Homeಮುಖಪುಟಅದಾನಿಯ ವಿವಾದಾತ್ಮಕ ಕಂಪನಿಯ ಕಲ್ಲಿದ್ದಲು ಭಾರತಕ್ಕೆ: ಆಸ್ಟ್ರೇಲಿಯಾದಲ್ಲಿ ತೀವ್ರಗೊಂಡ ಪ್ರತಿಭಟನೆ

ಅದಾನಿಯ ವಿವಾದಾತ್ಮಕ ಕಂಪನಿಯ ಕಲ್ಲಿದ್ದಲು ಭಾರತಕ್ಕೆ: ಆಸ್ಟ್ರೇಲಿಯಾದಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ ನಲ್ಲಿರುವ ಭಾರತದ ಉದ್ಯಮಿ ಗೌತಮ್ ಆದಾನಿಯವರ ಕಾರ್ಮೈಕಲ್ ಕಲ್ಲಿದ್ದಲು ಗಣಿ ವಿರುದ್ಧ ಅಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಹಲವಾರು ವರ್ಷಗಳಿಂದ ಸಾಕಷ್ಟು ವಿವಾದಗಳಿಗೆ ಕಾರಣವಾದ ಈ ಕಂಪನಿಯಿಂದ ಭಾರತದಲ್ಲಿ ವಿದ್ಯುತ್ ತಯಾರಿಸಲು ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಸ್ಟ್ರೇಲಿಯಾದಲ್ಲಿ ‘ಸ್ಟಾಪ್ ಅದಾನಿ’ ಎಂಬ ಸಂಘಟನೆಗಳ ಸಮೂಹವು ಕಾರ್ಮೈಕಲ್ ಕಲ್ಲಿದ್ದಲು ಗಣಿಗಾರಿಕೆಯಿಂದ ಪರಿಸರದ ಮೇಲೆ ಬೀರಬಹುದಾದ ಋಣಾತ್ಮಕ ಪ್ರಭಾವದಿಂದಾಗಿ ಯೋಜನೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅಲ್ಲಿನ ಚುನಾವಣೆಯ ಮೇಲೂ ಈ ಹೋರಾಟ ಪ್ರಭಾವ ಬೀರಿದೆ. ಇಷ್ಟೆಲ್ಲದರ ನಡುವೆಯೂ ಅದಾನಿ ಕಂಪನಿಯು ಈ ಡಿಸೆಂಬರ್‌ ವೇಳೆಗೆ ತನ್ನ ಮೊದಲ ಕಲ್ಲಿದ್ದಲು ರಫ್ತು ಆರಂಭಿಸುವುದಾಗಿ ಘೋಷಿಸಿಕೊಂಡಿದೆ.

ಕಂಪನಿಯು ಮುಂದಿನ 30 ವರ್ಷಗಳವರೆಗೆ ವಾರ್ಷಿಕವಾಗಿ 10 ಮಿಲಿಯನ್ ಟನ್ ಉಷ್ಣ ಕಲ್ಲಿದ್ದಲನ್ನು ಪೂರೈಸುವ ಗುರಿಯನ್ನು ಹೊಂದಿದೆ. ಅದರಿಂದ ಭಾರತ ಮತ್ತು ದಕ್ಷಿಣ ಏಷ್ಯಾದ ದೇಶಗಳಲ್ಲಿ ವಿದ್ಯುತ್ ತಯಾರಿಸಲಾಗುವುದು ಎನ್ನಲಾಗುತ್ತಿದೆ.

ಈ ಕಲ್ಲಿದ್ದಲು ಯೋಜನೆಯು ಕ್ವೀನ್ಸ್‌ಲ್ಯಾಂಡ್ ರಾಜ್ಯದ ಜನರಿಗೆ 1,500 ಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡುತ್ತದೆ ಎಂದು ಅದಾನಿ ಕಂಪನಿ ಘೋಷಿಸಿದೆ. ಆದರೆ ನಮಗೆ ಉದ್ಯೋಗ ಬೇಡ ಪರಿಸರ ಬೇಕು ಎಂದು ಅಲ್ಲಿನ ಪ್ರಜ್ಞಾವಂತರು ಹಠ ಹಿಡಿದಿದ್ದಾರೆ. SBI ಬ್ಯಾಂಕ್ ಅದಾನಿಗೆ ಒಂದು ಬಿಲಿಯನ್ ಡಾಲರ್ ಸಾಲ ಕೊಡಬಾರದು ಎಂದು ಆಸ್ಟ್ರೇಲಿಯಾದಲ್ಲಿ ನಿರಂತರ ಹೋರಾಟಗಳಾಗುತ್ತಿವೆ. ಕಳೆದ ವರ್ಷ ನವೆಂಬರ್‌ನಲ್ಲಿ ಸಿಡ್ನಿಯಲ್ಲಿ ಏಕದಿನ ಕ್ರಿಕೆಟ್ ಪಂದ್ಯ ನಡೆಯುತ್ತಿರುವಾಗ ಪ್ರತಿಭಟನಾಕಾರನೊಬ್ಬ ಆಟದ ಅಂಗಳಕ್ಕೆ ನುಗ್ಗಿ ಅದಾನಿಗೆ ಸಾಲ ಕೊಡಬೇಡಿ ಎಂದು ಭಿತ್ತಿಫಲಕ ಪ್ರದರ್ಶಿಸಿ ಗಮನ ಸೆಳೆದಿದ್ದರು.

ಒಂದು ಕಡೆ ಜಾಗತಿಕ ನಾಯಕರು ಒಟ್ಟು ಸೇರಿ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ) ನಡೆಸಿದರು. ಅಲ್ಲಿ ಹವಾಮಾನ ಹದಗೆಡಿಸುವ ಇಂಧನವನ್ನು ಬಳಸದಿರುವಂತೆ ಜಾಗತಿಕ ಗಡುವನ್ನು ನಿಗದಿಪಡಿಸುವ ಮಾತುಕತೆಗಳಾದವು. ಆದರೆ ಕಲ್ಲಿದ್ದಲು ಬಳಕೆಗೆ ಇಲ್ಲಿ ಉತ್ತೇಜನ ನೀಡಲಾಗುತ್ತಿದೆ. ಅದರಲ್ಲಿಯೂ ಚೀನಾ ಮತ್ತು ಭಾರತ ಇದರ ಅತಿ ದೊಡ್ಡ ಗ್ರಾಹಕರಾಗಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ.

ಭಾರತದ ಛತ್ತೀಸ್‌ಘಡದಲ್ಲಿಯೂ ಅದಾನಿ ಗಣಿಗಾರಿಕೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಚಳವಳಿ ತೀವ್ರಗೊಳಿಸಿದ್ದಾರೆ.

ಒಂದೆಡೆ ನಾವು ನವೀಕರಿಸಬಹುದಾದ ಇಂಧನಗಳನ್ನು ಕಾರ್ಯಸಾಧ್ಯವಾದ, ಕೈಗೆಟುಕುವ ಪರ್ಯಾಯವಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ ಎನ್ನುವ ಅದಾನಿ ಇನ್ನೊಂದೆಡೆ ಪರಿಸರಕ್ಕೆ ಹಾನಿಕಾರಕವಾದ ಇಂಧನಗಳ ಗಣಿಗಾರಿಕೆಯಲ್ಲಿ ನಿರತರಾಗಿದ್ದಾರೆ. ಅದಕ್ಕೆ SBI ನಂತಹ ಬ್ಯಾಂಕುಗಳ ಹಣಕಾಸಿನ ಸಹಾಯ ಮಾಡುತ್ತಿವೆ. ಇದರ ವಿರುದ್ಧದ ಹೋರಾಟಕ್ಕೆ ಜಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ; ಅದಾನಿಗೆ ಲಾಭ ಮಾಡಲು ವಿದ್ಯುತ್‍ ದರ ಏರಿಕೆ: ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...