Homeಮುಖಪುಟಅದಾನಿಯ ವಿವಾದಾತ್ಮಕ ಕಂಪನಿಯ ಕಲ್ಲಿದ್ದಲು ಭಾರತಕ್ಕೆ: ಆಸ್ಟ್ರೇಲಿಯಾದಲ್ಲಿ ತೀವ್ರಗೊಂಡ ಪ್ರತಿಭಟನೆ

ಅದಾನಿಯ ವಿವಾದಾತ್ಮಕ ಕಂಪನಿಯ ಕಲ್ಲಿದ್ದಲು ಭಾರತಕ್ಕೆ: ಆಸ್ಟ್ರೇಲಿಯಾದಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ ನಲ್ಲಿರುವ ಭಾರತದ ಉದ್ಯಮಿ ಗೌತಮ್ ಆದಾನಿಯವರ ಕಾರ್ಮೈಕಲ್ ಕಲ್ಲಿದ್ದಲು ಗಣಿ ವಿರುದ್ಧ ಅಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಹಲವಾರು ವರ್ಷಗಳಿಂದ ಸಾಕಷ್ಟು ವಿವಾದಗಳಿಗೆ ಕಾರಣವಾದ ಈ ಕಂಪನಿಯಿಂದ ಭಾರತದಲ್ಲಿ ವಿದ್ಯುತ್ ತಯಾರಿಸಲು ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಸ್ಟ್ರೇಲಿಯಾದಲ್ಲಿ ‘ಸ್ಟಾಪ್ ಅದಾನಿ’ ಎಂಬ ಸಂಘಟನೆಗಳ ಸಮೂಹವು ಕಾರ್ಮೈಕಲ್ ಕಲ್ಲಿದ್ದಲು ಗಣಿಗಾರಿಕೆಯಿಂದ ಪರಿಸರದ ಮೇಲೆ ಬೀರಬಹುದಾದ ಋಣಾತ್ಮಕ ಪ್ರಭಾವದಿಂದಾಗಿ ಯೋಜನೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅಲ್ಲಿನ ಚುನಾವಣೆಯ ಮೇಲೂ ಈ ಹೋರಾಟ ಪ್ರಭಾವ ಬೀರಿದೆ. ಇಷ್ಟೆಲ್ಲದರ ನಡುವೆಯೂ ಅದಾನಿ ಕಂಪನಿಯು ಈ ಡಿಸೆಂಬರ್‌ ವೇಳೆಗೆ ತನ್ನ ಮೊದಲ ಕಲ್ಲಿದ್ದಲು ರಫ್ತು ಆರಂಭಿಸುವುದಾಗಿ ಘೋಷಿಸಿಕೊಂಡಿದೆ.

ಕಂಪನಿಯು ಮುಂದಿನ 30 ವರ್ಷಗಳವರೆಗೆ ವಾರ್ಷಿಕವಾಗಿ 10 ಮಿಲಿಯನ್ ಟನ್ ಉಷ್ಣ ಕಲ್ಲಿದ್ದಲನ್ನು ಪೂರೈಸುವ ಗುರಿಯನ್ನು ಹೊಂದಿದೆ. ಅದರಿಂದ ಭಾರತ ಮತ್ತು ದಕ್ಷಿಣ ಏಷ್ಯಾದ ದೇಶಗಳಲ್ಲಿ ವಿದ್ಯುತ್ ತಯಾರಿಸಲಾಗುವುದು ಎನ್ನಲಾಗುತ್ತಿದೆ.

ಈ ಕಲ್ಲಿದ್ದಲು ಯೋಜನೆಯು ಕ್ವೀನ್ಸ್‌ಲ್ಯಾಂಡ್ ರಾಜ್ಯದ ಜನರಿಗೆ 1,500 ಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡುತ್ತದೆ ಎಂದು ಅದಾನಿ ಕಂಪನಿ ಘೋಷಿಸಿದೆ. ಆದರೆ ನಮಗೆ ಉದ್ಯೋಗ ಬೇಡ ಪರಿಸರ ಬೇಕು ಎಂದು ಅಲ್ಲಿನ ಪ್ರಜ್ಞಾವಂತರು ಹಠ ಹಿಡಿದಿದ್ದಾರೆ. SBI ಬ್ಯಾಂಕ್ ಅದಾನಿಗೆ ಒಂದು ಬಿಲಿಯನ್ ಡಾಲರ್ ಸಾಲ ಕೊಡಬಾರದು ಎಂದು ಆಸ್ಟ್ರೇಲಿಯಾದಲ್ಲಿ ನಿರಂತರ ಹೋರಾಟಗಳಾಗುತ್ತಿವೆ. ಕಳೆದ ವರ್ಷ ನವೆಂಬರ್‌ನಲ್ಲಿ ಸಿಡ್ನಿಯಲ್ಲಿ ಏಕದಿನ ಕ್ರಿಕೆಟ್ ಪಂದ್ಯ ನಡೆಯುತ್ತಿರುವಾಗ ಪ್ರತಿಭಟನಾಕಾರನೊಬ್ಬ ಆಟದ ಅಂಗಳಕ್ಕೆ ನುಗ್ಗಿ ಅದಾನಿಗೆ ಸಾಲ ಕೊಡಬೇಡಿ ಎಂದು ಭಿತ್ತಿಫಲಕ ಪ್ರದರ್ಶಿಸಿ ಗಮನ ಸೆಳೆದಿದ್ದರು.

ಒಂದು ಕಡೆ ಜಾಗತಿಕ ನಾಯಕರು ಒಟ್ಟು ಸೇರಿ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ) ನಡೆಸಿದರು. ಅಲ್ಲಿ ಹವಾಮಾನ ಹದಗೆಡಿಸುವ ಇಂಧನವನ್ನು ಬಳಸದಿರುವಂತೆ ಜಾಗತಿಕ ಗಡುವನ್ನು ನಿಗದಿಪಡಿಸುವ ಮಾತುಕತೆಗಳಾದವು. ಆದರೆ ಕಲ್ಲಿದ್ದಲು ಬಳಕೆಗೆ ಇಲ್ಲಿ ಉತ್ತೇಜನ ನೀಡಲಾಗುತ್ತಿದೆ. ಅದರಲ್ಲಿಯೂ ಚೀನಾ ಮತ್ತು ಭಾರತ ಇದರ ಅತಿ ದೊಡ್ಡ ಗ್ರಾಹಕರಾಗಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ.

ಭಾರತದ ಛತ್ತೀಸ್‌ಘಡದಲ್ಲಿಯೂ ಅದಾನಿ ಗಣಿಗಾರಿಕೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಚಳವಳಿ ತೀವ್ರಗೊಳಿಸಿದ್ದಾರೆ.

ಒಂದೆಡೆ ನಾವು ನವೀಕರಿಸಬಹುದಾದ ಇಂಧನಗಳನ್ನು ಕಾರ್ಯಸಾಧ್ಯವಾದ, ಕೈಗೆಟುಕುವ ಪರ್ಯಾಯವಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ ಎನ್ನುವ ಅದಾನಿ ಇನ್ನೊಂದೆಡೆ ಪರಿಸರಕ್ಕೆ ಹಾನಿಕಾರಕವಾದ ಇಂಧನಗಳ ಗಣಿಗಾರಿಕೆಯಲ್ಲಿ ನಿರತರಾಗಿದ್ದಾರೆ. ಅದಕ್ಕೆ SBI ನಂತಹ ಬ್ಯಾಂಕುಗಳ ಹಣಕಾಸಿನ ಸಹಾಯ ಮಾಡುತ್ತಿವೆ. ಇದರ ವಿರುದ್ಧದ ಹೋರಾಟಕ್ಕೆ ಜಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ; ಅದಾನಿಗೆ ಲಾಭ ಮಾಡಲು ವಿದ್ಯುತ್‍ ದರ ಏರಿಕೆ: ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...