Homeಮುಖಪುಟಅದಾನಿ ಹಗರಣ: ತನಿಖೆ ಪೂರ್ವಗೊಳಿಸಲು ಹೆಚ್ಚುವರಿ 6 ತಿಂಗಳ ಅವಕಾಶ ಕೋರಿ ಸುಪ್ರೀಂಕೋರ್ಟ್‌‌ಗೆ ಸೆಬಿ ಮನವಿ

ಅದಾನಿ ಹಗರಣ: ತನಿಖೆ ಪೂರ್ವಗೊಳಿಸಲು ಹೆಚ್ಚುವರಿ 6 ತಿಂಗಳ ಅವಕಾಶ ಕೋರಿ ಸುಪ್ರೀಂಕೋರ್ಟ್‌‌ಗೆ ಸೆಬಿ ಮನವಿ

- Advertisement -
- Advertisement -

ಅದಾನಿ ಗ್ರೂಪ್ ವಿರುದ್ಧ ಬಂದಿರುವ ಸ್ಟಾಕ್ ಮ್ಯಾನಿಪುಲೇಷನ್ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಲು ಇನ್ನೂ ಆರು ತಿಂಗಳ ಕಾಲಾವಕಾಶ ನೀಡಬೇಕೆಂದು ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಗೌತಮ್ ಅದಾನಿ ನೇತೃತ್ವದ ಈ ಸಂಸ್ಥೆಯು ಸಾರ್ವಜನಿಕ ಷೇರುಗಳನ್ನು ನಿರ್ವಹಿಸುವ ಕನಿಷ್ಠ ನಿಯಮಗಳನ್ನು ಉಲ್ಲಂಘಿಸಿದೆಯೇ, ಸಂಬಂಧಿತ ಪಾರ್ಟಿಗಳೊಂದಿಗೆ ವಹಿವಾಟುಗಳನ್ನು ಬಹಿರಂಗಪಡಿಸಲು ವಿಫಲವಾಗಿದೆಯೇ ಮತ್ತು ಷೇರುಗಳ ಬೆಲೆಗಳಲ್ಲಿ ಯಾವುದೇ ತಿರುಚುವಿಕೆ ನಡೆದಿದೆಯೇ ಎಂದು ಪರಿಶೀಲಿಸಲು ಸೆಬಿಗೆ ನ್ಯಾಯಾಲಯ ಮಾರ್ಚ್ 2ರಂದು ಸೂಚಿಸಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಸ್ಥಿತಿಗತಿ ವರದಿ ಸಲ್ಲಿಸುವಂತೆ ನಿರ್ದೇಶಿಸಿತ್ತು.

ಅಮೆರಿಕ ಮೂಲದ ಹಿಂಡನ್‌ಬರ್ಗ್ ರಿಸರ್ಚ್ ಸಂಸ್ಥೆಯು ಜನವರಿ 24ರಂದು ಪ್ರಕಟಿಸಿದ ವರದಿಯು ಅದಾನಿ ಗ್ರೂಪ್‌ನ ಹಗರಣಗಳತ್ತ ಬೊಟ್ಟು ಮಾಡಿತ್ತು. ಸ್ಟಾಕ್ ಮ್ಯಾನಿಪ್ಯುಲೇಷನ್ ಮಾಡಲಾಗಿದೆ, ಕೃತಕವಾಗಿ ಷೇರುಗಳ ಬೇಲೆ ಏರಿಕೆ ಮಾಡಲಾಗಿದೆ, ಕಡಲಾಚೆಯ ತೆರಿಗೆ ಸ್ವರ್ಗಗಳನ್ನು ಅಸಮರ್ಪಕವಾಗಿ ಬಳಸಾಗಿದೆ ಎಂದು ವರದಿ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಹೂಡಿಕೆದಾರರ ಸಂರಕ್ಷಣಾ ಕಾರ್ಯವಿಧಾನಗಳನ್ನು ಪರಿಶೀಲಿಸಲು ನ್ಯಾಯಾಲಯವು ತಜ್ಞರ ಸಮಿತಿಯನ್ನು ರಚಿಸಿತ್ತು.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಸಲ್ಲಿಸಿರುವ ಮನವಿಯಲ್ಲಿ, ಏಪ್ರಿಲ್‌ನಲ್ಲಿ ತಜ್ಞರ ಸಮಿತಿಯೊಂದಿಗೆ ಎರಡು ಸಭೆಗಳಲ್ಲಿ ಭಾಗವಹಿಸಿರುವುದಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ತನಿಖೆಯ ಸ್ಥಿತಿ ಮತ್ತು ಮಧ್ಯಂತರ ಸಂಶೋಧನೆಗಳ ಬಗ್ಗೆ ಸಮಿತಿಗೆ ತಿಳಿಸಲಾಗಿದೆ ಎಂದು ಸೆಬಿ ಹೇಳಿಕೊಂಡಿದೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯಲ್ಲಿ ಉಲ್ಲೇಖಿಸಲಾದ 12 ಸಂಶಯಾಸ್ಪದ ವಹಿವಾಟುಗಳಿಗೆ ಸಂಬಂಧಿಸಿದಂತೆ ತನಿಖೆ ಮಾಡಲು ಕನಿಷ್ಠ 15 ತಿಂಗಳ ಕಾಲಾವಕಾಶ ಬೇಕಿದೆ ಎಂದು ಮಾರುಕಟ್ಟೆ ನಿಯಂತ್ರಕ ಸೆಬಿ ಅಭಿಪ್ರಾಯಪಟ್ಟಿದೆ.

“ಏಕೆಂದರೆ ವಹಿವಾಟುಗಳು ಸಂಕೀರ್ಣವಾಗಿವೆ. ಹಲವಾರು ದೇಶೀಯ ಮತ್ತು ಅಂತರರಾಷ್ಟ್ರೀಯ ಬ್ಯಾಂಕ್‌ಗಳಿಂದ ಬ್ಯಾಂಕ್ ಸ್ಟೇಟ್‌ಮೆಂಟ್‌ಗಳನ್ನು ಪಡೆಯಬೇಕಾಗುತ್ತದೆ” ಎಂದು ಸೆಬಿ ವಿವರಿಸಿದೆ.

“ವಿದೇಶಿ ಬ್ಯಾಂಕ್‌ಗಳಿಂದ ಬ್ಯಾಂಕ್ ಸ್ಟೇಟ್‌ಮೆಂಟ್‌ಗಳನ್ನು ಪಡೆಯುವ ಈ ಪ್ರಕ್ರಿಯೆಯು ವಿದೇಶಿ ನಿಯಂತ್ರಕರಿಂದ ಸಹಾಯವನ್ನು ಬೇಡುತ್ತದೆ. ಇದಕ್ಕೆ ಸಮಯ ಬೇಕಾಗುತ್ತದೆ. ಅಲ್ಲದೆ ಇದು ಸವಾಲಿನ ಕೆಲಸವಾಗಿದೆ” ಎಂದು ತಿಳಿಸಿದೆ.

ತನ್ನ ತನಿಖೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಲು ‘ಸಮಂಜಸವಾದ ಪ್ರಯತ್ನಗಳನ್ನು’ ಮಾಡುವುದಾಗಿ ಸೆಬಿ ಹೇಳಿದೆ.

ಇದನ್ನೂ ಓದಿರಿ: ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...