Homeಮುಖಪುಟಅದಾನಿ ಸಹೋದರ ವಿನೋದ್ ಶಾಂತಿಲಾಲ್ ಅದಾನಿ ಶ್ರೀಮಂತ ಅನಿವಾಸಿ ಭಾರತೀಯ!

ಅದಾನಿ ಸಹೋದರ ವಿನೋದ್ ಶಾಂತಿಲಾಲ್ ಅದಾನಿ ಶ್ರೀಮಂತ ಅನಿವಾಸಿ ಭಾರತೀಯ!

- Advertisement -
- Advertisement -

ಭಾರತದ ನಂಬರ್ ಒನ್ ಶ್ರೀಮಂತ, ಜಗತ್ತಿನ ಎರಡನೇ ಅತಿ ದೊಡ್ಡ ಶ್ರೀಮಂತ ಗೌತಮ್ ಅದಾನಿಯವರ ಸಹೋದರ ವಿನೋದ್ ಶಾಂತಿಲಾಲ್ ಅದಾನಿ ಶ್ರೀಮಂತ ಅನಿವಾಸಿ ಭಾರತೀಯ (NRI) ಎನಿಸಿದ್ದಾರೆ.

ಉದ್ಯಮಿಯಾಗಿರುವ ವಿನೋದ್ ಅದಾನಿಯವರು ದುಬೈನಲ್ಲಿ ನೆಲೆಸಿದ್ದು ಅಲ್ಲಿ ಮತ್ತು ಸಿಂಗಾಪೂರ್, ಜಕರ್ತಾದಲ್ಲಿ ವ್ಯವಹಾರ ನಡೆಸುತ್ತಿದ್ದಾರೆ. ಅವರ ನಿವ್ವಳ ಆಸ್ತಿ 1.69 ಲಕ್ಷ ಕೋಟಿ ಇದೆ ಎನ್ನಲಾಗಿದೆ.

1976ರಲ್ಲಿ ಮುಂಬೈನಲ್ಲಿ ಟೆಕ್ಸ್‌ಟೈಲ್ ಉದ್ಯಮ ಆರಂಭಿಸಿದ ಅವರು 1994ರಲ್ಲಿ ಮಧ್ಯ ಪ್ರಾಚ್ಯ ದೇಶಗಳಗೆ ಉದ್ಯಮ ವಿಸ್ತರಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಅವರ ಆಸ್ತಿಯಲ್ಲಿ 37,400 ಕೋಟಿ ರೂಗಳು ಸೇರ್ಪಡೆಯಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಂದರೆ ಅವರು ಪ್ರತಿ ದಿನ 102 ಕೋಟಿ ರೂ ಲಾಭ ಗಳಿಸಿದ್ದಾರೆ. ಅಲ್ಲದೆ ಅವರು ಭಾರತದ 6ನೇ ಅತಿ ದೊಡ್ಡ ಶ್ರೀಮಂತ ವ್ಯಕ್ತಿ ಎನಿಸಿದ್ದಾರೆ.

ಗೌತಮ್ ಆದಾನಿ ಸದ್ಯಕ್ಕೆ 10,94,400 ಕೋಟಿ ರೂಗಳೊಂದಿಗೆ ಜಗತ್ತಿನ ಎರಡನೇ ಅತಿ ದೊಡ್ಡ ಶ್ರೀಮಂತ ಎನಿಸಿದ್ದಾರೆ. ಕಳದೆ ಒಂದು ವರ್ಷದಿಂದ ಅವರ ಆದಾಯ ದಿನಕ್ಕೆ 1,600 ಕೋಟಿ ರೂಗಳಾಗಿವೆ.

ಇದೇ ವೇಳೆ ಗುಜರಾತ್ ರಾಜ್ಯದ ಕಛ್ ಪ್ರದೇಶದ ಅದಾನಿ ಕೆಮಿಕಲ್ಸ್ ಮತ್ತು ಮುಂದ್ರಾ ಬಂದರು ಯೋಜನೆಗಾಗಿ ಅರಣ್ಯ ಮತ್ತು ಪರಿಸರ ಇಲಾಖೆಯು ಅಕ್ರಮ ರೀತಿಯಲ್ಲಿ ಗೌತಮ್ ಅದಾನಿ ಕಂಪನಿಗೆ ಭೂ ಮಂಜೂರಾತಿ ಮಾಡಿದೆ. ಅದರಿಂದಾಗಿ ಗುಜರಾತ್ ರಾಜ್ಯ ಸರ್ಕಾರಕ್ಕೆ 58.64 ಕೋಟಿ ರೂಗಳಷ್ಟು ನಷ್ಟ ಉಂಟಾಗಿದೆ ಎಂದು ರಾಜ್ಯದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿ ಸಲ್ಲಿಸಿದೆ.

ಬುಧವಾರ ರಾಜ್ಯ ವಿಧಾನಸಭೆಯಲ್ಲಿ ತನ್ನ 5ನೇ ವರದಿ ಮಂಡಿಸಿದ ಸಮಿತಿಯು “ಮೂರು ತಿಂಗಳಲ್ಲಿ ಕಂಪನಿಯಿಂದ ಪೂರ್ಣ ಮೊತ್ತವನ್ನು ವಸೂಲಿ ಮಾಡಬೇಕು ಮತ್ತು ಭೂಮಿಯನ್ನು ಅನುಚಿತವಾಗಿ ವರ್ಗೀಕರಿಸಿ, ರಾಜ್ಯ ಸರ್ಕಾರಕ್ಕೆ ನಷ್ಟ ಉಂಟುಮಾಡಿದ ಮತ್ತು ಕಂಪನಿಗೆ ಅನಾವಶ್ಯಕ ಲಾಭ ತಂದುಕೊಡುವಂತೆ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು” ಶಿಫಾರಸ್ಸು ಮಾಡಿದೆ.

ಇದನ್ನೂ ಓದಿ; ಅದಾನಿ ಸಂಸ್ಥೆಗೆ ಅಕ್ರಮ ಭೂ ಮಂಜೂರಾತಿ: ಗುಜರಾತ್ ಸರ್ಕಾರಕ್ಕೆ 58 ಕೋಟಿ ರೂ ನಷ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...