Homeಮುಖಪುಟಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

ಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

- Advertisement -
- Advertisement -

ಅದಾನಿ ಹಗರಣ ಮತ್ತು ಹಿಂಡನ್‌ ಬರ್ಗ್ ವರದಿ ಸಂಬಂಧ ಏನು ಮಾಡಬೇಕೆಂಬುದನ್ನು ಪರಿಶೀಲಿಸುವ ತಜ್ಞರ ಸಮಿತಿಯ ಹೆಸರುಗಳನ್ನು ಒಳಗೊಂಡಂತೆ ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ವರದಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ (ಫೆಬ್ರುವರಿ 17) ತಿರಸ್ಕರಿಸಿದೆ.

“ನಾವು ನಿಮ್ಮಿಂದ ಮುಚ್ಚಿದ ಲಕೋಟೆಯ ಸಲಹೆಯನ್ನು ಸ್ವೀಕರಿಸುವುದಿಲ್ಲ. ಏಕೆಂದರೆ ನಾವು ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಬಯಸುತ್ತೇವೆ. ಮುಚ್ಚಿದ ಲಕೋಟೆಯಲ್ಲಿ ನಾವು ಸಲಹೆಗಳನ್ನು ಸ್ವೀಕರಿಸಿದರೆ, ಮತ್ತೊಂದು ದೃಷ್ಟಿಕೋನವನ್ನು ಮುಚ್ಚಿಟ್ಟಂತಾಗುತ್ತದೆ. ಏಕೆಂದರೆ ಇದು ಸರ್ಕಾರ ನೇಮಿಸಿದ ಸಮಿತಿ ಎಂದು ಜನರು ಭಾವಿಸುತ್ತಾರೆ” ಎಂದು ಸಿಜೆಐ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠ ಹೇಳಿದೆ.

ಪ್ರಕರಣ: ಅದಾನಿ ಗ್ರೂಪ್ ವಂಚನೆ ಮಾಡಿದೆ ಎಂದು ಆರೋಪಿಸಿ ಶಾರ್ಟ್-ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್ ಪ್ರಕಟಿಸಿದ ವರದಿಗೆ ಸಂಬಂಧಿಸಿದ ನಾಲ್ಕು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಹಿಂಡನ್‌ಬರ್ಗ್ ವರದಿ ಹೊರಬಿದ್ದ ಬಳಿಕ, ಅದಾನಿ ಸಂಸ್ಥೆ‌ಯು 100 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಮೌಲ್ಯದ ಷೇರುಗಳ ನಷ್ಟ ಅನುಭವಿಸಿದೆ.

ತಜ್ಞರ ಸಮಿತಿಯ ಸಲಹೆಗಳು ಎಲ್ಲಿಂದ ಬಂದವು? ಕೇಂದ್ರ ಮತ್ತು ಸೆಬಿಯಿಂದ ಸುಪ್ರೀಂ ಕೋರ್ಟ್ ಪೀಠವು ಸಲಹೆಗಳನ್ನು ಕೋರಿತ್ತು. ನಿಯಂತ್ರಕ ಚೌಕಟ್ಟನ್ನು ಬಲಪಡಿಸುವ ಮತ್ತು ಭಾರತೀಯ ಹೂಡಿಕೆದಾರರ ಹಿತಾಸಕ್ತಿಗಳನ್ನು ರಕ್ಷಿಸುವ ಮಾರ್ಗಗಳನ್ನು ಸೂಚಿಸಲು ತಜ್ಞರ ಸಮಿತಿಯ ರಚನೆಯನ್ನು ಪ್ರಸ್ತಾಪಿಸಲಾಗಿತ್ತು.

ತಜ್ಞರ ಸಮಿತಿಯನ್ನು ರಚಿಸುವ ಕುರಿತು ನ್ಯಾಯಾಲಯದ ಸಲಹೆಗೆ ಕೇಂದ್ರವು ಒಪ್ಪಿಗೆ ನೀಡಿತ್ತು. ಆದರೆ ನಿಯಂತ್ರಣ ಚೌಕಟ್ಟಿನಲ್ಲಿ ಅಸಮರ್ಪಕತೆಗಳಿದ್ದು, ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ತಿಳಿಸದ ರೀತಿಯಲ್ಲಿ ಸಮಿತಿಯನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು.

ಇದನ್ನೂ ಓದಿರಿ: 2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

ನ್ಯಾಯಾಲಯವು ಶುಕ್ರವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. “ಅದು ಸರ್ಕಾರ ನೇಮಿಸಿದ ಸಮಿತಿ” ಎಂಬ ದೂಷಣೆಯಿಂದ ಪಾರಾಗಲು ತನ್ನದೇ ಆದ ಸಮಿತಿಯನ್ನು ನೇಮಿಸುವುದಾಗಿ ಹೇಳಿದೆ.

ಕೇಂದ್ರಕ್ಕೆ ಮತ್ತೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್: ಹಿಂಡನ್‌ಬರ್ಗ್ ವರದಿಯಿಂದ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಸರಕಾರ ‌ತಿಳಿಸಿರುವುದನ್ನು ನ್ಯಾಯಾಲಯ ಪರಿಗಣಿಸಿಲ್ಲ.

“ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮವಾಗಿಲ್ಲ ಎಂದು ನೀವು ಹೇಳುತ್ತಿದ್ದೀರಿ. ಆದರೆ ಅಂಕಿಅಂಶಗಳು ಹೇಳುವಂತೆ ಹೂಡಿಕೆದಾರರು ಲಕ್ಷ ಕೋಟಿ ಮೌಲ್ಯದ ನಷ್ಟವನ್ನು ಎದುರಿಸಿದ್ದಾರೆ” ಎಂದಿದೆ ಕೋರ್ಟ್.

ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿಗಳು

  1. ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅವರ ಸಹಚರರ ವಿರುದ್ಧ ತನಿಖೆ ನಡೆಸಬೇಕು, ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ದಾಖಲಿಸಬೇಕು ಎಂದು ವಕೀಲ ಮನೋಹರ್ ಲಾಲ್ ಶರ್ಮಾ ಅವರು ಮನವಿ ಮಾಡಿದ್ದಾರೆ. ಅಂತಹ ವರದಿಗಳನ್ನು ಮೊದಲು ಸೆಬಿಗೆ ಸಲ್ಲಿಸಿ ಪರಿಶೀಲಿಸದ ಹೊರತು ಇಂತಹ ಕಂಪನಿಗಳ ಬಗ್ಗೆ ಮಾಧ್ಯಮಗಳು ವರದಿ ಮಾಡದಂತೆ ತಡೆಯಬೇಕು ಎಂದು ಶರ್ಮಾ ಅವರು ಅರ್ಜಿಯಲ್ಲಿ ಕೋರಿದ್ದಾರೆ.
  2. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ವರದಿಯ ಬಗ್ಗೆ ತನಿಖೆ ನಡೆಸಬೇಕೆಂದು ವಕೀಲ ವಿಶಾಲ್ ತಿವಾರಿ ಅವರು ಕೋರಿದ್ದಾರೆ. 500 ಕೋಟಿಗೂ ಹೆಚ್ಚಿನ ಸಾಲ ಮಂಜೂರಾತಿ ನೀತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ಸಮಿತಿಯನ್ನು ರಚಿಸುವಂತೆಯೂ ಅವರು ಕೇಳಿಕೊಂಡಿದ್ದಾರೆ.
  3. ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ತಮ್ಮ ಅರ್ಜಿಯಲ್ಲಿ, “ಅದಾನಿ ಸಮೂಹವನ್ನು ಬಹು ಕಾನೂನುಗಳ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ (LIC) ಸಂಸ್ಥೆಗಳು ಅದಾನಿ ಷೇರುಗಳಲ್ಲಿ ಹೂಡಿಕೆ ಮಾಡಿರುವ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.
  4. ಹಿಂಡೆನ್‌ಬರ್ಗ್ ವರದಿಯನ್ನು ಆಧರಿಸಿ ಅದಾನಿ ಗುಂಪಿನ ವಿರುದ್ಧ ತನಿಖೆ ಮಾಡಬೇಕು ಎಂದು ಅನಾಮಿಕಾ ಜೈಸ್ವಾಲ್ ಸಲ್ಲಿಸಿದ ಮತ್ತೊಂದು ಅರ್ಜಿ ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...