Homeಮುಖಪುಟಅದಾನಿಯ ವಿವಾದಾತ್ಮಕ ಕಂಪನಿಯ ಕಲ್ಲಿದ್ದಲು ಭಾರತಕ್ಕೆ: ಆಸ್ಟ್ರೇಲಿಯಾದಲ್ಲಿ ತೀವ್ರಗೊಂಡ ಪ್ರತಿಭಟನೆ

ಅದಾನಿಯ ವಿವಾದಾತ್ಮಕ ಕಂಪನಿಯ ಕಲ್ಲಿದ್ದಲು ಭಾರತಕ್ಕೆ: ಆಸ್ಟ್ರೇಲಿಯಾದಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ ನಲ್ಲಿರುವ ಭಾರತದ ಉದ್ಯಮಿ ಗೌತಮ್ ಆದಾನಿಯವರ ಕಾರ್ಮೈಕಲ್ ಕಲ್ಲಿದ್ದಲು ಗಣಿ ವಿರುದ್ಧ ಅಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಹಲವಾರು ವರ್ಷಗಳಿಂದ ಸಾಕಷ್ಟು ವಿವಾದಗಳಿಗೆ ಕಾರಣವಾದ ಈ ಕಂಪನಿಯಿಂದ ಭಾರತದಲ್ಲಿ ವಿದ್ಯುತ್ ತಯಾರಿಸಲು ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಸ್ಟ್ರೇಲಿಯಾದಲ್ಲಿ ‘ಸ್ಟಾಪ್ ಅದಾನಿ’ ಎಂಬ ಸಂಘಟನೆಗಳ ಸಮೂಹವು ಕಾರ್ಮೈಕಲ್ ಕಲ್ಲಿದ್ದಲು ಗಣಿಗಾರಿಕೆಯಿಂದ ಪರಿಸರದ ಮೇಲೆ ಬೀರಬಹುದಾದ ಋಣಾತ್ಮಕ ಪ್ರಭಾವದಿಂದಾಗಿ ಯೋಜನೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅಲ್ಲಿನ ಚುನಾವಣೆಯ ಮೇಲೂ ಈ ಹೋರಾಟ ಪ್ರಭಾವ ಬೀರಿದೆ. ಇಷ್ಟೆಲ್ಲದರ ನಡುವೆಯೂ ಅದಾನಿ ಕಂಪನಿಯು ಈ ಡಿಸೆಂಬರ್‌ ವೇಳೆಗೆ ತನ್ನ ಮೊದಲ ಕಲ್ಲಿದ್ದಲು ರಫ್ತು ಆರಂಭಿಸುವುದಾಗಿ ಘೋಷಿಸಿಕೊಂಡಿದೆ.

ಕಂಪನಿಯು ಮುಂದಿನ 30 ವರ್ಷಗಳವರೆಗೆ ವಾರ್ಷಿಕವಾಗಿ 10 ಮಿಲಿಯನ್ ಟನ್ ಉಷ್ಣ ಕಲ್ಲಿದ್ದಲನ್ನು ಪೂರೈಸುವ ಗುರಿಯನ್ನು ಹೊಂದಿದೆ. ಅದರಿಂದ ಭಾರತ ಮತ್ತು ದಕ್ಷಿಣ ಏಷ್ಯಾದ ದೇಶಗಳಲ್ಲಿ ವಿದ್ಯುತ್ ತಯಾರಿಸಲಾಗುವುದು ಎನ್ನಲಾಗುತ್ತಿದೆ.

ಈ ಕಲ್ಲಿದ್ದಲು ಯೋಜನೆಯು ಕ್ವೀನ್ಸ್‌ಲ್ಯಾಂಡ್ ರಾಜ್ಯದ ಜನರಿಗೆ 1,500 ಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡುತ್ತದೆ ಎಂದು ಅದಾನಿ ಕಂಪನಿ ಘೋಷಿಸಿದೆ. ಆದರೆ ನಮಗೆ ಉದ್ಯೋಗ ಬೇಡ ಪರಿಸರ ಬೇಕು ಎಂದು ಅಲ್ಲಿನ ಪ್ರಜ್ಞಾವಂತರು ಹಠ ಹಿಡಿದಿದ್ದಾರೆ. SBI ಬ್ಯಾಂಕ್ ಅದಾನಿಗೆ ಒಂದು ಬಿಲಿಯನ್ ಡಾಲರ್ ಸಾಲ ಕೊಡಬಾರದು ಎಂದು ಆಸ್ಟ್ರೇಲಿಯಾದಲ್ಲಿ ನಿರಂತರ ಹೋರಾಟಗಳಾಗುತ್ತಿವೆ. ಕಳೆದ ವರ್ಷ ನವೆಂಬರ್‌ನಲ್ಲಿ ಸಿಡ್ನಿಯಲ್ಲಿ ಏಕದಿನ ಕ್ರಿಕೆಟ್ ಪಂದ್ಯ ನಡೆಯುತ್ತಿರುವಾಗ ಪ್ರತಿಭಟನಾಕಾರನೊಬ್ಬ ಆಟದ ಅಂಗಳಕ್ಕೆ ನುಗ್ಗಿ ಅದಾನಿಗೆ ಸಾಲ ಕೊಡಬೇಡಿ ಎಂದು ಭಿತ್ತಿಫಲಕ ಪ್ರದರ್ಶಿಸಿ ಗಮನ ಸೆಳೆದಿದ್ದರು.

ಒಂದು ಕಡೆ ಜಾಗತಿಕ ನಾಯಕರು ಒಟ್ಟು ಸೇರಿ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ) ನಡೆಸಿದರು. ಅಲ್ಲಿ ಹವಾಮಾನ ಹದಗೆಡಿಸುವ ಇಂಧನವನ್ನು ಬಳಸದಿರುವಂತೆ ಜಾಗತಿಕ ಗಡುವನ್ನು ನಿಗದಿಪಡಿಸುವ ಮಾತುಕತೆಗಳಾದವು. ಆದರೆ ಕಲ್ಲಿದ್ದಲು ಬಳಕೆಗೆ ಇಲ್ಲಿ ಉತ್ತೇಜನ ನೀಡಲಾಗುತ್ತಿದೆ. ಅದರಲ್ಲಿಯೂ ಚೀನಾ ಮತ್ತು ಭಾರತ ಇದರ ಅತಿ ದೊಡ್ಡ ಗ್ರಾಹಕರಾಗಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ.

ಭಾರತದ ಛತ್ತೀಸ್‌ಘಡದಲ್ಲಿಯೂ ಅದಾನಿ ಗಣಿಗಾರಿಕೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಚಳವಳಿ ತೀವ್ರಗೊಳಿಸಿದ್ದಾರೆ.

ಒಂದೆಡೆ ನಾವು ನವೀಕರಿಸಬಹುದಾದ ಇಂಧನಗಳನ್ನು ಕಾರ್ಯಸಾಧ್ಯವಾದ, ಕೈಗೆಟುಕುವ ಪರ್ಯಾಯವಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ ಎನ್ನುವ ಅದಾನಿ ಇನ್ನೊಂದೆಡೆ ಪರಿಸರಕ್ಕೆ ಹಾನಿಕಾರಕವಾದ ಇಂಧನಗಳ ಗಣಿಗಾರಿಕೆಯಲ್ಲಿ ನಿರತರಾಗಿದ್ದಾರೆ. ಅದಕ್ಕೆ SBI ನಂತಹ ಬ್ಯಾಂಕುಗಳ ಹಣಕಾಸಿನ ಸಹಾಯ ಮಾಡುತ್ತಿವೆ. ಇದರ ವಿರುದ್ಧದ ಹೋರಾಟಕ್ಕೆ ಜಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ; ಅದಾನಿಗೆ ಲಾಭ ಮಾಡಲು ವಿದ್ಯುತ್‍ ದರ ಏರಿಕೆ: ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...