Homeಮುಖಪುಟಅಧೀರ್ ಚೌಧರಿ ಲೋಕಸಭೆಯಿಂದ ಅಮಾನತು: ಅಧಿಕಾರದ ದುರಹಂಕಾರ, ದುರುದ್ದೇಶ ಎಂದ ಖರ್ಗೆ

ಅಧೀರ್ ಚೌಧರಿ ಲೋಕಸಭೆಯಿಂದ ಅಮಾನತು: ಅಧಿಕಾರದ ದುರಹಂಕಾರ, ದುರುದ್ದೇಶ ಎಂದ ಖರ್ಗೆ

- Advertisement -
- Advertisement -

ಅಶಿಸ್ತಿನ ನಡವಳಿಕೆ ಮತ್ತು ಪದೇ ಪದೇ ಗಲಾಟೆ ಮಾಡಿದ ಆರೋಪದ ಮೇಲೆ ಲೋಕಸಭೆಯು ಕಾಂಗ್ರೆಸ್‌ನ ಸಭಾನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಗುರುವಾರ ಅಮಾನತುಗೊಳಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಚೌಧರಿ ಅವರ ನಡವಳಿಕೆಯನ್ನು ಪರಿಶೀಲಿಸುವಂತೆ ಲೋಕಸಭೆಯ ವಿಶೇಷಾಧಿಕಾರಗಳ ಸಮಿತಿಯನ್ನು ಕೇಳಲಾಗಿದೆ. ಅವರು ನಿರ್ಧಾರ ತೆಗೆದುಕೊಳ್ಳುವವರೆಗೆ ಅಮಾನತುಗೊಳಿಸಲಾಗುವುದು ಎಂದು ಹೇಳಲಾಗಿದೆ.

ಗುರುವಾರ, ಕೇಂದ್ರದ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯುತ್ತರ ನೀಡುತ್ತಿದ್ದಾಗ ಚೌಧರಿ ಇತರ ಕಾಂಗ್ರೆಸ್ ಸಂಸದರೊಂದಿಗೆ ಕೆಳಮನೆಯಿಂದ ಹೊರನಡೆದಿದ್ದರು.

ಜುಲೈ 20ರಿಂದ ಮಣಿಪುರದ ಅಶಾಂತಿಯ ಬಗ್ಗೆ ಪ್ರಧಾನಿ ಮಾತನಾಡುವಂತೆ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಮಂಡಿಸಿದವು. ಗುರುವಾರದವರೆಗೆ ಪ್ರಧಾನಿ ಮೋದಿ ಅವರು ಒಂದು ದಿನವೂ ಸಂಸತ್ತಿಗೆ ಹಾಜರಾಗಿ ಆ ಬಗ್ಗೆ ಮಾತನಾಡಿರಲಿಲ್ಲ.

ಅವಿಶ್ವಾಸ ನಿರ್ಣಯದ ಕುರಿತು ಗುರುವಾರ ಮಾತನಾಡಿದ ಮೋದಿ ಒಂದು ಗಂಟೆಗೂ ಹೆಚ್ಚು ಕಾಲ ಮಣಿಪುರದ ಬಗ್ಗೆ ಮಾತನಾಡಲೇ ಇಲ್ಲ. ವಿರೋಧ ಪಕ್ಷದ ಸಂಸದರು ಹೋದ ನಂತರ ರಾಜ್ಯದ ಪರಿಸ್ಥಿತಿಯನ್ನು ಸಂಕ್ಷಿಪ್ತವಾಗಿ ಪ್ರಸ್ತಾಪಿಸಿದರು.

ಇದನ್ನೂ ಓದಿ: ಸ್ಮೃತಿ ಇರಾನಿಗೆ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೆರಳಿಸಲಿಲ್ಲ, ರಾಹುಲ್ ‘ಫೈಯಿಂಗ್ ಕಿಸ್’ ಕೆರಳಿಸಿದೆ: ಸ್ವಾತಿ ಮಾಲಿವಾಲ್

ಮೋದಿಯವರ ಭಾಷಣದ ನಂತರ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಚೌಧರಿ ಅವರನ್ನು ಅಮಾನತುಗೊಳಿಸುವಂತೆ ನಿರ್ಣಯವನ್ನು ಮಂಡಿಸಿದರು. ಅವರು ಪ್ರಧಾನಿ ಅಥವಾ ಇತರ ಮಂತ್ರಿಗಳು ಮಾತನಾಡುವಾಗ ಅಡ್ಡಿಪಡಿಸುತ್ತಾರೆ ಎಂದು ಲೋಕಸಭೆಯಲ್ಲಿ ಧ್ವನಿಮತದ ಮೂಲಕ ನಿರ್ಣಯವನ್ನು ಅಂಗೀಕರಿಸಲಾಯಿತು.

ಚೌಧರಿ ಅವರು ಹಿಂದಿನ ದಿನ ಸದನವನ್ನುದ್ದೇಶಿಸಿ ಮಾತನಾಡುತ್ತಾ, ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಮೋದಿಯವರ ಮೌನವನ್ನು ಪ್ರಶ್ನಿಸಲು ಹಿಂದೂ ಮಹಾಕಾವ್ಯ ಮಹಾಭಾರತದ ಉಲ್ಲೇಖವನ್ನು ಮಾಡಿದ್ದರು.

ಕಾಂಗ್ರೆಸ್ ಸಂಸದರು ಸಂಯಮ ತೋರಿಸುವಂತೆ ಒತ್ತಾಯಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಒತ್ತಾಯಿಸಿದರು. ಆಗ ಚೌಧರಿ ಅವರ ಭಾಷಣದ ಕೆಲವು ಭಾಗಗಳನ್ನು ಖಡತದಿಂದ ತಗೆದುಹಾಕಲು ಸೂಚಿಸಿದರು.

ಒಬ್ಬ ಆಡಳಿತಗಾರ ಮೌನವಾಗಿರುತ್ತಾನೆ ಮತ್ತು ಜನರ ನೋವಿಗೆ ಕುರುಡನಾಗಿದ್ದಾನೆ ಎಂದು ವಿವರಿಸಲು ಕೆಲವು ರೂಪಕಗಳನ್ನು ಬಳಸಿರುವುದಾಗಿ ಚೌಧರಿ ಹೇಳಿದರು.

”ಜನರ ದೃಷ್ಟಿಯಲ್ಲಿ ನಾನು ಯಾವುದೇ ಪದವನ್ನು ತಪ್ಪು ಸಂದರ್ಭದಲ್ಲಿ ಬಳಸಿದ್ದರೆ, ನಾನು ರಾಜಕೀಯವನ್ನು ತೊರೆಯಲು ಸಿದ್ಧ” ಎಂದು ಹೇಳಿದರು.

”ಚೌಧರಿ ಅವರ ಅಮಾನತು ಪ್ರಜಾಪ್ರಭುತ್ವ ವಿರೋಧಿ ಮತ್ತು ದುರದೃಷ್ಟಕರ. ಇದು ಅಧಿಕಾರದ ದುರಹಂಕಾರ ಮತ್ತು ದುರುದ್ದೇಶವನ್ನು ತೋರಿಸುತ್ತದೆ” ಎಂದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...