Homeಮುಖಪುಟಅಧೀರ್ ಚೌಧರಿ ಲೋಕಸಭೆಯಿಂದ ಅಮಾನತು: ಅಧಿಕಾರದ ದುರಹಂಕಾರ, ದುರುದ್ದೇಶ ಎಂದ ಖರ್ಗೆ

ಅಧೀರ್ ಚೌಧರಿ ಲೋಕಸಭೆಯಿಂದ ಅಮಾನತು: ಅಧಿಕಾರದ ದುರಹಂಕಾರ, ದುರುದ್ದೇಶ ಎಂದ ಖರ್ಗೆ

- Advertisement -
- Advertisement -

ಅಶಿಸ್ತಿನ ನಡವಳಿಕೆ ಮತ್ತು ಪದೇ ಪದೇ ಗಲಾಟೆ ಮಾಡಿದ ಆರೋಪದ ಮೇಲೆ ಲೋಕಸಭೆಯು ಕಾಂಗ್ರೆಸ್‌ನ ಸಭಾನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಗುರುವಾರ ಅಮಾನತುಗೊಳಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಚೌಧರಿ ಅವರ ನಡವಳಿಕೆಯನ್ನು ಪರಿಶೀಲಿಸುವಂತೆ ಲೋಕಸಭೆಯ ವಿಶೇಷಾಧಿಕಾರಗಳ ಸಮಿತಿಯನ್ನು ಕೇಳಲಾಗಿದೆ. ಅವರು ನಿರ್ಧಾರ ತೆಗೆದುಕೊಳ್ಳುವವರೆಗೆ ಅಮಾನತುಗೊಳಿಸಲಾಗುವುದು ಎಂದು ಹೇಳಲಾಗಿದೆ.

ಗುರುವಾರ, ಕೇಂದ್ರದ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯುತ್ತರ ನೀಡುತ್ತಿದ್ದಾಗ ಚೌಧರಿ ಇತರ ಕಾಂಗ್ರೆಸ್ ಸಂಸದರೊಂದಿಗೆ ಕೆಳಮನೆಯಿಂದ ಹೊರನಡೆದಿದ್ದರು.

ಜುಲೈ 20ರಿಂದ ಮಣಿಪುರದ ಅಶಾಂತಿಯ ಬಗ್ಗೆ ಪ್ರಧಾನಿ ಮಾತನಾಡುವಂತೆ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಮಂಡಿಸಿದವು. ಗುರುವಾರದವರೆಗೆ ಪ್ರಧಾನಿ ಮೋದಿ ಅವರು ಒಂದು ದಿನವೂ ಸಂಸತ್ತಿಗೆ ಹಾಜರಾಗಿ ಆ ಬಗ್ಗೆ ಮಾತನಾಡಿರಲಿಲ್ಲ.

ಅವಿಶ್ವಾಸ ನಿರ್ಣಯದ ಕುರಿತು ಗುರುವಾರ ಮಾತನಾಡಿದ ಮೋದಿ ಒಂದು ಗಂಟೆಗೂ ಹೆಚ್ಚು ಕಾಲ ಮಣಿಪುರದ ಬಗ್ಗೆ ಮಾತನಾಡಲೇ ಇಲ್ಲ. ವಿರೋಧ ಪಕ್ಷದ ಸಂಸದರು ಹೋದ ನಂತರ ರಾಜ್ಯದ ಪರಿಸ್ಥಿತಿಯನ್ನು ಸಂಕ್ಷಿಪ್ತವಾಗಿ ಪ್ರಸ್ತಾಪಿಸಿದರು.

ಇದನ್ನೂ ಓದಿ: ಸ್ಮೃತಿ ಇರಾನಿಗೆ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೆರಳಿಸಲಿಲ್ಲ, ರಾಹುಲ್ ‘ಫೈಯಿಂಗ್ ಕಿಸ್’ ಕೆರಳಿಸಿದೆ: ಸ್ವಾತಿ ಮಾಲಿವಾಲ್

ಮೋದಿಯವರ ಭಾಷಣದ ನಂತರ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಚೌಧರಿ ಅವರನ್ನು ಅಮಾನತುಗೊಳಿಸುವಂತೆ ನಿರ್ಣಯವನ್ನು ಮಂಡಿಸಿದರು. ಅವರು ಪ್ರಧಾನಿ ಅಥವಾ ಇತರ ಮಂತ್ರಿಗಳು ಮಾತನಾಡುವಾಗ ಅಡ್ಡಿಪಡಿಸುತ್ತಾರೆ ಎಂದು ಲೋಕಸಭೆಯಲ್ಲಿ ಧ್ವನಿಮತದ ಮೂಲಕ ನಿರ್ಣಯವನ್ನು ಅಂಗೀಕರಿಸಲಾಯಿತು.

ಚೌಧರಿ ಅವರು ಹಿಂದಿನ ದಿನ ಸದನವನ್ನುದ್ದೇಶಿಸಿ ಮಾತನಾಡುತ್ತಾ, ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಮೋದಿಯವರ ಮೌನವನ್ನು ಪ್ರಶ್ನಿಸಲು ಹಿಂದೂ ಮಹಾಕಾವ್ಯ ಮಹಾಭಾರತದ ಉಲ್ಲೇಖವನ್ನು ಮಾಡಿದ್ದರು.

ಕಾಂಗ್ರೆಸ್ ಸಂಸದರು ಸಂಯಮ ತೋರಿಸುವಂತೆ ಒತ್ತಾಯಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಒತ್ತಾಯಿಸಿದರು. ಆಗ ಚೌಧರಿ ಅವರ ಭಾಷಣದ ಕೆಲವು ಭಾಗಗಳನ್ನು ಖಡತದಿಂದ ತಗೆದುಹಾಕಲು ಸೂಚಿಸಿದರು.

ಒಬ್ಬ ಆಡಳಿತಗಾರ ಮೌನವಾಗಿರುತ್ತಾನೆ ಮತ್ತು ಜನರ ನೋವಿಗೆ ಕುರುಡನಾಗಿದ್ದಾನೆ ಎಂದು ವಿವರಿಸಲು ಕೆಲವು ರೂಪಕಗಳನ್ನು ಬಳಸಿರುವುದಾಗಿ ಚೌಧರಿ ಹೇಳಿದರು.

”ಜನರ ದೃಷ್ಟಿಯಲ್ಲಿ ನಾನು ಯಾವುದೇ ಪದವನ್ನು ತಪ್ಪು ಸಂದರ್ಭದಲ್ಲಿ ಬಳಸಿದ್ದರೆ, ನಾನು ರಾಜಕೀಯವನ್ನು ತೊರೆಯಲು ಸಿದ್ಧ” ಎಂದು ಹೇಳಿದರು.

”ಚೌಧರಿ ಅವರ ಅಮಾನತು ಪ್ರಜಾಪ್ರಭುತ್ವ ವಿರೋಧಿ ಮತ್ತು ದುರದೃಷ್ಟಕರ. ಇದು ಅಧಿಕಾರದ ದುರಹಂಕಾರ ಮತ್ತು ದುರುದ್ದೇಶವನ್ನು ತೋರಿಸುತ್ತದೆ” ಎಂದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...