Homeಮುಖಪುಟಅದಾನಿ ಹಗರಣ: ಹೂಡಿಕೆದಾರರನ್ನು ರಕ್ಷಿಸಲು ತಜ್ಞರ ಸಮಿತಿ ರಚನೆಗೆ ಸುಪ್ರೀಂ ಸೂಚನೆ

ಅದಾನಿ ಹಗರಣ: ಹೂಡಿಕೆದಾರರನ್ನು ರಕ್ಷಿಸಲು ತಜ್ಞರ ಸಮಿತಿ ರಚನೆಗೆ ಸುಪ್ರೀಂ ಸೂಚನೆ

- Advertisement -
- Advertisement -

ಅದಾನಿ ಗ್ರೂಪ್ ವಿರುದ್ದ ತನಿಖೆ ನಡೆಸುವಂತೆ ಪ್ರತಿಪಕ್ಷಗಳು ಸರ್ಕಾರವನ್ನು ಒತ್ತಾಯಿಸುತ್ತಿರುವ ಬೆನ್ನಲ್ಲೇ  ಅದಾನಿ ಗ್ರೂಪ್ ವಿರುದ್ಧದ ವಂಚನೆ ಆರೋಪದ ಮೇಲೆ ಪರೀಶಿಲನೆ ನಡೆಸಲು ನ್ಯಾಯಾಧೀಶರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.

ಈ ವಿವಾದದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಎಂಬ ಅರ್ಜಿಯ ವಿಚಾರಣೆ ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ”ನಾವು ಮಧ್ಯ ಪ್ರವೇಶ ಮಾಡುವುದರಿಂದ ಇದು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು ಸಾಧ್ಯವೇ? ನಾವು ಅದರ ನೀತಿ ನಿಯಮಗಳ ವಿಷಯಗಳಿಗೆ ಪ್ರವೇಶಿಸಲು ಆಗುವುದಿಲ್ಲ ಅದನ್ನು ಸರ್ಕಾರಕ್ಕೆ ನೋಡಿಕೊಳ್ಳಬೇಕು” ಎಂದು ಹೇಳಿದರು.

ಇದನ್ನೂ ಓದಿ: ಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

“ಭಾರತ ಸರ್ಕಾರವು ಈ ವಿವಾದದ ಬಗ್ಗೆ ಆಸಕ್ತಿ ತೋರಿ ಅಗತ್ಯವಿದ್ದರೆ ತನಿಖೆಗೆ ಒಳಪಡಿಸಬೇಕು. ಸಧ್ಯದ ಈ ಪರಿಸ್ಥಿತಿಯನ್ನು ಎದುರಿಸಲು ನಾವು ತಜ್ಞರ ಸಮಿತಿ ರಚಿಸಲು ಸೂಚಿಸಿದ್ದೇವೆ” ಎಂದು ಡಿವೈ ಚಂದ್ರಚೂಡ್ ಹೇಳಿದರು. ಈ ಸಮಿತಿಯಲ್ಲಿ ನ್ಯಾಯಾಧೀಶರು ಮತ್ತು ಡೊಮೇನ್ ಎಕ್ಸ್‌ಪರ್ಟ್ಸ್ ಗಳನ್ನು ಸೇರಿಸಿಕೊಳ್ಳಬೇಕು ಎಂದರು.

“ಈ ಬಗ್ಗೆ ನಿಯಂತ್ರಕ ಪ್ರಕ್ರಿಯೆಯ ಬಗ್ಗೆ ಕಾಳಜಿಯ ವಹಿಸಲು ನಾವು ಸಾಲಿಸಿಟರ್ ಜನರಲ್ ಅವರಿಗೆ ಸೂಚಿಸಿದ್ದೇವೆ ಮತ್ತು ಕಳೆದ ಎರಡು ವಾರಗಳಲ್ಲಿ ನಡೆದ ಘಟನೆಯಿಂದ ಭಾರತೀಯ ಹೂಡಿಕೆದಾರರನ್ನು ರಕ್ಷಿಸಲಾಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಈ ವೇಳೆ ಸಧ್ಯದ ಪರಿಸ್ಥಿತಿ ಮತ್ತು ನಿಯಂತ್ರಣದ ಕುರಿತು ಸಂಕ್ಷಿಪ್ತ ಟಿಪ್ಪಣಿಯನ್ನು ಕೇಳಿದರು.

ಈ ವೇಳೆ ಸಾಲಿಸಿಟರ್ ಜನರಲ್ ಪ್ರತಿಕ್ರಿಯಿಸಿ, ಸೆಬಿ (ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ) ನಿಗಾ ಇಡಲು ಕೆಲಸವನ್ನು ಮಾಡುತ್ತಿದೆ ಎಂದು ಹೇಳುತ್ತಾರೆ. ಆಗ ನ್ಯಾಯಮೂರ್ತಿ ಚಂದ್ರಚೂಡ್ ಅವರು, ”ನಾವು ಯಾವುದೇ ನಿಯಂತ್ರಕ ಚೌಕಟ್ಟಿನ ಮೇಲೆ ಆಕಾಂಕ್ಷೆ ಹೊಂದಿಲ್ಲ. ನಾವು ಈ ಅಂಶದ ಬಗ್ಗೆ ಸಂವಾದ ನಡೆಸುತ್ತಿದ್ದೇವೆ ಎಂದು ಹೇಳಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸೆಬಿ, ಹಣಕಾಸು ಮತ್ತು ಇತರ ಸಚಿವಾಲಯಗಳೊಂದಿಗೆ ಸಮಾಲೋಚಿಸಿದ ನಂತರ ಪ್ರಸ್ತಾವನೆಯೊಂದಿಗೆ ಸೋಮವಾರ ಹಿಂತಿರುಗುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ”ಸೆಬಿಯು ಈ ಸಮಸ್ಯೆಯನ್ನು ನಿಯಂತ್ರಣ ದೃಷ್ಟಿಕೋನದಿಂದ ನೋಡುತ್ತಿದೆ” ಎಂದು ಅವರು ಹೇಳಿದರು.

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಬಿಲಿಯನೇರ್ ಗೌತಮ್ ಅದಾನಿಯವರ ವ್ಯವಹಾರದ ಕ್ಷೇತ್ರ ದೊಡ್ಡದಿದೆ. ಈ ಅದಾನಿ ಗ್ರೂಪ್ಸ್ ಮೇಲೆ ಯುಎಸ್ ಮೂಲದ ಶಾರ್ಟ್ ಸೆಲ್ಲರ್ ಹಿಂಡೆನ್‌ಬರ್ಗ್ ಅವರ ಜನವರಿ 24 ರ ವರದಿ ಬಿತ್ತರಿಸಿದ ಮೇಲೆ ಅದರ ಏಳು ಕಂಪನಿಗಳ ಷೇರುಗಳು $100 ಶತಕೋಟಿಗಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಕಳೆದುಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...