Homeಮುಖಪುಟಸಾರ್ವಜನಿಕ ಉದ್ದಿಮೆಗಳಲ್ಲಿ ಎಸ್‌ಸಿ, ಎಸ್‌ಟಿಗಳಿಗೆ ಸಿಗದ ಸೂಕ್ತ ಸ್ಥಾನಮಾನ: ಸಂಸದೀಯ ಸಮಿತಿ ವರದಿ

ಸಾರ್ವಜನಿಕ ಉದ್ದಿಮೆಗಳಲ್ಲಿ ಎಸ್‌ಸಿ, ಎಸ್‌ಟಿಗಳಿಗೆ ಸಿಗದ ಸೂಕ್ತ ಸ್ಥಾನಮಾನ: ಸಂಸದೀಯ ಸಮಿತಿ ವರದಿ

- Advertisement -
- Advertisement -

ಸಾರ್ವಜನಿಕ ವಲಯದ ಘಟಕಗಳಲ್ಲಿ ಉನ್ನತ ಅಥವಾ ಮಂಡಳಿ ಮಟ್ಟದ ಸ್ಥಾನಗಳಿಗೆ ಏರಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಸದಸ್ಯರಿಗೆ ಅವಕಾಶವನ್ನು ನೀಡಲಾಗುತ್ತಿಲ್ಲ ಎಂದು ಸಂಸದೀಯ ಸಮಿತಿಯು ತನ್ನ ವರದಿಯಲ್ಲಿ ತಿಳಿಸಿದೆ.

ಪವರ್ ಗ್ರಿಡ್ ಕಾರ್ಪೊರೇಷನ್ ಲಿಮಿಟೆಡ್‌ನ ವಿಶೇಷ ಉಲ್ಲೇಖದೊಂದಿಗೆ ‘ಕೇಂದ್ರ ಸಾರ್ವಜನಿಕ ವಲಯದ ಉದ್ಯಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ’ ಎಂಬ ವರದಿಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಂಸದೀಯ ಸಮಿತಿಯು ಸಂಸತ್ತಿನ ಮುಂದೆ ಮಂಡಿಸಿದ್ದು, ಅನೇಕ ವಿಷಯಗಳನ್ನು ಪ್ರಸ್ತಾಪಿಸಿದೆ.

“ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಾಮಾಜಿಕ-ಆರ್ಥಿಕ ಸಮಾನತೆಯನ್ನು ಒದಗಿಸುವ ದೃಷ್ಟಿಯಿಂದ, ಮಂಡಳಿ/ಉನ್ನತ ಹಂತದ ನೇಮಕಾತಿಗಳಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದ ಅರ್ಹ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಲು ಸರ್ಕಾರವು ಸಕಾರಾತ್ಮಕ ಕ್ರಮವನ್ನು ತೆಗೆದುಕೊಳ್ಳಬೇಕು” ಎಂದು ಸಮಿತಿ ಶಿಫಾರಸ್ಸು ಮಾಡಿದೆ. ಈ ಸಮಿತಿಯ ಮುಂದಾಳತ್ವವನ್ನು ಬಿಜೆಪಿ ಸಂಸದ ಕಿರಿತ್ ಸೋಲಂಕಿ ವಹಿಸಿದ್ದರು.

ಸಾರ್ವಜನಿಕ ವಲಯದ ಘಟಕಗಳಲ್ಲಿನ ಉನ್ನತ ಮಟ್ಟದ ಹುದ್ದೆಗಳಿಗೆ ಸಂದರ್ಶನಕ್ಕೆ ಹಾಜರಾಗಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಸಂಖ್ಯೆ ಹಾಗೂ ಆ ಅಭ್ಯರ್ಥಿಗಳು ಆಯ್ಕೆಯಾಗದಿರಲು ಇರುವ ಕಾರಣವೇನೆಂದು ತಿಳಿಯಲು ಬಯಸಿರುವುದಾಗಿ ಸಮಿತಿ ಹೇಳಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಧಿಕಾರಿಗಳು ಉತ್ಯುತ್ತಮ ಕೆಲಸದ ದಾಖಲೆಯನ್ನು ಹೊಂದಿದ್ದರೂ ಅವರ ವಿರುದ್ಧ ಕಾಲ್ಪನಿಕ ಆರೋಪಗಳನ್ನು ಹೊರಿಸುವ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬಡ್ತಿ ನಿರಾಕರಿಸಲಾಗಿದೆ ಎಂದು ಸಮಿತಿಯು ಹೇಳಿರುವುದಾಗಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದೆ.

ಬ್ಯಾಂಕ್‌ನ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರ್ದೇಶಕರು ಏಕೆ ಇಲ್ಲ ಎಂದು ಸಮಿತಿಯು ಸರ್ಕಾರವನ್ನು ಪ್ರಶ್ನಿಸಿದೆ.

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದ ನಿರ್ದೇಶಕರ ಮಂಡಳಿಯಲ್ಲಿ ಯಾವುದೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿ ಇಲ್ಲ ಎಂದು ಸಮಿತಿ ಗಮನಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

“ಕೇಂದ್ರೀಯ ಸಾರ್ವಜನಿಕ ವಲಯದ ಉದ್ಯಮದಲ್ಲಿ ಎಸ್‌ಸಿ/ಎಸ್‌ಟಿಗಳ ಪ್ರಾತಿನಿಧ್ಯವು ಗಂಭೀರ ಕಾಳಜಿಯ ವಿಷಯವಾಗಿಲ್ಲ” ಎಂದು ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

“ಪವರ್ ಗ್ರಿಡ್‌ನ ಅಧ್ಯಕ್ಷರು, ಸದಸ್ಯರ ನೇಮಕಕ್ಕೆ ಸಂಬಂಧಿಸಿದ ಕಾಯಿದೆಯಲ್ಲಿ ತಿದ್ದುಪಡಿ ತಂದು ಎಸ್‌ಸಿ/ಎಸ್‌ಟಿಗಳಿಗೆ ಪ್ರಾತಿನಿಧ್ಯವನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸಮಿತಿ ಒತ್ತಾಯಿಸಿದೆ.

ಎಲ್ಲಾ ಸಾರ್ವಜನಿಕ ವಲಯದ ಘಟಕಗಳಲ್ಲಿನ ಬೋರ್ಡ್ ಮತ್ತು ಮ್ಯಾನೇಜ್‌ಮೆಂಟ್ ಮಟ್ಟದ ಹುದ್ದೆಗಳ ನೇಮಕಾತಿ ನೀತಿಯನ್ನು ಪರಿಶೀಲಿಸುವ ಕುರಿತು ಮಾಡಿದ ತನ್ನ ಶಿಫಾರಸುಗಳಿಗೆ ಸಂಬಂಧಿಸಿದಂತೆ ಸರ್ಕಾರವು ಗಂಭೀರವಾಗಿಲ್ಲ ಎಂದು ಭಾವಿಸಿರುವುದಾಗಿ ಸಮಿತಿ ಬೇಸರ ವ್ಯಕ್ತಪಡಿಸಿದೆ.

ಆಡಳಿತ ಮಂಡಳಿಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರನ್ನು ನೇಮಕ ಮಾಡಲು ಅನುಕೂಲವಾಗುವಂತೆ ಪ್ರಸ್ತುತ ಇರುವ ನಿಯಮಾವಳಿಗಳಿಗೆ ತಿದ್ದುಪಡಿ ತರಲು ಸಾರ್ವಜನಿಕ ಉದ್ದಿಮೆಗಳ ಇಲಾಖೆಯು ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಶಿಫಾರಸು ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...