Homeಮುಖಪುಟಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

ಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

- Advertisement -
- Advertisement -

ಅದಾನಿ ಹಗರಣ ಮತ್ತು ಹಿಂಡನ್‌ ಬರ್ಗ್ ವರದಿ ಸಂಬಂಧ ಏನು ಮಾಡಬೇಕೆಂಬುದನ್ನು ಪರಿಶೀಲಿಸುವ ತಜ್ಞರ ಸಮಿತಿಯ ಹೆಸರುಗಳನ್ನು ಒಳಗೊಂಡಂತೆ ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ವರದಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ (ಫೆಬ್ರುವರಿ 17) ತಿರಸ್ಕರಿಸಿದೆ.

“ನಾವು ನಿಮ್ಮಿಂದ ಮುಚ್ಚಿದ ಲಕೋಟೆಯ ಸಲಹೆಯನ್ನು ಸ್ವೀಕರಿಸುವುದಿಲ್ಲ. ಏಕೆಂದರೆ ನಾವು ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಬಯಸುತ್ತೇವೆ. ಮುಚ್ಚಿದ ಲಕೋಟೆಯಲ್ಲಿ ನಾವು ಸಲಹೆಗಳನ್ನು ಸ್ವೀಕರಿಸಿದರೆ, ಮತ್ತೊಂದು ದೃಷ್ಟಿಕೋನವನ್ನು ಮುಚ್ಚಿಟ್ಟಂತಾಗುತ್ತದೆ. ಏಕೆಂದರೆ ಇದು ಸರ್ಕಾರ ನೇಮಿಸಿದ ಸಮಿತಿ ಎಂದು ಜನರು ಭಾವಿಸುತ್ತಾರೆ” ಎಂದು ಸಿಜೆಐ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠ ಹೇಳಿದೆ.

ಪ್ರಕರಣ: ಅದಾನಿ ಗ್ರೂಪ್ ವಂಚನೆ ಮಾಡಿದೆ ಎಂದು ಆರೋಪಿಸಿ ಶಾರ್ಟ್-ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್ ಪ್ರಕಟಿಸಿದ ವರದಿಗೆ ಸಂಬಂಧಿಸಿದ ನಾಲ್ಕು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಹಿಂಡನ್‌ಬರ್ಗ್ ವರದಿ ಹೊರಬಿದ್ದ ಬಳಿಕ, ಅದಾನಿ ಸಂಸ್ಥೆ‌ಯು 100 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಮೌಲ್ಯದ ಷೇರುಗಳ ನಷ್ಟ ಅನುಭವಿಸಿದೆ.

ತಜ್ಞರ ಸಮಿತಿಯ ಸಲಹೆಗಳು ಎಲ್ಲಿಂದ ಬಂದವು? ಕೇಂದ್ರ ಮತ್ತು ಸೆಬಿಯಿಂದ ಸುಪ್ರೀಂ ಕೋರ್ಟ್ ಪೀಠವು ಸಲಹೆಗಳನ್ನು ಕೋರಿತ್ತು. ನಿಯಂತ್ರಕ ಚೌಕಟ್ಟನ್ನು ಬಲಪಡಿಸುವ ಮತ್ತು ಭಾರತೀಯ ಹೂಡಿಕೆದಾರರ ಹಿತಾಸಕ್ತಿಗಳನ್ನು ರಕ್ಷಿಸುವ ಮಾರ್ಗಗಳನ್ನು ಸೂಚಿಸಲು ತಜ್ಞರ ಸಮಿತಿಯ ರಚನೆಯನ್ನು ಪ್ರಸ್ತಾಪಿಸಲಾಗಿತ್ತು.

ತಜ್ಞರ ಸಮಿತಿಯನ್ನು ರಚಿಸುವ ಕುರಿತು ನ್ಯಾಯಾಲಯದ ಸಲಹೆಗೆ ಕೇಂದ್ರವು ಒಪ್ಪಿಗೆ ನೀಡಿತ್ತು. ಆದರೆ ನಿಯಂತ್ರಣ ಚೌಕಟ್ಟಿನಲ್ಲಿ ಅಸಮರ್ಪಕತೆಗಳಿದ್ದು, ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ತಿಳಿಸದ ರೀತಿಯಲ್ಲಿ ಸಮಿತಿಯನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು.

ಇದನ್ನೂ ಓದಿರಿ: 2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

ನ್ಯಾಯಾಲಯವು ಶುಕ್ರವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. “ಅದು ಸರ್ಕಾರ ನೇಮಿಸಿದ ಸಮಿತಿ” ಎಂಬ ದೂಷಣೆಯಿಂದ ಪಾರಾಗಲು ತನ್ನದೇ ಆದ ಸಮಿತಿಯನ್ನು ನೇಮಿಸುವುದಾಗಿ ಹೇಳಿದೆ.

ಕೇಂದ್ರಕ್ಕೆ ಮತ್ತೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್: ಹಿಂಡನ್‌ಬರ್ಗ್ ವರದಿಯಿಂದ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಸರಕಾರ ‌ತಿಳಿಸಿರುವುದನ್ನು ನ್ಯಾಯಾಲಯ ಪರಿಗಣಿಸಿಲ್ಲ.

“ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮವಾಗಿಲ್ಲ ಎಂದು ನೀವು ಹೇಳುತ್ತಿದ್ದೀರಿ. ಆದರೆ ಅಂಕಿಅಂಶಗಳು ಹೇಳುವಂತೆ ಹೂಡಿಕೆದಾರರು ಲಕ್ಷ ಕೋಟಿ ಮೌಲ್ಯದ ನಷ್ಟವನ್ನು ಎದುರಿಸಿದ್ದಾರೆ” ಎಂದಿದೆ ಕೋರ್ಟ್.

ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿಗಳು

  1. ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅವರ ಸಹಚರರ ವಿರುದ್ಧ ತನಿಖೆ ನಡೆಸಬೇಕು, ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ದಾಖಲಿಸಬೇಕು ಎಂದು ವಕೀಲ ಮನೋಹರ್ ಲಾಲ್ ಶರ್ಮಾ ಅವರು ಮನವಿ ಮಾಡಿದ್ದಾರೆ. ಅಂತಹ ವರದಿಗಳನ್ನು ಮೊದಲು ಸೆಬಿಗೆ ಸಲ್ಲಿಸಿ ಪರಿಶೀಲಿಸದ ಹೊರತು ಇಂತಹ ಕಂಪನಿಗಳ ಬಗ್ಗೆ ಮಾಧ್ಯಮಗಳು ವರದಿ ಮಾಡದಂತೆ ತಡೆಯಬೇಕು ಎಂದು ಶರ್ಮಾ ಅವರು ಅರ್ಜಿಯಲ್ಲಿ ಕೋರಿದ್ದಾರೆ.
  2. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ವರದಿಯ ಬಗ್ಗೆ ತನಿಖೆ ನಡೆಸಬೇಕೆಂದು ವಕೀಲ ವಿಶಾಲ್ ತಿವಾರಿ ಅವರು ಕೋರಿದ್ದಾರೆ. 500 ಕೋಟಿಗೂ ಹೆಚ್ಚಿನ ಸಾಲ ಮಂಜೂರಾತಿ ನೀತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ಸಮಿತಿಯನ್ನು ರಚಿಸುವಂತೆಯೂ ಅವರು ಕೇಳಿಕೊಂಡಿದ್ದಾರೆ.
  3. ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ತಮ್ಮ ಅರ್ಜಿಯಲ್ಲಿ, “ಅದಾನಿ ಸಮೂಹವನ್ನು ಬಹು ಕಾನೂನುಗಳ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ (LIC) ಸಂಸ್ಥೆಗಳು ಅದಾನಿ ಷೇರುಗಳಲ್ಲಿ ಹೂಡಿಕೆ ಮಾಡಿರುವ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.
  4. ಹಿಂಡೆನ್‌ಬರ್ಗ್ ವರದಿಯನ್ನು ಆಧರಿಸಿ ಅದಾನಿ ಗುಂಪಿನ ವಿರುದ್ಧ ತನಿಖೆ ಮಾಡಬೇಕು ಎಂದು ಅನಾಮಿಕಾ ಜೈಸ್ವಾಲ್ ಸಲ್ಲಿಸಿದ ಮತ್ತೊಂದು ಅರ್ಜಿ ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...