Homeಮುಖಪುಟಅದಾನಿ ಹಗರಣ: ಹೂಡಿಕೆದಾರರನ್ನು ರಕ್ಷಿಸಲು ತಜ್ಞರ ಸಮಿತಿ ರಚನೆಗೆ ಸುಪ್ರೀಂ ಸೂಚನೆ

ಅದಾನಿ ಹಗರಣ: ಹೂಡಿಕೆದಾರರನ್ನು ರಕ್ಷಿಸಲು ತಜ್ಞರ ಸಮಿತಿ ರಚನೆಗೆ ಸುಪ್ರೀಂ ಸೂಚನೆ

- Advertisement -
- Advertisement -

ಅದಾನಿ ಗ್ರೂಪ್ ವಿರುದ್ದ ತನಿಖೆ ನಡೆಸುವಂತೆ ಪ್ರತಿಪಕ್ಷಗಳು ಸರ್ಕಾರವನ್ನು ಒತ್ತಾಯಿಸುತ್ತಿರುವ ಬೆನ್ನಲ್ಲೇ  ಅದಾನಿ ಗ್ರೂಪ್ ವಿರುದ್ಧದ ವಂಚನೆ ಆರೋಪದ ಮೇಲೆ ಪರೀಶಿಲನೆ ನಡೆಸಲು ನ್ಯಾಯಾಧೀಶರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.

ಈ ವಿವಾದದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಎಂಬ ಅರ್ಜಿಯ ವಿಚಾರಣೆ ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ”ನಾವು ಮಧ್ಯ ಪ್ರವೇಶ ಮಾಡುವುದರಿಂದ ಇದು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು ಸಾಧ್ಯವೇ? ನಾವು ಅದರ ನೀತಿ ನಿಯಮಗಳ ವಿಷಯಗಳಿಗೆ ಪ್ರವೇಶಿಸಲು ಆಗುವುದಿಲ್ಲ ಅದನ್ನು ಸರ್ಕಾರಕ್ಕೆ ನೋಡಿಕೊಳ್ಳಬೇಕು” ಎಂದು ಹೇಳಿದರು.

ಇದನ್ನೂ ಓದಿ: ಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

“ಭಾರತ ಸರ್ಕಾರವು ಈ ವಿವಾದದ ಬಗ್ಗೆ ಆಸಕ್ತಿ ತೋರಿ ಅಗತ್ಯವಿದ್ದರೆ ತನಿಖೆಗೆ ಒಳಪಡಿಸಬೇಕು. ಸಧ್ಯದ ಈ ಪರಿಸ್ಥಿತಿಯನ್ನು ಎದುರಿಸಲು ನಾವು ತಜ್ಞರ ಸಮಿತಿ ರಚಿಸಲು ಸೂಚಿಸಿದ್ದೇವೆ” ಎಂದು ಡಿವೈ ಚಂದ್ರಚೂಡ್ ಹೇಳಿದರು. ಈ ಸಮಿತಿಯಲ್ಲಿ ನ್ಯಾಯಾಧೀಶರು ಮತ್ತು ಡೊಮೇನ್ ಎಕ್ಸ್‌ಪರ್ಟ್ಸ್ ಗಳನ್ನು ಸೇರಿಸಿಕೊಳ್ಳಬೇಕು ಎಂದರು.

“ಈ ಬಗ್ಗೆ ನಿಯಂತ್ರಕ ಪ್ರಕ್ರಿಯೆಯ ಬಗ್ಗೆ ಕಾಳಜಿಯ ವಹಿಸಲು ನಾವು ಸಾಲಿಸಿಟರ್ ಜನರಲ್ ಅವರಿಗೆ ಸೂಚಿಸಿದ್ದೇವೆ ಮತ್ತು ಕಳೆದ ಎರಡು ವಾರಗಳಲ್ಲಿ ನಡೆದ ಘಟನೆಯಿಂದ ಭಾರತೀಯ ಹೂಡಿಕೆದಾರರನ್ನು ರಕ್ಷಿಸಲಾಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಈ ವೇಳೆ ಸಧ್ಯದ ಪರಿಸ್ಥಿತಿ ಮತ್ತು ನಿಯಂತ್ರಣದ ಕುರಿತು ಸಂಕ್ಷಿಪ್ತ ಟಿಪ್ಪಣಿಯನ್ನು ಕೇಳಿದರು.

ಈ ವೇಳೆ ಸಾಲಿಸಿಟರ್ ಜನರಲ್ ಪ್ರತಿಕ್ರಿಯಿಸಿ, ಸೆಬಿ (ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ) ನಿಗಾ ಇಡಲು ಕೆಲಸವನ್ನು ಮಾಡುತ್ತಿದೆ ಎಂದು ಹೇಳುತ್ತಾರೆ. ಆಗ ನ್ಯಾಯಮೂರ್ತಿ ಚಂದ್ರಚೂಡ್ ಅವರು, ”ನಾವು ಯಾವುದೇ ನಿಯಂತ್ರಕ ಚೌಕಟ್ಟಿನ ಮೇಲೆ ಆಕಾಂಕ್ಷೆ ಹೊಂದಿಲ್ಲ. ನಾವು ಈ ಅಂಶದ ಬಗ್ಗೆ ಸಂವಾದ ನಡೆಸುತ್ತಿದ್ದೇವೆ ಎಂದು ಹೇಳಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸೆಬಿ, ಹಣಕಾಸು ಮತ್ತು ಇತರ ಸಚಿವಾಲಯಗಳೊಂದಿಗೆ ಸಮಾಲೋಚಿಸಿದ ನಂತರ ಪ್ರಸ್ತಾವನೆಯೊಂದಿಗೆ ಸೋಮವಾರ ಹಿಂತಿರುಗುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ”ಸೆಬಿಯು ಈ ಸಮಸ್ಯೆಯನ್ನು ನಿಯಂತ್ರಣ ದೃಷ್ಟಿಕೋನದಿಂದ ನೋಡುತ್ತಿದೆ” ಎಂದು ಅವರು ಹೇಳಿದರು.

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಬಿಲಿಯನೇರ್ ಗೌತಮ್ ಅದಾನಿಯವರ ವ್ಯವಹಾರದ ಕ್ಷೇತ್ರ ದೊಡ್ಡದಿದೆ. ಈ ಅದಾನಿ ಗ್ರೂಪ್ಸ್ ಮೇಲೆ ಯುಎಸ್ ಮೂಲದ ಶಾರ್ಟ್ ಸೆಲ್ಲರ್ ಹಿಂಡೆನ್‌ಬರ್ಗ್ ಅವರ ಜನವರಿ 24 ರ ವರದಿ ಬಿತ್ತರಿಸಿದ ಮೇಲೆ ಅದರ ಏಳು ಕಂಪನಿಗಳ ಷೇರುಗಳು $100 ಶತಕೋಟಿಗಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಕಳೆದುಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...