HomeUncategorizedಮಹುವಾ ಪ್ರಕರಣ: ಸ್ಪೀಕರ್‌ಗೆ ಅಧೀರ್ ರಂಜನ್ ಚೌಧರಿ ಪತ್ರ

ಮಹುವಾ ಪ್ರಕರಣ: ಸ್ಪೀಕರ್‌ಗೆ ಅಧೀರ್ ರಂಜನ್ ಚೌಧರಿ ಪತ್ರ

- Advertisement -
- Advertisement -

ಸೋಮವಾರ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರ ಉಚ್ಚಾಟನೆಗೆ ಶಿಫಾರಸು ಮಾಡುವ ವರದಿಯನ್ನು ಲೋಕಸಭೆಯ ನೈತಿಕ ಸಮಿತಿಯು ಮಂಡಿಸಲು ಸಿದ್ಧವಾಗುತ್ತಿದೆ. ಈ ಮಧ್ಯೆ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಶನಿವಾರ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಉಚ್ಛಾಟನೆಯು ಅತ್ಯಂತ ಗಂಭೀರ ಶಿಕ್ಷೆ ಎಂದು ಹೇಳಿದ್ದು ಸಮಿತಿಯು ತನಿಖೆಯ ಕಾರ್ಯವಿಧಾನಗಳನ್ನು ಅನುಸರಿಸಿದೆಯೇ ಎಂದು ಪ್ರಶ್ನಿಸಿದ್ದಾರೆ.

ಸ್ಪೀಕರ್‌ಗೆ 4 ಪುಟಗಳ ಪತ್ರವನ್ನು ಬರೆದ ಚೌಧರಿ ಅವರು, ಪ್ರಾಥಮಿಕವಾಗಿ ಲೋಕಸಭೆಯ ಸದಸ್ಯರ ಹಿತಾಸಕ್ತಿ ಮತ್ತು ಹಕ್ಕುಗಳಿಗೆ ಸಂಬಂಧಿಸಿದ ವಿಶೇಷಾಧಿಕಾರಗಳ ಸಮಿತಿ ಮತ್ತು ನೈತಿಕ ಸಮಿತಿಯಂತಹ ಸಂಸದೀಯ ಸಮಿತಿಗಳ ಕಾರ್ಯಚಟುವಟಿಕೆಗೆ ಸಂಬಂಧಿಸಿದ ನಿಯಮಗಳು ಮತ್ತು ಪ್ರಕ್ರಿಯೆಗಳ ಮರುಪರಿಶೀಲನೆಗೆ  ಒತ್ತಾಯಿಸಿದ್ದಾರೆ.

ಶಿಕ್ಷೆ ವಿಧಿಸುವಂತಹ ವಿಚಾರಗಳಲ್ಲಿ ಸವಲತ್ತುಗಳ ಸಮಿತಿ ಮತ್ತು ನೈತಿಕತೆ ಸಮಿತಿಗೆ ಯಾವುದೇ ಸ್ಪಷ್ಟ ನಿಯಮಗಳಿಲ್ಲ. ಅಷ್ಟೇ ಅಲ್ಲದೆ ನೈತಿಕವಲ್ಲದ ವರ್ತನೆ ಮತ್ತು ನೀತಿ ಸಂಹಿತೆ ಕುರಿತು ಸ್ಪಷ್ಟ ವ್ಯಾಖ್ಯಾನವಿಲ್ಲ. ಈ ಪ್ರಕರಣವನ್ನು ಪುನರಾವಲೋಕಿಸಿ ಸಂಸದೀಯ ಸಮಿತಿಗಳ ಕಾರ್ಯಾಚರಣೆಗಳ ನಿಯಮಗಳು ಮತ್ತು ಪ್ರಕ್ರಿಯೆಗಳನ್ನು ಪರಿಶೀಲಿಸಬೇಕೆಂದು ಅವರು ಕೋರಿದ್ದಾರೆ.

ನಗದು-ಪ್ರಶ್ನೆ ಪ್ರಕರಣದಲ್ಲಿ ಮೊಯಿತ್ರಾ ಅವರನ್ನು ಉಚ್ಚಾಟಿಸಲು ಶಿಫಾರಸು ಮಾಡುವ ಲೋಕಸಭೆಯ ನೈತಿಕ ಸಮಿತಿಯ ವರದಿಯನ್ನು ಸೋಮವಾರ ಕೆಳಮನೆಯಲ್ಲಿ ಮಂಡಿಸುವ ಸಾಧ್ಯತೆ ಇದೆ. ಲೋಕಸಭೆ ಸೆಕ್ರೆಟರಿಯೇಟ್ ಹಂಚಿಕೊಂಡ ಮಾಹಿತಿ ಪ್ರಕಾರ ನೀತಿ ಸಮಿತಿಯ ಅಧ್ಯಕ್ಷ ವಿನೋದ್ ಕುಮಾರ್ ಸೋಂಕರ್ ಅವರು ಸಮಿತಿಯ ವರದಿಯನ್ನು ಸದನದ ಮುಂದಿಡಲಿದ್ದಾರೆ.

ನ.9ರಂದು ನಡೆದ ಸಭೆಯಲ್ಲಿ ಸಮಿತಿಯು ಪ್ರಶ್ನೆಗಾಗಿ ನಗದು ಆರೋಪದಲ್ಲಿ ಲೋಕಸಭೆಯಿಂದ ಮೊಯಿತ್ರಾ ಅವರನ್ನು ಉಚ್ಚಾಟಿಸುವಂತೆ ಶಿಫಾರಸು ಮಾಡುವ ತನ್ನ ವರದಿಯನ್ನು ಅಂಗೀಕರಿಸಿದೆ. ಮೊಯಿತ್ರಾ ವಿರುದ್ಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆರೋಪಿಸಿದ ಆರೋಪದ ಬಗ್ಗೆ ವಿಚಾರಣೆ ನಡೆಸಿದ ನೈತಿಕ ಸಮಿತಿಯು ನ.9ರಂದು ತನ್ನ ಕರಡು ವರದಿಯನ್ನು ಅಂಗೀಕರಿಸಿದೆ.

ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸುಪ್ರೀಂಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಅವರು ಸಿಬಿಐಗೆ ದೂರು ಸಲ್ಲಿಸಿದ್ದರು. ದೇಹದ್ರಾಯ್ ಅವರು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರಿಗೂ ಈ ಸಂಬಂಧ ಪತ್ರ ಬರೆದಿದ್ದಾರೆ. ದುಬೆ ಮಹುವಾ ಮೊಯಿತ್ರಾ ವಿರುದ್ದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಲೋಕಪಾಲರಿಗೆ ದೂರು ನೀಡಿದ್ದರು. ಈ ಸಂಬಂಧ ಲೋಕಸಭೆಯ ನೈತಿಕ ಸಮಿತಿ ಮಹುವಾ ಮೊಯಿತ್ರಾ ಅವರ ಹೇಳಿಕೆ ದಾಖಲಿಸಿಕೊಂಡಿತ್ತು.

ಇದನ್ನು ಓದಿ: ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...