Homeಮುಖಪುಟಅದಾನಿ ವಿರುದ್ಧ ಅಮೆರಿಕಾ ದೋಷಾರೋಪ | ತಕ್ಷಣವೇ ಬಂಧಿಸಿ ಎಂದ ರಾಹುಲ್ ಗಾಂಧಿ

ಅದಾನಿ ವಿರುದ್ಧ ಅಮೆರಿಕಾ ದೋಷಾರೋಪ | ತಕ್ಷಣವೇ ಬಂಧಿಸಿ ಎಂದ ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಅದಾನಿ ವಿರುದ್ಧ ಅಮೆರಿಕಾದಲ್ಲಿ ಲಂಚ ಮತ್ತು ವಂಚನೆ ಆರೋಪ ಹೊರಿಸಲಾಗಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ”ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ತಕ್ಷಣವೇ ಬಂಧಿಸಬೇಕು” ಎಂದು ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಭಾರತೀಯ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್ ಲಂಚ ನೀಡಿದ ಆರೋಪದ ಮೇಲೆ ಅಮೆರಿಕಾದ ಪ್ರಾಸಿಕ್ಯೂಟರ್‌ಗಳು ಅದಾನಿ ಮತ್ತು ಸಹಚರರ ಮೇಲೆ ಆರೋಪ ಹೊರಿಸಿದ ನಂತರ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

“ಉದ್ಯಮಿ ಅದಾನಿ ಭಾರತೀಯ ಮತ್ತು ಅಮೇರಿಕನ್ ಕಾನೂನುಗಳನ್ನು ಉಲ್ಲಂಘಿಸಿದ್ದಾರೆ ಎಂಬುದು ಈಗ ಅಮೆರಿಕಾದಲ್ಲಿ ಸ್ಪಷ್ಟವಾಗಿದೆ ಮತ್ತು ದೃಢಪಟ್ಟಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ‘ಏಕ್ ಹೈ ತೋ ಸೇಫ್ ಹೇ’ ಘೋಷಣೆಗೆ ವ್ಯಂಗ್ಯವಾಡಿದ ಅವರು, ಪ್ರಧಾನಿ ಮತ್ತು ಅದಾನಿ ಒಟ್ಟಿಗೆ ಇರುವವರೆಗೂ ಅವರು ಭಾರತದಲ್ಲಿ ಸುರಕ್ಷಿತವಾಗಿರುತ್ತಾರೆ ಎಂದು ಹೇಳಿದ್ದಾರೆ. ತಮ್ಮ ಮೇಲಿನ ಆರೋಪದ ಬಗ್ಗೆ ಅದಾನಿ ಸಮೂಹ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅದಾನಿಯನ್ನು ತಕ್ಷಣವೇ ಬಂಧಿಸಿ ವಿಚಾರಣೆಗೊಳಪಡಿಸಬೇಕು ಮತ್ತು ಅವರ ‘ರಕ್ಷಕ’ರಾದ ಮತ್ತು ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರನ್ನು ಸ್ಥಾನದಿಂದ ಕಿತ್ತುಹಾಕಿ, ಅವರನ್ನೂ ತನಿಖೆಗೆ ಒಳಪಡಿಸಬೇಕು” ಎಂದು ಅವರು ಹೇಳಿದ್ದಾರೆ. ಸೋಮವಾರದಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಅವರು ಹೇಳಿದ್ದಾರೆ.

ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಕೂಡಾ ಪ್ರತಿಪಕ್ಷಗಳು ಬೇಡಿಕೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ. “ಮೋದಿ ಸರಕಾರವು ಅದಾನಿಯನ್ನು ರಕ್ಷಿಸುತ್ತಿದೆ. ಆದ್ದರಿಂದ ಭಾರತದಲ್ಲಿ ಅದಾನಿಯನ್ನು ಬಂಧಿಸುವುದಿಲ್ಲ ಅಥವಾ ತನಿಖೆ ಮಾಡುವುದಿಲ್ಲ ಎಂದು ನನಗೆ ಖಾತರಿಯಿದೆ” ಎಂದು ಗಾಂಧಿ ಆರೋಪಿಸಿದ್ದಾರೆ.

ಏನಿದು ಅದಾನಿಯ ಹೊಸ ವಂಚನೆ?

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ಗುರುವಾರ ವರದಿಯಾಗಿದೆ. ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಿದ್ದರು ಎನ್ನಲಾಗಿದೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲಾ ನ್ಯಾಯಾಲಯದಲ್ಲಿರುವ ಅಮೆರಿಕದ ಅಟಾರ್ನಿ ಕಚೇರಿಯ ಮಾಹಿತಿ ಪ್ರಕಾರ, ಗೌತಮ್ ಅದಾನಿ, ಸಾಗರ್‌ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್‌ ವಿರುದ್ಧ ಐದು ಅಂಶಗಳ ಕ್ರಿಮಿನಲ್‌ ಆರೋಪಪಟ್ಟಿ ಸಲ್ಲಿಸಲಾಗಿದೆ. ಬಂಡವಾಳ ಆಕರ್ಷಿಸಲು ಅಮೆರಿಕದ ಹೂಡಿಕೆದಾರರು ಹಾಗೂ ಜಾಗತಿಕ ಹಣಕಾಸು ಸಂಸ್ಥೆಗಳಿಗೆ ಸುಳ್ಳು ಮತ್ತು ತಪ್ಪು ಹೇಳಿಕೆ ನೀಡಿರುವ ಆರೋಪ ಇವರ ಮೇಲಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ನ್ಯಾಯಾಧೀಶರು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ದ ಬಂಧನ ವಾರೆಂಟ್‌ಗಳನ್ನು ಹೊರಡಿಸಿದ್ದಾರೆ. ಆ ವಾರೆಂಟ್‌ಗಳನ್ನು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಪ್ರಾಸಿಕ್ಯೂಟರ್‌ಗಳು ಯೋಜಿಸಿದ್ದಾರೆ ಎಂದು ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ ರಾಯಿಟರ್ಸ್ ತಿಳಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್‌ ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ವ್ಯವಹಾರ ನಡೆಸಿದ್ದ ಕಂಪನಿಯ ಮಾಜಿ ಅಧಿಕಾರಿಗಳಾದ ರಂಜಿತ್ ಗುಪ್ತಾ ಹಾಗೂ ರೂಪೇಶ್ ಅಗರವಾಲ್‌ ಹಾಗೂ ಕೆನಡಾ ಮೂಲದ ಹೂಡಿಕೆದಾರರಾದ ದೀಪಕ್ ಮಲ್ಹೋತ್ರಾ ಮತ್ತು ಸೌರಬ್‌ ಅಗರವಾಲ್‌ ಅವರು ಲಂಚ ನೀಡಿರುವುದು ವಿದೇಶಿ ಭ್ರಷ್ಟ ಕಾರ್ಯಾಚರಣೆ ಕಾಯ್ದೆಯಡಿ ಅಪರಾಧವಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.

“ತಮ್ಮ ವ್ಯವಹಾರಗಳಿಗೆ ಅನುಕೂಲವಾಗುವಂತೆ ಭಾರತ ಸರ್ಕಾರದ ಅಧಿಕಾರಿಗಳಿಗೆ ಆರೋಪಿಗಳು ಲಂಚ ನೀಡಿದ್ದಾರೆ. ಲಂಚ ಹಾಗೂ ಭ್ರಷ್ಟಾಚಾರದ ಕುರಿತು ಸುಳ್ಳು ಹೇಳಿಕೆಗಳ ಮೂಲಕ ಅದಾನಿ ಹಾಗೂ ಇತರ ಆರೋಪಿಗಳು ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇತರ ಆರೋಪಿಗಳು ತನಿಖೆಗೆ ಅಡ್ಡಿಪಡಿಸುವ ಮೂಲಕ ಲಂಚದ ಆರೋಪವನ್ನು ಮರೆಮಾಚಲು ಯತ್ನಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ದೋಷಾರೋಪಣೆಯ ಪ್ರಕಾರ, ಆರೋಪಿಗಳು ವಂಚನೆಗೆ ಗೌತಮ್ ಅದಾಮಿ ಅವರನ್ನು “ನ್ಯೂಮೆರೊ ಯುನೊ” ಮತ್ತು “ಬಿಗ್ ಮ್ಯಾನ್‌” ಎಂಬ ಕೋಡ್ ಹೆಸರುಗಳೊಂದಿಗೆ ಖಾಸಗಿಯಾಗಿ ಕರೆಯತ್ತಿದ್ದರು. ಸಾಗರ್ ಅದಾನಿ ಲಂಚದ ವ್ಯವಹಾರದ ಬಗ್ಗೆ ನಿಗಾ ಇಡಲು ತಮ್ಮ ಸೆಲ್ ಫೋನ್ ಬಳಸಿದ್ದಾರೆ ಎಂದು ಹೇಳಲಾಗಿದೆ. ಅದಾನಿಗಳು, ವಿನೀತ್ ಜೈನ್ ಸೇರಿದಂತೆ ಅದಾನಿ ಗ್ರೀನ್ ಎನರ್ಜಿಯ ಕಾರ್ಯನಿರ್ವಾಹಕರು ಸಾಲದಾತರು ಮತ್ತು ಹೂಡಿಕೆದಾರರಿಂದ ಭ್ರಷ್ಟಾಚಾರವನ್ನು ಮರೆಮಾಚುವ ಮೂಲಕ ತಮ್ಮ ಕಂಪನಿಗೆ 3 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಸಾಲ ಮತ್ತು ಬಾಂಡ್‌ಗಳನ್ನು ಸಂಗ್ರಹಿಸಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

“ಈ ಪ್ರಕರಣ ಕುರಿತ ತನಿಖೆಯನ್ನು ತಡೆಯಲು ಎಫ್‌ಬಿಐ, ನ್ಯಾಯಾಂಗ ಇಲಾಖೆ ಮತ್ತು ಸೆಕ್ಯುರಿಟಿ ಅಂಡ್ ಎಕ್ಸ್‌ಚೇಂಜ್ ಕಮಿಷನ್‌ ಕೂಡಾ ಪ್ರಯತ್ನಿಸುತ್ತಿದೆ” ಎಂದು ಪ್ರಾಸಿಕ್ಯೂಟರ್ ಆರೋಪಿಸಿದ್ದಾಗಿ ವರದಿಯಾಗಿದೆ.
ಪ್ರಕರಣದ ತನಿಖೆಯನ್ನು ನ್ಯೂಯಾರ್ಕ್‌ನ ಎಫ್‌ಬಿಐ ಕಚೇರಿ ನಡೆಸುತ್ತಿದೆ.

ಭಾರತೀಯ ಕಾಲಮಾನದ ಪ್ರಕಾರ ಇಂದು (ನ.21) ಬೆಳಿಗ್ಗೆ ವರದಿ ಹೊರಬಿದ್ದಿದೆ. ಅದಾನಿ ಗ್ರೂಪ್ ತಮ್ಮ ಮೇಲಿನ ಆರೋಪದ ಕುರಿತು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಕೂಡ ಪ್ರತಿಕ್ರಿಯಿಸಿಲ್ಲ. ಆರೋಪಿಗಳ ಪರ ವಕೀಲರನ್ನು ತಕ್ಷಣ ಗುರುತಿಸಲು ಸಾಧ್ಯವಾಗಿಲ್ಲ ಎಂದು business-standard.com ವರದಿ ಮಾಡಿದೆ.

ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾದರೂ ಗೃಹಲಕ್ಷ್ಮಿ ಹಣ ಸಿಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾದರೂ ಗೃಹಲಕ್ಷ್ಮಿ ಹಣ ಸಿಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...