Homeಮುಖಪುಟಅದಾನಿ & ಸೆಬಿ ನಡುವೆ 'ಮ್ಯಾಚ್ ಫಿಕ್ಸ್ಂಗ್' - ರಾಹುಲ್ ಗಾಂಧಿ ಆರೋಪ

ಅದಾನಿ & ಸೆಬಿ ನಡುವೆ ‘ಮ್ಯಾಚ್ ಫಿಕ್ಸ್ಂಗ್’ – ರಾಹುಲ್ ಗಾಂಧಿ ಆರೋಪ

- Advertisement -
- Advertisement -

ಕ್ರೋನಿ ಬಂಡವಾಳಶಾಹಿಗಳನ್ನು ರಕ್ಷಿಸಲು “ಮ್ಯಾಚ್ ಪಿಕ್ಸಿಂಗ್” ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ. ಜೊತೆಗೆ ಈ ಆಟದಲ್ಲಿ ಸಾಮಾನ್ಯ ಹೂಡಿಕೆದಾರರು ದೊಡ್ಡ ನಷ್ಟವನ್ನು ಅನುಭವಿಸುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ. ಅದಾನಿ & ಸೆಬಿ

“ಬುಚ್ ಸ್ಟಾಪ್ಸ್ ಹಿಯರ್” ಎಂಬ ಶೀರ್ಷಿಕೆಯ ವೀಡಿಯೊದಲ್ಲಿ ಮಾತನಾಡಿರುವ ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ನಾಯಕ ಪವನ್ ಖೇರಾ ಮತ್ತು ಹಿರಿಯ ಪತ್ರಕರ್ತೆ ಸುಚೇತಾ ದಲಾಲ್ ಅವರೊಂದಿಗೆ ಹೂಡಿಕೆದಾರರ ಉಳಿತಾಯವನ್ನು ಸಂರಕ್ಷಿಸುವ ವಿಷಯದ ಬಗ್ಗೆ ಚರ್ಚಿಸುತ್ತಿದ್ದಾಗ, ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಮತ್ತು ಉದ್ಯಮಿ ಗೌತಮ್ ಅದಾನಿಯನ್ನು ಗುರಿಯಾಗಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

8 ನಿಮಿಷಗಳ ವೀಡಿಯೊ ಸಂಭಾಷಣೆಯಲ್ಲಿ, SEBI ಅಧ್ಯಕ್ಷೆ ಬುಚ್ ಅವರು ಸೆಬಿಯ ಅಡಿಯಲ್ಲಿ ಹೂಡಿಕೆದಾರರ ಸಂಪತ್ತನ್ನು ರಕ್ಷಿಸಲು ವಿಫಲರಾಗಿದ್ದಾರೆ ಎಂದು ರಾಹುಲ್ ಗಾಂಧಿಯವರು ಆರೋಪಿಸಿದ್ದಾರೆ. ಹೂಡಿಕೆದಾರರ ರಕ್ಷಿಸುವ ಬದಲಿಗೆ, ಅವರು ಅದಾನಿ ಗ್ರೂಪ್‌ನಂತಹ ಕಾರ್ಪೊರೇಟ್ ದೈತ್ಯರನ್ನು “ರಕ್ಷಿಸಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ. ಅದಾನಿ & ಸೆಬಿ

“ನಿಮ್ಮ ಹೂಡಿಕೆಗಳು ಸುರಕ್ಷಿತವಾಗಿದೆಯೇ? ಹೊಂದಾಣಿಕೆ ಗಟ್ಟಿಯಾದಾಗ, ಪ್ರತಿಯೊಬ್ಬರೂ ಹಣವನ್ನು ಕಳೆದುಕೊಳ್ಳುತ್ತಾರೆ, ಅದರಲ್ಲೂ ಸಾಮಾನ್ಯ ಹೂಡಿಕೆದಾರರು ಹೆಚ್ಚು ಹಣ ಕಳೆದುಕೊಳ್ಳುತ್ತಾರೆ” ಎಂದು ಅವರು ವೀಡಿಯೊವನ್ನು ಹಂಚಿಕೊಳ್ಳುವಾಗ X ನಲ್ಲಿ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ. ವಿಡಿಯೊವನ್ನು ಪವನ್ ಖೇರಾ ಅವರು ಕೂಡಾ ಹಂಚಿಕೊಂಡಿದ್ದಾರೆ.

ನಾವು ಈ ಕ್ರೋನಿ ಕ್ಯಾಪಿಟಲಿಸಂನ ನೈಜ ಮುಖವನ್ನು ಬಯಲಿಗೆ ಎಳೆಯುತ್ತೇವೆ. ಜೊತೆಗೆ ಕೈತಪ್ಪಿಹೋದ ಉಳಿತಾಯ ಹಾಗೂ ಲಕ್ಷಾಂತರ ಶ್ರಮಿಕ ಭಾರತೀಯರ ನಂಬಿಕೆ ಮತ್ತು ಅವರು ಕಳೆದುಕೊಂಡ ಅವಕಾಶವನ್ನೂ ಕೂಡಾ ಬಹಿರಂಗಪಡಿಸುತ್ತೇವೆ ಎಂದು ಹೇಳಿದ್ದಾರೆ. “ನಾವು ಈಗ ಇದನ್ನು ಸರಿಪಡಿಸದಿದ್ದರೆ, ನಮ್ಮ ಆರ್ಥಿಕತೆ ಮತ್ತು ಪ್ರಜಾಪ್ರಭುತ್ವದ ಹಾನಿಯನ್ನು ಮುಂದೆಂದೂ ಸರಿಪಡಿಸಲಾಗದು” ಎಂದು ಪವನ್ ಖೇರಾ ಹೇಳಿದ್ದಾರೆ.

ಸೆಬಿ ಮುಖ್ಯಸ್ಥೆ ಬುಚ್ ಅವರು ಅದಾನಿಯ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿಕೊಂಡಿದೆ. ಆದರೆ ಬುಚ್ ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. ಈ ಆರೋಪದ ಹಿನ್ನೆಲೆಯಲ್ಲಿ ಬುಚ್ ಅವರು ರಾಜೀನಾಮೆಗೆ ಕಾಂಗ್ರೆಸ್ ಆಗ್ರಹಿಸುತ್ತಿದೆ.

ಅಮೆರಿಕದ ಸಂಶೋಧನಾ ಸಂಸ್ಥೆಯಾದ ಹಿಂಡೆನ್‌ಬರ್ಗ್, ಅದಾನಿ ಕಂಪೆನಿಯು ಸ್ಟಾಕ್ ಬೆಲೆಯ ತಿದ್ದುಪಡಿ ಮಾಡುತ್ತಿದೆ ಎಂದು ಆರೋಪಿಸಿತ್ತು. ಆದರೆ ಈ ಆರೋಪದ ಬಗ್ಗೆ ಅದಾನಿ ಗ್ರೂಪ್ ಅನ್ನು SEBI ಸರಿಯಾಗಿ ತನಿಖೆ ಮಾಡಿಲ್ಲ ಎಂದು ಕಾಂಗ್ರೆಸ್ ಪಕ್ಷವು ಆರೋಪಿಸಿದೆ.

ಇದನ್ನೂ ಓದಿ: ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ | ಚುನಾವಣೆ ಆಯೋಗದ ಆದೇಶ ಎತ್ತಿಹಿಡಿದ ಬಾಂಬೆ ಹೈಕೋರ್ಟ್

ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ | ಚುನಾವಣೆ ಆಯೋಗದ ಆದೇಶ ಎತ್ತಿಹಿಡಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...