Homeಕರ್ನಾಟಕಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಎಸ್‌ಟಿಗೆ ಸೇರ್ಪಡೆ: ಸಿಎಂ ಹೇಳಿಕೆ

ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಎಸ್‌ಟಿಗೆ ಸೇರ್ಪಡೆ: ಸಿಎಂ ಹೇಳಿಕೆ

- Advertisement -
- Advertisement -

ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಅಂಬಿಗರ ಚೌಡಯ್ಯನವರ 903ನೇ ಜಯಂತ್ಯುತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ.

ಈಗಾಗಲೇ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಬಳಿ ಎಸ್.ಟಿ.ಗೆ ಸೇರಿಸುವ ಕಡತವಿದ್ದು, ಕೇಂದ್ರ ಬುಡಕಟ್ಟು ಸಚಿವ ಅರ್ಜುನ್ ಮುಂಡ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ಅಂತಿಮ ಘಟ್ಟದಲ್ಲಿದೆ. ಸಚಿವ ಸಂಪುಟದಲ್ಲಿ ಅನುಮೋದಿಸಲಾಗುವುದು. ಅವರು ಕೇಳಿದ್ದ ಕೆಲವು ವಿವರಣೆಗಳನ್ನು ಕಳುಹಿಸಿಕೊಡಲಾಗಿದೆ. ಮಾತು ಕೊಟ್ಟಿದ್ದಂತೆ ಕೆಲಸ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಒಗ್ಗಟ್ಟಿನಲ್ಲಿ ಬಲವಿದೆ. ಈ ಮಠದ ಬೆಳವಣಿಗೆ ಈ ಕುಲದ ಬೆಳವಣಿಗೆಯೊಂದಿಗೆ ಸೇರಿದೆ. ಈ ಮಠದಿಂದ ಸ್ಫೂರ್ತಿ ಪಡೆಯಬೇಕಿದ್ದು, ಇದಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇವೆ. ಗುರುಕುಲ ನಿರ್ಮಾಣವಾಗುತ್ತಿದ್ದು, ಮಠಕ್ಕೆ 5 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. 15 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಹಿಂದುಳಿದ ಮಠಗಳಿಗೆ ಅನುದಾನ ಬಿಡುಗಡೆ ಮಾಡಿದಾಗಲೂ 2 ಕೋಟಿ ರೂ.ಗಳ ಮಂಜೂರಾತಿ ಆಗಿದೆ. ಅದನ್ನೂ ಕೂಡ ಬೇಗ ಬಿಡುಗಡೆ ಮಾಡಲಾಗುವುದು.ಇಲ್ಲಿನ ಮಠ ಹಾಗೂ ವಿದ್ಯಾರ್ಥಿ ನಿಲಯವಾಗಬೇಕು, ಜ್ಞಾನಾರ್ಜನೆ ಅನ್ನದಾಸೋಹವಾಗಬೇಕು. ಇದು ನಮ್ಮ ಶರಣರ ಪರಂಪರೆ ನಿತ್ಯ ನಿರಂತರವಾಗಿ ಮಠದಿಂದ ಆಗಬೇಕು ಎಂದು ಆಶಿಸಿದ್ದಾರೆ.

ಈ ಸಮಾಜ ಬೇರೆ ವೃತ್ತಿಗಳನ್ನು ಮಾಡುತ್ತಿದೆ. ಒಳನಾಡು ಮೀನುಗಾರಿಕೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುತ್ತಿದೆ. ಕಾಲ ಬದಲಾಗಿದ್ದು, ನಾವೆಲ್ಲರೂ ಜ್ಞಾನಾರ್ಜನೆ ಮಾಡಿದಾಗ ಸಮಕಾಲೀನ ಸವಾಲುಗಳನ್ನು ಎದುರಿಸಬಹುದು. ಇತರೆ ವೃತ್ತಿಗಳನ್ನು ಮಾಡಿದಾಗ ಈ ಗಂಗಾಮತಸ್ತ ಕುಲ ಮುಂದುವರೆಯುತ್ತದೆ. ಮಕ್ಕಳಿಗೆ ವಿದ್ಯಾಭ್ಯಾಸ ಎಷ್ಟೇ ಕಷ್ಟವಿದ್ದರೂ ಓದಿಸಬೇಕು. ನಾವು ಗಂಗಾಮತಸ್ತ ಗುರುಗಳ ಭಕ್ತನಾಗಿ ಇಲ್ಲಿಗೆ ಬಂದಿದ್ದೇನೆ. ಸಮುದಾಯ ಭವನಕ್ಕೆ ಬರುವ ಬಜೆಟ್‌ನಲ್ಲಿ ಮೀಸಲಿಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು. ಪ್ರಿಯವಾದ ಸತ್ಯ ಮತ್ತು ಸುಳ್ಳುಗಳಿರುವ ವ್ಯಾಖ್ಯಾನಗಳಿವೆ. ಸತ್ಯವೆಂದರೆ ಕಠೋರ. ಅಂಬಿಗರ ಚೌಡಯ್ಯ ಸತ್ಯವನ್ನು ಕಠಿಣ ಶಬ್ಧಗಳಲ್ಲಿ ಹೇಳುವಂತಹವರು. ಬಸವಣ್ಣನವರು ಇವರನ್ನು ನಿಜಶರಣೆರೆಂದು ಕರೆದರು. ಕಲ್ಯಾಣದಲ್ಲಿ ವೈಚಾರಿಕ ಕ್ರಾಂತಿಯಾಗುತ್ತದೆ ಎಂದು ನುಡಿದಿದ್ದರು. ಆಗ ವಚನಗಳ ರಕ್ಷಣೆ ಮುಖ್ಯವಾಗುತ್ತದೆ ಎಂದು ಹೇಳಿದ್ದು ನಿಜವಾಗಿದ್ದದಕ್ಕೆ ಅಂಬಿಗರ ಚೌಡಯ್ಯರನ್ನು ನಿಜಶರಣರೆಂದು ಕರೆದರು. ವಚನಗಳು ಇಂದಿಗೂ ನಮ್ಮ ನಡುವೆ ಜೀವಂತವಾಗಿರಲು ಏಕೈಕ ಕಾರಣ ಅಂಬಿಗರ ಚೌಡಯ್ಯ ಎಂದು ಬಣ್ಣಿಸಿದರು.

ಇದನ್ನೂ ಓದಿರಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ಒಂದು ಕುಲ ಅಥವಾ ಸಮಾಜದವರು ತಮ್ಮ ಸಂಸ್ಕಾರ, ಸಂಸ್ಕೃತಿ, ಇತಿಹಾಸ ಪರಂಪರೆಗಳನ್ನು ತಿಳಿದುಕೊಳ್ಳುವುದರಿಂದ ನಮ್ಮ ಭವಿಷ್ಯವನ್ನು ನಿರ್ಮಿಸಿಕೊಳ್ಳಬಹುದು. ಇಂತಹ ಶಿವಶರಣರ ಕುಲಕ್ಕೆ ತಾವುಗಳು ಸೇರಿದ್ದೀರಿ. ಅಂಬಿಗರು ಒಂದೇ ಹುಟ್ಟಿನಲ್ಲಿ ದಡ ಪಾರು ಮಾಡಿಸುವ ಶಕ್ತಿಯುಳ್ಳವರು. ಕೇವಲ ದೋಣಿಗಳನ್ನು ನಡೆಸುವುದು ಕಸುಬಲ್ಲ. ಇಡೀ ಮಾನವಕುಲವನ್ನು ದಡ ಸೇರಿಸುವವರೇ ಅಂಬಿಗ ಚೌಡಯ್ಯ ಎಂದು ಬಣ್ಣಿಸಿದರು.

ತಾಯಿಯ ಆಶೀರ್ವಾದದಲ್ಲಿ ಸಾತ್ವಿಕ ಚಿಂತನೆಯಿದೆ. ಇದೇ ನಮ್ಮನ್ನು ಒಳ್ಳೆಯ ಹಾದಿಯಲ್ಲಿ ನಡೆಸುತ್ತಿದೆ. ಈ ಸಮಾಜ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರಬೇಕು. 21 ನೇ ಶತಮಾನದಲ್ಲಿ ಎಲ್ಲ ಸಮುದಾಯಗಳ ಆಶೋತ್ತರಗಳು ಹೆಚ್ಚಾಗಿದೆ. ತುಳಿತಕ್ಕೊಳಗಾದ ಸಮಾಜದವರು ಶಿಕ್ಷಣ ಪಡೆದು, ವಿವಿಧ ವೃತ್ತಿಯಲ್ಲಿ ದುಡಿದು ಸ್ವಾಭಿಮಾನದ ಬದುಕನ್ನು ಬದುಕುವಂತಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...