Homeಮುಖಪುಟಅದಾನಿ ಹಗರಣ: ತನಿಖೆ ಪೂರ್ವಗೊಳಿಸಲು ಹೆಚ್ಚುವರಿ 6 ತಿಂಗಳ ಅವಕಾಶ ಕೋರಿ ಸುಪ್ರೀಂಕೋರ್ಟ್‌‌ಗೆ ಸೆಬಿ ಮನವಿ

ಅದಾನಿ ಹಗರಣ: ತನಿಖೆ ಪೂರ್ವಗೊಳಿಸಲು ಹೆಚ್ಚುವರಿ 6 ತಿಂಗಳ ಅವಕಾಶ ಕೋರಿ ಸುಪ್ರೀಂಕೋರ್ಟ್‌‌ಗೆ ಸೆಬಿ ಮನವಿ

- Advertisement -
- Advertisement -

ಅದಾನಿ ಗ್ರೂಪ್ ವಿರುದ್ಧ ಬಂದಿರುವ ಸ್ಟಾಕ್ ಮ್ಯಾನಿಪುಲೇಷನ್ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಲು ಇನ್ನೂ ಆರು ತಿಂಗಳ ಕಾಲಾವಕಾಶ ನೀಡಬೇಕೆಂದು ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಗೌತಮ್ ಅದಾನಿ ನೇತೃತ್ವದ ಈ ಸಂಸ್ಥೆಯು ಸಾರ್ವಜನಿಕ ಷೇರುಗಳನ್ನು ನಿರ್ವಹಿಸುವ ಕನಿಷ್ಠ ನಿಯಮಗಳನ್ನು ಉಲ್ಲಂಘಿಸಿದೆಯೇ, ಸಂಬಂಧಿತ ಪಾರ್ಟಿಗಳೊಂದಿಗೆ ವಹಿವಾಟುಗಳನ್ನು ಬಹಿರಂಗಪಡಿಸಲು ವಿಫಲವಾಗಿದೆಯೇ ಮತ್ತು ಷೇರುಗಳ ಬೆಲೆಗಳಲ್ಲಿ ಯಾವುದೇ ತಿರುಚುವಿಕೆ ನಡೆದಿದೆಯೇ ಎಂದು ಪರಿಶೀಲಿಸಲು ಸೆಬಿಗೆ ನ್ಯಾಯಾಲಯ ಮಾರ್ಚ್ 2ರಂದು ಸೂಚಿಸಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಸ್ಥಿತಿಗತಿ ವರದಿ ಸಲ್ಲಿಸುವಂತೆ ನಿರ್ದೇಶಿಸಿತ್ತು.

ಅಮೆರಿಕ ಮೂಲದ ಹಿಂಡನ್‌ಬರ್ಗ್ ರಿಸರ್ಚ್ ಸಂಸ್ಥೆಯು ಜನವರಿ 24ರಂದು ಪ್ರಕಟಿಸಿದ ವರದಿಯು ಅದಾನಿ ಗ್ರೂಪ್‌ನ ಹಗರಣಗಳತ್ತ ಬೊಟ್ಟು ಮಾಡಿತ್ತು. ಸ್ಟಾಕ್ ಮ್ಯಾನಿಪ್ಯುಲೇಷನ್ ಮಾಡಲಾಗಿದೆ, ಕೃತಕವಾಗಿ ಷೇರುಗಳ ಬೇಲೆ ಏರಿಕೆ ಮಾಡಲಾಗಿದೆ, ಕಡಲಾಚೆಯ ತೆರಿಗೆ ಸ್ವರ್ಗಗಳನ್ನು ಅಸಮರ್ಪಕವಾಗಿ ಬಳಸಾಗಿದೆ ಎಂದು ವರದಿ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಹೂಡಿಕೆದಾರರ ಸಂರಕ್ಷಣಾ ಕಾರ್ಯವಿಧಾನಗಳನ್ನು ಪರಿಶೀಲಿಸಲು ನ್ಯಾಯಾಲಯವು ತಜ್ಞರ ಸಮಿತಿಯನ್ನು ರಚಿಸಿತ್ತು.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಸಲ್ಲಿಸಿರುವ ಮನವಿಯಲ್ಲಿ, ಏಪ್ರಿಲ್‌ನಲ್ಲಿ ತಜ್ಞರ ಸಮಿತಿಯೊಂದಿಗೆ ಎರಡು ಸಭೆಗಳಲ್ಲಿ ಭಾಗವಹಿಸಿರುವುದಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ತನಿಖೆಯ ಸ್ಥಿತಿ ಮತ್ತು ಮಧ್ಯಂತರ ಸಂಶೋಧನೆಗಳ ಬಗ್ಗೆ ಸಮಿತಿಗೆ ತಿಳಿಸಲಾಗಿದೆ ಎಂದು ಸೆಬಿ ಹೇಳಿಕೊಂಡಿದೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯಲ್ಲಿ ಉಲ್ಲೇಖಿಸಲಾದ 12 ಸಂಶಯಾಸ್ಪದ ವಹಿವಾಟುಗಳಿಗೆ ಸಂಬಂಧಿಸಿದಂತೆ ತನಿಖೆ ಮಾಡಲು ಕನಿಷ್ಠ 15 ತಿಂಗಳ ಕಾಲಾವಕಾಶ ಬೇಕಿದೆ ಎಂದು ಮಾರುಕಟ್ಟೆ ನಿಯಂತ್ರಕ ಸೆಬಿ ಅಭಿಪ್ರಾಯಪಟ್ಟಿದೆ.

“ಏಕೆಂದರೆ ವಹಿವಾಟುಗಳು ಸಂಕೀರ್ಣವಾಗಿವೆ. ಹಲವಾರು ದೇಶೀಯ ಮತ್ತು ಅಂತರರಾಷ್ಟ್ರೀಯ ಬ್ಯಾಂಕ್‌ಗಳಿಂದ ಬ್ಯಾಂಕ್ ಸ್ಟೇಟ್‌ಮೆಂಟ್‌ಗಳನ್ನು ಪಡೆಯಬೇಕಾಗುತ್ತದೆ” ಎಂದು ಸೆಬಿ ವಿವರಿಸಿದೆ.

“ವಿದೇಶಿ ಬ್ಯಾಂಕ್‌ಗಳಿಂದ ಬ್ಯಾಂಕ್ ಸ್ಟೇಟ್‌ಮೆಂಟ್‌ಗಳನ್ನು ಪಡೆಯುವ ಈ ಪ್ರಕ್ರಿಯೆಯು ವಿದೇಶಿ ನಿಯಂತ್ರಕರಿಂದ ಸಹಾಯವನ್ನು ಬೇಡುತ್ತದೆ. ಇದಕ್ಕೆ ಸಮಯ ಬೇಕಾಗುತ್ತದೆ. ಅಲ್ಲದೆ ಇದು ಸವಾಲಿನ ಕೆಲಸವಾಗಿದೆ” ಎಂದು ತಿಳಿಸಿದೆ.

ತನ್ನ ತನಿಖೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಲು ‘ಸಮಂಜಸವಾದ ಪ್ರಯತ್ನಗಳನ್ನು’ ಮಾಡುವುದಾಗಿ ಸೆಬಿ ಹೇಳಿದೆ.

ಇದನ್ನೂ ಓದಿರಿ: ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...