Homeಮುಖಪುಟಅದಾನಿ ಹಗರಣ: ಹೂಡಿಕೆದಾರರನ್ನು ರಕ್ಷಿಸಲು ತಜ್ಞರ ಸಮಿತಿ ರಚನೆಗೆ ಸುಪ್ರೀಂ ಸೂಚನೆ

ಅದಾನಿ ಹಗರಣ: ಹೂಡಿಕೆದಾರರನ್ನು ರಕ್ಷಿಸಲು ತಜ್ಞರ ಸಮಿತಿ ರಚನೆಗೆ ಸುಪ್ರೀಂ ಸೂಚನೆ

- Advertisement -
- Advertisement -

ಅದಾನಿ ಗ್ರೂಪ್ ವಿರುದ್ದ ತನಿಖೆ ನಡೆಸುವಂತೆ ಪ್ರತಿಪಕ್ಷಗಳು ಸರ್ಕಾರವನ್ನು ಒತ್ತಾಯಿಸುತ್ತಿರುವ ಬೆನ್ನಲ್ಲೇ  ಅದಾನಿ ಗ್ರೂಪ್ ವಿರುದ್ಧದ ವಂಚನೆ ಆರೋಪದ ಮೇಲೆ ಪರೀಶಿಲನೆ ನಡೆಸಲು ನ್ಯಾಯಾಧೀಶರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.

ಈ ವಿವಾದದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಎಂಬ ಅರ್ಜಿಯ ವಿಚಾರಣೆ ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ”ನಾವು ಮಧ್ಯ ಪ್ರವೇಶ ಮಾಡುವುದರಿಂದ ಇದು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು ಸಾಧ್ಯವೇ? ನಾವು ಅದರ ನೀತಿ ನಿಯಮಗಳ ವಿಷಯಗಳಿಗೆ ಪ್ರವೇಶಿಸಲು ಆಗುವುದಿಲ್ಲ ಅದನ್ನು ಸರ್ಕಾರಕ್ಕೆ ನೋಡಿಕೊಳ್ಳಬೇಕು” ಎಂದು ಹೇಳಿದರು.

ಇದನ್ನೂ ಓದಿ: ಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

“ಭಾರತ ಸರ್ಕಾರವು ಈ ವಿವಾದದ ಬಗ್ಗೆ ಆಸಕ್ತಿ ತೋರಿ ಅಗತ್ಯವಿದ್ದರೆ ತನಿಖೆಗೆ ಒಳಪಡಿಸಬೇಕು. ಸಧ್ಯದ ಈ ಪರಿಸ್ಥಿತಿಯನ್ನು ಎದುರಿಸಲು ನಾವು ತಜ್ಞರ ಸಮಿತಿ ರಚಿಸಲು ಸೂಚಿಸಿದ್ದೇವೆ” ಎಂದು ಡಿವೈ ಚಂದ್ರಚೂಡ್ ಹೇಳಿದರು. ಈ ಸಮಿತಿಯಲ್ಲಿ ನ್ಯಾಯಾಧೀಶರು ಮತ್ತು ಡೊಮೇನ್ ಎಕ್ಸ್‌ಪರ್ಟ್ಸ್ ಗಳನ್ನು ಸೇರಿಸಿಕೊಳ್ಳಬೇಕು ಎಂದರು.

“ಈ ಬಗ್ಗೆ ನಿಯಂತ್ರಕ ಪ್ರಕ್ರಿಯೆಯ ಬಗ್ಗೆ ಕಾಳಜಿಯ ವಹಿಸಲು ನಾವು ಸಾಲಿಸಿಟರ್ ಜನರಲ್ ಅವರಿಗೆ ಸೂಚಿಸಿದ್ದೇವೆ ಮತ್ತು ಕಳೆದ ಎರಡು ವಾರಗಳಲ್ಲಿ ನಡೆದ ಘಟನೆಯಿಂದ ಭಾರತೀಯ ಹೂಡಿಕೆದಾರರನ್ನು ರಕ್ಷಿಸಲಾಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಈ ವೇಳೆ ಸಧ್ಯದ ಪರಿಸ್ಥಿತಿ ಮತ್ತು ನಿಯಂತ್ರಣದ ಕುರಿತು ಸಂಕ್ಷಿಪ್ತ ಟಿಪ್ಪಣಿಯನ್ನು ಕೇಳಿದರು.

ಈ ವೇಳೆ ಸಾಲಿಸಿಟರ್ ಜನರಲ್ ಪ್ರತಿಕ್ರಿಯಿಸಿ, ಸೆಬಿ (ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ) ನಿಗಾ ಇಡಲು ಕೆಲಸವನ್ನು ಮಾಡುತ್ತಿದೆ ಎಂದು ಹೇಳುತ್ತಾರೆ. ಆಗ ನ್ಯಾಯಮೂರ್ತಿ ಚಂದ್ರಚೂಡ್ ಅವರು, ”ನಾವು ಯಾವುದೇ ನಿಯಂತ್ರಕ ಚೌಕಟ್ಟಿನ ಮೇಲೆ ಆಕಾಂಕ್ಷೆ ಹೊಂದಿಲ್ಲ. ನಾವು ಈ ಅಂಶದ ಬಗ್ಗೆ ಸಂವಾದ ನಡೆಸುತ್ತಿದ್ದೇವೆ ಎಂದು ಹೇಳಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸೆಬಿ, ಹಣಕಾಸು ಮತ್ತು ಇತರ ಸಚಿವಾಲಯಗಳೊಂದಿಗೆ ಸಮಾಲೋಚಿಸಿದ ನಂತರ ಪ್ರಸ್ತಾವನೆಯೊಂದಿಗೆ ಸೋಮವಾರ ಹಿಂತಿರುಗುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ”ಸೆಬಿಯು ಈ ಸಮಸ್ಯೆಯನ್ನು ನಿಯಂತ್ರಣ ದೃಷ್ಟಿಕೋನದಿಂದ ನೋಡುತ್ತಿದೆ” ಎಂದು ಅವರು ಹೇಳಿದರು.

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಬಿಲಿಯನೇರ್ ಗೌತಮ್ ಅದಾನಿಯವರ ವ್ಯವಹಾರದ ಕ್ಷೇತ್ರ ದೊಡ್ಡದಿದೆ. ಈ ಅದಾನಿ ಗ್ರೂಪ್ಸ್ ಮೇಲೆ ಯುಎಸ್ ಮೂಲದ ಶಾರ್ಟ್ ಸೆಲ್ಲರ್ ಹಿಂಡೆನ್‌ಬರ್ಗ್ ಅವರ ಜನವರಿ 24 ರ ವರದಿ ಬಿತ್ತರಿಸಿದ ಮೇಲೆ ಅದರ ಏಳು ಕಂಪನಿಗಳ ಷೇರುಗಳು $100 ಶತಕೋಟಿಗಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಕಳೆದುಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...