Homeಮುಖಪುಟಕಡಿಮೆ ಗುಣಮಟ್ಟದ ಕಲ್ಲಿದ್ದಲು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅದಾನಿಯಿಂದ ವಂಚನೆ?: ವರದಿ

ಕಡಿಮೆ ಗುಣಮಟ್ಟದ ಕಲ್ಲಿದ್ದಲು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅದಾನಿಯಿಂದ ವಂಚನೆ?: ವರದಿ

- Advertisement -
- Advertisement -

ಕಡಿಮೆ ದರ್ಜೆಯ ಕಲ್ಲಿದ್ದಲನ್ನು ಹೆಚ್ಚಿನ ಮೌಲ್ಯದ ಇಂಧನವಾಗಿ ಮಾರಾಟ ಮಾಡುವ ಮೂಲಕ ಅದಾನಿ ಕಂಪನಿ ವಂಚನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ದಾಖಲೆಗಳ ಆಧಾರದಲ್ಲಿ ಫಿನಾನ್ಶಿಯಲ್ ಟೈಮ್ಸ್ ವಿಸ್ಕೃತ ಲೇಖನವನ್ನು ಪ್ರಕಟಿಸಿದೆ.

ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಶನ್ ರಿಪೋರ್ಟಿಂಗ್ ಪ್ರಾಜೆಕ್ಟ್ (ಒಸಿಸಿಆರ್‌ಪಿ) ಸಂಗ್ರಹಿಸಿದ ಮತ್ತು ಫಿನಾನ್ಶಿಯಲ್ ಟೈಮ್ಸ್‌ ಪರಿಶೀಲಿಸಿದ ದಾಖಲೆಗಳ ಪ್ರಕಾರ, ಅದಾನಿ ಕಂಪನಿ ಅಥವಾ ಅದಾನಿ ಸಮೂಹ ಮಾಡಿರುವ ಆಪಾದಿತ ವಂಚನೆಯಿಂದ ದೇಶದ ಪರಿಸರ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿದ ಸಂಭವವಿದೆ.

ಕಡಿಮೆ ದರ್ಜೆಯ ಕಲ್ಲಿದ್ದಲನ್ನು ವಿದ್ಯುತ್‌ಗಾಗಿ ಬಳಸುವ ಮೂಲಕ ಹೆಚ್ಚು ಇಂಧನವನ್ನು ಸುಡಲಾಗಿದೆ ಅಥವಾ ಸುಡಲಾಗ್ತಿದೆ. ಈ ಮೂಲಕ ಅದಾನಿ ಕಂಪನಿ ಗಾಳಿಯ ಗುಣಮಟ್ಟವನ್ನು ಕಡೆಗಣಿಸಿ ಮೋಸದಿಂದ ಬಂಪರ್ ಲಾಭವನ್ನು ಪಡೆದಿರಬಹುದು ಎಂದು ವರದಿ ಹೇಳಿದೆ.

ದಾಖಲೆಗಳ ಪ್ರಕಾರ, ಜನವರಿ 2014ರಲ್ಲಿ ಅದಾನಿ ಕಂಪನಿ ಇಂಡೋನೇಷ್ಯಾದಿಂದ ಕಲ್ಲಿದ್ದಲು ಖರೀದಿಸಿತ್ತು. ಅದು ಗುಣಮಟ್ಟದಲ್ಲಿ ಪ್ರತಿ ಕಿಲೋಗ್ರಾಮ್‌ಗೆ 3,500 ಕ್ಯಾಲೊರಿಗಳನ್ನು ಹೊಂದಿತ್ತು. ಆದರೆ, ಆ ಕಲ್ಲಿದ್ದಲ್ಲನ್ನು ತಮಿಳುನಾಡು ಜನರೇಷನ್ ಅಂಡ್ ಡಿಸ್ಟ್ರಿಬ್ಯೂಷನ್ ಕಂಪನಿಗೆ (ತಂಗೆಡ್ಕೋ) ಅತ್ಯಮೂಲ್ಯ ದರ್ಜೆಯ 6,000 ಕ್ಯಾಲೋರಿಯ ಕಲ್ಲಿದ್ದಲು ಎಂದು ಮಾರಾಟ ಮಾಡಲಾಗಿದೆ. ಈ ಮೂಲಕ ಸಾರಿಗೆ ವೆಚ್ಚ ಹೊರತುಪಡಿಸಿ ಅದಾನಿ ಎರಡು ಪಟ್ಟು ಲಾಭ ಪಡೆದಿದೆ.

ಅದಾನಿ ಕಂಪನಿಗೆ ಸಂಬಂಧಿಸಿದ 2014ರ 22 ಕಲ್ಲಿದ್ದಲು ಸಾಗಣೆಯ ದಾಖಲೆಗಳನ್ನು ಫಿನಾನ್ಶಿಯಲ್ ಟೈಮ್ಸ್ ಹೊಂದಿಸಿ ನೋಡಿದೆ. ಈ ವೇಳೆ 1.5 ಮಿಲಿಯನ್ ಟನ್ ಸರಬರಾಜಿನಲ್ಲಿ ಗ್ರೇಡ್ ವ್ಯತ್ಯಾಸ ಕಂಡು ಬಂದಿದೆ.

ಅದಾನಿ ಕಂಪನಿ ಇಂಡೋನೇಷ್ಯಾದಿಂದ ಕಡಿಮೆ ಕ್ಯಾಲೊರಿಯ ಕಲ್ಲಿದ್ದಲು ಖರೀದಿಸಿ, ಅದನ್ನು ಒಪ್ಪಂದಂತೆ ದಕ್ಷಿಣ ಭಾರತದ ವಿದ್ಯುತ್ ಕಂಪನಿಗಳಿಗೆ ಪೂರೈಕೆ ಮಾಡುತ್ತಿದೆ. ಈ ಮೂಲಕ ಅಧಿಕ ಲಾಭ ಪಡೆಯುತ್ತಿದೆ ಎಂದು ವರದಿಯಲ್ಲಿ ಆಪಾದಿಸಲಾಗಿದೆ.

ಅದಾನಿ ಕಂಪನಿಯ ಈ ಆಪಾದಿತ ವಂಚನೆಯಿಂದ ಕಂಪನಿ ದುಪ್ಪಟ್ಟು ಲಾಭ ಪಡೆಯುವುದು ಒಂದೆಡೆಯಾದರೆ, ಇದು ಪರಿಸರದ ಮೇಲೆ ದೊಡ್ಡಮಟ್ಟದ ಪರಿಣಾಮ ಬೀರುತ್ತಿದೆ. ದಿ ಲ್ಯಾನ್ಸೆಟ್‌ 2022ರ ಅಧ್ಯಯನದ ಪ್ರಕಾರ, ಹೊರಾಂಗಣ ವಾಯುಮಾಲಿನ್ಯದಿಂದ ಭಾರತದಲ್ಲಿ ಪ್ರತಿ ವರ್ಷ 2 ಮಿಲಿಯನ್‌ಗಿಂತಲೂ ಹೆಚ್ಚು ಜನರು ಸಾಯುತ್ತಿದ್ದಾರೆ. ಈ ಪೈಕಿ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಕ್ಕಳ ಮರಣ ಪ್ರಮಾಣದಲ್ಲಿ ಗಮನಾರ್ಹ ಹೆಚ್ಚಳ ಕಂಡು ಬಂದಿದೆ.

ದಶಕದ ಹಿಂದಿನ ಮತ್ತೊಂದು ಅಧ್ಯಯನದ ಪ್ರಕಾರ, ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳು ಭಾರತದ ಮುಕ್ಕಾಲು ಭಾಗದಷ್ಟು ವಿದ್ಯುತ್ ಪೂರೈಸುತ್ತದೆ. ಇದರ ಜೊತೆಗೆ ದೇಶದಲ್ಲಿ ಮಾನವ ನಿರ್ಮಿತ ಸೂಕ್ಷ್ಮ ಕಣಗಳ ಹೊರಸೂಸುವಿಕೆಯಲ್ಲಿ ಶೇ.15ರಷ್ಟು ಪಾಲು ಹೊಂದಿದೆ. ಈ ಪೈಕಿ ಶೇ.30ರಷ್ಟು ನೈಟ್ರೋಜನ್ ಆಕ್ಸೈಡ್‌ ಮತ್ತು ಶೇ. 50ರಷ್ಟು ಸಲ್ಫರ್ ಡೈಆಕ್ಸೈಡ್ ಸೇರಿದೆ.

ಕಲ್ಲಿದಲ್ಲು ಉರಿಸುವುದರ ಮೂಲಕ ವಿದ್ಯುತ್ ಉತ್ಪಾದನೆಯ ಲಾಭ ಒಂದೆಡೆಯಾದರೆ, ಮತ್ತೊಂದೆಡೆ ಇದು ದೇಶದ ಆರೋಗ್ಯ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತಿದೆ. ಸಾರ್ವಜನಿಕ ಆರೋಗ್ಯದ ವಿಚಾರದಲ್ಲಿ ಭಾರತದ ಹಿಂದುಳಿದಿದೆ ಎಂದು ಇಂಧನ ಮತ್ತು ಶುದ್ಧ ಗಾಳಿಯ ಸಂಶೋಧನಾ ಕೇಂದ್ರದ ನವದೆಹಲಿ ಮೂಲದ ವಿಶ್ಲೇಷಕ ಸುನಿಲ್ ದಹಿಯಾ ಹೇಳಿದ್ದಾರೆ.

2021ಮತ್ತು 2023ರ ನಡುವೆ ಭಾರತಕ್ಕೆ ಆಮದು ಮಾಡಿಕೊಳ್ಳಲಾದ ಕಲ್ಲಿದ್ದಲು ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ಪ್ರಮಾಣದಲ್ಲಿ, ಮಧ್ಯವರ್ತಿಗಳಿಗೆ 5 ಬಿಲಿಯನ್ ಡಾಲರ್‌ಗೂ ಹೆಚ್ಚು ಹಣವನ್ನು ಪಾವತಿಸಿದೆ ಎಂದು ಫಿನಾನ್ಶಿಯಲ್ ಟೈಮ್ಸ್ ವರದಿ ಮಾಡಿದ ನಂತರ ವಿರೋಧ ಪಕ್ಷದ ನಾಯಕರು ಕಳೆದ ವರ್ಷ ಅದಾನಿ ವಿರುದ್ಧ ತನಿಖೆಗೆ ಕರೆ ಆಗ್ರಹಿಸಿದ್ದರು.

ಪಾಕಿಸ್ತಾನದ ಗಡಿಯ ಸಮೀಪವಿರುವ ಖಾವ್ಡಾದಲ್ಲಿ ವಿಶ್ವದ ಅತಿದೊಡ್ಡ ಗಾಳಿ ಮತ್ತು ಸೌರ ಪಾರ್ಕ್‌ ಒಂದನ್ನು ನಿರ್ಮಿಸುವ ಮೂಲಕ ಅದಾನಿಯು ತನ್ನನ್ನು ದೊಡ್ಡ ನವೀಕರಿಸಬಹುದಾದ ಇಂಧನ ಉತ್ಪದಕನಾಗಿ ಮರುಬ್ರಾಂಡ್ ಮಾಡಲು ಪ್ರಯತ್ನಿಸುತ್ತಿರುವ ನಡುವೆ ವಂಚನೆಯ ಆರೋಪ ಕೇಳಿ ಬಂದಿದೆ. ಈ ಆರೋಪವನ್ನು ನಿರಾಕರಿಸಿರುವ ಕಂಪನಿ, ತಾನು ಭಾರತದ ಅತಿದೊಡ್ಡ ಕಲ್ಲಿದ್ದಲು ಆಮದುದಾರರಲ್ಲಿ ಒಂದು ಎಂದು ಸಮರ್ಥಿಸಿಕೊಂಡಿದೆ.

ಅದಾನಿ ಕಂಪನಿ ಕಲ್ಲಿದ್ದಲು ಖರೀದಿಯಲ್ಲಿ ವಂಚನೆ ಎಸಗಿರುವ ಆರೋಪ ದೇಶದಲ್ಲಿ ರಾಜಕೀಯ ಚರ್ಚೆಯನ್ನು ಹುಟ್ಟುಹಾಕುವ ಸಾಧ್ಯತೆ ಇದೆ. ನರೇಂದ್ರ ಮೋದಿಯಯವರು ಮೂರನೇ ಬಾರಿಗೆ ಪ್ರಧಾನಿಯಾಗುವ ಉತ್ಸಾಹದಲ್ಲಿರುವ ನಡುವೆ, ಈಗಾಗಲೇ ಗೌತಮ್ ಅದಾನಿ ಸೇರಿದಂತೆ ದೇಶದ ಪ್ರಮುಖ ಕೋಟ್ಯಾಧಿಪತಿಗಳು ಅನುಭವಿಸುತ್ತಿರುವ ಅಧಿಕಾರ ಮತ್ತು ಪ್ರಭಾವದ ಕುರಿತು ಚರ್ಚೆಗಳು ಜೋರಾಗಿದೆ.

ಒಸಿಸಿಆರ್‌ಪಿಯಿಂದ ಪಡೆದ ಹೊಸ ದಾಖಲೆಯ ಪ್ರಕಾರ, ಡಿಸೆಂಬರ್ 2013ರಲ್ಲಿ ಎಂ.ವಿ ಕಲ್ಲಿಯೋಪಿ ಎಲ್‌ ಹಡಗು ಇಂಡೋನೇಷ್ಯಾದಿಂದ ಟನ್‌ಗೆ 28 ಡಾಲರ್‌ ಮೊತ್ತ ಕಲ್ಲಿದ್ದಲನ್ನು ಹೊತ್ತು ತಂದಿತ್ತು. ಹೊಸ ವರ್ಷಕ್ಕೆ (2024ಕ್ಕೆ) ಹಡಗು ಭಾರತ ತಲುಪಿದಾಗ ಅದಾನಿ ಕಂಪನಿ ಆ ಕಲ್ಲಿದ್ದಲನ್ನು ಟನ್‌ಗೆ 92 ಡಾಲರ್‌ಗೆ ತಂಗೆಡ್ಕೋ ಮಾರಾಟ ಮಾಡಿತ್ತು ಎಂದು ಫಿನಾನ್ಶಿಯಲ್ ಟೈಮ್ಸ್ ಹೇಳಿದೆ.

ಬ್ರಿಟಿಷ್ ವರ್ಜಿನ್ ದ್ವೀಪದ ಮೂಲದ ಕಂಪನಿಯ ಪಾತ್ರ

ಕಲ್ಲಿದ್ದಲನ್ನು ಮೂಲತಃ ಸೌತ್ ಕಲಿಮಂಟನ್‌ನ ಇಂಡೋನೇಶ್ಯಾದ ಗಣಿಗಾರಿಕೆ ಸಮೂಹ ಪಿಟಿ ಜಾನ್‌ಲಿನ್‌ ಸಪ್ಲೈಸ್‌ನಿಂದ ಖರೀದಿಸಲಾಗಿತ್ತು. ಅದನ್ನು ಅಲ್ಲಿಯೇ ಹಡಗಿಗೆ ತುಂಬಲಾಗಿತ್ತು. ಪಿಟಿ ಜಾನ್‌ಲಿನ್‌ನ ರಫ್ತು ಘೋಷಣೆಯಲ್ಲಿ ಅಂತಿಮ ಖರೀದಿದಾರ ತಂಗೆಡ್ಕೋ ಆಗಿದೆ ಎಂದು ತಿಳಿಸಿತ್ತು ಮತ್ತು ಮಧ್ಯವರ್ತಿಯಾಗಿ ಅದಾನಿಯನ್ನು ಹೆಸರಿಸಿತ್ತು.

ಜಾನಲಿನ್‌ನ ಇನ್ವಾಯ್ಸ್ ಬ್ರಿಟಿಷ್ ವರ್ಜಿನ್ ದ್ವೀಪದ ಸುಪ್ರೀಂ ಯೂನಿಯನ್ ಇನ್ವೆಸ್ಟರ್ಸ್‌ಗೆ ಹೋಗಿತ್ತು. ಅದು ಪ್ರತಿ ಟನ್‌ಗೆ 28 ಡಾಲರ್‌ ಬೆಲೆ ನಿಗದಿಗೊಳಿಸಿತ್ತು. ಪ್ರಮುಖ ವಿಷಯವೆಂದರೆ, ಒಂದು ವಾರದಲ್ಲಿ ಸುಪ್ರೀಂ ಯೂನಿಯನ್ ಸಿಂಗಾಪುರದಲ್ಲಿ ಅದಾನಿಗೆ ಪ್ರತಿ ಟನ್‌ಗೆ 34 ಡಾಲರ್‌ಗಳಲ್ಲಿ ಶಿಪ್‌ಮೆಂಟ್‌ನ ಇನ್ವಾಯ್ಸ್ ಮಾಡಿತ್ತು ಮತ್ತು ಕಲ್ಲಿದ್ದಲು ಪ್ರತಿ ಕೆಜಿಗೆ 3,500 ಕ್ಯಾಲೊರಿಗಳನ್ನು ಒಳಗೊಂಡಿದೆ ಎಂದು ಹೇಳಿತ್ತು.

ಆದರೆ, ಅದೇ ಕಲ್ಲಿದ್ದಲಿಗಾಗಿ ಅದಾನಿ ಕಂಪನಿ ತಂಗೆಡ್ಕೋಗೆ ನೀಡಿದ್ದ ಇನ್ವಾಯ್ಸ್‌ನಲ್ಲಿ ಗುಣಮಟ್ಟವು 6,000 ಕ್ಯಾಲೊರಿಗಳಿಗೆ ಜಿಗಿದಿತ್ತು ಮತ್ತು ಬೆಲೆ ಪ್ರತಿ ಟನ್‌ಗೆ 92 ಡಾ‌ಲರ್‌ಗೆ ಏರಿಕೆಯಾಗಿತ್ತು. ತಂಗೆಡ್ಕೋಗೆ 22 ಶಿಪ್‌ಮೆಂಟ್‌ಗಳ ಮೂಲಕ ಅದಾನಿ ಕಂಪನಿ ಮತ್ತು ಅದರ ಮಧ್ಯವರ್ತಿಗಳು ಅಂದಾಜು ಏಳು ಕೋಟಿ ಡಾಲರ್ ಲಾಭಗಳಿಸಿದ್ದರು ಎಂದು ಫಿನಾನ್ಶಿಯಲ್ ಟೈಮ್ಸ್‌ ಹೇಳಿದೆ.

ಆರೋಪ ನಿರಾಕರಿಸಿದ ಅದಾನಿ 

ಅದಾನಿ ಕಂಪನಿಯು ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ಪೂರೈಕೆಯಾದ ಕಲ್ಲಿದ್ದಲು ಹಲವಾರು ಏಜೆನ್ಸಿಗಳಿಂದ ಹಲವು ಹಂತಗಳಲ್ಲಿ ವಿಸ್ತ್ರತ ಗುಣಮಟ್ಟ ಪರೀಕ್ಷೆಗೆ ಒಳಗಾಗಿತ್ತು. ಕಳಪೆ ಗುಣಮಟ್ಟದ ಕಲ್ಲಿದ್ದಲು ಪೂರೈಕೆ ಆರೋಪ ಆಧಾರರಹಿತ ಮಾತ್ರವಲ್ಲ, ಸಂಪೂರ್ಣ ಅಸಂಬದ್ಧವಾಗಿದೆ ಎಂದು ಅದಾನಿ ಗ್ರೂಪ್‌ನ ವಕ್ತಾರರು ಫಿನಾನ್ಶಿಯಲ್ ಟೈಮ್ಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ : ಕೇರಳ: ವಿವಿ ಸೆನೆಟ್‌ಗೆ ಗವರ್ನರ್ ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನ ರದ್ದುಗೊಳಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...