Homeಮುಖಪುಟಅದಾನಿ & ಸೆಬಿ ನಡುವೆ 'ಮ್ಯಾಚ್ ಫಿಕ್ಸ್ಂಗ್' - ರಾಹುಲ್ ಗಾಂಧಿ ಆರೋಪ

ಅದಾನಿ & ಸೆಬಿ ನಡುವೆ ‘ಮ್ಯಾಚ್ ಫಿಕ್ಸ್ಂಗ್’ – ರಾಹುಲ್ ಗಾಂಧಿ ಆರೋಪ

- Advertisement -
- Advertisement -

ಕ್ರೋನಿ ಬಂಡವಾಳಶಾಹಿಗಳನ್ನು ರಕ್ಷಿಸಲು “ಮ್ಯಾಚ್ ಪಿಕ್ಸಿಂಗ್” ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ. ಜೊತೆಗೆ ಈ ಆಟದಲ್ಲಿ ಸಾಮಾನ್ಯ ಹೂಡಿಕೆದಾರರು ದೊಡ್ಡ ನಷ್ಟವನ್ನು ಅನುಭವಿಸುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ. ಅದಾನಿ & ಸೆಬಿ

“ಬುಚ್ ಸ್ಟಾಪ್ಸ್ ಹಿಯರ್” ಎಂಬ ಶೀರ್ಷಿಕೆಯ ವೀಡಿಯೊದಲ್ಲಿ ಮಾತನಾಡಿರುವ ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ನಾಯಕ ಪವನ್ ಖೇರಾ ಮತ್ತು ಹಿರಿಯ ಪತ್ರಕರ್ತೆ ಸುಚೇತಾ ದಲಾಲ್ ಅವರೊಂದಿಗೆ ಹೂಡಿಕೆದಾರರ ಉಳಿತಾಯವನ್ನು ಸಂರಕ್ಷಿಸುವ ವಿಷಯದ ಬಗ್ಗೆ ಚರ್ಚಿಸುತ್ತಿದ್ದಾಗ, ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಮತ್ತು ಉದ್ಯಮಿ ಗೌತಮ್ ಅದಾನಿಯನ್ನು ಗುರಿಯಾಗಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

8 ನಿಮಿಷಗಳ ವೀಡಿಯೊ ಸಂಭಾಷಣೆಯಲ್ಲಿ, SEBI ಅಧ್ಯಕ್ಷೆ ಬುಚ್ ಅವರು ಸೆಬಿಯ ಅಡಿಯಲ್ಲಿ ಹೂಡಿಕೆದಾರರ ಸಂಪತ್ತನ್ನು ರಕ್ಷಿಸಲು ವಿಫಲರಾಗಿದ್ದಾರೆ ಎಂದು ರಾಹುಲ್ ಗಾಂಧಿಯವರು ಆರೋಪಿಸಿದ್ದಾರೆ. ಹೂಡಿಕೆದಾರರ ರಕ್ಷಿಸುವ ಬದಲಿಗೆ, ಅವರು ಅದಾನಿ ಗ್ರೂಪ್‌ನಂತಹ ಕಾರ್ಪೊರೇಟ್ ದೈತ್ಯರನ್ನು “ರಕ್ಷಿಸಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ. ಅದಾನಿ & ಸೆಬಿ

“ನಿಮ್ಮ ಹೂಡಿಕೆಗಳು ಸುರಕ್ಷಿತವಾಗಿದೆಯೇ? ಹೊಂದಾಣಿಕೆ ಗಟ್ಟಿಯಾದಾಗ, ಪ್ರತಿಯೊಬ್ಬರೂ ಹಣವನ್ನು ಕಳೆದುಕೊಳ್ಳುತ್ತಾರೆ, ಅದರಲ್ಲೂ ಸಾಮಾನ್ಯ ಹೂಡಿಕೆದಾರರು ಹೆಚ್ಚು ಹಣ ಕಳೆದುಕೊಳ್ಳುತ್ತಾರೆ” ಎಂದು ಅವರು ವೀಡಿಯೊವನ್ನು ಹಂಚಿಕೊಳ್ಳುವಾಗ X ನಲ್ಲಿ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ. ವಿಡಿಯೊವನ್ನು ಪವನ್ ಖೇರಾ ಅವರು ಕೂಡಾ ಹಂಚಿಕೊಂಡಿದ್ದಾರೆ.

ನಾವು ಈ ಕ್ರೋನಿ ಕ್ಯಾಪಿಟಲಿಸಂನ ನೈಜ ಮುಖವನ್ನು ಬಯಲಿಗೆ ಎಳೆಯುತ್ತೇವೆ. ಜೊತೆಗೆ ಕೈತಪ್ಪಿಹೋದ ಉಳಿತಾಯ ಹಾಗೂ ಲಕ್ಷಾಂತರ ಶ್ರಮಿಕ ಭಾರತೀಯರ ನಂಬಿಕೆ ಮತ್ತು ಅವರು ಕಳೆದುಕೊಂಡ ಅವಕಾಶವನ್ನೂ ಕೂಡಾ ಬಹಿರಂಗಪಡಿಸುತ್ತೇವೆ ಎಂದು ಹೇಳಿದ್ದಾರೆ. “ನಾವು ಈಗ ಇದನ್ನು ಸರಿಪಡಿಸದಿದ್ದರೆ, ನಮ್ಮ ಆರ್ಥಿಕತೆ ಮತ್ತು ಪ್ರಜಾಪ್ರಭುತ್ವದ ಹಾನಿಯನ್ನು ಮುಂದೆಂದೂ ಸರಿಪಡಿಸಲಾಗದು” ಎಂದು ಪವನ್ ಖೇರಾ ಹೇಳಿದ್ದಾರೆ.

ಸೆಬಿ ಮುಖ್ಯಸ್ಥೆ ಬುಚ್ ಅವರು ಅದಾನಿಯ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿಕೊಂಡಿದೆ. ಆದರೆ ಬುಚ್ ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. ಈ ಆರೋಪದ ಹಿನ್ನೆಲೆಯಲ್ಲಿ ಬುಚ್ ಅವರು ರಾಜೀನಾಮೆಗೆ ಕಾಂಗ್ರೆಸ್ ಆಗ್ರಹಿಸುತ್ತಿದೆ.

ಅಮೆರಿಕದ ಸಂಶೋಧನಾ ಸಂಸ್ಥೆಯಾದ ಹಿಂಡೆನ್‌ಬರ್ಗ್, ಅದಾನಿ ಕಂಪೆನಿಯು ಸ್ಟಾಕ್ ಬೆಲೆಯ ತಿದ್ದುಪಡಿ ಮಾಡುತ್ತಿದೆ ಎಂದು ಆರೋಪಿಸಿತ್ತು. ಆದರೆ ಈ ಆರೋಪದ ಬಗ್ಗೆ ಅದಾನಿ ಗ್ರೂಪ್ ಅನ್ನು SEBI ಸರಿಯಾಗಿ ತನಿಖೆ ಮಾಡಿಲ್ಲ ಎಂದು ಕಾಂಗ್ರೆಸ್ ಪಕ್ಷವು ಆರೋಪಿಸಿದೆ.

ಇದನ್ನೂ ಓದಿ: ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ | ಚುನಾವಣೆ ಆಯೋಗದ ಆದೇಶ ಎತ್ತಿಹಿಡಿದ ಬಾಂಬೆ ಹೈಕೋರ್ಟ್

ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ | ಚುನಾವಣೆ ಆಯೋಗದ ಆದೇಶ ಎತ್ತಿಹಿಡಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...