Homeಮುಖಪುಟಅದಾನಿಯ ವಿವಾದಾತ್ಮಕ ಕಂಪನಿಯ ಕಲ್ಲಿದ್ದಲು ಭಾರತಕ್ಕೆ: ಆಸ್ಟ್ರೇಲಿಯಾದಲ್ಲಿ ತೀವ್ರಗೊಂಡ ಪ್ರತಿಭಟನೆ

ಅದಾನಿಯ ವಿವಾದಾತ್ಮಕ ಕಂಪನಿಯ ಕಲ್ಲಿದ್ದಲು ಭಾರತಕ್ಕೆ: ಆಸ್ಟ್ರೇಲಿಯಾದಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ ನಲ್ಲಿರುವ ಭಾರತದ ಉದ್ಯಮಿ ಗೌತಮ್ ಆದಾನಿಯವರ ಕಾರ್ಮೈಕಲ್ ಕಲ್ಲಿದ್ದಲು ಗಣಿ ವಿರುದ್ಧ ಅಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಹಲವಾರು ವರ್ಷಗಳಿಂದ ಸಾಕಷ್ಟು ವಿವಾದಗಳಿಗೆ ಕಾರಣವಾದ ಈ ಕಂಪನಿಯಿಂದ ಭಾರತದಲ್ಲಿ ವಿದ್ಯುತ್ ತಯಾರಿಸಲು ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಸ್ಟ್ರೇಲಿಯಾದಲ್ಲಿ ‘ಸ್ಟಾಪ್ ಅದಾನಿ’ ಎಂಬ ಸಂಘಟನೆಗಳ ಸಮೂಹವು ಕಾರ್ಮೈಕಲ್ ಕಲ್ಲಿದ್ದಲು ಗಣಿಗಾರಿಕೆಯಿಂದ ಪರಿಸರದ ಮೇಲೆ ಬೀರಬಹುದಾದ ಋಣಾತ್ಮಕ ಪ್ರಭಾವದಿಂದಾಗಿ ಯೋಜನೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅಲ್ಲಿನ ಚುನಾವಣೆಯ ಮೇಲೂ ಈ ಹೋರಾಟ ಪ್ರಭಾವ ಬೀರಿದೆ. ಇಷ್ಟೆಲ್ಲದರ ನಡುವೆಯೂ ಅದಾನಿ ಕಂಪನಿಯು ಈ ಡಿಸೆಂಬರ್‌ ವೇಳೆಗೆ ತನ್ನ ಮೊದಲ ಕಲ್ಲಿದ್ದಲು ರಫ್ತು ಆರಂಭಿಸುವುದಾಗಿ ಘೋಷಿಸಿಕೊಂಡಿದೆ.

ಕಂಪನಿಯು ಮುಂದಿನ 30 ವರ್ಷಗಳವರೆಗೆ ವಾರ್ಷಿಕವಾಗಿ 10 ಮಿಲಿಯನ್ ಟನ್ ಉಷ್ಣ ಕಲ್ಲಿದ್ದಲನ್ನು ಪೂರೈಸುವ ಗುರಿಯನ್ನು ಹೊಂದಿದೆ. ಅದರಿಂದ ಭಾರತ ಮತ್ತು ದಕ್ಷಿಣ ಏಷ್ಯಾದ ದೇಶಗಳಲ್ಲಿ ವಿದ್ಯುತ್ ತಯಾರಿಸಲಾಗುವುದು ಎನ್ನಲಾಗುತ್ತಿದೆ.

ಈ ಕಲ್ಲಿದ್ದಲು ಯೋಜನೆಯು ಕ್ವೀನ್ಸ್‌ಲ್ಯಾಂಡ್ ರಾಜ್ಯದ ಜನರಿಗೆ 1,500 ಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡುತ್ತದೆ ಎಂದು ಅದಾನಿ ಕಂಪನಿ ಘೋಷಿಸಿದೆ. ಆದರೆ ನಮಗೆ ಉದ್ಯೋಗ ಬೇಡ ಪರಿಸರ ಬೇಕು ಎಂದು ಅಲ್ಲಿನ ಪ್ರಜ್ಞಾವಂತರು ಹಠ ಹಿಡಿದಿದ್ದಾರೆ. SBI ಬ್ಯಾಂಕ್ ಅದಾನಿಗೆ ಒಂದು ಬಿಲಿಯನ್ ಡಾಲರ್ ಸಾಲ ಕೊಡಬಾರದು ಎಂದು ಆಸ್ಟ್ರೇಲಿಯಾದಲ್ಲಿ ನಿರಂತರ ಹೋರಾಟಗಳಾಗುತ್ತಿವೆ. ಕಳೆದ ವರ್ಷ ನವೆಂಬರ್‌ನಲ್ಲಿ ಸಿಡ್ನಿಯಲ್ಲಿ ಏಕದಿನ ಕ್ರಿಕೆಟ್ ಪಂದ್ಯ ನಡೆಯುತ್ತಿರುವಾಗ ಪ್ರತಿಭಟನಾಕಾರನೊಬ್ಬ ಆಟದ ಅಂಗಳಕ್ಕೆ ನುಗ್ಗಿ ಅದಾನಿಗೆ ಸಾಲ ಕೊಡಬೇಡಿ ಎಂದು ಭಿತ್ತಿಫಲಕ ಪ್ರದರ್ಶಿಸಿ ಗಮನ ಸೆಳೆದಿದ್ದರು.

ಒಂದು ಕಡೆ ಜಾಗತಿಕ ನಾಯಕರು ಒಟ್ಟು ಸೇರಿ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ) ನಡೆಸಿದರು. ಅಲ್ಲಿ ಹವಾಮಾನ ಹದಗೆಡಿಸುವ ಇಂಧನವನ್ನು ಬಳಸದಿರುವಂತೆ ಜಾಗತಿಕ ಗಡುವನ್ನು ನಿಗದಿಪಡಿಸುವ ಮಾತುಕತೆಗಳಾದವು. ಆದರೆ ಕಲ್ಲಿದ್ದಲು ಬಳಕೆಗೆ ಇಲ್ಲಿ ಉತ್ತೇಜನ ನೀಡಲಾಗುತ್ತಿದೆ. ಅದರಲ್ಲಿಯೂ ಚೀನಾ ಮತ್ತು ಭಾರತ ಇದರ ಅತಿ ದೊಡ್ಡ ಗ್ರಾಹಕರಾಗಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ.

ಭಾರತದ ಛತ್ತೀಸ್‌ಘಡದಲ್ಲಿಯೂ ಅದಾನಿ ಗಣಿಗಾರಿಕೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಚಳವಳಿ ತೀವ್ರಗೊಳಿಸಿದ್ದಾರೆ.

ಒಂದೆಡೆ ನಾವು ನವೀಕರಿಸಬಹುದಾದ ಇಂಧನಗಳನ್ನು ಕಾರ್ಯಸಾಧ್ಯವಾದ, ಕೈಗೆಟುಕುವ ಪರ್ಯಾಯವಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ ಎನ್ನುವ ಅದಾನಿ ಇನ್ನೊಂದೆಡೆ ಪರಿಸರಕ್ಕೆ ಹಾನಿಕಾರಕವಾದ ಇಂಧನಗಳ ಗಣಿಗಾರಿಕೆಯಲ್ಲಿ ನಿರತರಾಗಿದ್ದಾರೆ. ಅದಕ್ಕೆ SBI ನಂತಹ ಬ್ಯಾಂಕುಗಳ ಹಣಕಾಸಿನ ಸಹಾಯ ಮಾಡುತ್ತಿವೆ. ಇದರ ವಿರುದ್ಧದ ಹೋರಾಟಕ್ಕೆ ಜಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ; ಅದಾನಿಗೆ ಲಾಭ ಮಾಡಲು ವಿದ್ಯುತ್‍ ದರ ಏರಿಕೆ: ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...