Homeಮುಖಪುಟಅದಾನಿಯ ವಿವಾದಾತ್ಮಕ ಕಂಪನಿಯ ಕಲ್ಲಿದ್ದಲು ಭಾರತಕ್ಕೆ: ಆಸ್ಟ್ರೇಲಿಯಾದಲ್ಲಿ ತೀವ್ರಗೊಂಡ ಪ್ರತಿಭಟನೆ

ಅದಾನಿಯ ವಿವಾದಾತ್ಮಕ ಕಂಪನಿಯ ಕಲ್ಲಿದ್ದಲು ಭಾರತಕ್ಕೆ: ಆಸ್ಟ್ರೇಲಿಯಾದಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ ನಲ್ಲಿರುವ ಭಾರತದ ಉದ್ಯಮಿ ಗೌತಮ್ ಆದಾನಿಯವರ ಕಾರ್ಮೈಕಲ್ ಕಲ್ಲಿದ್ದಲು ಗಣಿ ವಿರುದ್ಧ ಅಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಹಲವಾರು ವರ್ಷಗಳಿಂದ ಸಾಕಷ್ಟು ವಿವಾದಗಳಿಗೆ ಕಾರಣವಾದ ಈ ಕಂಪನಿಯಿಂದ ಭಾರತದಲ್ಲಿ ವಿದ್ಯುತ್ ತಯಾರಿಸಲು ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಸ್ಟ್ರೇಲಿಯಾದಲ್ಲಿ ‘ಸ್ಟಾಪ್ ಅದಾನಿ’ ಎಂಬ ಸಂಘಟನೆಗಳ ಸಮೂಹವು ಕಾರ್ಮೈಕಲ್ ಕಲ್ಲಿದ್ದಲು ಗಣಿಗಾರಿಕೆಯಿಂದ ಪರಿಸರದ ಮೇಲೆ ಬೀರಬಹುದಾದ ಋಣಾತ್ಮಕ ಪ್ರಭಾವದಿಂದಾಗಿ ಯೋಜನೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅಲ್ಲಿನ ಚುನಾವಣೆಯ ಮೇಲೂ ಈ ಹೋರಾಟ ಪ್ರಭಾವ ಬೀರಿದೆ. ಇಷ್ಟೆಲ್ಲದರ ನಡುವೆಯೂ ಅದಾನಿ ಕಂಪನಿಯು ಈ ಡಿಸೆಂಬರ್‌ ವೇಳೆಗೆ ತನ್ನ ಮೊದಲ ಕಲ್ಲಿದ್ದಲು ರಫ್ತು ಆರಂಭಿಸುವುದಾಗಿ ಘೋಷಿಸಿಕೊಂಡಿದೆ.

ಕಂಪನಿಯು ಮುಂದಿನ 30 ವರ್ಷಗಳವರೆಗೆ ವಾರ್ಷಿಕವಾಗಿ 10 ಮಿಲಿಯನ್ ಟನ್ ಉಷ್ಣ ಕಲ್ಲಿದ್ದಲನ್ನು ಪೂರೈಸುವ ಗುರಿಯನ್ನು ಹೊಂದಿದೆ. ಅದರಿಂದ ಭಾರತ ಮತ್ತು ದಕ್ಷಿಣ ಏಷ್ಯಾದ ದೇಶಗಳಲ್ಲಿ ವಿದ್ಯುತ್ ತಯಾರಿಸಲಾಗುವುದು ಎನ್ನಲಾಗುತ್ತಿದೆ.

ಈ ಕಲ್ಲಿದ್ದಲು ಯೋಜನೆಯು ಕ್ವೀನ್ಸ್‌ಲ್ಯಾಂಡ್ ರಾಜ್ಯದ ಜನರಿಗೆ 1,500 ಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡುತ್ತದೆ ಎಂದು ಅದಾನಿ ಕಂಪನಿ ಘೋಷಿಸಿದೆ. ಆದರೆ ನಮಗೆ ಉದ್ಯೋಗ ಬೇಡ ಪರಿಸರ ಬೇಕು ಎಂದು ಅಲ್ಲಿನ ಪ್ರಜ್ಞಾವಂತರು ಹಠ ಹಿಡಿದಿದ್ದಾರೆ. SBI ಬ್ಯಾಂಕ್ ಅದಾನಿಗೆ ಒಂದು ಬಿಲಿಯನ್ ಡಾಲರ್ ಸಾಲ ಕೊಡಬಾರದು ಎಂದು ಆಸ್ಟ್ರೇಲಿಯಾದಲ್ಲಿ ನಿರಂತರ ಹೋರಾಟಗಳಾಗುತ್ತಿವೆ. ಕಳೆದ ವರ್ಷ ನವೆಂಬರ್‌ನಲ್ಲಿ ಸಿಡ್ನಿಯಲ್ಲಿ ಏಕದಿನ ಕ್ರಿಕೆಟ್ ಪಂದ್ಯ ನಡೆಯುತ್ತಿರುವಾಗ ಪ್ರತಿಭಟನಾಕಾರನೊಬ್ಬ ಆಟದ ಅಂಗಳಕ್ಕೆ ನುಗ್ಗಿ ಅದಾನಿಗೆ ಸಾಲ ಕೊಡಬೇಡಿ ಎಂದು ಭಿತ್ತಿಫಲಕ ಪ್ರದರ್ಶಿಸಿ ಗಮನ ಸೆಳೆದಿದ್ದರು.

ಒಂದು ಕಡೆ ಜಾಗತಿಕ ನಾಯಕರು ಒಟ್ಟು ಸೇರಿ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ) ನಡೆಸಿದರು. ಅಲ್ಲಿ ಹವಾಮಾನ ಹದಗೆಡಿಸುವ ಇಂಧನವನ್ನು ಬಳಸದಿರುವಂತೆ ಜಾಗತಿಕ ಗಡುವನ್ನು ನಿಗದಿಪಡಿಸುವ ಮಾತುಕತೆಗಳಾದವು. ಆದರೆ ಕಲ್ಲಿದ್ದಲು ಬಳಕೆಗೆ ಇಲ್ಲಿ ಉತ್ತೇಜನ ನೀಡಲಾಗುತ್ತಿದೆ. ಅದರಲ್ಲಿಯೂ ಚೀನಾ ಮತ್ತು ಭಾರತ ಇದರ ಅತಿ ದೊಡ್ಡ ಗ್ರಾಹಕರಾಗಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ.

ಭಾರತದ ಛತ್ತೀಸ್‌ಘಡದಲ್ಲಿಯೂ ಅದಾನಿ ಗಣಿಗಾರಿಕೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಚಳವಳಿ ತೀವ್ರಗೊಳಿಸಿದ್ದಾರೆ.

ಒಂದೆಡೆ ನಾವು ನವೀಕರಿಸಬಹುದಾದ ಇಂಧನಗಳನ್ನು ಕಾರ್ಯಸಾಧ್ಯವಾದ, ಕೈಗೆಟುಕುವ ಪರ್ಯಾಯವಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ ಎನ್ನುವ ಅದಾನಿ ಇನ್ನೊಂದೆಡೆ ಪರಿಸರಕ್ಕೆ ಹಾನಿಕಾರಕವಾದ ಇಂಧನಗಳ ಗಣಿಗಾರಿಕೆಯಲ್ಲಿ ನಿರತರಾಗಿದ್ದಾರೆ. ಅದಕ್ಕೆ SBI ನಂತಹ ಬ್ಯಾಂಕುಗಳ ಹಣಕಾಸಿನ ಸಹಾಯ ಮಾಡುತ್ತಿವೆ. ಇದರ ವಿರುದ್ಧದ ಹೋರಾಟಕ್ಕೆ ಜಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ; ಅದಾನಿಗೆ ಲಾಭ ಮಾಡಲು ವಿದ್ಯುತ್‍ ದರ ಏರಿಕೆ: ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...