Homeಕರ್ನಾಟಕಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಎಸ್‌ಟಿಗೆ ಸೇರ್ಪಡೆ: ಸಿಎಂ ಹೇಳಿಕೆ

ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಎಸ್‌ಟಿಗೆ ಸೇರ್ಪಡೆ: ಸಿಎಂ ಹೇಳಿಕೆ

- Advertisement -
- Advertisement -

ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಅಂಬಿಗರ ಚೌಡಯ್ಯನವರ 903ನೇ ಜಯಂತ್ಯುತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ.

ಈಗಾಗಲೇ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಬಳಿ ಎಸ್.ಟಿ.ಗೆ ಸೇರಿಸುವ ಕಡತವಿದ್ದು, ಕೇಂದ್ರ ಬುಡಕಟ್ಟು ಸಚಿವ ಅರ್ಜುನ್ ಮುಂಡ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ಅಂತಿಮ ಘಟ್ಟದಲ್ಲಿದೆ. ಸಚಿವ ಸಂಪುಟದಲ್ಲಿ ಅನುಮೋದಿಸಲಾಗುವುದು. ಅವರು ಕೇಳಿದ್ದ ಕೆಲವು ವಿವರಣೆಗಳನ್ನು ಕಳುಹಿಸಿಕೊಡಲಾಗಿದೆ. ಮಾತು ಕೊಟ್ಟಿದ್ದಂತೆ ಕೆಲಸ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಒಗ್ಗಟ್ಟಿನಲ್ಲಿ ಬಲವಿದೆ. ಈ ಮಠದ ಬೆಳವಣಿಗೆ ಈ ಕುಲದ ಬೆಳವಣಿಗೆಯೊಂದಿಗೆ ಸೇರಿದೆ. ಈ ಮಠದಿಂದ ಸ್ಫೂರ್ತಿ ಪಡೆಯಬೇಕಿದ್ದು, ಇದಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇವೆ. ಗುರುಕುಲ ನಿರ್ಮಾಣವಾಗುತ್ತಿದ್ದು, ಮಠಕ್ಕೆ 5 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. 15 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಹಿಂದುಳಿದ ಮಠಗಳಿಗೆ ಅನುದಾನ ಬಿಡುಗಡೆ ಮಾಡಿದಾಗಲೂ 2 ಕೋಟಿ ರೂ.ಗಳ ಮಂಜೂರಾತಿ ಆಗಿದೆ. ಅದನ್ನೂ ಕೂಡ ಬೇಗ ಬಿಡುಗಡೆ ಮಾಡಲಾಗುವುದು.ಇಲ್ಲಿನ ಮಠ ಹಾಗೂ ವಿದ್ಯಾರ್ಥಿ ನಿಲಯವಾಗಬೇಕು, ಜ್ಞಾನಾರ್ಜನೆ ಅನ್ನದಾಸೋಹವಾಗಬೇಕು. ಇದು ನಮ್ಮ ಶರಣರ ಪರಂಪರೆ ನಿತ್ಯ ನಿರಂತರವಾಗಿ ಮಠದಿಂದ ಆಗಬೇಕು ಎಂದು ಆಶಿಸಿದ್ದಾರೆ.

ಈ ಸಮಾಜ ಬೇರೆ ವೃತ್ತಿಗಳನ್ನು ಮಾಡುತ್ತಿದೆ. ಒಳನಾಡು ಮೀನುಗಾರಿಕೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುತ್ತಿದೆ. ಕಾಲ ಬದಲಾಗಿದ್ದು, ನಾವೆಲ್ಲರೂ ಜ್ಞಾನಾರ್ಜನೆ ಮಾಡಿದಾಗ ಸಮಕಾಲೀನ ಸವಾಲುಗಳನ್ನು ಎದುರಿಸಬಹುದು. ಇತರೆ ವೃತ್ತಿಗಳನ್ನು ಮಾಡಿದಾಗ ಈ ಗಂಗಾಮತಸ್ತ ಕುಲ ಮುಂದುವರೆಯುತ್ತದೆ. ಮಕ್ಕಳಿಗೆ ವಿದ್ಯಾಭ್ಯಾಸ ಎಷ್ಟೇ ಕಷ್ಟವಿದ್ದರೂ ಓದಿಸಬೇಕು. ನಾವು ಗಂಗಾಮತಸ್ತ ಗುರುಗಳ ಭಕ್ತನಾಗಿ ಇಲ್ಲಿಗೆ ಬಂದಿದ್ದೇನೆ. ಸಮುದಾಯ ಭವನಕ್ಕೆ ಬರುವ ಬಜೆಟ್‌ನಲ್ಲಿ ಮೀಸಲಿಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು. ಪ್ರಿಯವಾದ ಸತ್ಯ ಮತ್ತು ಸುಳ್ಳುಗಳಿರುವ ವ್ಯಾಖ್ಯಾನಗಳಿವೆ. ಸತ್ಯವೆಂದರೆ ಕಠೋರ. ಅಂಬಿಗರ ಚೌಡಯ್ಯ ಸತ್ಯವನ್ನು ಕಠಿಣ ಶಬ್ಧಗಳಲ್ಲಿ ಹೇಳುವಂತಹವರು. ಬಸವಣ್ಣನವರು ಇವರನ್ನು ನಿಜಶರಣೆರೆಂದು ಕರೆದರು. ಕಲ್ಯಾಣದಲ್ಲಿ ವೈಚಾರಿಕ ಕ್ರಾಂತಿಯಾಗುತ್ತದೆ ಎಂದು ನುಡಿದಿದ್ದರು. ಆಗ ವಚನಗಳ ರಕ್ಷಣೆ ಮುಖ್ಯವಾಗುತ್ತದೆ ಎಂದು ಹೇಳಿದ್ದು ನಿಜವಾಗಿದ್ದದಕ್ಕೆ ಅಂಬಿಗರ ಚೌಡಯ್ಯರನ್ನು ನಿಜಶರಣರೆಂದು ಕರೆದರು. ವಚನಗಳು ಇಂದಿಗೂ ನಮ್ಮ ನಡುವೆ ಜೀವಂತವಾಗಿರಲು ಏಕೈಕ ಕಾರಣ ಅಂಬಿಗರ ಚೌಡಯ್ಯ ಎಂದು ಬಣ್ಣಿಸಿದರು.

ಇದನ್ನೂ ಓದಿರಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ಒಂದು ಕುಲ ಅಥವಾ ಸಮಾಜದವರು ತಮ್ಮ ಸಂಸ್ಕಾರ, ಸಂಸ್ಕೃತಿ, ಇತಿಹಾಸ ಪರಂಪರೆಗಳನ್ನು ತಿಳಿದುಕೊಳ್ಳುವುದರಿಂದ ನಮ್ಮ ಭವಿಷ್ಯವನ್ನು ನಿರ್ಮಿಸಿಕೊಳ್ಳಬಹುದು. ಇಂತಹ ಶಿವಶರಣರ ಕುಲಕ್ಕೆ ತಾವುಗಳು ಸೇರಿದ್ದೀರಿ. ಅಂಬಿಗರು ಒಂದೇ ಹುಟ್ಟಿನಲ್ಲಿ ದಡ ಪಾರು ಮಾಡಿಸುವ ಶಕ್ತಿಯುಳ್ಳವರು. ಕೇವಲ ದೋಣಿಗಳನ್ನು ನಡೆಸುವುದು ಕಸುಬಲ್ಲ. ಇಡೀ ಮಾನವಕುಲವನ್ನು ದಡ ಸೇರಿಸುವವರೇ ಅಂಬಿಗ ಚೌಡಯ್ಯ ಎಂದು ಬಣ್ಣಿಸಿದರು.

ತಾಯಿಯ ಆಶೀರ್ವಾದದಲ್ಲಿ ಸಾತ್ವಿಕ ಚಿಂತನೆಯಿದೆ. ಇದೇ ನಮ್ಮನ್ನು ಒಳ್ಳೆಯ ಹಾದಿಯಲ್ಲಿ ನಡೆಸುತ್ತಿದೆ. ಈ ಸಮಾಜ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರಬೇಕು. 21 ನೇ ಶತಮಾನದಲ್ಲಿ ಎಲ್ಲ ಸಮುದಾಯಗಳ ಆಶೋತ್ತರಗಳು ಹೆಚ್ಚಾಗಿದೆ. ತುಳಿತಕ್ಕೊಳಗಾದ ಸಮಾಜದವರು ಶಿಕ್ಷಣ ಪಡೆದು, ವಿವಿಧ ವೃತ್ತಿಯಲ್ಲಿ ದುಡಿದು ಸ್ವಾಭಿಮಾನದ ಬದುಕನ್ನು ಬದುಕುವಂತಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...