Homeಮುಖಪುಟಅದಾನಿಯ ವಿವಾದಾತ್ಮಕ ಕಂಪನಿಯ ಕಲ್ಲಿದ್ದಲು ಭಾರತಕ್ಕೆ: ಆಸ್ಟ್ರೇಲಿಯಾದಲ್ಲಿ ತೀವ್ರಗೊಂಡ ಪ್ರತಿಭಟನೆ

ಅದಾನಿಯ ವಿವಾದಾತ್ಮಕ ಕಂಪನಿಯ ಕಲ್ಲಿದ್ದಲು ಭಾರತಕ್ಕೆ: ಆಸ್ಟ್ರೇಲಿಯಾದಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ ನಲ್ಲಿರುವ ಭಾರತದ ಉದ್ಯಮಿ ಗೌತಮ್ ಆದಾನಿಯವರ ಕಾರ್ಮೈಕಲ್ ಕಲ್ಲಿದ್ದಲು ಗಣಿ ವಿರುದ್ಧ ಅಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಹಲವಾರು ವರ್ಷಗಳಿಂದ ಸಾಕಷ್ಟು ವಿವಾದಗಳಿಗೆ ಕಾರಣವಾದ ಈ ಕಂಪನಿಯಿಂದ ಭಾರತದಲ್ಲಿ ವಿದ್ಯುತ್ ತಯಾರಿಸಲು ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಸ್ಟ್ರೇಲಿಯಾದಲ್ಲಿ ‘ಸ್ಟಾಪ್ ಅದಾನಿ’ ಎಂಬ ಸಂಘಟನೆಗಳ ಸಮೂಹವು ಕಾರ್ಮೈಕಲ್ ಕಲ್ಲಿದ್ದಲು ಗಣಿಗಾರಿಕೆಯಿಂದ ಪರಿಸರದ ಮೇಲೆ ಬೀರಬಹುದಾದ ಋಣಾತ್ಮಕ ಪ್ರಭಾವದಿಂದಾಗಿ ಯೋಜನೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅಲ್ಲಿನ ಚುನಾವಣೆಯ ಮೇಲೂ ಈ ಹೋರಾಟ ಪ್ರಭಾವ ಬೀರಿದೆ. ಇಷ್ಟೆಲ್ಲದರ ನಡುವೆಯೂ ಅದಾನಿ ಕಂಪನಿಯು ಈ ಡಿಸೆಂಬರ್‌ ವೇಳೆಗೆ ತನ್ನ ಮೊದಲ ಕಲ್ಲಿದ್ದಲು ರಫ್ತು ಆರಂಭಿಸುವುದಾಗಿ ಘೋಷಿಸಿಕೊಂಡಿದೆ.

ಕಂಪನಿಯು ಮುಂದಿನ 30 ವರ್ಷಗಳವರೆಗೆ ವಾರ್ಷಿಕವಾಗಿ 10 ಮಿಲಿಯನ್ ಟನ್ ಉಷ್ಣ ಕಲ್ಲಿದ್ದಲನ್ನು ಪೂರೈಸುವ ಗುರಿಯನ್ನು ಹೊಂದಿದೆ. ಅದರಿಂದ ಭಾರತ ಮತ್ತು ದಕ್ಷಿಣ ಏಷ್ಯಾದ ದೇಶಗಳಲ್ಲಿ ವಿದ್ಯುತ್ ತಯಾರಿಸಲಾಗುವುದು ಎನ್ನಲಾಗುತ್ತಿದೆ.

ಈ ಕಲ್ಲಿದ್ದಲು ಯೋಜನೆಯು ಕ್ವೀನ್ಸ್‌ಲ್ಯಾಂಡ್ ರಾಜ್ಯದ ಜನರಿಗೆ 1,500 ಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡುತ್ತದೆ ಎಂದು ಅದಾನಿ ಕಂಪನಿ ಘೋಷಿಸಿದೆ. ಆದರೆ ನಮಗೆ ಉದ್ಯೋಗ ಬೇಡ ಪರಿಸರ ಬೇಕು ಎಂದು ಅಲ್ಲಿನ ಪ್ರಜ್ಞಾವಂತರು ಹಠ ಹಿಡಿದಿದ್ದಾರೆ. SBI ಬ್ಯಾಂಕ್ ಅದಾನಿಗೆ ಒಂದು ಬಿಲಿಯನ್ ಡಾಲರ್ ಸಾಲ ಕೊಡಬಾರದು ಎಂದು ಆಸ್ಟ್ರೇಲಿಯಾದಲ್ಲಿ ನಿರಂತರ ಹೋರಾಟಗಳಾಗುತ್ತಿವೆ. ಕಳೆದ ವರ್ಷ ನವೆಂಬರ್‌ನಲ್ಲಿ ಸಿಡ್ನಿಯಲ್ಲಿ ಏಕದಿನ ಕ್ರಿಕೆಟ್ ಪಂದ್ಯ ನಡೆಯುತ್ತಿರುವಾಗ ಪ್ರತಿಭಟನಾಕಾರನೊಬ್ಬ ಆಟದ ಅಂಗಳಕ್ಕೆ ನುಗ್ಗಿ ಅದಾನಿಗೆ ಸಾಲ ಕೊಡಬೇಡಿ ಎಂದು ಭಿತ್ತಿಫಲಕ ಪ್ರದರ್ಶಿಸಿ ಗಮನ ಸೆಳೆದಿದ್ದರು.

ಒಂದು ಕಡೆ ಜಾಗತಿಕ ನಾಯಕರು ಒಟ್ಟು ಸೇರಿ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ) ನಡೆಸಿದರು. ಅಲ್ಲಿ ಹವಾಮಾನ ಹದಗೆಡಿಸುವ ಇಂಧನವನ್ನು ಬಳಸದಿರುವಂತೆ ಜಾಗತಿಕ ಗಡುವನ್ನು ನಿಗದಿಪಡಿಸುವ ಮಾತುಕತೆಗಳಾದವು. ಆದರೆ ಕಲ್ಲಿದ್ದಲು ಬಳಕೆಗೆ ಇಲ್ಲಿ ಉತ್ತೇಜನ ನೀಡಲಾಗುತ್ತಿದೆ. ಅದರಲ್ಲಿಯೂ ಚೀನಾ ಮತ್ತು ಭಾರತ ಇದರ ಅತಿ ದೊಡ್ಡ ಗ್ರಾಹಕರಾಗಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ.

ಭಾರತದ ಛತ್ತೀಸ್‌ಘಡದಲ್ಲಿಯೂ ಅದಾನಿ ಗಣಿಗಾರಿಕೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಚಳವಳಿ ತೀವ್ರಗೊಳಿಸಿದ್ದಾರೆ.

ಒಂದೆಡೆ ನಾವು ನವೀಕರಿಸಬಹುದಾದ ಇಂಧನಗಳನ್ನು ಕಾರ್ಯಸಾಧ್ಯವಾದ, ಕೈಗೆಟುಕುವ ಪರ್ಯಾಯವಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ ಎನ್ನುವ ಅದಾನಿ ಇನ್ನೊಂದೆಡೆ ಪರಿಸರಕ್ಕೆ ಹಾನಿಕಾರಕವಾದ ಇಂಧನಗಳ ಗಣಿಗಾರಿಕೆಯಲ್ಲಿ ನಿರತರಾಗಿದ್ದಾರೆ. ಅದಕ್ಕೆ SBI ನಂತಹ ಬ್ಯಾಂಕುಗಳ ಹಣಕಾಸಿನ ಸಹಾಯ ಮಾಡುತ್ತಿವೆ. ಇದರ ವಿರುದ್ಧದ ಹೋರಾಟಕ್ಕೆ ಜಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ; ಅದಾನಿಗೆ ಲಾಭ ಮಾಡಲು ವಿದ್ಯುತ್‍ ದರ ಏರಿಕೆ: ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...