Homeನ್ಯಾಯ ಪಥಬಹುಜನ ಭಾರತ: ಎನ್.ಡಿ.ಟಿ.ವಿ ಅದಾನಿ ಕೈವಶ; ಮತ್ತೊಂದು ಚಾನೆಲ್ ಮೋದಿ ಪದತಲಕ್ಕೆ

ಬಹುಜನ ಭಾರತ: ಎನ್.ಡಿ.ಟಿ.ವಿ ಅದಾನಿ ಕೈವಶ; ಮತ್ತೊಂದು ಚಾನೆಲ್ ಮೋದಿ ಪದತಲಕ್ಕೆ

- Advertisement -
- Advertisement -

ಮೂರೂ ಬಿಟ್ಟ ಸಮೂಹ ಮಾಧ್ಯಮಗಳ ನಡುವೆ ಅಷ್ಟಿಷ್ಟು ಮಾನ ಉಳಿಸಿಕೊಂಡಿರುವ ಎನ್.ಡಿ.ಟಿ.ವಿಗೆ ಆಪತ್ತು ಎದುರಾಗಿದೆ. ಏಷ್ಯಾ ಖಂಡದ ಅತಿದೊಡ್ಡ ಶ್ರೀಮಂತ ಮತ್ತು ಜಗತ್ತಿನ ನಾಲ್ಕನೆಯ ಅತಿ ದೊಡ್ಡ ಐಶ್ವರ್ಯವಂತ ಗೌತಮ್ ಅದಾನಿ ಈ ಚಾನೆಲ್ ಕೈವಶಕ್ಕೆ ಮುಂದಾಗಿದ್ದಾರೆ.

ನರೇಂದ್ರ ಮೋದಿ ಆಡಳಿತವನ್ನು ನಿಷ್ಠುರ ವಿಮರ್ಶೆಗೆ ಒಳಪಡಿಸುತ್ತಿದ್ದ ಕಟ್ಟಕಡೆಯ ಕೊರಳನ್ನು ಅದುಮಲೆಂದೇ ಜರುಗಿರುವ ಲೆಕ್ಕಾಚಾರದ ಹುನ್ನಾರವಿದು ಎಂದು ಸ್ವತಂತ್ರ ಮಾಧ್ಯಮ ತಜ್ಞರು ಈ ವಿದ್ಯಮಾನ ಕುರಿತು ಕಳವಳ ಪ್ರಕಟಿಸಿದ್ದಾರೆ.

ಕೋಮುವಾದ, ಕಟ್ಟರ್ ಹಿಂದುತ್ವ, ಅಲ್ಪಸಂಖ್ಯಾತರ ವಿರುದ್ಧ ದ್ವೇಷ, ಸುಳ್ಳು ಸುದ್ದಿಯ ಪಿಡುಗಿಗೆ ನೀರೆರೆದು ಪೋಷಿಸುತ್ತಿರುವ ಬಾಲಬಡುಕ ಮಾಧ್ಯಮಗಳ ನಡುವೆ ಎನ್.ಡಿ.ಟಿ.ವಿಯದು ಒಂಟಿದನಿಯಾಗಿತ್ತು. ಆಳುವವರ ಕೆಂಗಣ್ಣಿಗೆ ಗುರಿಯಾಗಿತ್ತು. ಎನ್.ಡಿ.ಟಿ.ವಿ ಇಂಡಿಯಾ ಹೆಸರಿನಲ್ಲಿ ಬಿತ್ತರವಾಗುತ್ತಿದ್ದ ಹಿಂದೀ ಚಾನೆಲ್ಲಿನ ಅತ್ಯಂತ ನಿರ್ಭೀತ ನಿಷ್ಠುರವಾದಿ ದನಿ ರವೀಶ್ ಕುಮಾರ್ ಅವರಂತೂ ಆಳುವ ಪಕ್ಷ-ಪರಿವಾರಕ್ಕೆ ಮಗ್ಗುಲ ಮುಳ್ಳಾಗಿ ಪರಿಣಮಿಸಿದ್ದರು.

ಪ್ರಧಾನಮಂತ್ರಿಯವರು ಮತ್ತು ಆಳುವ ಪಕ್ಷದ ಪರಮಾಪ್ತರು ಅದಾನಿ. ಎನ್.ಡಿ.ಟಿ.ವಿಯನ್ನು ವಶಪಡಿಸಿಕೊಳ್ಳುವ ಅವರ ನಡೆ ಅನಿರೀಕ್ಷಿತ ಮತ್ತು ಆಘಾತಕಾರಿ.

ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ಪ್ರಸಿದ್ಧ ಪತ್ರಕರ್ತ ದಂಪತಿ. ಎನ್.ಡಿ.ಟಿ.ವಿ ಸುದ್ದಿ ಸಂಸ್ಥೆಯ ಸ್ಥಾಪಕರು. ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ (ವಿಸಿಪಿಎಲ್) ಎಂಬುದು 2008ರಲ್ಲಿ ಹುಟ್ಟಿಕೊಂಡ ಕಂಪನಿ. ಹತ್ತು ವರ್ಷಗಳ ಹಿಂದೆ ಈ ಸಂಸ್ಥೆಯಿಂದ 403.85 ಕೋಟಿ ರುಪಾಯಿಗಳ ಸಾಲವನ್ನು ಪಡೆಯಿತು ಎನ್.ಡಿ.ಟಿ.ವಿ. ಈ ಸಾಲ ನೀಡಿಕೆಗೆ ಬೇಕಾದ ಹಣವನ್ನು ಮುಖೇಶ್ ಅಂಬಾನಿಯವರ ರಿಲಯನ್ಸ್‌ನಿಂದ ಪಡೆದಿತ್ತು ವಿಸಿಪಿಎಲ್.

ಸಾಲಕ್ಕೆ ಬದಲಾಗಿ ಎನ್.ಡಿ.ಟಿ.ವಿಯ ಶೇ.29.18ರಷ್ಟು ಪಾಲುದಾರಿಕೆ ಪಡೆಯಬಹುದಾದ ವಾರಂಟ್‌ಗಳನ್ನು ವಿ.ಸಿ.ಪಿ.ಎಲ್‌ಗೆ ನೀಡಲಾಯಿತು. ಈ ವಾರಂಟುಗಳನ್ನು ವಿ.ಸಿ.ಪಿ.ಎಲ್ ತನಗೆ ಬೇಕಾದಾಗ ಪರಿವರ್ತಿಸಿಕೊಳ್ಳಬಹುದಿತ್ತು. ಈ ನಡುವೆ ಅದಾನಿ ಉದ್ಯಮ ಸಮೂಹ ವಿ.ಸಿ.ಪಿ.ಎಲ್‌ನ್ನು ಖರೀದಿಸಿತು. ಹಕ್ಕುಗಳನ್ನು ಚಲಾಯಿಸಿ ವಿ.ಸಿ.ಪಿ.ಎಲ್‌ಗೆ ನೀಡಲಾಗಿದ್ದ ವಾರಂಟುಗಳನ್ನು ಶೇ.29.18ರ ಪಾಲುದಾರಿಕೆಯಾಗಿ ಪರಿವರ್ತಿಸಿಕೊಂಡಿತು. ಎನ್.ಡಿ.ಟಿ.ವಿಯ ಶೇ.50ಕ್ಕಿಂತ ಹೆಚ್ಚು ಷೇರುಗಳನ್ನು ಖರೀದಿಸಿ ಸಂಸ್ಥೆಯ ಪೂರ್ಣ ನಿಯಂತ್ರಣ ಪಡೆಯುವುದು ಅದಾನಿ ಸಮೂಹದ ಮುಂದಿನ ನಡೆ.

ಎನ್.ಡಿ.ಟಿ.ವಿಯ ಸ್ವತಂತ್ರ ಷೇರುದಾರರ ಸಂಖ್ಯೆ 29,691. ತಲಾ ಎರಡು ಲಕ್ಷ ಅಥವಾ ಅದಕ್ಕಿಂತ ಕಡಿಮೆ ಬಂಡವಾಳವನ್ನು ಇವರು ಎನ್.ಡಿ.ಟಿ.ವಿಯಲ್ಲಿ ಹೂಡಿದ್ದಾರೆ. ಕಂಪನಿಯ ಶೇ.23.85ರಷ್ಟು ಪಾಲುದಾರಿಕೆ ಇವರ ಕೈಯಲ್ಲಿದೆ. ಎನ್.ಡಿ.ಟಿ.ವಿಯ ಶೇ.32ರಷ್ಟು ಷೇರುಗಳು ಈಗಲೂ ರಾಯ್ ದಂಪತಿ ಬಳಿ ಇವೆ. ಅಂದರೆ ಅದಾನಿ ಕಂಪನಿಯು ವಿಸಿಪಿಎಲ್ ಸಂಸ್ಥೆಯ ಮೂಲಕ ಕೈವಶ ಮಾಡಿಕೊಂಡಿರುವ ಷೇರುಗಳ ಪ್ರಮಾಣಕ್ಕಿಂತ ಹೆಚ್ಚು. ಆದರೆ ಸ್ವತಂತ್ರ ಷೇರುದಾರರಿಂದ ಶೇ.26ರಷ್ಟು ಹೆಚ್ಚುವರಿ ಷೇರುಗಳನ್ನು ಖರೀದಿಸಿದರೆ, ಎನ್.ಡಿ.ಟಿ.ವಿಯ ನಿಯಂತ್ರಣ ಅದಾನಿ ಉದ್ಯಮ ಸಮೂಹದ ವಶವಾಗುವಲ್ಲಿ ಅನುಮಾನವೇ ಉಳಿಯದು. ಅದು ಇನ್ನೂ ಶೇ.26ರಷ್ಟು ಈಕ್ವಿಟಿ ಖರೀದಿಸುವುದಾಗಿ ಈಗಾಗಲೆ ಘೋಷಿಸಿದೆ ಕೂಡ.

ಅದಾನಿ ಉದ್ಯಮ ಸಮೂಹದ ಈ ಅನಿರೀಕ್ಷಿತ ನಡೆಗಳಿಗೆ ತನ್ನ ಒಪ್ಪಿಗೆ ಇಲ್ಲವೆಂದು ಎನ್.ಡಿ.ಟಿ.ವಿಯ ಸ್ಥಾಪಕರು ಪ್ರತಿಭಟಿಸಿದ್ದಾರೆ. ಕಾನೂನುತಜ್ಞರ ಪ್ರಕಾರ ಅದಾನಿ ನಡೆಗೆ ಯಾವುದೇ ಅಡ್ಡಿಯಿಲ್ಲ. ಎನ್.ಡಿ.ಟಿ.ವಿ ಅಸಹಾಯಕ. ತನ್ನದೇ ಷೇರುಗಳನ್ನು ಹೆಚ್ಚು ದರ ತೆತ್ತು ಮಾರುಕಟ್ಟೆಯಿಂದ ಖರೀದಿಸುವ ಆಯ್ಕೆಯೇನೋ ಇದೆ. ಆದರೆ ಎನ್.ಡಿ.ಟಿ.ವಿ ಕೊಡುವುದಕ್ಕಿಂತ ಹೆಚ್ಚು ದರ ಪಾವತಿ ಮಾಡುವ ಪೈಪೋಟಿಗೆ ಅದಾನಿ ಇಳಿಯುವುದಿಲ್ಲ ಎಂಬ ಖಾತರಿ ಏನು? ಅಂತಹ ಸನ್ನಿವೇಶದಲ್ಲಿ ಅದಾನಿ ಜೊತೆ ಸ್ಪರ್ಧೆಗೆ ಇಳಿಯುವಷ್ಟು ಹಣಬಲ ಎನ್.ಡಿ.ಟಿ.ವಿಗೆ ಉಂಟೇ? ತಾನು ಪಡೆದಿದ್ದ 403.85 ಕೋಟಿ ರುಪಾಯಿಗಳ ಸಾಲವನ್ನು ವಾಪಸು ಕೊಟ್ಟು ಅದಾನಿ ಆಪತ್ತನ್ನು ದೂರ ಮಾಡಿಕೊಳ್ಳಬಹುದೇ? ಸಾಲವನ್ನು ವಾಪಸು ಕೊಡುವ ಅವಕಾಶವೇನೋ ಉಂಟು. ಆದರೆ ಸಾಲದ ಹಣವನ್ನು ವಾಪಸು ಪಡೆದು ಹಿಂದೆ ಸರಿಯಬೇಕೇ ಅಥವಾ ಈಕ್ವಿಟಿಯನ್ನು ಉಳಿಸಿಕೊಳ್ಳಬೇಕೇ ಎಂಬುದು ಅದಾನಿಯವರ ವಿವೇಚನೆಗೆ ಬಿಟ್ಟ ವಿಷಯ. ಎನ್.ಡಿ.ಟಿ.ವಿಯ ಉಸಿರು ಕಟ್ಟಿಸುವುದೇ ಅದಾನಿಯವರ ಉದ್ದೇಶ ಎಂಬುದು ಮೇಲ್ನೋಟಕ್ಕೆ ನಿಚ್ಚಳ. ಹೀಗಿದ್ದಾಗ ಸಾಲದ ಹಣ ಪಡೆದು ಎನ್.ಡಿ.ಟಿ.ವಿಯನ್ನು ಅದರ ಪಾಡಿಗೆ ಬಿಟ್ಟುಬಿಡಲು ಅದಾನಿ ಒಪ್ಪುವುದು ಅಸಾಧ್ಯ. ಅವರಿಗೆ ಕಂಪನಿ ಬೇಕೇ ವಿನಃ ಹಣವಲ್ಲ.

ಮುಖ್ಯಧಾರೆಯ ಮಾಧ್ಯಮ ಕ್ಷೇತ್ರವನ್ನು ಪ್ರವೇಶಿಸಲು ಬಯಸಿದ್ದಾರೆ ಗೌತಮ್ ಅದಾನಿ. ಅದಾನಿ ಮೀಡಿಯಾ ವೆಂಚರ್ಸ್ ಎಂಬ ಕಂಪನಿಯನ್ನು ವರ್ಷದ ಹಿಂದೆಯೇ ಹುಟ್ಟಿಹಾಕಿದ್ದರು. ರಾಘವ ಬೆಹಲ್ ಅವರ ಕ್ವಿಂಟಿಲಿಯನ್ ಬಿಸಿನೆಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಶೇ.49ರಷ್ಟು ಪಾಲುದಾರಿಕೆಯನ್ನು ಹೋದ ವರ್ಷವೇ ಖರೀದಿಸಿದ್ದರು. ಖರೀದಿಗೆ ಪ್ರತಿಯಾಗಿ ಪಾವತಿಸಿದ ಹಣವೆಷ್ಟು ಎಂಬುದನ್ನು ಗೋಪ್ಯವಾಗಿ ಇರಿಸಿದೆ.

ಕ್ವಿಂಟ್ ಡಿಜಿಟಲ್ ಮೀಡಿಯಾ ಕಂಪನಿಯ ಅಧ್ಯಕ್ಷರಾಗಿದ್ದ ಸಂಜಯ ಪುಗಲಿಯಾ ಎಂಬ ಪತ್ರಕರ್ತರೊಬ್ಬರನ್ನು ಅದಾನಿ ನೇಮಕ ಮಾಡಿಕೊಂಡಿದ್ದರು. ಎನ್.ಡಿ.ಟಿ.ವಿಯ ಈಕ್ವಿಟಿಗಳ ಖರೀದಿಯ ನಂತರ ಪುಗಲಿಯಾ ನೀಡಿರುವ ಈ ಹೇಳಿಕೆಯನ್ನು ಗಮನಿಸಿ- ’ಭಾರತೀಯ ನಾಗರಿಕರು, ಗ್ರಾಹಕರು ಹಾಗೂ ಭಾರತದಲ್ಲಿ ಆಸಕ್ತಿ ಹೊಂದಿರುವವರನ್ನು ಜ್ಞಾನ-ಮಾಹಿತಿ ನೀಡಿ ಸಬಲಗೊಳಿಸುವ ಉದ್ದೇಶ ಅದಾನಿ ಮೀಡಿಯಾ ಕಂಪನಿಯದು. ನಮ್ಮ ಈ ಮುನ್ನೋಟವನ್ನು ಜಾರಿಗೆ ತರಲು ಎನ್.ಡಿ.ಟಿ.ವಿ ಅತ್ಯಂತ ಸೂಕ್ತ ಮಾಧ್ಯಮ ವೇದಿಕೆ. ಸುದ್ದಿ ಬಟವಾಡೆಯಲ್ಲಿ ಎನ್.ಡಿ.ಟಿ.ವಿಯ ನಾಯಕತ್ವವನ್ನು ಮತ್ತಷ್ಟು ಬಲಿಷ್ಠಗೊಳಿಸುವುದು ನಮ್ಮ ಉದ್ದೇಶ’.

ಇತ್ತೀಚೆಗೆ 5ಜಿ ಹರಾಜಿನಲ್ಲಿ ಭಾಗವಹಿಸುವ ಮೂಲಕ ದೂರಸಂಪರ್ಕ ಕ್ಷೇತ್ರಕ್ಕೆ ಕಾಲಿಟ್ಟು ಅಚ್ಚರಿ ಮೂಡಿಸಿದ ಅದಾನಿ ಸಮೂಹ, ವಿಮಾನ ನಿಲ್ದಾಣಗಳು, ಬಂದರುಗಳು, ಸಿಮೆಂಟ್ ಉತ್ಪಾದನೆ, ತಾಮ್ರ ಸಂಸ್ಕರಣೆ, ಡೇಟಾ ಕೇಂದ್ರಗಳು, ಹಸಿರು ಜಲಜನಕ, ಪೆಟ್ರೋಕೆಮಿಕಲ್ ಸಂಸ್ಕರಣೆ, ರಸ್ತೆಗಳ ನಿರ್ಮಾಣ, ಸೋಲಾರ್ ಸೆಲ್ ತಯಾರಿಕೆಯ ಕ್ಷೇತ್ರಗಳಲ್ಲಿ ಭಾರೀ ಬಂಡವಾಳ ಹೂಡಿದೆ. ಉದ್ಯಮ ಸದನಗಳ ಏಕೈಕ ಗುರಿ ಲಾಭ ಗಳಿಕೆ. ಅದಾನಿ ಉದ್ಯಮ ಸಮೂಹಕ್ಕೂ ಲಾಭ ಗಳಿಕೆಯ ಹಲವು ಹಿತಾಸಕ್ತಿಗಳಿವೆ. ಈ ಹಿತಾಸಕ್ತಿಗಳು ಸರ್ಕಾರದ ನೀತಿ ನಿರ್ಧಾರಗಳನ್ನೇ ಅವಲಂಬಿಸಿರುತ್ತವೆ. ಇಂತಹ ಉದ್ಯಮ ಸಂಸ್ಥೆಗಳು ಪತ್ರಿಕಾ ಕ್ಷೇತ್ರಕ್ಕೆ ಕಾಲಿರಿಸಿದರೆ ಸರ್ಕಾರವನ್ನು ಟೀಕಿಸುವುದು ಅಸಾಧ್ಯ. ಈ ಮಾತು ಅದಾನಿ ಉದ್ಯಮ ಸಮೂಹಕ್ಕೂ ಅನ್ವಯಿಸುತ್ತದೆ.

 

ಎನ್.ಡಿ.ಟಿ.ವಿಯನ್ನು ಕೈವಶ ಮಾಡಿಕೊಳ್ಳುವ ಮೂಲಕ ಅದಾನಿ ಸಮೂಹ ತನ್ನ ಪ್ರಬಲ ಎದುರಾಳಿ ರಿಲಯನ್ಸ್ ಕಂಪನಿಯೊಂದಿಗೆ ಮಾಧ್ಯಮ ಕ್ಷೇತ್ರದಲ್ಲೂ ಪೈಪೋಟಿ ನೀಡಲು ಹೊರಟಿದೆ. ಈ ನಡುವೆ 2021-22ರ ಆರ್ಥಿಕ ವರ್ಷದಲ್ಲಿ ಅದಾನಿ ಗುಂಪಿನ ಒಟ್ಟು ಸಾಲದ ಮೊತ್ತ 2.2 ಕೋಟಿ ಲಕ್ಷ ರುಪಾಯಿಗಳು. 2020-21ರ ಸಾಲಿನಲ್ಲಿ 1.57 ಲಕ್ಷ ಕೋಟಿ ರುಪಾಯಿಗಳಷ್ಟಿದ್ದ ಈ ಸಾಲ ಒಂದೇ ವರ್ಷದಲ್ಲಿ ಶೇ.೪೨ರಷ್ಟು ಹೆಚ್ಚಳ ಕಂಡಿದೆ.

ಜನತಂತ್ರ ವ್ಯವಸ್ಥೆಯಲ್ಲಿ ಜನಸಮೂಹಗಳಿಗೆ ಆಗುವ ನಷ್ಟವಿದು. ಉದ್ಯಮ ಸಂಸ್ಥೆಗಳು ಮತ್ತು ಸರ್ಕಾರಕ್ಕೆ ಆಗುವ ಲಾಭ. ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿನ ಪತ್ರಿಕಾ ಸ್ವಾತಂತ್ರ್ಯ ತೀವ್ರ ಕುಸಿತ ಕಂಡಿದೆ. ಪತ್ರಿಕಾ ಸ್ವಾತಂತ್ರ್ಯದ ವಿಶ್ವ ಸೂಚ್ಯಂಕದಲ್ಲಿ ಭಾರತದ ಸ್ಥಾನ 2022ರ ಒಂದೇ ವರ್ಷದಲ್ಲಿ 142ರಿಂದ 150ಕ್ಕೆ ಇಳಿಯಿತು.

ಈ ’ದಾಳಿ’ಯಲ್ಲಿ ಕಳವಳಕಾರಿ ಸಂದೇಶವೊಂದು ಅಡಗಿದೆ. ಕೇವಲ ನ್ಯೂಸ್ ಟೆಲಿವಿಷನ್‌ಗೆ ಮಾತ್ರವಲ್ಲ, ಸ್ವತಂತ್ರ ಮಾಧ್ಯಮದ ಪರಿಕಲ್ಪನೆಗೆ ಬಿದ್ದಿರುವ ಹೊಡೆತವಿದು. ಕಷ್ಟನಷ್ಟಗಳೇನೇ ಇದ್ದರೂ ಎನ್.ಡಿ.ಟಿ.ವಿ ಸಂಪಾದಕೀಯ ಸ್ವಾತಂತ್ರ್ಯವನ್ನು ಬಲಿಕೊಟ್ಟಿಲ್ಲ. ಮಾಲೀಕರಾದ ರಾಯ್ ದಂಪತಿಗಳ ದಿಟ್ಟತನವನ್ನು ಮತ್ತು ಖಚಿತ-ನಿಚ್ಚಳ ನೋಟವನ್ನು ಮೆಚ್ಚಬೇಕು ಎನ್ನುತ್ತಾರೆ ’ದಿ ಹಿಂದೂ’ ಪತ್ರಿಕಾ ಸಮೂಹದ ನಿವೃತ್ತ ಪ್ರಧಾನ ಸಂಪಾದಕ ಎನ್.ರಾಮ್

ಶತಮಾನದ ಅಂತ್ಯದ ವೇಳೆಗೆ ಜಗತ್ತಿನ ಮೂರನೆಯ ಒಂದರಷ್ಟು ಹೊಲಗದ್ದೆಗಳು, ತೋಟತುಡಿಕೆಗಳು, ಗೋಮಾಳಗಳು ಸಾರಾಸಗಟು ಬಂಜರು ಬೀಳಲಿವೆ. ಅರ್ಥಾತ್ ಅವುಗಳಲ್ಲಿ ಆಹಾರ ಉತ್ಪಾದನೆ ಅಸಾಧ್ಯವೆನಿಸಲಿದೆ. ಮುಂದಿನ ಇಪ್ಪತ್ತೆಂಟು ವರ್ಷಗಳಲ್ಲಿ ಜಗತ್ತಿನ ಅನ್ನದ ಕಣಜಗಳು ಬೆಳೆ ವೈಫಲ್ಯ ಎದುರಿಸಲಿದ್ದು, ತೀವ್ರ ತಾಪಮಾನದಿಂದಾಗಿ ಜಾನುವಾರುಗಳು ಸಾಯಲಿವೆ. ಆಹಾರದ ಬೆಲೆಗಳು ಆಗಸಕ್ಕೆ ಜಿಗಿದು ಈಗಾಗಲೇ ಹಸಿವನ್ನೇ ಹೊದ್ದು ಮಲಗುತ್ತಿರುವ ಜನಕೋಟಿಯೊಂದಿಗೆ ಮುಂದಿನ ಎಂಟು ವರ್ಷಗಳಲ್ಲಿ 12 ಕೋಟಿ ತುತ್ತಿನ ಚೀಲಗಳು ಹೊಸದಾಗಿ ಸೇರಿಕೊಳ್ಳಲಿವೆ.

ಜಾಗತಿಕ ತಾಪಮಾನ ಏರಿಕೆಯು ಜಗತ್ತನ್ನು ಹೆಚ್ಚು ಹೆಚ್ಚು ಬರಗಾಲ, ಜಲಕ್ಷಾಮ, ಕಾಳ್ಗಿಚ್ಚು, ಉಷ್ಣೋಗ್ರತೆಯ ಗಾಳಿಗುಮ್ಮಟಗಳು, ಬಿಸಿಮಾರುತಗಳು, ಯರ್ರಾಬಿರ್ರಿ ಮಳೆ-ಬೆಳೆಯ ಏರುಪೇರುಗಳು, ಹಸಿವೆ, ರೋಗರುಜಿನ, ದಾರಿದ್ರ್ಯ ಅಂಧಕಾರ ಅಪಾಯಗಳತ್ತ ಒಯ್ಯಲಿದೆ. ಪ್ರತಿಕೂಲ ಪರಿಸರದ ಕಾರಣ ಮನುಕುಲವು ಮಹಾವಲಸೆಗಳಿಗೆ ಸಾಕ್ಷಿಯಾಗಲಿದೆ. ವಲಸೆಯ ಶಕ್ತಿ ಸಂಪನ್ಮೂಲಗಳಿಲ್ಲದ ಸಮುದಾಯಗಳು ಇದ್ದಲ್ಲಿಯೇ ನವೆದು ಸಾಯಲಿವೆ.

ಈ ಸಂಕಟವು ಈಗಾಗಲೆ ಜಗತ್ತಿನ 330 ಕೋಟಿ ಜನರ ಮೇಲೆ ಎರಗಿದೆ. ಅವರ ದೈನಂದಿನ ಬದುಕು ದುರ್ಭರವಾಗಿದೆ. ಕೈಗಾರಿಕಾಯುಗ ಆರಂಭವಾಗುವ ಮುನ್ನ ನೆಲೆಸಿದ್ದ ತಾಪಮಾನ ಒಂದೂವರೆ ಡಿಗ್ರಿಯಷ್ಟು ಹೆಚ್ಚಿತೆಂದರೆ ಬಿಸಿಪ್ರಳಯದ ಘನಘೋರ ದುಃಸ್ವಪ್ನ ನಿಜರೂಪ ತಳೆದು ಇಳೆಯನ್ನು ಆವರಿಸಲಿದೆ. ಒಂದೂವರೆ ಡಿಗ್ರಿಯ ಪೈಕಿ 1.1ರಷ್ಟು ಡಿಗ್ರಿ ಈಗಾಗಲೆ ಹೆಚ್ಚಿಬಿಟ್ಟಿದೆ. ಕೇವಲ ಇನ್ನು ಇಪ್ಪತ್ತೇ ವರ್ಷಗಳಲ್ಲಿ 1.5 ಡಿಗ್ರಿಯನ್ನು ಮುಟ್ಟುವ ನಿರೀಕ್ಷೆ ಇದೆ. ತಾಪಮಾನ ಹೆಚ್ಚಳ ಎರಡು ಡಿಗ್ರಿ ಮುಟ್ಟಿದರೆ ಕಾಳ್ಗಿಚ್ಚಿಗೆ ಸಿಗುವ ಭೂಪ್ರದೇಶ ಮೂರನೆಯ ಒಂದರಷ್ಟು ಪ್ರಮಾಣವನ್ನು ಮುಟ್ಟಿ ಮುನ್ನಡೆಯಲಿದೆ.

ಇಂತಹ ಎಲ್ಲ ಜ್ವಲಂತ ಸಮಸ್ಯೆಗಳ ಮೇಲೆ ಪರದೆ ಸರಿಸಿ ಆಳುವವರ ಭಜನೆಯಲ್ಲಿ ಮುಳುಗುವ ಸಮೂಹ ಮಾಧ್ಯಮಗಳ ಸಾಲಿಗೆ ಎನ್.ಡಿಟಿ.ವಿ ಕೂಡ ಸೇರಿಬಿಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...