಖರನ್ ಸುಂದರೇಶನ್ ಇರಲಿದ್ದಾರೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯು ”ಅದಾನಿ ಸಮೂಹವು ದಶಕಗಳ ಕಾಲ ಸ್ಟಾಕ್ ತಿರುಚುವಿಕೆ ಮತ್ತು ಲೆಕ್ಕಪತ್ರ ವಂಚನೆಯ ಯೋಜನೆಯಲ್ಲಿ ತೊಡಗಿದೆ” ಎಂದು ಹೇಳಿತ್ತು. ಈ ವರದಿ ಬೆನ್ನಲ್ಲೇ ಅದಾನಿ ಗ್ರೂಪ್‌ನ ಪಟ್ಟಿಮಾಡಿದ ಸಂಸ್ಥೆಗಳು ಒಟ್ಟಾಗಿ $145 ಶತಕೋಟಿ ಮಾರುಕಟ್ಟೆ ಮೌಲ್ಯವನ್ನು ಕಳೆದುಕೊಂಡಿತು.

ಇದನ್ನೂ ಓದಿ: ಅದಾನಿ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಫೆಬ್ರವರಿ 10ರಂದು ದೊಡ್ಡ ಹೂಡಿಕೆದಾರರ ನಷ್ಟಕ್ಕೆ ಸಂಬಂಧಿಸಿದ ಎರಡು ಅರ್ಜಿಗಳ ವಿಚಾರಣೆ ನಡೆಸಿತು. ಈ ರೀತಿಯ ವಂಚನೆ ಪ್ರಕರಣಗಳು ಮತ್ತು ಭವಿಷ್ಯದಲ್ಲಿ ಹೂಡಿಕೆದಾರರಿಗೆ ನಷ್ಟ ಉಂಟುಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ತಜ್ಞರ ಸಮಿತಿಯ ಅವಶ್ಯಕತೆ ಇದೆ ಎಂದು ಹೇಳಲಾಗಿತ್ತು.

ಗುರುವಾರದ ವಿಚಾರಣೆಯ ಸಂದರ್ಭದಲ್ಲಿ, ಅದಾನಿ ಗ್ರೂಪ್ ವಿರುದ್ಧ ಮಾಡಿರುವ ಆರೋಪಗಳ ಕುರಿತು ಎರಡು ತಿಂಗಳೊಳಗೆ ತನಿಖೆ ನಡೆಸಿ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI)ಗೆ ಪೀಠವು ಸೂಚಿಸಿದೆ.

ಸರ್ಕಾರ ಫೆಬ್ರವರಿ 17ರಂದು, ಸಮಿತಿಯ ಹೆಸರುಗಳು ಮತ್ತು ಆದೇಶದ ಸಲಹೆಗಳನ್ನು ಮುಚ್ಚಿದ ಕವರ್‌ನಲ್ಲಿ ಕಳಹಿಸಿತ್ತು. ಆದರೆ ಅದನ್ನು ಸ್ವೀಕರಿಸಲು ನ್ಯಾಯಾಲಯ ನಿರಾಕರಿಸಿತ್ತು. ಈ ವೇಳೆ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ, ಸಮಿತಿಯ ಸ್ಥಾಪನೆಯಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಬಯಸುವುದಾಗಿ ಪೀಠವು ತಿಳಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...