Homeಕರ್ನಾಟಕಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಎಸ್‌ಟಿಗೆ ಸೇರ್ಪಡೆ: ಸಿಎಂ ಹೇಳಿಕೆ

ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಎಸ್‌ಟಿಗೆ ಸೇರ್ಪಡೆ: ಸಿಎಂ ಹೇಳಿಕೆ

- Advertisement -
- Advertisement -

ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಅಂಬಿಗರ ಚೌಡಯ್ಯನವರ 903ನೇ ಜಯಂತ್ಯುತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ.

ಈಗಾಗಲೇ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಬಳಿ ಎಸ್.ಟಿ.ಗೆ ಸೇರಿಸುವ ಕಡತವಿದ್ದು, ಕೇಂದ್ರ ಬುಡಕಟ್ಟು ಸಚಿವ ಅರ್ಜುನ್ ಮುಂಡ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ಅಂತಿಮ ಘಟ್ಟದಲ್ಲಿದೆ. ಸಚಿವ ಸಂಪುಟದಲ್ಲಿ ಅನುಮೋದಿಸಲಾಗುವುದು. ಅವರು ಕೇಳಿದ್ದ ಕೆಲವು ವಿವರಣೆಗಳನ್ನು ಕಳುಹಿಸಿಕೊಡಲಾಗಿದೆ. ಮಾತು ಕೊಟ್ಟಿದ್ದಂತೆ ಕೆಲಸ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಒಗ್ಗಟ್ಟಿನಲ್ಲಿ ಬಲವಿದೆ. ಈ ಮಠದ ಬೆಳವಣಿಗೆ ಈ ಕುಲದ ಬೆಳವಣಿಗೆಯೊಂದಿಗೆ ಸೇರಿದೆ. ಈ ಮಠದಿಂದ ಸ್ಫೂರ್ತಿ ಪಡೆಯಬೇಕಿದ್ದು, ಇದಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇವೆ. ಗುರುಕುಲ ನಿರ್ಮಾಣವಾಗುತ್ತಿದ್ದು, ಮಠಕ್ಕೆ 5 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. 15 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಹಿಂದುಳಿದ ಮಠಗಳಿಗೆ ಅನುದಾನ ಬಿಡುಗಡೆ ಮಾಡಿದಾಗಲೂ 2 ಕೋಟಿ ರೂ.ಗಳ ಮಂಜೂರಾತಿ ಆಗಿದೆ. ಅದನ್ನೂ ಕೂಡ ಬೇಗ ಬಿಡುಗಡೆ ಮಾಡಲಾಗುವುದು.ಇಲ್ಲಿನ ಮಠ ಹಾಗೂ ವಿದ್ಯಾರ್ಥಿ ನಿಲಯವಾಗಬೇಕು, ಜ್ಞಾನಾರ್ಜನೆ ಅನ್ನದಾಸೋಹವಾಗಬೇಕು. ಇದು ನಮ್ಮ ಶರಣರ ಪರಂಪರೆ ನಿತ್ಯ ನಿರಂತರವಾಗಿ ಮಠದಿಂದ ಆಗಬೇಕು ಎಂದು ಆಶಿಸಿದ್ದಾರೆ.

ಈ ಸಮಾಜ ಬೇರೆ ವೃತ್ತಿಗಳನ್ನು ಮಾಡುತ್ತಿದೆ. ಒಳನಾಡು ಮೀನುಗಾರಿಕೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುತ್ತಿದೆ. ಕಾಲ ಬದಲಾಗಿದ್ದು, ನಾವೆಲ್ಲರೂ ಜ್ಞಾನಾರ್ಜನೆ ಮಾಡಿದಾಗ ಸಮಕಾಲೀನ ಸವಾಲುಗಳನ್ನು ಎದುರಿಸಬಹುದು. ಇತರೆ ವೃತ್ತಿಗಳನ್ನು ಮಾಡಿದಾಗ ಈ ಗಂಗಾಮತಸ್ತ ಕುಲ ಮುಂದುವರೆಯುತ್ತದೆ. ಮಕ್ಕಳಿಗೆ ವಿದ್ಯಾಭ್ಯಾಸ ಎಷ್ಟೇ ಕಷ್ಟವಿದ್ದರೂ ಓದಿಸಬೇಕು. ನಾವು ಗಂಗಾಮತಸ್ತ ಗುರುಗಳ ಭಕ್ತನಾಗಿ ಇಲ್ಲಿಗೆ ಬಂದಿದ್ದೇನೆ. ಸಮುದಾಯ ಭವನಕ್ಕೆ ಬರುವ ಬಜೆಟ್‌ನಲ್ಲಿ ಮೀಸಲಿಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು. ಪ್ರಿಯವಾದ ಸತ್ಯ ಮತ್ತು ಸುಳ್ಳುಗಳಿರುವ ವ್ಯಾಖ್ಯಾನಗಳಿವೆ. ಸತ್ಯವೆಂದರೆ ಕಠೋರ. ಅಂಬಿಗರ ಚೌಡಯ್ಯ ಸತ್ಯವನ್ನು ಕಠಿಣ ಶಬ್ಧಗಳಲ್ಲಿ ಹೇಳುವಂತಹವರು. ಬಸವಣ್ಣನವರು ಇವರನ್ನು ನಿಜಶರಣೆರೆಂದು ಕರೆದರು. ಕಲ್ಯಾಣದಲ್ಲಿ ವೈಚಾರಿಕ ಕ್ರಾಂತಿಯಾಗುತ್ತದೆ ಎಂದು ನುಡಿದಿದ್ದರು. ಆಗ ವಚನಗಳ ರಕ್ಷಣೆ ಮುಖ್ಯವಾಗುತ್ತದೆ ಎಂದು ಹೇಳಿದ್ದು ನಿಜವಾಗಿದ್ದದಕ್ಕೆ ಅಂಬಿಗರ ಚೌಡಯ್ಯರನ್ನು ನಿಜಶರಣರೆಂದು ಕರೆದರು. ವಚನಗಳು ಇಂದಿಗೂ ನಮ್ಮ ನಡುವೆ ಜೀವಂತವಾಗಿರಲು ಏಕೈಕ ಕಾರಣ ಅಂಬಿಗರ ಚೌಡಯ್ಯ ಎಂದು ಬಣ್ಣಿಸಿದರು.

ಇದನ್ನೂ ಓದಿರಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ಒಂದು ಕುಲ ಅಥವಾ ಸಮಾಜದವರು ತಮ್ಮ ಸಂಸ್ಕಾರ, ಸಂಸ್ಕೃತಿ, ಇತಿಹಾಸ ಪರಂಪರೆಗಳನ್ನು ತಿಳಿದುಕೊಳ್ಳುವುದರಿಂದ ನಮ್ಮ ಭವಿಷ್ಯವನ್ನು ನಿರ್ಮಿಸಿಕೊಳ್ಳಬಹುದು. ಇಂತಹ ಶಿವಶರಣರ ಕುಲಕ್ಕೆ ತಾವುಗಳು ಸೇರಿದ್ದೀರಿ. ಅಂಬಿಗರು ಒಂದೇ ಹುಟ್ಟಿನಲ್ಲಿ ದಡ ಪಾರು ಮಾಡಿಸುವ ಶಕ್ತಿಯುಳ್ಳವರು. ಕೇವಲ ದೋಣಿಗಳನ್ನು ನಡೆಸುವುದು ಕಸುಬಲ್ಲ. ಇಡೀ ಮಾನವಕುಲವನ್ನು ದಡ ಸೇರಿಸುವವರೇ ಅಂಬಿಗ ಚೌಡಯ್ಯ ಎಂದು ಬಣ್ಣಿಸಿದರು.

ತಾಯಿಯ ಆಶೀರ್ವಾದದಲ್ಲಿ ಸಾತ್ವಿಕ ಚಿಂತನೆಯಿದೆ. ಇದೇ ನಮ್ಮನ್ನು ಒಳ್ಳೆಯ ಹಾದಿಯಲ್ಲಿ ನಡೆಸುತ್ತಿದೆ. ಈ ಸಮಾಜ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರಬೇಕು. 21 ನೇ ಶತಮಾನದಲ್ಲಿ ಎಲ್ಲ ಸಮುದಾಯಗಳ ಆಶೋತ್ತರಗಳು ಹೆಚ್ಚಾಗಿದೆ. ತುಳಿತಕ್ಕೊಳಗಾದ ಸಮಾಜದವರು ಶಿಕ್ಷಣ ಪಡೆದು, ವಿವಿಧ ವೃತ್ತಿಯಲ್ಲಿ ದುಡಿದು ಸ್ವಾಭಿಮಾನದ ಬದುಕನ್ನು ಬದುಕುವಂತಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...