Homeಮುಖಪುಟಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

ಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

- Advertisement -
- Advertisement -

ಅದಾನಿ ಹಗರಣ ಮತ್ತು ಹಿಂಡನ್‌ ಬರ್ಗ್ ವರದಿ ಸಂಬಂಧ ಏನು ಮಾಡಬೇಕೆಂಬುದನ್ನು ಪರಿಶೀಲಿಸುವ ತಜ್ಞರ ಸಮಿತಿಯ ಹೆಸರುಗಳನ್ನು ಒಳಗೊಂಡಂತೆ ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ವರದಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ (ಫೆಬ್ರುವರಿ 17) ತಿರಸ್ಕರಿಸಿದೆ.

“ನಾವು ನಿಮ್ಮಿಂದ ಮುಚ್ಚಿದ ಲಕೋಟೆಯ ಸಲಹೆಯನ್ನು ಸ್ವೀಕರಿಸುವುದಿಲ್ಲ. ಏಕೆಂದರೆ ನಾವು ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಬಯಸುತ್ತೇವೆ. ಮುಚ್ಚಿದ ಲಕೋಟೆಯಲ್ಲಿ ನಾವು ಸಲಹೆಗಳನ್ನು ಸ್ವೀಕರಿಸಿದರೆ, ಮತ್ತೊಂದು ದೃಷ್ಟಿಕೋನವನ್ನು ಮುಚ್ಚಿಟ್ಟಂತಾಗುತ್ತದೆ. ಏಕೆಂದರೆ ಇದು ಸರ್ಕಾರ ನೇಮಿಸಿದ ಸಮಿತಿ ಎಂದು ಜನರು ಭಾವಿಸುತ್ತಾರೆ” ಎಂದು ಸಿಜೆಐ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠ ಹೇಳಿದೆ.

ಪ್ರಕರಣ: ಅದಾನಿ ಗ್ರೂಪ್ ವಂಚನೆ ಮಾಡಿದೆ ಎಂದು ಆರೋಪಿಸಿ ಶಾರ್ಟ್-ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್ ಪ್ರಕಟಿಸಿದ ವರದಿಗೆ ಸಂಬಂಧಿಸಿದ ನಾಲ್ಕು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಹಿಂಡನ್‌ಬರ್ಗ್ ವರದಿ ಹೊರಬಿದ್ದ ಬಳಿಕ, ಅದಾನಿ ಸಂಸ್ಥೆ‌ಯು 100 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಮೌಲ್ಯದ ಷೇರುಗಳ ನಷ್ಟ ಅನುಭವಿಸಿದೆ.

ತಜ್ಞರ ಸಮಿತಿಯ ಸಲಹೆಗಳು ಎಲ್ಲಿಂದ ಬಂದವು? ಕೇಂದ್ರ ಮತ್ತು ಸೆಬಿಯಿಂದ ಸುಪ್ರೀಂ ಕೋರ್ಟ್ ಪೀಠವು ಸಲಹೆಗಳನ್ನು ಕೋರಿತ್ತು. ನಿಯಂತ್ರಕ ಚೌಕಟ್ಟನ್ನು ಬಲಪಡಿಸುವ ಮತ್ತು ಭಾರತೀಯ ಹೂಡಿಕೆದಾರರ ಹಿತಾಸಕ್ತಿಗಳನ್ನು ರಕ್ಷಿಸುವ ಮಾರ್ಗಗಳನ್ನು ಸೂಚಿಸಲು ತಜ್ಞರ ಸಮಿತಿಯ ರಚನೆಯನ್ನು ಪ್ರಸ್ತಾಪಿಸಲಾಗಿತ್ತು.

ತಜ್ಞರ ಸಮಿತಿಯನ್ನು ರಚಿಸುವ ಕುರಿತು ನ್ಯಾಯಾಲಯದ ಸಲಹೆಗೆ ಕೇಂದ್ರವು ಒಪ್ಪಿಗೆ ನೀಡಿತ್ತು. ಆದರೆ ನಿಯಂತ್ರಣ ಚೌಕಟ್ಟಿನಲ್ಲಿ ಅಸಮರ್ಪಕತೆಗಳಿದ್ದು, ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ತಿಳಿಸದ ರೀತಿಯಲ್ಲಿ ಸಮಿತಿಯನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು.

ಇದನ್ನೂ ಓದಿರಿ: 2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

ನ್ಯಾಯಾಲಯವು ಶುಕ್ರವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. “ಅದು ಸರ್ಕಾರ ನೇಮಿಸಿದ ಸಮಿತಿ” ಎಂಬ ದೂಷಣೆಯಿಂದ ಪಾರಾಗಲು ತನ್ನದೇ ಆದ ಸಮಿತಿಯನ್ನು ನೇಮಿಸುವುದಾಗಿ ಹೇಳಿದೆ.

ಕೇಂದ್ರಕ್ಕೆ ಮತ್ತೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್: ಹಿಂಡನ್‌ಬರ್ಗ್ ವರದಿಯಿಂದ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಸರಕಾರ ‌ತಿಳಿಸಿರುವುದನ್ನು ನ್ಯಾಯಾಲಯ ಪರಿಗಣಿಸಿಲ್ಲ.

“ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮವಾಗಿಲ್ಲ ಎಂದು ನೀವು ಹೇಳುತ್ತಿದ್ದೀರಿ. ಆದರೆ ಅಂಕಿಅಂಶಗಳು ಹೇಳುವಂತೆ ಹೂಡಿಕೆದಾರರು ಲಕ್ಷ ಕೋಟಿ ಮೌಲ್ಯದ ನಷ್ಟವನ್ನು ಎದುರಿಸಿದ್ದಾರೆ” ಎಂದಿದೆ ಕೋರ್ಟ್.

ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿಗಳು

  1. ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅವರ ಸಹಚರರ ವಿರುದ್ಧ ತನಿಖೆ ನಡೆಸಬೇಕು, ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ದಾಖಲಿಸಬೇಕು ಎಂದು ವಕೀಲ ಮನೋಹರ್ ಲಾಲ್ ಶರ್ಮಾ ಅವರು ಮನವಿ ಮಾಡಿದ್ದಾರೆ. ಅಂತಹ ವರದಿಗಳನ್ನು ಮೊದಲು ಸೆಬಿಗೆ ಸಲ್ಲಿಸಿ ಪರಿಶೀಲಿಸದ ಹೊರತು ಇಂತಹ ಕಂಪನಿಗಳ ಬಗ್ಗೆ ಮಾಧ್ಯಮಗಳು ವರದಿ ಮಾಡದಂತೆ ತಡೆಯಬೇಕು ಎಂದು ಶರ್ಮಾ ಅವರು ಅರ್ಜಿಯಲ್ಲಿ ಕೋರಿದ್ದಾರೆ.
  2. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ವರದಿಯ ಬಗ್ಗೆ ತನಿಖೆ ನಡೆಸಬೇಕೆಂದು ವಕೀಲ ವಿಶಾಲ್ ತಿವಾರಿ ಅವರು ಕೋರಿದ್ದಾರೆ. 500 ಕೋಟಿಗೂ ಹೆಚ್ಚಿನ ಸಾಲ ಮಂಜೂರಾತಿ ನೀತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ಸಮಿತಿಯನ್ನು ರಚಿಸುವಂತೆಯೂ ಅವರು ಕೇಳಿಕೊಂಡಿದ್ದಾರೆ.
  3. ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ತಮ್ಮ ಅರ್ಜಿಯಲ್ಲಿ, “ಅದಾನಿ ಸಮೂಹವನ್ನು ಬಹು ಕಾನೂನುಗಳ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ (LIC) ಸಂಸ್ಥೆಗಳು ಅದಾನಿ ಷೇರುಗಳಲ್ಲಿ ಹೂಡಿಕೆ ಮಾಡಿರುವ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.
  4. ಹಿಂಡೆನ್‌ಬರ್ಗ್ ವರದಿಯನ್ನು ಆಧರಿಸಿ ಅದಾನಿ ಗುಂಪಿನ ವಿರುದ್ಧ ತನಿಖೆ ಮಾಡಬೇಕು ಎಂದು ಅನಾಮಿಕಾ ಜೈಸ್ವಾಲ್ ಸಲ್ಲಿಸಿದ ಮತ್ತೊಂದು ಅರ್ಜಿ ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...