Homeಮುಖಪುಟಸಾರ್ವಜನಿಕ ಉದ್ದಿಮೆಗಳಲ್ಲಿ ಎಸ್‌ಸಿ, ಎಸ್‌ಟಿಗಳಿಗೆ ಸಿಗದ ಸೂಕ್ತ ಸ್ಥಾನಮಾನ: ಸಂಸದೀಯ ಸಮಿತಿ ವರದಿ

ಸಾರ್ವಜನಿಕ ಉದ್ದಿಮೆಗಳಲ್ಲಿ ಎಸ್‌ಸಿ, ಎಸ್‌ಟಿಗಳಿಗೆ ಸಿಗದ ಸೂಕ್ತ ಸ್ಥಾನಮಾನ: ಸಂಸದೀಯ ಸಮಿತಿ ವರದಿ

- Advertisement -
- Advertisement -

ಸಾರ್ವಜನಿಕ ವಲಯದ ಘಟಕಗಳಲ್ಲಿ ಉನ್ನತ ಅಥವಾ ಮಂಡಳಿ ಮಟ್ಟದ ಸ್ಥಾನಗಳಿಗೆ ಏರಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಸದಸ್ಯರಿಗೆ ಅವಕಾಶವನ್ನು ನೀಡಲಾಗುತ್ತಿಲ್ಲ ಎಂದು ಸಂಸದೀಯ ಸಮಿತಿಯು ತನ್ನ ವರದಿಯಲ್ಲಿ ತಿಳಿಸಿದೆ.

ಪವರ್ ಗ್ರಿಡ್ ಕಾರ್ಪೊರೇಷನ್ ಲಿಮಿಟೆಡ್‌ನ ವಿಶೇಷ ಉಲ್ಲೇಖದೊಂದಿಗೆ ‘ಕೇಂದ್ರ ಸಾರ್ವಜನಿಕ ವಲಯದ ಉದ್ಯಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ’ ಎಂಬ ವರದಿಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಂಸದೀಯ ಸಮಿತಿಯು ಸಂಸತ್ತಿನ ಮುಂದೆ ಮಂಡಿಸಿದ್ದು, ಅನೇಕ ವಿಷಯಗಳನ್ನು ಪ್ರಸ್ತಾಪಿಸಿದೆ.

“ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಾಮಾಜಿಕ-ಆರ್ಥಿಕ ಸಮಾನತೆಯನ್ನು ಒದಗಿಸುವ ದೃಷ್ಟಿಯಿಂದ, ಮಂಡಳಿ/ಉನ್ನತ ಹಂತದ ನೇಮಕಾತಿಗಳಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದ ಅರ್ಹ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಲು ಸರ್ಕಾರವು ಸಕಾರಾತ್ಮಕ ಕ್ರಮವನ್ನು ತೆಗೆದುಕೊಳ್ಳಬೇಕು” ಎಂದು ಸಮಿತಿ ಶಿಫಾರಸ್ಸು ಮಾಡಿದೆ. ಈ ಸಮಿತಿಯ ಮುಂದಾಳತ್ವವನ್ನು ಬಿಜೆಪಿ ಸಂಸದ ಕಿರಿತ್ ಸೋಲಂಕಿ ವಹಿಸಿದ್ದರು.

ಸಾರ್ವಜನಿಕ ವಲಯದ ಘಟಕಗಳಲ್ಲಿನ ಉನ್ನತ ಮಟ್ಟದ ಹುದ್ದೆಗಳಿಗೆ ಸಂದರ್ಶನಕ್ಕೆ ಹಾಜರಾಗಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಸಂಖ್ಯೆ ಹಾಗೂ ಆ ಅಭ್ಯರ್ಥಿಗಳು ಆಯ್ಕೆಯಾಗದಿರಲು ಇರುವ ಕಾರಣವೇನೆಂದು ತಿಳಿಯಲು ಬಯಸಿರುವುದಾಗಿ ಸಮಿತಿ ಹೇಳಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಧಿಕಾರಿಗಳು ಉತ್ಯುತ್ತಮ ಕೆಲಸದ ದಾಖಲೆಯನ್ನು ಹೊಂದಿದ್ದರೂ ಅವರ ವಿರುದ್ಧ ಕಾಲ್ಪನಿಕ ಆರೋಪಗಳನ್ನು ಹೊರಿಸುವ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬಡ್ತಿ ನಿರಾಕರಿಸಲಾಗಿದೆ ಎಂದು ಸಮಿತಿಯು ಹೇಳಿರುವುದಾಗಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದೆ.

ಬ್ಯಾಂಕ್‌ನ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರ್ದೇಶಕರು ಏಕೆ ಇಲ್ಲ ಎಂದು ಸಮಿತಿಯು ಸರ್ಕಾರವನ್ನು ಪ್ರಶ್ನಿಸಿದೆ.

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದ ನಿರ್ದೇಶಕರ ಮಂಡಳಿಯಲ್ಲಿ ಯಾವುದೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿ ಇಲ್ಲ ಎಂದು ಸಮಿತಿ ಗಮನಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

“ಕೇಂದ್ರೀಯ ಸಾರ್ವಜನಿಕ ವಲಯದ ಉದ್ಯಮದಲ್ಲಿ ಎಸ್‌ಸಿ/ಎಸ್‌ಟಿಗಳ ಪ್ರಾತಿನಿಧ್ಯವು ಗಂಭೀರ ಕಾಳಜಿಯ ವಿಷಯವಾಗಿಲ್ಲ” ಎಂದು ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

“ಪವರ್ ಗ್ರಿಡ್‌ನ ಅಧ್ಯಕ್ಷರು, ಸದಸ್ಯರ ನೇಮಕಕ್ಕೆ ಸಂಬಂಧಿಸಿದ ಕಾಯಿದೆಯಲ್ಲಿ ತಿದ್ದುಪಡಿ ತಂದು ಎಸ್‌ಸಿ/ಎಸ್‌ಟಿಗಳಿಗೆ ಪ್ರಾತಿನಿಧ್ಯವನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸಮಿತಿ ಒತ್ತಾಯಿಸಿದೆ.

ಎಲ್ಲಾ ಸಾರ್ವಜನಿಕ ವಲಯದ ಘಟಕಗಳಲ್ಲಿನ ಬೋರ್ಡ್ ಮತ್ತು ಮ್ಯಾನೇಜ್‌ಮೆಂಟ್ ಮಟ್ಟದ ಹುದ್ದೆಗಳ ನೇಮಕಾತಿ ನೀತಿಯನ್ನು ಪರಿಶೀಲಿಸುವ ಕುರಿತು ಮಾಡಿದ ತನ್ನ ಶಿಫಾರಸುಗಳಿಗೆ ಸಂಬಂಧಿಸಿದಂತೆ ಸರ್ಕಾರವು ಗಂಭೀರವಾಗಿಲ್ಲ ಎಂದು ಭಾವಿಸಿರುವುದಾಗಿ ಸಮಿತಿ ಬೇಸರ ವ್ಯಕ್ತಪಡಿಸಿದೆ.

ಆಡಳಿತ ಮಂಡಳಿಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರನ್ನು ನೇಮಕ ಮಾಡಲು ಅನುಕೂಲವಾಗುವಂತೆ ಪ್ರಸ್ತುತ ಇರುವ ನಿಯಮಾವಳಿಗಳಿಗೆ ತಿದ್ದುಪಡಿ ತರಲು ಸಾರ್ವಜನಿಕ ಉದ್ದಿಮೆಗಳ ಇಲಾಖೆಯು ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಶಿಫಾರಸು ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...