Homeಮುಖಪುಟಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

ಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

- Advertisement -
- Advertisement -

ಅದಾನಿ ಹಗರಣ ಮತ್ತು ಹಿಂಡನ್‌ ಬರ್ಗ್ ವರದಿ ಸಂಬಂಧ ಏನು ಮಾಡಬೇಕೆಂಬುದನ್ನು ಪರಿಶೀಲಿಸುವ ತಜ್ಞರ ಸಮಿತಿಯ ಹೆಸರುಗಳನ್ನು ಒಳಗೊಂಡಂತೆ ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ವರದಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ (ಫೆಬ್ರುವರಿ 17) ತಿರಸ್ಕರಿಸಿದೆ.

“ನಾವು ನಿಮ್ಮಿಂದ ಮುಚ್ಚಿದ ಲಕೋಟೆಯ ಸಲಹೆಯನ್ನು ಸ್ವೀಕರಿಸುವುದಿಲ್ಲ. ಏಕೆಂದರೆ ನಾವು ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಬಯಸುತ್ತೇವೆ. ಮುಚ್ಚಿದ ಲಕೋಟೆಯಲ್ಲಿ ನಾವು ಸಲಹೆಗಳನ್ನು ಸ್ವೀಕರಿಸಿದರೆ, ಮತ್ತೊಂದು ದೃಷ್ಟಿಕೋನವನ್ನು ಮುಚ್ಚಿಟ್ಟಂತಾಗುತ್ತದೆ. ಏಕೆಂದರೆ ಇದು ಸರ್ಕಾರ ನೇಮಿಸಿದ ಸಮಿತಿ ಎಂದು ಜನರು ಭಾವಿಸುತ್ತಾರೆ” ಎಂದು ಸಿಜೆಐ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠ ಹೇಳಿದೆ.

ಪ್ರಕರಣ: ಅದಾನಿ ಗ್ರೂಪ್ ವಂಚನೆ ಮಾಡಿದೆ ಎಂದು ಆರೋಪಿಸಿ ಶಾರ್ಟ್-ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್ ಪ್ರಕಟಿಸಿದ ವರದಿಗೆ ಸಂಬಂಧಿಸಿದ ನಾಲ್ಕು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಹಿಂಡನ್‌ಬರ್ಗ್ ವರದಿ ಹೊರಬಿದ್ದ ಬಳಿಕ, ಅದಾನಿ ಸಂಸ್ಥೆ‌ಯು 100 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಮೌಲ್ಯದ ಷೇರುಗಳ ನಷ್ಟ ಅನುಭವಿಸಿದೆ.

ತಜ್ಞರ ಸಮಿತಿಯ ಸಲಹೆಗಳು ಎಲ್ಲಿಂದ ಬಂದವು? ಕೇಂದ್ರ ಮತ್ತು ಸೆಬಿಯಿಂದ ಸುಪ್ರೀಂ ಕೋರ್ಟ್ ಪೀಠವು ಸಲಹೆಗಳನ್ನು ಕೋರಿತ್ತು. ನಿಯಂತ್ರಕ ಚೌಕಟ್ಟನ್ನು ಬಲಪಡಿಸುವ ಮತ್ತು ಭಾರತೀಯ ಹೂಡಿಕೆದಾರರ ಹಿತಾಸಕ್ತಿಗಳನ್ನು ರಕ್ಷಿಸುವ ಮಾರ್ಗಗಳನ್ನು ಸೂಚಿಸಲು ತಜ್ಞರ ಸಮಿತಿಯ ರಚನೆಯನ್ನು ಪ್ರಸ್ತಾಪಿಸಲಾಗಿತ್ತು.

ತಜ್ಞರ ಸಮಿತಿಯನ್ನು ರಚಿಸುವ ಕುರಿತು ನ್ಯಾಯಾಲಯದ ಸಲಹೆಗೆ ಕೇಂದ್ರವು ಒಪ್ಪಿಗೆ ನೀಡಿತ್ತು. ಆದರೆ ನಿಯಂತ್ರಣ ಚೌಕಟ್ಟಿನಲ್ಲಿ ಅಸಮರ್ಪಕತೆಗಳಿದ್ದು, ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ತಿಳಿಸದ ರೀತಿಯಲ್ಲಿ ಸಮಿತಿಯನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು.

ಇದನ್ನೂ ಓದಿರಿ: 2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

ನ್ಯಾಯಾಲಯವು ಶುಕ್ರವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. “ಅದು ಸರ್ಕಾರ ನೇಮಿಸಿದ ಸಮಿತಿ” ಎಂಬ ದೂಷಣೆಯಿಂದ ಪಾರಾಗಲು ತನ್ನದೇ ಆದ ಸಮಿತಿಯನ್ನು ನೇಮಿಸುವುದಾಗಿ ಹೇಳಿದೆ.

ಕೇಂದ್ರಕ್ಕೆ ಮತ್ತೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್: ಹಿಂಡನ್‌ಬರ್ಗ್ ವರದಿಯಿಂದ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಸರಕಾರ ‌ತಿಳಿಸಿರುವುದನ್ನು ನ್ಯಾಯಾಲಯ ಪರಿಗಣಿಸಿಲ್ಲ.

“ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮವಾಗಿಲ್ಲ ಎಂದು ನೀವು ಹೇಳುತ್ತಿದ್ದೀರಿ. ಆದರೆ ಅಂಕಿಅಂಶಗಳು ಹೇಳುವಂತೆ ಹೂಡಿಕೆದಾರರು ಲಕ್ಷ ಕೋಟಿ ಮೌಲ್ಯದ ನಷ್ಟವನ್ನು ಎದುರಿಸಿದ್ದಾರೆ” ಎಂದಿದೆ ಕೋರ್ಟ್.

ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿಗಳು

  1. ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅವರ ಸಹಚರರ ವಿರುದ್ಧ ತನಿಖೆ ನಡೆಸಬೇಕು, ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ದಾಖಲಿಸಬೇಕು ಎಂದು ವಕೀಲ ಮನೋಹರ್ ಲಾಲ್ ಶರ್ಮಾ ಅವರು ಮನವಿ ಮಾಡಿದ್ದಾರೆ. ಅಂತಹ ವರದಿಗಳನ್ನು ಮೊದಲು ಸೆಬಿಗೆ ಸಲ್ಲಿಸಿ ಪರಿಶೀಲಿಸದ ಹೊರತು ಇಂತಹ ಕಂಪನಿಗಳ ಬಗ್ಗೆ ಮಾಧ್ಯಮಗಳು ವರದಿ ಮಾಡದಂತೆ ತಡೆಯಬೇಕು ಎಂದು ಶರ್ಮಾ ಅವರು ಅರ್ಜಿಯಲ್ಲಿ ಕೋರಿದ್ದಾರೆ.
  2. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ವರದಿಯ ಬಗ್ಗೆ ತನಿಖೆ ನಡೆಸಬೇಕೆಂದು ವಕೀಲ ವಿಶಾಲ್ ತಿವಾರಿ ಅವರು ಕೋರಿದ್ದಾರೆ. 500 ಕೋಟಿಗೂ ಹೆಚ್ಚಿನ ಸಾಲ ಮಂಜೂರಾತಿ ನೀತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ಸಮಿತಿಯನ್ನು ರಚಿಸುವಂತೆಯೂ ಅವರು ಕೇಳಿಕೊಂಡಿದ್ದಾರೆ.
  3. ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ತಮ್ಮ ಅರ್ಜಿಯಲ್ಲಿ, “ಅದಾನಿ ಸಮೂಹವನ್ನು ಬಹು ಕಾನೂನುಗಳ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ (LIC) ಸಂಸ್ಥೆಗಳು ಅದಾನಿ ಷೇರುಗಳಲ್ಲಿ ಹೂಡಿಕೆ ಮಾಡಿರುವ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.
  4. ಹಿಂಡೆನ್‌ಬರ್ಗ್ ವರದಿಯನ್ನು ಆಧರಿಸಿ ಅದಾನಿ ಗುಂಪಿನ ವಿರುದ್ಧ ತನಿಖೆ ಮಾಡಬೇಕು ಎಂದು ಅನಾಮಿಕಾ ಜೈಸ್ವಾಲ್ ಸಲ್ಲಿಸಿದ ಮತ್ತೊಂದು ಅರ್ಜಿ ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...