Homeಮುಖಪುಟಕಡಿಮೆ ಗುಣಮಟ್ಟದ ಕಲ್ಲಿದ್ದಲು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅದಾನಿಯಿಂದ ವಂಚನೆ?: ವರದಿ

ಕಡಿಮೆ ಗುಣಮಟ್ಟದ ಕಲ್ಲಿದ್ದಲು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅದಾನಿಯಿಂದ ವಂಚನೆ?: ವರದಿ

- Advertisement -
- Advertisement -

ಕಡಿಮೆ ದರ್ಜೆಯ ಕಲ್ಲಿದ್ದಲನ್ನು ಹೆಚ್ಚಿನ ಮೌಲ್ಯದ ಇಂಧನವಾಗಿ ಮಾರಾಟ ಮಾಡುವ ಮೂಲಕ ಅದಾನಿ ಕಂಪನಿ ವಂಚನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ದಾಖಲೆಗಳ ಆಧಾರದಲ್ಲಿ ಫಿನಾನ್ಶಿಯಲ್ ಟೈಮ್ಸ್ ವಿಸ್ಕೃತ ಲೇಖನವನ್ನು ಪ್ರಕಟಿಸಿದೆ.

ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಶನ್ ರಿಪೋರ್ಟಿಂಗ್ ಪ್ರಾಜೆಕ್ಟ್ (ಒಸಿಸಿಆರ್‌ಪಿ) ಸಂಗ್ರಹಿಸಿದ ಮತ್ತು ಫಿನಾನ್ಶಿಯಲ್ ಟೈಮ್ಸ್‌ ಪರಿಶೀಲಿಸಿದ ದಾಖಲೆಗಳ ಪ್ರಕಾರ, ಅದಾನಿ ಕಂಪನಿ ಅಥವಾ ಅದಾನಿ ಸಮೂಹ ಮಾಡಿರುವ ಆಪಾದಿತ ವಂಚನೆಯಿಂದ ದೇಶದ ಪರಿಸರ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿದ ಸಂಭವವಿದೆ.

ಕಡಿಮೆ ದರ್ಜೆಯ ಕಲ್ಲಿದ್ದಲನ್ನು ವಿದ್ಯುತ್‌ಗಾಗಿ ಬಳಸುವ ಮೂಲಕ ಹೆಚ್ಚು ಇಂಧನವನ್ನು ಸುಡಲಾಗಿದೆ ಅಥವಾ ಸುಡಲಾಗ್ತಿದೆ. ಈ ಮೂಲಕ ಅದಾನಿ ಕಂಪನಿ ಗಾಳಿಯ ಗುಣಮಟ್ಟವನ್ನು ಕಡೆಗಣಿಸಿ ಮೋಸದಿಂದ ಬಂಪರ್ ಲಾಭವನ್ನು ಪಡೆದಿರಬಹುದು ಎಂದು ವರದಿ ಹೇಳಿದೆ.

ದಾಖಲೆಗಳ ಪ್ರಕಾರ, ಜನವರಿ 2014ರಲ್ಲಿ ಅದಾನಿ ಕಂಪನಿ ಇಂಡೋನೇಷ್ಯಾದಿಂದ ಕಲ್ಲಿದ್ದಲು ಖರೀದಿಸಿತ್ತು. ಅದು ಗುಣಮಟ್ಟದಲ್ಲಿ ಪ್ರತಿ ಕಿಲೋಗ್ರಾಮ್‌ಗೆ 3,500 ಕ್ಯಾಲೊರಿಗಳನ್ನು ಹೊಂದಿತ್ತು. ಆದರೆ, ಆ ಕಲ್ಲಿದ್ದಲ್ಲನ್ನು ತಮಿಳುನಾಡು ಜನರೇಷನ್ ಅಂಡ್ ಡಿಸ್ಟ್ರಿಬ್ಯೂಷನ್ ಕಂಪನಿಗೆ (ತಂಗೆಡ್ಕೋ) ಅತ್ಯಮೂಲ್ಯ ದರ್ಜೆಯ 6,000 ಕ್ಯಾಲೋರಿಯ ಕಲ್ಲಿದ್ದಲು ಎಂದು ಮಾರಾಟ ಮಾಡಲಾಗಿದೆ. ಈ ಮೂಲಕ ಸಾರಿಗೆ ವೆಚ್ಚ ಹೊರತುಪಡಿಸಿ ಅದಾನಿ ಎರಡು ಪಟ್ಟು ಲಾಭ ಪಡೆದಿದೆ.

ಅದಾನಿ ಕಂಪನಿಗೆ ಸಂಬಂಧಿಸಿದ 2014ರ 22 ಕಲ್ಲಿದ್ದಲು ಸಾಗಣೆಯ ದಾಖಲೆಗಳನ್ನು ಫಿನಾನ್ಶಿಯಲ್ ಟೈಮ್ಸ್ ಹೊಂದಿಸಿ ನೋಡಿದೆ. ಈ ವೇಳೆ 1.5 ಮಿಲಿಯನ್ ಟನ್ ಸರಬರಾಜಿನಲ್ಲಿ ಗ್ರೇಡ್ ವ್ಯತ್ಯಾಸ ಕಂಡು ಬಂದಿದೆ.

ಅದಾನಿ ಕಂಪನಿ ಇಂಡೋನೇಷ್ಯಾದಿಂದ ಕಡಿಮೆ ಕ್ಯಾಲೊರಿಯ ಕಲ್ಲಿದ್ದಲು ಖರೀದಿಸಿ, ಅದನ್ನು ಒಪ್ಪಂದಂತೆ ದಕ್ಷಿಣ ಭಾರತದ ವಿದ್ಯುತ್ ಕಂಪನಿಗಳಿಗೆ ಪೂರೈಕೆ ಮಾಡುತ್ತಿದೆ. ಈ ಮೂಲಕ ಅಧಿಕ ಲಾಭ ಪಡೆಯುತ್ತಿದೆ ಎಂದು ವರದಿಯಲ್ಲಿ ಆಪಾದಿಸಲಾಗಿದೆ.

ಅದಾನಿ ಕಂಪನಿಯ ಈ ಆಪಾದಿತ ವಂಚನೆಯಿಂದ ಕಂಪನಿ ದುಪ್ಪಟ್ಟು ಲಾಭ ಪಡೆಯುವುದು ಒಂದೆಡೆಯಾದರೆ, ಇದು ಪರಿಸರದ ಮೇಲೆ ದೊಡ್ಡಮಟ್ಟದ ಪರಿಣಾಮ ಬೀರುತ್ತಿದೆ. ದಿ ಲ್ಯಾನ್ಸೆಟ್‌ 2022ರ ಅಧ್ಯಯನದ ಪ್ರಕಾರ, ಹೊರಾಂಗಣ ವಾಯುಮಾಲಿನ್ಯದಿಂದ ಭಾರತದಲ್ಲಿ ಪ್ರತಿ ವರ್ಷ 2 ಮಿಲಿಯನ್‌ಗಿಂತಲೂ ಹೆಚ್ಚು ಜನರು ಸಾಯುತ್ತಿದ್ದಾರೆ. ಈ ಪೈಕಿ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಕ್ಕಳ ಮರಣ ಪ್ರಮಾಣದಲ್ಲಿ ಗಮನಾರ್ಹ ಹೆಚ್ಚಳ ಕಂಡು ಬಂದಿದೆ.

ದಶಕದ ಹಿಂದಿನ ಮತ್ತೊಂದು ಅಧ್ಯಯನದ ಪ್ರಕಾರ, ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳು ಭಾರತದ ಮುಕ್ಕಾಲು ಭಾಗದಷ್ಟು ವಿದ್ಯುತ್ ಪೂರೈಸುತ್ತದೆ. ಇದರ ಜೊತೆಗೆ ದೇಶದಲ್ಲಿ ಮಾನವ ನಿರ್ಮಿತ ಸೂಕ್ಷ್ಮ ಕಣಗಳ ಹೊರಸೂಸುವಿಕೆಯಲ್ಲಿ ಶೇ.15ರಷ್ಟು ಪಾಲು ಹೊಂದಿದೆ. ಈ ಪೈಕಿ ಶೇ.30ರಷ್ಟು ನೈಟ್ರೋಜನ್ ಆಕ್ಸೈಡ್‌ ಮತ್ತು ಶೇ. 50ರಷ್ಟು ಸಲ್ಫರ್ ಡೈಆಕ್ಸೈಡ್ ಸೇರಿದೆ.

ಕಲ್ಲಿದಲ್ಲು ಉರಿಸುವುದರ ಮೂಲಕ ವಿದ್ಯುತ್ ಉತ್ಪಾದನೆಯ ಲಾಭ ಒಂದೆಡೆಯಾದರೆ, ಮತ್ತೊಂದೆಡೆ ಇದು ದೇಶದ ಆರೋಗ್ಯ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತಿದೆ. ಸಾರ್ವಜನಿಕ ಆರೋಗ್ಯದ ವಿಚಾರದಲ್ಲಿ ಭಾರತದ ಹಿಂದುಳಿದಿದೆ ಎಂದು ಇಂಧನ ಮತ್ತು ಶುದ್ಧ ಗಾಳಿಯ ಸಂಶೋಧನಾ ಕೇಂದ್ರದ ನವದೆಹಲಿ ಮೂಲದ ವಿಶ್ಲೇಷಕ ಸುನಿಲ್ ದಹಿಯಾ ಹೇಳಿದ್ದಾರೆ.

2021ಮತ್ತು 2023ರ ನಡುವೆ ಭಾರತಕ್ಕೆ ಆಮದು ಮಾಡಿಕೊಳ್ಳಲಾದ ಕಲ್ಲಿದ್ದಲು ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ಪ್ರಮಾಣದಲ್ಲಿ, ಮಧ್ಯವರ್ತಿಗಳಿಗೆ 5 ಬಿಲಿಯನ್ ಡಾಲರ್‌ಗೂ ಹೆಚ್ಚು ಹಣವನ್ನು ಪಾವತಿಸಿದೆ ಎಂದು ಫಿನಾನ್ಶಿಯಲ್ ಟೈಮ್ಸ್ ವರದಿ ಮಾಡಿದ ನಂತರ ವಿರೋಧ ಪಕ್ಷದ ನಾಯಕರು ಕಳೆದ ವರ್ಷ ಅದಾನಿ ವಿರುದ್ಧ ತನಿಖೆಗೆ ಕರೆ ಆಗ್ರಹಿಸಿದ್ದರು.

ಪಾಕಿಸ್ತಾನದ ಗಡಿಯ ಸಮೀಪವಿರುವ ಖಾವ್ಡಾದಲ್ಲಿ ವಿಶ್ವದ ಅತಿದೊಡ್ಡ ಗಾಳಿ ಮತ್ತು ಸೌರ ಪಾರ್ಕ್‌ ಒಂದನ್ನು ನಿರ್ಮಿಸುವ ಮೂಲಕ ಅದಾನಿಯು ತನ್ನನ್ನು ದೊಡ್ಡ ನವೀಕರಿಸಬಹುದಾದ ಇಂಧನ ಉತ್ಪದಕನಾಗಿ ಮರುಬ್ರಾಂಡ್ ಮಾಡಲು ಪ್ರಯತ್ನಿಸುತ್ತಿರುವ ನಡುವೆ ವಂಚನೆಯ ಆರೋಪ ಕೇಳಿ ಬಂದಿದೆ. ಈ ಆರೋಪವನ್ನು ನಿರಾಕರಿಸಿರುವ ಕಂಪನಿ, ತಾನು ಭಾರತದ ಅತಿದೊಡ್ಡ ಕಲ್ಲಿದ್ದಲು ಆಮದುದಾರರಲ್ಲಿ ಒಂದು ಎಂದು ಸಮರ್ಥಿಸಿಕೊಂಡಿದೆ.

ಅದಾನಿ ಕಂಪನಿ ಕಲ್ಲಿದ್ದಲು ಖರೀದಿಯಲ್ಲಿ ವಂಚನೆ ಎಸಗಿರುವ ಆರೋಪ ದೇಶದಲ್ಲಿ ರಾಜಕೀಯ ಚರ್ಚೆಯನ್ನು ಹುಟ್ಟುಹಾಕುವ ಸಾಧ್ಯತೆ ಇದೆ. ನರೇಂದ್ರ ಮೋದಿಯಯವರು ಮೂರನೇ ಬಾರಿಗೆ ಪ್ರಧಾನಿಯಾಗುವ ಉತ್ಸಾಹದಲ್ಲಿರುವ ನಡುವೆ, ಈಗಾಗಲೇ ಗೌತಮ್ ಅದಾನಿ ಸೇರಿದಂತೆ ದೇಶದ ಪ್ರಮುಖ ಕೋಟ್ಯಾಧಿಪತಿಗಳು ಅನುಭವಿಸುತ್ತಿರುವ ಅಧಿಕಾರ ಮತ್ತು ಪ್ರಭಾವದ ಕುರಿತು ಚರ್ಚೆಗಳು ಜೋರಾಗಿದೆ.

ಒಸಿಸಿಆರ್‌ಪಿಯಿಂದ ಪಡೆದ ಹೊಸ ದಾಖಲೆಯ ಪ್ರಕಾರ, ಡಿಸೆಂಬರ್ 2013ರಲ್ಲಿ ಎಂ.ವಿ ಕಲ್ಲಿಯೋಪಿ ಎಲ್‌ ಹಡಗು ಇಂಡೋನೇಷ್ಯಾದಿಂದ ಟನ್‌ಗೆ 28 ಡಾಲರ್‌ ಮೊತ್ತ ಕಲ್ಲಿದ್ದಲನ್ನು ಹೊತ್ತು ತಂದಿತ್ತು. ಹೊಸ ವರ್ಷಕ್ಕೆ (2024ಕ್ಕೆ) ಹಡಗು ಭಾರತ ತಲುಪಿದಾಗ ಅದಾನಿ ಕಂಪನಿ ಆ ಕಲ್ಲಿದ್ದಲನ್ನು ಟನ್‌ಗೆ 92 ಡಾಲರ್‌ಗೆ ತಂಗೆಡ್ಕೋ ಮಾರಾಟ ಮಾಡಿತ್ತು ಎಂದು ಫಿನಾನ್ಶಿಯಲ್ ಟೈಮ್ಸ್ ಹೇಳಿದೆ.

ಬ್ರಿಟಿಷ್ ವರ್ಜಿನ್ ದ್ವೀಪದ ಮೂಲದ ಕಂಪನಿಯ ಪಾತ್ರ

ಕಲ್ಲಿದ್ದಲನ್ನು ಮೂಲತಃ ಸೌತ್ ಕಲಿಮಂಟನ್‌ನ ಇಂಡೋನೇಶ್ಯಾದ ಗಣಿಗಾರಿಕೆ ಸಮೂಹ ಪಿಟಿ ಜಾನ್‌ಲಿನ್‌ ಸಪ್ಲೈಸ್‌ನಿಂದ ಖರೀದಿಸಲಾಗಿತ್ತು. ಅದನ್ನು ಅಲ್ಲಿಯೇ ಹಡಗಿಗೆ ತುಂಬಲಾಗಿತ್ತು. ಪಿಟಿ ಜಾನ್‌ಲಿನ್‌ನ ರಫ್ತು ಘೋಷಣೆಯಲ್ಲಿ ಅಂತಿಮ ಖರೀದಿದಾರ ತಂಗೆಡ್ಕೋ ಆಗಿದೆ ಎಂದು ತಿಳಿಸಿತ್ತು ಮತ್ತು ಮಧ್ಯವರ್ತಿಯಾಗಿ ಅದಾನಿಯನ್ನು ಹೆಸರಿಸಿತ್ತು.

ಜಾನಲಿನ್‌ನ ಇನ್ವಾಯ್ಸ್ ಬ್ರಿಟಿಷ್ ವರ್ಜಿನ್ ದ್ವೀಪದ ಸುಪ್ರೀಂ ಯೂನಿಯನ್ ಇನ್ವೆಸ್ಟರ್ಸ್‌ಗೆ ಹೋಗಿತ್ತು. ಅದು ಪ್ರತಿ ಟನ್‌ಗೆ 28 ಡಾಲರ್‌ ಬೆಲೆ ನಿಗದಿಗೊಳಿಸಿತ್ತು. ಪ್ರಮುಖ ವಿಷಯವೆಂದರೆ, ಒಂದು ವಾರದಲ್ಲಿ ಸುಪ್ರೀಂ ಯೂನಿಯನ್ ಸಿಂಗಾಪುರದಲ್ಲಿ ಅದಾನಿಗೆ ಪ್ರತಿ ಟನ್‌ಗೆ 34 ಡಾಲರ್‌ಗಳಲ್ಲಿ ಶಿಪ್‌ಮೆಂಟ್‌ನ ಇನ್ವಾಯ್ಸ್ ಮಾಡಿತ್ತು ಮತ್ತು ಕಲ್ಲಿದ್ದಲು ಪ್ರತಿ ಕೆಜಿಗೆ 3,500 ಕ್ಯಾಲೊರಿಗಳನ್ನು ಒಳಗೊಂಡಿದೆ ಎಂದು ಹೇಳಿತ್ತು.

ಆದರೆ, ಅದೇ ಕಲ್ಲಿದ್ದಲಿಗಾಗಿ ಅದಾನಿ ಕಂಪನಿ ತಂಗೆಡ್ಕೋಗೆ ನೀಡಿದ್ದ ಇನ್ವಾಯ್ಸ್‌ನಲ್ಲಿ ಗುಣಮಟ್ಟವು 6,000 ಕ್ಯಾಲೊರಿಗಳಿಗೆ ಜಿಗಿದಿತ್ತು ಮತ್ತು ಬೆಲೆ ಪ್ರತಿ ಟನ್‌ಗೆ 92 ಡಾ‌ಲರ್‌ಗೆ ಏರಿಕೆಯಾಗಿತ್ತು. ತಂಗೆಡ್ಕೋಗೆ 22 ಶಿಪ್‌ಮೆಂಟ್‌ಗಳ ಮೂಲಕ ಅದಾನಿ ಕಂಪನಿ ಮತ್ತು ಅದರ ಮಧ್ಯವರ್ತಿಗಳು ಅಂದಾಜು ಏಳು ಕೋಟಿ ಡಾಲರ್ ಲಾಭಗಳಿಸಿದ್ದರು ಎಂದು ಫಿನಾನ್ಶಿಯಲ್ ಟೈಮ್ಸ್‌ ಹೇಳಿದೆ.

ಆರೋಪ ನಿರಾಕರಿಸಿದ ಅದಾನಿ 

ಅದಾನಿ ಕಂಪನಿಯು ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ಪೂರೈಕೆಯಾದ ಕಲ್ಲಿದ್ದಲು ಹಲವಾರು ಏಜೆನ್ಸಿಗಳಿಂದ ಹಲವು ಹಂತಗಳಲ್ಲಿ ವಿಸ್ತ್ರತ ಗುಣಮಟ್ಟ ಪರೀಕ್ಷೆಗೆ ಒಳಗಾಗಿತ್ತು. ಕಳಪೆ ಗುಣಮಟ್ಟದ ಕಲ್ಲಿದ್ದಲು ಪೂರೈಕೆ ಆರೋಪ ಆಧಾರರಹಿತ ಮಾತ್ರವಲ್ಲ, ಸಂಪೂರ್ಣ ಅಸಂಬದ್ಧವಾಗಿದೆ ಎಂದು ಅದಾನಿ ಗ್ರೂಪ್‌ನ ವಕ್ತಾರರು ಫಿನಾನ್ಶಿಯಲ್ ಟೈಮ್ಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ : ಕೇರಳ: ವಿವಿ ಸೆನೆಟ್‌ಗೆ ಗವರ್ನರ್ ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನ ರದ್ದುಗೊಳಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...