Homeಮುಖಪುಟಅದಾನಿ ಹಗರಣ: ತನಿಖೆ ಪೂರ್ವಗೊಳಿಸಲು ಹೆಚ್ಚುವರಿ 6 ತಿಂಗಳ ಅವಕಾಶ ಕೋರಿ ಸುಪ್ರೀಂಕೋರ್ಟ್‌‌ಗೆ ಸೆಬಿ ಮನವಿ

ಅದಾನಿ ಹಗರಣ: ತನಿಖೆ ಪೂರ್ವಗೊಳಿಸಲು ಹೆಚ್ಚುವರಿ 6 ತಿಂಗಳ ಅವಕಾಶ ಕೋರಿ ಸುಪ್ರೀಂಕೋರ್ಟ್‌‌ಗೆ ಸೆಬಿ ಮನವಿ

- Advertisement -
- Advertisement -

ಅದಾನಿ ಗ್ರೂಪ್ ವಿರುದ್ಧ ಬಂದಿರುವ ಸ್ಟಾಕ್ ಮ್ಯಾನಿಪುಲೇಷನ್ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಲು ಇನ್ನೂ ಆರು ತಿಂಗಳ ಕಾಲಾವಕಾಶ ನೀಡಬೇಕೆಂದು ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಗೌತಮ್ ಅದಾನಿ ನೇತೃತ್ವದ ಈ ಸಂಸ್ಥೆಯು ಸಾರ್ವಜನಿಕ ಷೇರುಗಳನ್ನು ನಿರ್ವಹಿಸುವ ಕನಿಷ್ಠ ನಿಯಮಗಳನ್ನು ಉಲ್ಲಂಘಿಸಿದೆಯೇ, ಸಂಬಂಧಿತ ಪಾರ್ಟಿಗಳೊಂದಿಗೆ ವಹಿವಾಟುಗಳನ್ನು ಬಹಿರಂಗಪಡಿಸಲು ವಿಫಲವಾಗಿದೆಯೇ ಮತ್ತು ಷೇರುಗಳ ಬೆಲೆಗಳಲ್ಲಿ ಯಾವುದೇ ತಿರುಚುವಿಕೆ ನಡೆದಿದೆಯೇ ಎಂದು ಪರಿಶೀಲಿಸಲು ಸೆಬಿಗೆ ನ್ಯಾಯಾಲಯ ಮಾರ್ಚ್ 2ರಂದು ಸೂಚಿಸಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಸ್ಥಿತಿಗತಿ ವರದಿ ಸಲ್ಲಿಸುವಂತೆ ನಿರ್ದೇಶಿಸಿತ್ತು.

ಅಮೆರಿಕ ಮೂಲದ ಹಿಂಡನ್‌ಬರ್ಗ್ ರಿಸರ್ಚ್ ಸಂಸ್ಥೆಯು ಜನವರಿ 24ರಂದು ಪ್ರಕಟಿಸಿದ ವರದಿಯು ಅದಾನಿ ಗ್ರೂಪ್‌ನ ಹಗರಣಗಳತ್ತ ಬೊಟ್ಟು ಮಾಡಿತ್ತು. ಸ್ಟಾಕ್ ಮ್ಯಾನಿಪ್ಯುಲೇಷನ್ ಮಾಡಲಾಗಿದೆ, ಕೃತಕವಾಗಿ ಷೇರುಗಳ ಬೇಲೆ ಏರಿಕೆ ಮಾಡಲಾಗಿದೆ, ಕಡಲಾಚೆಯ ತೆರಿಗೆ ಸ್ವರ್ಗಗಳನ್ನು ಅಸಮರ್ಪಕವಾಗಿ ಬಳಸಾಗಿದೆ ಎಂದು ವರದಿ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಹೂಡಿಕೆದಾರರ ಸಂರಕ್ಷಣಾ ಕಾರ್ಯವಿಧಾನಗಳನ್ನು ಪರಿಶೀಲಿಸಲು ನ್ಯಾಯಾಲಯವು ತಜ್ಞರ ಸಮಿತಿಯನ್ನು ರಚಿಸಿತ್ತು.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಸಲ್ಲಿಸಿರುವ ಮನವಿಯಲ್ಲಿ, ಏಪ್ರಿಲ್‌ನಲ್ಲಿ ತಜ್ಞರ ಸಮಿತಿಯೊಂದಿಗೆ ಎರಡು ಸಭೆಗಳಲ್ಲಿ ಭಾಗವಹಿಸಿರುವುದಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ತನಿಖೆಯ ಸ್ಥಿತಿ ಮತ್ತು ಮಧ್ಯಂತರ ಸಂಶೋಧನೆಗಳ ಬಗ್ಗೆ ಸಮಿತಿಗೆ ತಿಳಿಸಲಾಗಿದೆ ಎಂದು ಸೆಬಿ ಹೇಳಿಕೊಂಡಿದೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯಲ್ಲಿ ಉಲ್ಲೇಖಿಸಲಾದ 12 ಸಂಶಯಾಸ್ಪದ ವಹಿವಾಟುಗಳಿಗೆ ಸಂಬಂಧಿಸಿದಂತೆ ತನಿಖೆ ಮಾಡಲು ಕನಿಷ್ಠ 15 ತಿಂಗಳ ಕಾಲಾವಕಾಶ ಬೇಕಿದೆ ಎಂದು ಮಾರುಕಟ್ಟೆ ನಿಯಂತ್ರಕ ಸೆಬಿ ಅಭಿಪ್ರಾಯಪಟ್ಟಿದೆ.

“ಏಕೆಂದರೆ ವಹಿವಾಟುಗಳು ಸಂಕೀರ್ಣವಾಗಿವೆ. ಹಲವಾರು ದೇಶೀಯ ಮತ್ತು ಅಂತರರಾಷ್ಟ್ರೀಯ ಬ್ಯಾಂಕ್‌ಗಳಿಂದ ಬ್ಯಾಂಕ್ ಸ್ಟೇಟ್‌ಮೆಂಟ್‌ಗಳನ್ನು ಪಡೆಯಬೇಕಾಗುತ್ತದೆ” ಎಂದು ಸೆಬಿ ವಿವರಿಸಿದೆ.

“ವಿದೇಶಿ ಬ್ಯಾಂಕ್‌ಗಳಿಂದ ಬ್ಯಾಂಕ್ ಸ್ಟೇಟ್‌ಮೆಂಟ್‌ಗಳನ್ನು ಪಡೆಯುವ ಈ ಪ್ರಕ್ರಿಯೆಯು ವಿದೇಶಿ ನಿಯಂತ್ರಕರಿಂದ ಸಹಾಯವನ್ನು ಬೇಡುತ್ತದೆ. ಇದಕ್ಕೆ ಸಮಯ ಬೇಕಾಗುತ್ತದೆ. ಅಲ್ಲದೆ ಇದು ಸವಾಲಿನ ಕೆಲಸವಾಗಿದೆ” ಎಂದು ತಿಳಿಸಿದೆ.

ತನ್ನ ತನಿಖೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಲು ‘ಸಮಂಜಸವಾದ ಪ್ರಯತ್ನಗಳನ್ನು’ ಮಾಡುವುದಾಗಿ ಸೆಬಿ ಹೇಳಿದೆ.

ಇದನ್ನೂ ಓದಿರಿ: ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...