Homeಮುಖಪುಟಅದಾನಿ ವಿರುದ್ಧ ಅಮೆರಿಕಾ ದೋಷಾರೋಪ | ತಕ್ಷಣವೇ ಬಂಧಿಸಿ ಎಂದ ರಾಹುಲ್ ಗಾಂಧಿ

ಅದಾನಿ ವಿರುದ್ಧ ಅಮೆರಿಕಾ ದೋಷಾರೋಪ | ತಕ್ಷಣವೇ ಬಂಧಿಸಿ ಎಂದ ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಅದಾನಿ ವಿರುದ್ಧ ಅಮೆರಿಕಾದಲ್ಲಿ ಲಂಚ ಮತ್ತು ವಂಚನೆ ಆರೋಪ ಹೊರಿಸಲಾಗಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ”ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ತಕ್ಷಣವೇ ಬಂಧಿಸಬೇಕು” ಎಂದು ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಭಾರತೀಯ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್ ಲಂಚ ನೀಡಿದ ಆರೋಪದ ಮೇಲೆ ಅಮೆರಿಕಾದ ಪ್ರಾಸಿಕ್ಯೂಟರ್‌ಗಳು ಅದಾನಿ ಮತ್ತು ಸಹಚರರ ಮೇಲೆ ಆರೋಪ ಹೊರಿಸಿದ ನಂತರ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

“ಉದ್ಯಮಿ ಅದಾನಿ ಭಾರತೀಯ ಮತ್ತು ಅಮೇರಿಕನ್ ಕಾನೂನುಗಳನ್ನು ಉಲ್ಲಂಘಿಸಿದ್ದಾರೆ ಎಂಬುದು ಈಗ ಅಮೆರಿಕಾದಲ್ಲಿ ಸ್ಪಷ್ಟವಾಗಿದೆ ಮತ್ತು ದೃಢಪಟ್ಟಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ‘ಏಕ್ ಹೈ ತೋ ಸೇಫ್ ಹೇ’ ಘೋಷಣೆಗೆ ವ್ಯಂಗ್ಯವಾಡಿದ ಅವರು, ಪ್ರಧಾನಿ ಮತ್ತು ಅದಾನಿ ಒಟ್ಟಿಗೆ ಇರುವವರೆಗೂ ಅವರು ಭಾರತದಲ್ಲಿ ಸುರಕ್ಷಿತವಾಗಿರುತ್ತಾರೆ ಎಂದು ಹೇಳಿದ್ದಾರೆ. ತಮ್ಮ ಮೇಲಿನ ಆರೋಪದ ಬಗ್ಗೆ ಅದಾನಿ ಸಮೂಹ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅದಾನಿಯನ್ನು ತಕ್ಷಣವೇ ಬಂಧಿಸಿ ವಿಚಾರಣೆಗೊಳಪಡಿಸಬೇಕು ಮತ್ತು ಅವರ ‘ರಕ್ಷಕ’ರಾದ ಮತ್ತು ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರನ್ನು ಸ್ಥಾನದಿಂದ ಕಿತ್ತುಹಾಕಿ, ಅವರನ್ನೂ ತನಿಖೆಗೆ ಒಳಪಡಿಸಬೇಕು” ಎಂದು ಅವರು ಹೇಳಿದ್ದಾರೆ. ಸೋಮವಾರದಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಅವರು ಹೇಳಿದ್ದಾರೆ.

ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಕೂಡಾ ಪ್ರತಿಪಕ್ಷಗಳು ಬೇಡಿಕೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ. “ಮೋದಿ ಸರಕಾರವು ಅದಾನಿಯನ್ನು ರಕ್ಷಿಸುತ್ತಿದೆ. ಆದ್ದರಿಂದ ಭಾರತದಲ್ಲಿ ಅದಾನಿಯನ್ನು ಬಂಧಿಸುವುದಿಲ್ಲ ಅಥವಾ ತನಿಖೆ ಮಾಡುವುದಿಲ್ಲ ಎಂದು ನನಗೆ ಖಾತರಿಯಿದೆ” ಎಂದು ಗಾಂಧಿ ಆರೋಪಿಸಿದ್ದಾರೆ.

ಏನಿದು ಅದಾನಿಯ ಹೊಸ ವಂಚನೆ?

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ಗುರುವಾರ ವರದಿಯಾಗಿದೆ. ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಿದ್ದರು ಎನ್ನಲಾಗಿದೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲಾ ನ್ಯಾಯಾಲಯದಲ್ಲಿರುವ ಅಮೆರಿಕದ ಅಟಾರ್ನಿ ಕಚೇರಿಯ ಮಾಹಿತಿ ಪ್ರಕಾರ, ಗೌತಮ್ ಅದಾನಿ, ಸಾಗರ್‌ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್‌ ವಿರುದ್ಧ ಐದು ಅಂಶಗಳ ಕ್ರಿಮಿನಲ್‌ ಆರೋಪಪಟ್ಟಿ ಸಲ್ಲಿಸಲಾಗಿದೆ. ಬಂಡವಾಳ ಆಕರ್ಷಿಸಲು ಅಮೆರಿಕದ ಹೂಡಿಕೆದಾರರು ಹಾಗೂ ಜಾಗತಿಕ ಹಣಕಾಸು ಸಂಸ್ಥೆಗಳಿಗೆ ಸುಳ್ಳು ಮತ್ತು ತಪ್ಪು ಹೇಳಿಕೆ ನೀಡಿರುವ ಆರೋಪ ಇವರ ಮೇಲಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ನ್ಯಾಯಾಧೀಶರು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ದ ಬಂಧನ ವಾರೆಂಟ್‌ಗಳನ್ನು ಹೊರಡಿಸಿದ್ದಾರೆ. ಆ ವಾರೆಂಟ್‌ಗಳನ್ನು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಪ್ರಾಸಿಕ್ಯೂಟರ್‌ಗಳು ಯೋಜಿಸಿದ್ದಾರೆ ಎಂದು ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ ರಾಯಿಟರ್ಸ್ ತಿಳಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್‌ ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ವ್ಯವಹಾರ ನಡೆಸಿದ್ದ ಕಂಪನಿಯ ಮಾಜಿ ಅಧಿಕಾರಿಗಳಾದ ರಂಜಿತ್ ಗುಪ್ತಾ ಹಾಗೂ ರೂಪೇಶ್ ಅಗರವಾಲ್‌ ಹಾಗೂ ಕೆನಡಾ ಮೂಲದ ಹೂಡಿಕೆದಾರರಾದ ದೀಪಕ್ ಮಲ್ಹೋತ್ರಾ ಮತ್ತು ಸೌರಬ್‌ ಅಗರವಾಲ್‌ ಅವರು ಲಂಚ ನೀಡಿರುವುದು ವಿದೇಶಿ ಭ್ರಷ್ಟ ಕಾರ್ಯಾಚರಣೆ ಕಾಯ್ದೆಯಡಿ ಅಪರಾಧವಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.

“ತಮ್ಮ ವ್ಯವಹಾರಗಳಿಗೆ ಅನುಕೂಲವಾಗುವಂತೆ ಭಾರತ ಸರ್ಕಾರದ ಅಧಿಕಾರಿಗಳಿಗೆ ಆರೋಪಿಗಳು ಲಂಚ ನೀಡಿದ್ದಾರೆ. ಲಂಚ ಹಾಗೂ ಭ್ರಷ್ಟಾಚಾರದ ಕುರಿತು ಸುಳ್ಳು ಹೇಳಿಕೆಗಳ ಮೂಲಕ ಅದಾನಿ ಹಾಗೂ ಇತರ ಆರೋಪಿಗಳು ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇತರ ಆರೋಪಿಗಳು ತನಿಖೆಗೆ ಅಡ್ಡಿಪಡಿಸುವ ಮೂಲಕ ಲಂಚದ ಆರೋಪವನ್ನು ಮರೆಮಾಚಲು ಯತ್ನಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ದೋಷಾರೋಪಣೆಯ ಪ್ರಕಾರ, ಆರೋಪಿಗಳು ವಂಚನೆಗೆ ಗೌತಮ್ ಅದಾಮಿ ಅವರನ್ನು “ನ್ಯೂಮೆರೊ ಯುನೊ” ಮತ್ತು “ಬಿಗ್ ಮ್ಯಾನ್‌” ಎಂಬ ಕೋಡ್ ಹೆಸರುಗಳೊಂದಿಗೆ ಖಾಸಗಿಯಾಗಿ ಕರೆಯತ್ತಿದ್ದರು. ಸಾಗರ್ ಅದಾನಿ ಲಂಚದ ವ್ಯವಹಾರದ ಬಗ್ಗೆ ನಿಗಾ ಇಡಲು ತಮ್ಮ ಸೆಲ್ ಫೋನ್ ಬಳಸಿದ್ದಾರೆ ಎಂದು ಹೇಳಲಾಗಿದೆ. ಅದಾನಿಗಳು, ವಿನೀತ್ ಜೈನ್ ಸೇರಿದಂತೆ ಅದಾನಿ ಗ್ರೀನ್ ಎನರ್ಜಿಯ ಕಾರ್ಯನಿರ್ವಾಹಕರು ಸಾಲದಾತರು ಮತ್ತು ಹೂಡಿಕೆದಾರರಿಂದ ಭ್ರಷ್ಟಾಚಾರವನ್ನು ಮರೆಮಾಚುವ ಮೂಲಕ ತಮ್ಮ ಕಂಪನಿಗೆ 3 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಸಾಲ ಮತ್ತು ಬಾಂಡ್‌ಗಳನ್ನು ಸಂಗ್ರಹಿಸಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

“ಈ ಪ್ರಕರಣ ಕುರಿತ ತನಿಖೆಯನ್ನು ತಡೆಯಲು ಎಫ್‌ಬಿಐ, ನ್ಯಾಯಾಂಗ ಇಲಾಖೆ ಮತ್ತು ಸೆಕ್ಯುರಿಟಿ ಅಂಡ್ ಎಕ್ಸ್‌ಚೇಂಜ್ ಕಮಿಷನ್‌ ಕೂಡಾ ಪ್ರಯತ್ನಿಸುತ್ತಿದೆ” ಎಂದು ಪ್ರಾಸಿಕ್ಯೂಟರ್ ಆರೋಪಿಸಿದ್ದಾಗಿ ವರದಿಯಾಗಿದೆ.
ಪ್ರಕರಣದ ತನಿಖೆಯನ್ನು ನ್ಯೂಯಾರ್ಕ್‌ನ ಎಫ್‌ಬಿಐ ಕಚೇರಿ ನಡೆಸುತ್ತಿದೆ.

ಭಾರತೀಯ ಕಾಲಮಾನದ ಪ್ರಕಾರ ಇಂದು (ನ.21) ಬೆಳಿಗ್ಗೆ ವರದಿ ಹೊರಬಿದ್ದಿದೆ. ಅದಾನಿ ಗ್ರೂಪ್ ತಮ್ಮ ಮೇಲಿನ ಆರೋಪದ ಕುರಿತು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಕೂಡ ಪ್ರತಿಕ್ರಿಯಿಸಿಲ್ಲ. ಆರೋಪಿಗಳ ಪರ ವಕೀಲರನ್ನು ತಕ್ಷಣ ಗುರುತಿಸಲು ಸಾಧ್ಯವಾಗಿಲ್ಲ ಎಂದು business-standard.com ವರದಿ ಮಾಡಿದೆ.

ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾದರೂ ಗೃಹಲಕ್ಷ್ಮಿ ಹಣ ಸಿಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾದರೂ ಗೃಹಲಕ್ಷ್ಮಿ ಹಣ ಸಿಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...