Homeಮುಖಪುಟಸಾರ್ವಜನಿಕ ಉದ್ದಿಮೆಗಳಲ್ಲಿ ಎಸ್‌ಸಿ, ಎಸ್‌ಟಿಗಳಿಗೆ ಸಿಗದ ಸೂಕ್ತ ಸ್ಥಾನಮಾನ: ಸಂಸದೀಯ ಸಮಿತಿ ವರದಿ

ಸಾರ್ವಜನಿಕ ಉದ್ದಿಮೆಗಳಲ್ಲಿ ಎಸ್‌ಸಿ, ಎಸ್‌ಟಿಗಳಿಗೆ ಸಿಗದ ಸೂಕ್ತ ಸ್ಥಾನಮಾನ: ಸಂಸದೀಯ ಸಮಿತಿ ವರದಿ

- Advertisement -
- Advertisement -

ಸಾರ್ವಜನಿಕ ವಲಯದ ಘಟಕಗಳಲ್ಲಿ ಉನ್ನತ ಅಥವಾ ಮಂಡಳಿ ಮಟ್ಟದ ಸ್ಥಾನಗಳಿಗೆ ಏರಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಸದಸ್ಯರಿಗೆ ಅವಕಾಶವನ್ನು ನೀಡಲಾಗುತ್ತಿಲ್ಲ ಎಂದು ಸಂಸದೀಯ ಸಮಿತಿಯು ತನ್ನ ವರದಿಯಲ್ಲಿ ತಿಳಿಸಿದೆ.

ಪವರ್ ಗ್ರಿಡ್ ಕಾರ್ಪೊರೇಷನ್ ಲಿಮಿಟೆಡ್‌ನ ವಿಶೇಷ ಉಲ್ಲೇಖದೊಂದಿಗೆ ‘ಕೇಂದ್ರ ಸಾರ್ವಜನಿಕ ವಲಯದ ಉದ್ಯಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ’ ಎಂಬ ವರದಿಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಂಸದೀಯ ಸಮಿತಿಯು ಸಂಸತ್ತಿನ ಮುಂದೆ ಮಂಡಿಸಿದ್ದು, ಅನೇಕ ವಿಷಯಗಳನ್ನು ಪ್ರಸ್ತಾಪಿಸಿದೆ.

“ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಾಮಾಜಿಕ-ಆರ್ಥಿಕ ಸಮಾನತೆಯನ್ನು ಒದಗಿಸುವ ದೃಷ್ಟಿಯಿಂದ, ಮಂಡಳಿ/ಉನ್ನತ ಹಂತದ ನೇಮಕಾತಿಗಳಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದ ಅರ್ಹ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಲು ಸರ್ಕಾರವು ಸಕಾರಾತ್ಮಕ ಕ್ರಮವನ್ನು ತೆಗೆದುಕೊಳ್ಳಬೇಕು” ಎಂದು ಸಮಿತಿ ಶಿಫಾರಸ್ಸು ಮಾಡಿದೆ. ಈ ಸಮಿತಿಯ ಮುಂದಾಳತ್ವವನ್ನು ಬಿಜೆಪಿ ಸಂಸದ ಕಿರಿತ್ ಸೋಲಂಕಿ ವಹಿಸಿದ್ದರು.

ಸಾರ್ವಜನಿಕ ವಲಯದ ಘಟಕಗಳಲ್ಲಿನ ಉನ್ನತ ಮಟ್ಟದ ಹುದ್ದೆಗಳಿಗೆ ಸಂದರ್ಶನಕ್ಕೆ ಹಾಜರಾಗಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಸಂಖ್ಯೆ ಹಾಗೂ ಆ ಅಭ್ಯರ್ಥಿಗಳು ಆಯ್ಕೆಯಾಗದಿರಲು ಇರುವ ಕಾರಣವೇನೆಂದು ತಿಳಿಯಲು ಬಯಸಿರುವುದಾಗಿ ಸಮಿತಿ ಹೇಳಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಧಿಕಾರಿಗಳು ಉತ್ಯುತ್ತಮ ಕೆಲಸದ ದಾಖಲೆಯನ್ನು ಹೊಂದಿದ್ದರೂ ಅವರ ವಿರುದ್ಧ ಕಾಲ್ಪನಿಕ ಆರೋಪಗಳನ್ನು ಹೊರಿಸುವ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬಡ್ತಿ ನಿರಾಕರಿಸಲಾಗಿದೆ ಎಂದು ಸಮಿತಿಯು ಹೇಳಿರುವುದಾಗಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದೆ.

ಬ್ಯಾಂಕ್‌ನ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರ್ದೇಶಕರು ಏಕೆ ಇಲ್ಲ ಎಂದು ಸಮಿತಿಯು ಸರ್ಕಾರವನ್ನು ಪ್ರಶ್ನಿಸಿದೆ.

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದ ನಿರ್ದೇಶಕರ ಮಂಡಳಿಯಲ್ಲಿ ಯಾವುದೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿ ಇಲ್ಲ ಎಂದು ಸಮಿತಿ ಗಮನಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

“ಕೇಂದ್ರೀಯ ಸಾರ್ವಜನಿಕ ವಲಯದ ಉದ್ಯಮದಲ್ಲಿ ಎಸ್‌ಸಿ/ಎಸ್‌ಟಿಗಳ ಪ್ರಾತಿನಿಧ್ಯವು ಗಂಭೀರ ಕಾಳಜಿಯ ವಿಷಯವಾಗಿಲ್ಲ” ಎಂದು ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

“ಪವರ್ ಗ್ರಿಡ್‌ನ ಅಧ್ಯಕ್ಷರು, ಸದಸ್ಯರ ನೇಮಕಕ್ಕೆ ಸಂಬಂಧಿಸಿದ ಕಾಯಿದೆಯಲ್ಲಿ ತಿದ್ದುಪಡಿ ತಂದು ಎಸ್‌ಸಿ/ಎಸ್‌ಟಿಗಳಿಗೆ ಪ್ರಾತಿನಿಧ್ಯವನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸಮಿತಿ ಒತ್ತಾಯಿಸಿದೆ.

ಎಲ್ಲಾ ಸಾರ್ವಜನಿಕ ವಲಯದ ಘಟಕಗಳಲ್ಲಿನ ಬೋರ್ಡ್ ಮತ್ತು ಮ್ಯಾನೇಜ್‌ಮೆಂಟ್ ಮಟ್ಟದ ಹುದ್ದೆಗಳ ನೇಮಕಾತಿ ನೀತಿಯನ್ನು ಪರಿಶೀಲಿಸುವ ಕುರಿತು ಮಾಡಿದ ತನ್ನ ಶಿಫಾರಸುಗಳಿಗೆ ಸಂಬಂಧಿಸಿದಂತೆ ಸರ್ಕಾರವು ಗಂಭೀರವಾಗಿಲ್ಲ ಎಂದು ಭಾವಿಸಿರುವುದಾಗಿ ಸಮಿತಿ ಬೇಸರ ವ್ಯಕ್ತಪಡಿಸಿದೆ.

ಆಡಳಿತ ಮಂಡಳಿಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರನ್ನು ನೇಮಕ ಮಾಡಲು ಅನುಕೂಲವಾಗುವಂತೆ ಪ್ರಸ್ತುತ ಇರುವ ನಿಯಮಾವಳಿಗಳಿಗೆ ತಿದ್ದುಪಡಿ ತರಲು ಸಾರ್ವಜನಿಕ ಉದ್ದಿಮೆಗಳ ಇಲಾಖೆಯು ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಶಿಫಾರಸು ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...